ಲೇಖಕ: admin

ಮಡಿಕೇರಿ ಡಿ.19 NEWS DESK : ಕೊಡಗು ಜಿಲ್ಲೆಯಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಂಡಿರುವವರು (ಮೀನು ಉತ್ಪಾದನೆ, ಹಿಡುವಳಿ, ಸಾಗಾಣಿಕೆ, ಮಾರಾಟ ಮತ್ತು ಅಲಂಕಾರಿಕ ಮೀನುಗಾರಿಕೆ ಹಾಗೂ ಮತ್ತಿತರ ಮೀನುಗಾರಿಕೆ ಚಟುವಟಿಕೆಗಳು) ಮೀನುಗಾರರು, ಮೀನು ಕೃಷಿಕರು “ರಾಷ್ಟ್ರೀಯ ಮೀನುಗಾರಿಕೆ ಡಿಜಿಟಲ್ ವೇದಿಕೆ” ಆನ್‍ಲೈನ್ ಪೊರ್ಟಲ್  URL: https://nfdp.dof.gov.in/nfdp/#/registration ನಲ್ಲಿ ನೋಂದಾಣಿ ಮಾಡಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.19 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆದಮುಳ್ಳೂರು-ಕಡಂಗ ಭಾಗದ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಭಾಗದ ಜನರ ಹಾಗೂ ವಾಹನ ಸವಾರರ ಬೇಡಿಕೆಗೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಾರಿಯ ಅಧಿಕ ಮಳೆಯಿಂದಾಗಿ ತೀವ್ರ ಹಾನಿಗೊಳಗಾಗಿದ್ದ ರಸ್ತೆಯ ದುರಸ್ತಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರು ವಿಶೇಷ ಅನುದಾನ ನೀಡಿದ್ದರು. ಮಳೆ ಕಡಿಮೆ ಆಗಿರುವುದರಿಂದ ರಸ್ತೆ ದುರಸ್ತಿ ಕಾಮಗಾರಿಯನ್ನು ಈಗ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಗುಣಮಟ್ಟದ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ನಾಪೋಕ್ಲು ಡಿ.19 NEWS DESK : ನೆಬ್ಬೂರು ಗೌಡ ಸಂಘದ ಹುತ್ತರಿ ಊರೋರ್ಮೆ ಸಂತೋಷಕೂಟವು ಕಟ್ರತನ ಬಾಣೆಯಲ್ಲಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಪೊನ್ನಚ್ಚನ, ಕೊಟ್ಟಕೇರಿಯನ ಮತ್ತು ಕಟ್ರತನ ಕುಟುಂಬಗಳು ಒಟ್ಟುಗೂಡಿ ನಡೆಸಿಕೊಂಡು ಬರುತ್ತಿರುವ ಹುತ್ತರಿ ಊರೋರ್ಮೆ ಕೂಟದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕಟ್ರತನ ಲೋಕನಾಥ್ ವಹಿಸಿ ಮಾತನಾಡಿ, ಸಂಘದ ಎಲ್ಲ ಸದಸ್ಯರ ಸಹಕಾರದಿಂದ ಮಾತ್ರ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದರು. ಕಾರ್ಯಕ್ರಮವನ್ನು ಕಟ್ರತನ ಪ್ರಸಾದ್ ಉದ್ಘಾಟಿಸಿದರು. ಮಡಿಕೇರಿ ತಾಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ ಪ್ರಸ್ತಾವಿಕ ಮಾತನಾಡಿದರು. ವಾರ್ಷಿಕ ವರದಿಯನ್ನು ಸಂಘದ ಕಾರ್ಯದರ್ಶಿ ಪೊನ್ನಚ್ಚನ ರೋಹಿತ್ ವಾಚಿಸಿದರು. ಕಟ್ರತನ ರೋಹಿಣಿ ಸ್ವಾಗತಿಸಿದರು. ಕೊಟ್ಟಕೇರಿಯನ ಧರ್ಮೇಂದ್ರ ನಿರೂಪಿಸಿದರು. ಪೊನ್ನಚ್ಚನ ಡೈಸಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಟೋ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಡಿ.19 NEWS DESK : ಕರಿಕೆ ಎಳ್ಳುಕೊಚ್ಚಿ ಅಖಿಲ ಹಿಂದೂ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂದಿರದಲ್ಲಿ ರಾಘವ ಗುರು ಸ್ವಾಮಿಯ ನೇತೃತ್ವದಲ್ಲಿ 48ನೇ ವರ್ಷದ ದೀಪೋತ್ಸವ ನಡೆಯಿತು.

