ನಾಪೋಕ್ಲು ಜ.27 NEWS DESK : ನಾಪೋಕ್ಲು ನಾಡಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಂದಾಯ ಇಲಾಖೆಯ ಕಂದಾಯ ಪರಿವೀಕ್ಷ ಆರ್.ರವಿಕುಮಾರ್ ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಕಂದಾಯ ಗ್ರಾಮ ಆಡಳಿತ ಅಧಿಕಾರಿಗಳಾದ ಜನಾರ್ಧನ್, ಅಮೃತ, ಸ್ವಾತಿ, ದಾನೇಶ್ವರಿ, ಲೇಖನ, ಜನಸೇವಕರಾದ ತಿಮ್ಮಣ್ಣ, ಸೋಮಯ್ಯ, ಪೂಣಚ್ಚ, ಸಂಜಯ್, ಲಾಲು, ಪ್ರದೀಪ್ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಜ.27 NEWS DESK : ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಫೆ.4 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷ ಎಂ.ಟಿ.ಮಧು ಈ ಕುರಿತು ಮಾಹಿತಿ ನೀಡಿ, ಸಮಾಜ ಬಾಂಧವರಿಗಾಗಿ ಅಂದು ಕ್ರೀಡಾಕೂಟ ಆಯೋಜಿತವಾಗಿದೆ. ಇದೇ ಸಂದರ್ಭ ‘ಪ್ರತಿಯೊಬ್ಬ ರಕ್ತದಾನಿ ಹೀರೋ’ ಎನ್ನುವ ಘೋಷ ವಾಕ್ಯದೊಂದಿಗೆ ರಕ್ತದಾನ ಶಿಬಿರ ನಡೆಯಲಿದ್ದು, ಇದರಲ್ಲಿ ಜಾತಿ ಮತಗಳ ಭೇದವಿಲ್ಲದೆ ಯಾರು ಬೇಕಾದರು ಪಾಲ್ಗೊಳ್ಳಬಹುದಾಗಿದ್ದು, ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನಿಡುವಂತೆ ಮನವಿ ಮಾಡಿದರು. ಸಮಾಜದ ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ ಅವರು ಮಾತನಾಡಿ, ಅಂದು ತಾಲ್ಲೂಕು ಮಟ್ಟದ ಸೂಪರ್ 9 ಕ್ರಿಕೆಟ್ ಪಂದ್ಯಾವಳಿಯನ್ನು ಯೋಜಿಸಲಾಗಿದೆ. ಪಂದ್ಯಾವಳಿಗೂ ಮುನ್ನ ಕೊಡಗು ಪತ್ರಕರ್ತರ ತಂಡ ಹಾಗೂ ಸವಿತಾ ಸಮಾಜ ತಂಡದ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ. ಇದೇ ಮೊದಲ ಬಾರಿಗೆ ಮಹಿಳೆಯರಿಗೂ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.…
ನಾಪೋಕ್ಲು ಜ.27 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಧ್ವಜಾರೋಹಣ ನೆರವೇರಿಸಿದರು. ವಿದ್ಯಾಸಂಸ್ಥೆ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ ಮಾತನಾಡಿ, ಪ್ರತಿಯೊಬ್ಬರು ಪ್ರತಿದಿನ ಸಂವಿಧಾನದ ವಿಶೇಷತೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ, ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಬೆಳೆಯಲು ಸಾಧ್ಯ ಎಂದರು. ಶಿಕ್ಷಕಿ ಸಿ.ಕೆ.ಲೀನಾ ಮಾತನಾಡಿ, ದೇಶದ ಸಂವಿಧಾನದ ರಕ್ಷಣೆಗಾಗಿ ದುಡಿದ ಪ್ರತಿಯೊಬ್ಬರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯ ಎಂದರು. ಕಾರ್ಯಕ್ರಮದಲ್ಲಿ ನಿರ್ದೇಶಕ ಚೌರಿರ ಮಂದಣ್ಣ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜ.27 NEWS DESK : ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕನೆಂದು ಹೇಳಿಕೊಂಡಿರುವ ಹೆಚ್.