ನಾಪೋಕ್ಲು ಜ.2 NEWS DESK : ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಹತೋಟಿಗೆ ತಂದುಕೊಳ್ಳುವ ಅನಿವಾರ್ಯತೆ ಇದೆ ಎಂದು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಎಸ್.ಸುಬ್ಬಯ್ಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನಾಪೋಕ್ಲು ವಲಯ ಮತ್ತು ಅರುಣ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗ ಚೇರಂಬಾಣೆ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ. ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದದ್ದು ಎಂದರು. ಸಂಪನ್ಮೂಲ ವ್ಯಕ್ತಿ ಶಿಬಿರಾಧಿಕಾರಿ ನಂದಕುಮಾರ್ ಮಾತನಾಡಿ ಇದುವರೆಗೆ ಕರ್ನಾಟಕ ರಾಜ್ಯದ 17,848 ಶಾಲಾ ಕಾಲೇಜುಗಳಲ್ಲಿ ಜಾಗೃತಿ…
ಲೇಖಕ: admin
ನಾಪೋಕ್ಲು ಜ.2 NEWS DESK : ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ಪಡಿಯಾಣಿ ಗ್ರಾಮದ ಸ.ಹಿ.ಪ್ರಾ ಶಾಲೆಗೆ ಸ್ಥಳೀಯರಾದ ಕಡವಿಲ್ ಕರೀಂ ಶಾಲೆಗೆ ಯು.ಪಿ.ಎಸ್.ನ್ನು ಕೊಡುಗೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಕೆ.ಸಿ. ಧಮೇಂದ್ರ ಹಾಗೂ ಸಹ ಶಿಕ್ಷಕರು ಕೊಡುಗೆಯನ್ನು ಸ್ವೀಕರಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭ ಶಾಲೆಯ ಶಿಕ್ಷಕಿಯರಾದ ಎಂ.ಪಿ.ಭಾರತಿ. ಎಂ.ಎಸ್.ಬೋಜಮ್ಮ, ಕೆ.ಎ.ಹೇಮಮಾಲಿನಿ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.2 NEWS DESK : ಕೊಡಗು ಜಿಲ್ಲೆಯ ಜಗದೀಶ್ ಬೆಳ್ಯಪ್ಪ ಅವರು 2024ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 28 ವರ್ಷಗಳಿಂದ ನಿರಂತರವಾಗಿ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಜಗದೀಶ್ ಬೆಳ್ಯಪ್ಪ ಅವರು ಮೂಲತಃ ಕೊಡಗು ಜಿಲ್ಲೆಯವರು. 1997ರಲ್ಲಿ ತಮ್ಮ 22ನೇ ವಯಸ್ಸಿಗೆ ಕೊಡಗು ಜಿಲ್ಲೆಯ ಶಕ್ತಿ ಪತ್ರಿಕೆ ಮೂಲಕ ಪತ್ರಿಕಾ ಕ್ಷೇತ್ರಕ್ಕೆ ಛಾಯಚಿತ್ರಕಾರರಾಗಿ ಪ್ರವೇಶಿಸಿದರು. ನಂತರ ಶಕ್ತಿ ಪತ್ರಿಕೆಯ ಉಪಸಂಪಾದಕರಾದರು. ಮುಂದಿನ ದಿನಗಳಲ್ಲಿ ಸಂಯುಕ್ತ ಕರ್ನಾಟಕ, ಕಾವೇರಿ ಚಾನಲ್, ಎನ್ಡಿ ಟಿವಿಯ ವರದಿಗಾರರಾಗಿ ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಉಷಾಕಿರಣ ಪತ್ರಿಕೆಯಲ್ಲಿ ಸ್ಟೇಟ್ ಎಡಿಷನ್ ಟೀಂ ನಲ್ಲಿದ್ದರು. ಟಿವಿ9 ಮೂಲಕ ಮತ್ತೆ ಕೊಡಗು ಜಿಲ್ಲೆಗೆ ವರದಿಗಾರರಾಗಿ ಜನಪ್ರಿಯಗೊಂಡರು. ಸ್ವಲ್ಪ ಸಮಯದ ನಂತರ ವಿಜಯ ಕರ್ನಾಟಕ ವರದಿಗಾರರಾಗಿ ರಾಜ್ಯ ಮಟ್ಟದ ಎರಡು ಸಾಹಿತ್ಯ ಸಮ್ಮೇಳನದ ವರದಿ ಮಾಡಿ ಮೆಚ್ಚುಗೆ ಪಡೆದರು. ನಂತರ ಮತ್ತೆ ಬೆಂಗಳೂರಿಗೆ ತೆರಳಿದ ಅವರು ಸುವರ್ಣ ಟಿವಿಯ ಇನ್ ಪುಟ್…