Read More

ಶ್ರೀನಗರ NEWS DESK ಡಿ.19 : ಸೈನಿಕರ ಮೇಲೆ ಗುಂಡಿನ ದಾಳಿ ಮಾಡಿದ ಐವರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೇನಾಪಡೆ ಗುರುವಾರ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಇಬ್ಬರು ಯೋಧರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರು ಇರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದರು. ಉಗ್ರರು ಅಡಗಿ ಕುಳಿತಿದ್ದ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಈ ಸಂದರ್ಭ ದಿಟ್ಟ ಉತ್ತರ ನೀಡಿದ ಭಾರತೀಯ ಸೈನಿಕರು ಐವರು ಉಗ್ರರನ್ನು ಹತ್ಯೆ ಮಾಡಿದರು.

Read More

ಮಡಿಕೇರಿ ಡಿ.19 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲುಗುಂದ (ಹಾರಂಗಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯಕ್ಕೆ ಕುಶಾಲನಗರ ರೋಟರಿ ಸಂಸ್ಥೆಯ ವತಿಯಿಂದ ವಿವಿಧ ಪುಸ್ತಕಗಳು ಹಾಗೂ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಸಂಸ್ಥೆಯ  ಜಿಲ್ಲಾ ಗೌರ್ನರ್ ವಿಕ್ರಮ್ ದತ್ತ  ಶಾಲಾ ಮುಖ್ಯ ಶಿಕ್ಷಕಿರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭ ಸಂಸ್ಥೆಯ  ಜಿಲ್ಲಾ ಕಾರ್ಯದರ್ಶಿ ರಿತೀಶ್ ಬಾಳಿಗಾ, ಸಹಾಯಕ ಗೌರ್ನರ್ ಡಾ.ಹರೀಶ್ ಎ.ಶೆಟ್ಟಿ, ಕುಶಾಲನಗರ ರೋಟರಿ ಕ್ಲಬ್ ಅಧ್ಯಕ್ಷ ಸಿ.ಬಿ.ಹರೀಶ್, ಕಾರ್ಯದರ್ಶಿ ಡಿ.ಡಿ.ಕಿರಣ್, ಕೂಡಿಗೆ ಕ್ಲಸ್ಟರ್ ವಿಭಾಗದ ಸಿ.ಆರ್. ಪಿ. ಶಾಂತಕುಮಾರ್ ಸೇರಿದಂತೆ ಕುಶಾಲನಗರ ರೋಟರಿ ಕ್ಲಬ್ ನ ಸದಸ್ಯರು, ಶಾಲಾ ಶಿಕ್ಷಕರ ವೃಂದ ಹಾಜರಿದ್ದರು.

Read More

ಮಡಿಕೇರಿ ಡಿ.19 NEWS DESK : ಕೊಡಗಿನಲ್ಲಿ ಫುಟ್ಬಾಲ್ ವೇಗವಾಗಿ ಬೆಳೆಯುತ್ತಿದ್ದು, ಇನ್ನಷ್ಟು ಉನ್ನತ್ತಮಟ್ಟಕ್ಕೆ ಫುಟ್ಬಾಲ್ ಕ್ರೀಡೆ ಬೆಳವಣಿಗೆ ಸಾಧಿಸುವ ಅವಶ್ಯಕತೆ ಇದೆ. ಜಿಲ್ಲೆಯ ಎಲ್ಲಾ ಫುಟ್ಬಾಲ್ ಕ್ಲಬ್ ಗಳು ಫುಟ್ಬಾಲ್ ಕ್ರೀಡೆ ಬೆಳವಣಿಗೆಗೆ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯೊಂದಿಗೆ ಕೈ ಜೋಡಿಸಬೇಕೆಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಕರೆ ನೀಡಿದರು. ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಮ್ಮತ್ತಿಯಲ್ಲಿರುವ ಕಚೇರಿಯಲ್ಲಿ ನಡೆದ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ನೋಂದಾಯಿತ ಕ್ಲಬ್ ಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ 2024-25ರ ಸಾಲಿನ ಜಿಲ್ಲಾ‌ಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಯ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು. ತಳಮಟ್ಟದಿಂದಲೇ ಜಿಲ್ಲೆಯಲ್ಲಿ ಫುಟ್ಬಾಲ್ ಬೆಳೆಯಲು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಹೊಸ ಯೋಜನೆಯನ್ನು ಕೈಗೊಳ್ಳಲು ತೀರ್ಮಾನಿಸಿದ್ದು, ಎಲ್ಲರ ಸಹಕಾರ ಅತ್ಯಗತ್ಯ ಎಂದು ಪಾಣತ್ತಲೆ ಜಗದೀಶ್ ಮಂದಪ್ಪ ಹೇಳಿದರು. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ.ನಾಗೇಶ್ (ಈಶ್ವರ್)…