ಎಲ್.ದಿವಾಕರ್ ಅವರು ಡಾ.ಅಂಬೇಡ್ಕರ್ ಭವನ ಸಮಿತಿ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಪಡಿಸಿದರೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಿತಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಮತ್ತು ಎಲ್ಲಾ ಲೆಕ್ಕಪತ್ರಗಳು ಸಮರ್ಪಕವಾಗಿವೆ. ಸಮಿತಿಯ ಉಪಾಧ್ಯಕ್ಷ ಸ್ಥಾನದಲ್ಲಿರುವ ಹೆಚ್.ಎಲ್.ದಿವಾಕರ್ ಅವರು ಯಾವುದೇ ಸಭೆಗಳಿಗೆ ಹಾಜರಾಗದೆ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಇದನ್ನು ಸಮಿತಿ ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು. ಮಡಿಕೇರಿ ನಗರದಲ್ಲಿ ನಿರ್ಮಾಣಗೊಂಡಿರುವ ಡಾ.ಅಂಬೇಡ್ಕರ್ ಭವನದ ಆಡಳಿತ ಮಂಡಳಿಯ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ನಗರದ ಅಶೋಕಪುರದ ನಿವಾಸಿಗಳ ಕೋರಿಕೆ ಮೇರೆಗೆ ಅಂದಿನ ಜಿಲ್ಲಾಧಿಕಾರಿಗಳಾಗಿದ್ದ ಹೆಚ್.ಭಾಸ್ಕರ್ ಅವರು 10 ಸೆಂಟ್ ಜಾಗವನ್ನು ಮೀಸಲಿರಿಸಿದರು. 1991-92 ರಲ್ಲಿ ವೈದ್ಯರಾಗಿದ್ದ ಡಾ.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಭವನ…
ವಿರಾಜಪೇಟೆ ಜ.27 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಸಂಸ್ಥೆಯ ನಿರ್ದೇಶಕರಾದ ಕೊಮ್ಮೆತೋಡಿನ ಪೊಯಕೆರ ಎಸ್.ರಫೀಕ್ (ಕೊಡವ ಮುಸ್ಲಿಂ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ದಿ.ಸಾದುಲಿ ಹಾಜಿಯವರ ಪುತ್ರ) ಅವರು ಪ್ರಾಯೋಜಿಸಿರುವ ಸಾಂಪ್ರದಾಯಿಕ ದಫ್ ಅನ್ನು ಸಂಸ್ಥೆಗೆ ಹಸ್ತಾಂತರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಅಕ್ಕಳತಂಡ ಎಸ್.ಮೊಯ್ದು ಅವರ ಆತಿಥ್ಯದಲ್ಲಿ ಕಾಟ್ರಕೊಲ್ಲಿಯಲ್ಲಿ ನಡೆದ ಕೆಎಂಎ ದಫ್ ರಾತೀಬ್ನ ಸದಸ್ನಲ್ಲಿ ಪೊಯಕೆರ ರಫೀಕ್ ದಫನ್ನು ಸಾಂಕೇತಿಕವಾಗಿ ಕೆ.ಎಂ.ಎ.ಗೆ ಹಸ್ತಾಂತರಿಸಿದರು. ಇದನ್ನು ಸಂಸ್ಥೆಯ ಪರವಾಗಿ ಅಧ್ಯಕ್ಷ ದುದ್ದಿಯಂಡ ಸೂಫಿ ಹಾಜಿ, ಹಿರಿಯ ಉಪಾಧ್ಯಕ್ಷ ಡಾ.ಜೋಯಿಪೆರ ಕುಂಜ್ಹಬ್ದುಲ್ಲಾ, ಉಪಾಧ್ಯಕ್ಷ ಅಕ್ಕಳತಂಡ ಎಸ್.ಮೊಯ್ದು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳೊಂದಿಗೆ ನಲ್ವತ್ತೋಕ್ಲಿನ ರಿಫಾಯಿ ರಾತೀಬ್ ಸಂಘದ ಖಲೀಫರ ಮತ್ತು ಸದಸ್ಯರ ಸಮ್ಮುಖದಲ್ಲಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೂಫಿ ಹಾಜಿ, ಹಿಂದಿನಿಂದಲೂ ಕೊಡವ ಮುಸ್ಲಿಮರು ದಫ್ ರಾತೀಬನ್ನು ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕುರಿತು ಜನರಿಗಿರುವ ನಂಬಿಕೆ ಮಹತ್ತರವಾದದ್ದು. ದಫ್ ಕೇವಲ ಧಾರ್ಮಿಕ ಪರಿಕರ ಮಾತ್ರವಲ್ಲದೆ ಸಾಂಪ್ರದಾಯಿಕ ಧಾರ್ಮಿಕ ಆಚರಣೆಯ…