ಮಡಿಕೇರಿ NEWS DESK ಜ.2 : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಪಳಂಗೋಟು ದಿವಿನ್ ಅವರಿಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ “ಯುನೈಟೆಡ್ ಕೊಡವ ಆರ್ಗನೈಜೇಷನ್ ‘ಯುಕೊ’ ” ವತಿಯಿಂದ ಗೌರವ ಅರ್ಪಿಸಲಾಯಿತು. ಯುನೈಟೆಡ್ ಕೊಡವ ಆರ್ಗನೈಜೇಶನ್ (ಯುಕೊ) ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಮುಖಂಡರಾದ ಕಳ್ಳಿಚಂಡ ರಾಬಿನ್ ಸುಬ್ಬಯ್ಯ , ನೆಲ್ಲಮಕ್ಕಡ ಜಫ್ರಿ ಮಾದಯ್ಯ, ಬೊಳ್ಳಿಯಂಗಡ ಬೋಪಣ್ಣ ಮತ್ತಿತರ ಪ್ರಮುಖರು ದಿವಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಹುತಾತ್ಮ ಯೋಧರ ತಾಯಿಗೆ ಸಾಂತ್ವನ ತಿಳಿಸಿದರು.
ಪೊನ್ನಂಪೇಟೆ, ಜ.2 NEWS DESK : ಕೃಷಿ ಸಂಸ್ಕೃತಿಯ ವಾರಸುದಾರರಾಗಿ ಅನ್ನದಾತರು ಮತ್ತು ಶ್ರಮದಾತರು ಎಂದು ಕರೆಸಿಕೊಂಡಿರುವ ಒಕ್ಕಲಿಗರು ತಮ್ಮ ಅನ್ನದಾತರ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಸರಿಯಾಗಿ ತಿಳಿಸಬೇಕು ಎಂದು ಕೋತೂರು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಆರ್. ಸುರೇಶ್ ಕರೆ ನೀಡಿದ್ದಾರೆ. ದ. ಕೊಡಗಿನ ಕೋತೂರಿನ ಶ್ರೀ ಮಲೆ ಮಹದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೋತೂರು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ 9ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಲಕಸುಬನ್ನು ಕಡೆಗಣಿಸಿದರೆ ಯಾವುದೇ ಜನಾಂಗಗಳ ಸರಿಯಾದ ಅಸ್ತಿತ್ವ ಉಳಿಯಲು ಸಾಧ್ಯವಿಲ್ಲ. ಅದ್ದರಿಂದ ತಮ್ಮ ಮೂಲ ಸಂಸ್ಕೃತಿಯನ್ನು ಮುಂದುವರಿಸಲು ಇಂದಿನ ಯುವ ಸಮುದಾಯಕ್ಕೆ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು. ಶಿಕ್ಷಣವು ಜನಾಂಗಗಳ ಮತ್ತು ಜನಾಂಗೀಯ ಸಂಘಟನೆಗಳ ಸದಸ್ಯರ ಬೆಳವಣಿಗೆ, ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವ ಅತ್ಯಗತ್ಯ ಅಂಶವಾಗಿದೆ. ಶಿಕ್ಷಣವು ವ್ಯಕ್ತಿಯ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೂ ಕೊಡುಗೆ ನೀಡುತ್ತದೆ. ವಿದ್ಯಾವಂತ ಸಮಾಜವು ಭವಿಷ್ಯದ…