Read More

ಸೋಮವಾರಪೇಟೆ ಡಿ.19 NEWS DESK : ಸಿ ಮತ್ತು ಡಿ ಭೂಮಿಯನ್ನು ಅರಣ್ಯ ಎಂದು ಘೋಷಣೆ ಮಾಡಬಾರದು ಹಾಗೂ ರೈತರಿಗೆ ಭೂಮಿಯ ಹಕ್ಕುಪತ್ರವನ್ನು ನೀಡಬೇಕು ಎಂದು ಆಗ್ರಹಿಸಿ ಡಿ.20ರಂದು  ಮಡಿಕೇರಿ ಗಾಂಧಿ ಮೈದಾನದಲ್ಲಿ ರೈತರ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋರಾಟಕ್ಕೆ ರೈತ ಸಂಘ, ಜಿಲ್ಲೆಯ 50ರಷ್ಟು ಸಂಘಸಂಸ್ಥೆಗಳು, ಗ್ರಾಮಾಭಿವೃದ್ಧಿ ಮಂಡಳಿಗಳು, ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ ಎಂದು ಅವರು  ಹೇಳಿದರು. ಬೆಳಗಾವಿ ಅಧಿವೇಶನದಲ್ಲಿ ಜಿಲ್ಲೆಯ ಇಬ್ಬರು ಶಾಸಕರುಗಳಾದ ಡಾ.ಮಂತರ್‌ಗೌಡ ಹಾಗೂ ಎ.ಎಸ್.ಪೊನ್ನಣ್ಣ, ಸಿ ಆ್ಯಂಡ್ ಡಿ ಭೂಮಿ ರೈತರಿಗೆ ಸಿಗಬೇಕು ಎಂದು ತಮ್ಮ ವಾದ ಮಂಡಿಸಿದ್ದಾರೆ. ಅವರಿಗೆ ಜಿಲ್ಲೆಯ ರೈತರು ಚಿರರುಣಿಗಳಾಗಿರುತ್ತೇವೆ. ಶಾಶ್ವತ ಪರಿಹಾರ ಸಿಗುವ ತನಕ, ರೈತರ ಹೋರಾಟಕ್ಕೆ ತಮ್ಮ ಸಹಕಾರ ನೀಡಬೇಕು ಎಂದು ಹೇಳಿದರು. ಸಿ ಆ್ಯಂಡ್ ಡಿ ಭೂಮಿಯೂ ಕೂಡ ಪೈಸಾರಿ ಜಾಗವಾಗಿದ್ದು, ಕೃಷಿಗೆ ಯೋಗ್ಯವಾದ ಭೂಮಿಯಾಗಿದೆ.…

Read More

ಮಡಿಕೇರಿ ಡಿ.19 NEWS DESK : ಆಯುಷ್ ಇಲಾಖೆಯಿಂದ ಸಾರ್ವಜನಿಕರ ಆರೋಗ್ಯಕ್ಕಾಗಿ “ಪ್ರಕೃತಿ ಪರೀಕ್ಷಾ ಅಭಿಯಾನ”ವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಮನುಷ್ಯನ “ದೇಹದ ಪ್ರಕೃತಿಯನ್ನು ತಿಳಿದು ಅದರ ಅನುಸಾರ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಸಾರ್ವಜನಿಕರು ಕಾಪಾಡಿಕೊಳ್ಳಬಹುದಾಗಿದೆ ಎಂಬ ಆಶಯದೊಂದಿಗೆ ಭಾರತ ಸರ್ಕಾರದ ಆಯುಷ್ ಮಂತ್ರಾಲಯ “ದೇಶ್ ಕೀ ಪ್ರಕೃತಿ ಪರೀಕ್ಷಾ ಅಭಿಯಾನ” ಹಮ್ಮಿಕೊಂಡಿದೆ. ನ.26 ರಿಂದ ಈ ಅಭಿಯಾನ ಪ್ರಾರಂಭವಾಗಿದ್ದು, ಡಿ.26 ರವರೆಗೆ ದೇಶಾದ್ಯಂತ ನಡೆಯಲಿದೆ. ಇದು ವಿಶೇಷ ಮೊಬೈಲ್ ಆ್ಯಪ್ ಆಧಾರಿತ ಕಾರ್ಯಕ್ರಮವಾಗಿದ್ದು, ಈ ಆ್ಯಪ್‍ನ್ನು ಪ್ಲೇ-ಸ್ಟೋರ್ ಮೂಲಕ ಆಂಡ್ರಾಯಿಡ್ ಮೊಬೈಲ್‍ನಲ್ಲಿ ಅಥವಾ ಐ-ಫೋನ್‍ನಲ್ಲಿ ಅಳವಡಿಸಿಕೊಂಡು ಕೆಲವು ಮೂಲ ಪ್ರಶ್ನೆಗಳಿಗೆ ಉತ್ತರಿಸಿದ್ದಲ್ಲಿ ಕಾಲಕಾಲಕ್ಕೆ ನಿಮ್ಮ ಪ್ರಕೃತಿ ಅನುಸಾರವಾಗಿ ಆರೋಗ್ಯಕ್ಕೆ ಪೂರಕವಾದ ಸೂಚನೆ ಮತ್ತು ಸಲಹೆಗಳು ನಿಮ್ಮ ಮೊಬೈಲ್‍ನಲ್ಲಿ ಬರಲಿದೆ. ಈ ಅಭಿಯಾನವನ್ನು ಜಿಲ್ಲಾ ಆಯುಷ್ ಇಲಾಖೆಯು ಕೊಡಗು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿಯಿಂದ ಸ್ವಯಂ ಪ್ರೇರಿತವಾಗಿ ಹತ್ತಿರದ ಆಯುಷ್ ಚಿಕಿತ್ಸಾಲಯಗಳಿಗೆ ಮತ್ತು ತಾಲೂಕು ಆಯುಷ್ ಆಸ್ಪತ್ರೆಗಳಿಗೆ ಸಂಪರ್ಕಿಸಿದ್ದಲ್ಲಿ ವೈದ್ಯಾಧಿಕಾರಿಗಳು…

Read More

ಗೋಣಿಕೊಪ್ಪಲು NEWS DESK ಡಿ.19 : ಗೋಣಿಕೊಪ್ಪಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಹೊರತರಲು ನಿರ್ಧರಿಸಿದ್ದು, ಹಳೆಯ ವಿದ್ಯಾರ್ಥಿಗಳಿಂದ ಲೇಖನಗಳನ್ನು ಶತಮಾನೋತ್ಸವ ಸ್ಮರಣ ಸಂಚಿಕೆ ಸಮಿತಿ ಆಹ್ವಾನಿಸಿದೆ. ಶಾಲೆಯ ಆವರಣದಲ್ಲಿ ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ. ಸ್ಮರಣ ಸಂಚಿಕೆ ಸುಮಾರು 300 ಪುಟಗಳನ್ನು ಹೊಂದಿರುತ್ತದೆ. ಶಾಲೆಗೆ ಸಂಬoಧಿಸಿದ ಚಿತ್ರಗಳು ಮತ್ತು ಶತಮಾನೋತ್ಸವ ಆಚರಣೆಯ ಚಿತ್ರಗಳು ಸೇರಿದಂತೆ ಶಾಲೆ ನಡೆದು ಬಂದ ಐತಿಹಾಸಿಕ ಲೇಖನಗಳು, ರಾಜ್ಯಪಾಲರು ಮುಖ್ಯಮಂತ್ರಿಗಳು, ಶಾಸಕರು, ಸಚಿವರು, ಉಸ್ತುವರಿ ಸಚಿವರುಗಳ, ಶುಭ ಸಂದೇಶಗಳು, ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಬರಹಗಳು ದಾಖಲಾಗುತ್ತವೆ. ಜತೆಗೆ ಹಳೆ, ಹಿರಿಯ ವಿದ್ಯಾರ್ಥಿಗಳಿಂದ ಲೇಖನಗಳನ್ನು ಸಹ ಪುಸ್ತಕದಲ್ಲಿ ಅಳವಡಿಸಲಾಗುವುದು. ಹಳೆಯ ವಿದ್ಯಾರ್ಥಿಗಳು 200 ಶಬ್ದಕ್ಕೆ ಮೀರದಂತೆ ವೈಚಾರಿಕ, ಸಾಮಾಜಿಕ, ಶೈಕ್ಷಣಿಕ ಲೇಖನಗಳನ್ನು, ಕಥೆ, ಕವನಗಳನ್ನು ಕಳುಹಿಸಬಹುದಾಗಿದೆ. ಲೇಖನಗಳನ್ನ ಡಿಸೆಂಬರ್ 31ರ ಒಳಗೆ ಕಳುಹಿಸಿಕೊಡಲು ಸಮಿತಿ ಮನವಿ…

Read More