ನಾಪೋಕ್ಲು ಜ.27 NEWS DESK : ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯು ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ.ಪೂವಯ್ಯ ಮಾತನಾಡಿ ಕೊರೋನಾ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ರಕ್ಷಾ ಸಮಿತಿ ಇಲ್ಲದೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗದೆ ಸಮಸ್ಯೆಗಳು ಆಗುತ್ತಿತ್ತು. ಇದೀಗ ನೂತನ ಸಮಿತಿ ಆಯ್ಕೆಯಾಗಿ ಕಾರ್ಯ ಪ್ರವೃತ್ತವಾಗುತ್ತಿದೆ. ಇಲ್ಲಿಗೆ ಬೇಕಾದ ಅವಶ್ಯಕತೆಗಳನ್ನು ಪರಿಶೀಲಿಸಿ ರೋಗಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಸಹಕಾರಿಯಾಗಲಿದೆ ಎಂದರು. ಸಭೆಯಲ್ಲಿ ಸಮಿತಿ ಸದಸ್ಯ ಲೆಕ್ಕಪತ್ರವನ್ನು ಪರಿಶೀಲಿಸಿ ಮಾಹಿತಿಗಳನ್ನು ಪಡೆದುಕೊಂಡು ಮುಂದೆ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿ ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಯಿತು. ರಕ್ಷಾ ಸಮಿತಿಯ ನೂತನ ಸದಸ್ಯರು ಹಾಗೂ ಆಡಳಿತ ಅಧಿಕಾರಿ ಪೂವಯ್ಯ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷ ಕಂಗಂಡ ಶಶಿ, ಸಮಿತಿ ಸದಸ್ಯ ಟಿ.ಆರ್.ರಾಜಪ್ಪ, ಎ.ಸಿ.ಶಾಂತಿ, ಬಿ.ವಿ.ಮೊಹಮ್ಮದ್ ಅಶ್ರಫ್, ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ, ಡಾ.ಜೀವನ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಆರೋಗ್ಯ…
ಮಡಿಕೇರಿ ಜ.27 NEWS DESK : ಪುಟಾಣಿ ವಿಜ್ಞಾನ ಬಳಗ ದವರು ನಡೆಸಿದ ರಾಷ್ಟ್ರಮಟ್ಟದ ಗಣಿತ ಪ್ರತಿಭಾ ಪರೀಕ್ಷೆ ಯಲ್ಲಿ ಚೇರಂಬಾಣೆ ಕೊಟ್ಟೂರ್ ರಾಜರಾಜೇಶ್ವರಿ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಒಟ್ಟು 72 ವಿದ್ಯಾರ್ಥಿಗಳು ಭಾಗವಹಿಸಿ ಉತ್ತೀರ್ಣರಾಗಿರುತ್ತಾರೆ. ಈ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಭವಿಷ್ಯ ಕೆ. ಬಿ ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನ, 7ನೇ ತರಗತಿಯ ಜಿಶ್ಮಿತ ಬಿ. ಜಿ ಐದನೇ ಸ್ಥಾನ,ರಾಜ್ಯಮಟ್ಟದಲ್ಲಿ 6ನೇ ತರಗತಿಯ ತನ್ಮಯಿ ಕೆ. ಕೆ 5ನೇ ಸ್ಥಾನ,7ನೇ ತರಗತಿಯ ತಾನಿಯ ಕೆ. ಟಿ . 