ಮಡಿಕೇರಿ ಜ.2 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಹಾಗೂ ನಂ.561ನೇ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ ನಡೆಯಿತು. ನಗರದ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ಹಾಗೂ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, 1997 ಕರ್ನಾಟಕ ಸೌಹಾರ್ದ ಕಾಯಿದೆ 2001 ಜನವರಿ 1 ರಂದು ಜಾರಿಗೆ ಬಂದಿತು. ಇದರ ಜ್ಞಾಪಕಾರ್ಥವಾಗಿ ಸೌಹಾರ್ದ ಸಹಕಾರಿ ದಿನವನ್ನು ಆಚರಿಸಲಾಗುತ್ತದೆ ಎಂದರು. 2005ರಲ್ಲಿ 200 ಸದಸ್ಯರೊಂದಿಗೆ ಕೊಡಗಿನಲ್ಲಿ ಪ್ರಾರಂಭವಾದ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ಕೊಡಗಿನಾದ್ಯಂತ ಸದಸ್ಯರನ್ನು ಹೊಂದಿದ್ದು, ಪ್ರಸ್ತುತ 2313 ಸದಸ್ಯರಿದ್ದಾರೆ. ಸದಸ್ಯರಿಗೆ ವಿವಿಧ ರೀತಿಯ ಸಾಲ, ಸದಸ್ಯರಿಂದ ಠೇವಣಿ ಸಂಗ್ರಹ, ವಿಮೆ ಸೇರಿದಂತೆ ಇ ಸ್ಟಾಂಪಿಂಗ್, ಆರ್.ಟಿ.ಸಿ ಸೇರಿದಂತೆ ಹತ್ತಾರು ಸೌಲಭ್ಯಗಳನ್ನು ನೀಡುತ್ತಿದ್ದು, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಕ್ರಿಯಾಶೀಲವಾಗಿ…
ಮಡಿಕೇರಿ NEWS DESK ಜ.1 : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಪಳಂಗೋಟು ದಿವಿನ್ ಅವರಿಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಕುಶಾಲನಗರ ಧರ್ಮಕೇಂದ್ರದ ವತಿಯಿಂದ ಗೌರವ ಅರ್ಪಿಸಲಾಯಿತು. ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಧರ್ಮಕೇಂದ್ರದ ಧರ್ಮಗುರು ಮಾರ್ಟಿನ್ ಮತ್ತಿತರ ಪ್ರಮುಖರು ದಿವಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.
ಮಡಿಕೇರಿ NEWS DESK ಜ.1 : ಜನವರಿ 1ರಂದು ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಜಬ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದರಿಂದ ಜನವರಿ 2 ಗುರುವಾರ ರಜಬ್ 1 ಹಾಗೂ ಜನವರಿ 28 ಮಂಗಳವಾರ ಮಿಹ್ರಾಜ್ ದಿನ ಆಗಿರುತ್ತದೆ ಎಂದು ಕೊಡಗು ಜಿಲ್ಲೆಯ ಸುನ್ನೀ ಸಂಯುಕ್ತ ಜಮಾಅತ್ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಜ.1 : ಎಲ್ಲಾ ಜಾತಿ ಜನಾಂಗಗಳು ಸರ್ವ ಸಮಾನತೆಯಿಂದ ದೇವತಾ ಕಾರ್ಯಗಳಲ್ಲಿ ಒಂದಾಗಿ ಬೆರೆಯಬೇಕೆನ್ನುವ ಚಿಂತನೆಗಳಡಿ ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಯಾವುದೇ ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಬೇಡವೆನ್ನುವ ನಿಯಮವನ್ನು ಮಾಡಿಕೊಳ್ಳಲಾಗಿದೆ. ಇದನ್ನು ಜಿಲ್ಲಾಡಳಿತ ಗೌರವಿಸಲಿದೆ ಎನ್ನುವ ವಿಶ್ವಾಸವಿದೆ ಎಂದು ಗ್ರಾಮಸ್ಥರು ಹಾಗೂ ದೇವಸ್ಥಾನದ ಸ್ವಯಂ ಸೇವಕ ಕಟ್ಟೆಮನೆ ಸೋನಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟೆಮಾಡು ಗ್ರಾಮ ವ್ಯಾಪ್ತಿಯಲ್ಲಿ ಅಂದಾಜು ಶೇ.30 ರಷ್ಟು ಗೌಡರು, ಶೇ.15 ರಿಂದ 20 ರಷ್ಟು ಕೊಡವ ಸಮೂಹ ಬಾಂಧವರಿದ್ದಾರೆ. ಶೇ.50 ರಷ್ಟು ಮಂದಿ ವಿವಿಧ ಜನಾಂಗಗಳಿಗೆ ಸೇರಿದವರಾಗಿದ್ದಾರೆ. ಇವರೆಲ್ಲರು ದೇವಸ್ಥಾನದಲ್ಲಿ ಸರ್ವ ಸಮಾನವಾಗಿ ತೊಡಗಿಸಿಕೊಳ್ಳಬೇಕೆನ್ನುವ ಚಿಂತನೆಯಿoದ, ದೇವಸ್ಥಾನದಲ್ಲಿ ಯಾವುದೇ ಸಮೂಹದ ಸಾಂಪ್ರದಾಯಿಕ ಉಡುಪು, ಆಚರಣೆೆಗಳು ಬೇಡವೆನ್ನುವ ನಿಯಮವನ್ನು ಗ್ರಾಮಸ್ಥರೆಲ್ಲರ ಸಮ್ಮತಿಯೊಂದಿಗೆ ರಚಿಸಲಾಗಿದೆ. ಅದರಂತೆ ಕಳೆದ ಒಂದು ವರ್ಷದಿಂದ ಗ್ರಾಮದ ಎಲ್ಲಾ ಸಮೂಹದವರು ನಡೆದುಕೊಂಡು ಬಂದಿರುವುದಾಗಿ ಸ್ಪಷ್ಟಪಡಿಸಿದರು. ಕಟ್ಟೆಮಾಡು ಗ್ರಾಮದ ವಿವಿಧ ಜನಾಂಗಗಳ ಹಾಗೂ ಕುಟುಂಬಗಳ ಪ್ರತಿನಿಧಿಗಳಿಗೆ ಕಟ್ಟೆಮಾಡು ದೇವಸ್ಥಾನ…
ಮಡಿಕೇರಿ ಜ.1 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಖಿಲ ಭಾರತ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಬಿ.ಕೆ.ಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಡಿಕೇರಿ ನಗರ ಕಾಂಗ್ರೆಸ್ ಹಾಗೂ ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಡಿಸಿಸಿ ಪದಾಧಿಕಾರಿಗಳಾದ ಮೋಹನ್ದಾಸ್, ವಿ.ಪಿ.ಸುರೇಶ್, ಕೆ.ಜಿ.ಪೀಟರ್, ಖಲೀಲ್ ಭಾಷಾ, ಪ್ರಕಾಶ್ ಆಚಾರ್ಯ, ಕೆ.ಅಬ್ದುಲ್ ರಜಾಕ್, ಕೆ.ಎ.ಮೊಣ್ಣಪ್ಪ, ಲೀಲಾ ಶೇಷಮ್ಮ, ಚುಮ್ಮಿ ದೇವಯ್ಯ, ಬೊಳ್ಯಂಡ ಗಣೇಶ್, ಸುನೀಲ್ ನಂಜಪ್ಪ, ಸುನೀಲ್ ಪತ್ರಾವೋ, ನಟೇಶ್ ಗೌಡ, ಆರ್ಟಿಸಿ ಸಲಹಾ ಸಮಿತಿ ಮಾಜಿ ನಿರ್ದೇಶಕರಾದ ಶೌಕತ್ ಆಲಿ, ಜನಾರ್ಧನ್, ಹೆಚ್.ಎಂ.ನಂದಕುಮಾರ್, ಸದಾಮುದ್ದಪ್ಪ, ಮುದ್ದುರಾಜ್, ಸದಾನಂದ ಬಂಗೇರ, ಜಾನ್ಸನ್ ಪಿಂಟೋ, ಬಿ.ಎಂ.ಪೂಣಚ್ಚ, ನಾಪಂಡ ಮುತ್ತಪ್ಪ, ಜಫ್ರುಲ್ಲ, ಬಿ.ಆರ್.ರಾಣಿ ಮತ್ತಿತರರು ಹಾಜರಿದ್ದರು.