6ನೇ ಸ್ಥಾನ,ಜಿಲ್ಲಾ ಮಟ್ಟದಲ್ಲಿ 6ನೇ ತರಗತಿಯ ಶ್ರಿಹರಿ ಪೊನ್ನಪ್ಪ 6ನೇ ಸ್ಥಾನ, 7ನೇ ತರಗತಿಯ ವರುಣಿಕ ಪಿ. ಎಂ. 6ನೇ ಸ್ಥಾನ, ತಾಲ್ಲೂಕು ಮಟ್ಟದಲ್ಲಿ 6ನೇ ತರಗತಿಯ ವಾಸವಿ ಪಿ.ವಿ, 4ನೇ ಸ್ಥಾನ 7ನೇ ತರಗತಿಯ ದಕ್ಷ ಬೊಳ್ಳಮ್ಮ 4ನೇ ಸ್ಥಾನಪಡೆದು ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ವಿದ್ಯಾಸಂಸ್ಥೆಯ…
ಬೆಂಗಳೂರು ಜ.27 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ನಾಪೋಕ್ಲು ಜ.27 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಸಂಯುಕ್ತಾಶ್ರಯದಲ್ಲಿ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕದತ್ತಿ ಮತ್ತು ಎಸ್ ಎಸ್ ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಾಪೋಕ್ಲವಿನ ಎಕ್ಸೆಲ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಸಿ.ಕೆ.ತಿಮ್ಮಯ್ಯ ಮಾತನಾಡಿ, ಕೊಡಗಿನ ಸಾಹಿತಿಗಳು ಹಾಗೂ ವೀರಸೇನಾನಿಗಳಾದ ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾರ್ಯಪ್ಪ ಅವರ ಕುರಿತು ಉಪನ್ಯಾಸ ನೀಡಿದರು. ಅಲ್ಲದೇ ವಿದ್ಯಾರ್ಥಿಗಳಿಗೆ ವಿಭಿನ್ನ ಚಟುವಟಿಕೆಗಳ ಮೂಲಕ ರಸಪ್ರಶ್ನೆಯನ್ನು ಕೇಳಿ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ಇದೇ ಶಾಲೆಯಲ್ಲಿ ಕೋಟ್ಯಾಧಿಪತಿ ಎನ್ನುವ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಡುವುದಾಗಿ ತಿಳಿಸಿದರು. ಶಿಕ್ಷಕಿ ಕೆ.ಡಿ.ಶೋಭಿತ ಮಾತನಾಡಿ, ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ ಕುರಿತು ವಿವರಿಸಿದರು. ಕನ್ನಡ ಸಾಹಿತ್ಯದ ಪ್ರಾಚೀನತೆ ಕ್ರಿಸ್ತಶಕ 8 ರಿಂದ 9ನೇ…
ವಿರಾಜಪೇಟೆ ಜ.27 NEWS DESK : ಕೇರಳದ ಬೈತೂರು ಉತ್ಸವ ಹಿನ್ನೆಲೆ ವಿರಾಜಪೇಟೆಯಿಂದ ಬೈತೂರಪ್ಪ ದೇವಸ್ಥಾನಕ್ಕೆ ಮೂವರು ಯುವಕರು ಮೂರನೇ ವರ್ಷವೂ ಪಾದಯಾತ್ರೆ ಮಾಡಿ ಗಮನ ಸೆಳೆದರು. ಭಕ್ತರಾಗಿರುವ ಚೆಟ್ಟೋಳಿರ ಶರತ್ ಸೋಮಣ್ಣ, ಮುರುವಂಡ ಸವನ್ ಸೋಮಣ್ಣ, ಕಾಳಮಂಡ ರಾಬಿನ್ ಅಚ್ಚಮ್ಮ ಪಾದಯಾತ್ರೆ ನಡೆಸಿದ ಯುವಕರು. ಜ.22ರ ಮುಂಜಾನೆ ವಿರಾಜಪೇಟೆಯಿಂದ ಪಾದಯಾತ್ರೆ ಪ್ರಾರಂಭಿಸಿದ ಇವರು ಪೆರುಂಬಾಡಿ, ಮಾಕುಟ್ಟ, ಕೂಟುಪೊಳೆ, ಹುಲಿಕಲ್ ಮೂಲಕ ಪಾದಯಾತ್ರೆ ಮಾಡಿ ಸುಮಾರು 40 ಕಿ.ಮಿ ಕ್ರಮಿಸಿ ದೇವಾಲಯ ತಲುಪಿದರು. ನಂತರ ನಾಲ್ಕುದಿನಅಲ್ಲೇ ಕೆಲಸ ಕಾರ್ಯ ನಿರ್ವಹಿಸಿ, ವಿರಾಜಪೇಟೆಗೆ ಹಿಂತಿರುಗಿ ಪ್ರಸಾದ ವಿತರಿಸಿದರು.






