ಮಡಿಕೇರಿ ಡಿ.19 NEWS DESK : ನಗರದ ಮೀನುಪೇಟೆಯ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಸಮುದಾಯ ಬಾಂಧವರ ಅನುಕೂಲಕ್ಕಾಗಿ ‘ಮೃತದೇಹ’ವನ್ನು ಒಂದು ದಿನಗಳ ಕಾಲ ಸುರಕ್ಷಿತವಾಗಿಡುವ ಶೀತಲೀಕರಣ(ಫ್ರೀಜರ್) ಯಂತ್ರವನ್ನು ಉದ್ಘಾಟಿಸಲಾಯಿತು. ನಗರದ ಮಲಬಾರ್ ರಸ್ತೆಯಲ್ಲಿರುವ ಶ್ರೀ ಚೈತನ್ಯ ಮಠಪುರ ಮುತ್ತಪ್ಪನ್ ದೇವಾಲಯದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶೀತಲೀಕರಣ ಯಂತ್ರವನ್ನು ಉದ್ಘಾಟಿಸಿ, ಬಳಿಕ ಪತ್ರಿಕಾಗೋಷ್ಠಿಯಲ್ಲಿ ಶ್ರೀ ಮಾತನಾಡಿದ ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ಪಿ.ಜಿ.ಸುಮೇಶ್ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದಿಂದ ಜನಾಂಗ ಬಾಂಧವರಿಗೆ ಮರಣ ನಿಧಿ, ಮನೆ ನಿರ್ಮಾಣ, ಸಾಂಸ್ಕøತಿಕ ಕಾರ್ಯಕ್ರಮಗಳ ಅಯೋಜನೆ, ಕ್ರೀಡಾ ಕಾರ್ಯಕ್ರಮ, ಜನಾಂಗ ಕಲ್ಯಾಣ ಹಾಗೂ ಲೋಕ ಕಲ್ಯಾಣದ ಹಿತದೃಷ್ಟಿಯಿಂದ ಜನಪರ ಸೇವೆಗಳನ್ನು ಸುಮಾರು 16 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಸಂಘದ ಸದಸ್ಯರಿಂದ ದೇಣಿಗೆಯನ್ನು ಪಡೆದು ಮೃತದೇಹವನ್ನು ದಿನಗಳ ಕಾಲ ಕಾಯ್ದಿರಿಸಲು ಒಂದು ಲಕ್ಷ ಮೌಲ್ಯದ ಶೀತಲೀಕರಣ ಯಂತ್ರವನ್ನು ಖರೀದಿಸಿ, ಅದರ ಬಳಕೆಗೆ ಅನುವು ಮಾಡಿಕೊಡಲಾಗಿದೆ ಎಂದರು. ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಕಾರ್ಯದರ್ಶಿ…
ಲೇಖಕ: admin
ಕೊರಟಗೆರೆ NEWS DESK ಡಿ.19 : ಇತ್ತೀಚಿನ ದಿನಗಳಲ್ಲಿ ಅತಿ ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಕೇವಲ 32 ವರ್ಷದ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಿಜಾಪುರ ಜಿಲ್ಲೆಯ ಕೊರಟಗೆರೆಯ ತುಂಬುಗಾನಹಳ್ಳಿಯ 12ನೇ ಕೆಎಸ್ಆರ್ಪಿ ಘಟಕದಲ್ಲಿ ನಡೆದಿದೆ. ಮಲ್ಲಿಕಾರ್ಜುನ್ ಚವಾರ್(32) ಎಂಬುವವರೇ ಮೃತ ಪೊಲೀಸ್ ಸಿಬ್ಬಂದಿ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಡಿಕೇರಿ NEWS DESK ಡಿ.19 : ಮಡಿಕೇರಿ ನಗರದ ಫಝಲ್ ಮಿಲ್ ಮಾಲೀಕ ಎಂ.ಜೆ.ಫಝಲ್ (79) ಅವರು ಅನಾರೋಗ್ಯದಿಂದ ಕಾಸರಗೋಡಿನಲ್ಲಿ ನಿಧನ ಹೊಂದಿದರು. ಮಡಿಕೇರಿಯ ಮದೀನ ಮಸೀದಿಯಲ್ಲಿ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಫಝಲ್ ಅವರು ನಗರಸಭೆಯ ಮಾಜಿ ಸದಸ್ಯ ಸಿರಾಜ್ ಜಾಫ್ರಿ ಅವರ ಸಹೋದರ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ ಮಡಿಕೇರಿಯ ಮದೀನ ಮಸೀದಿಯಲ್ಲಿ ಪ್ರಾರ್ಥನೆಯಾದ ನಂತರ ಖಭರ ಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮಡಿಕೇರಿ ಡಿ.19 NEWS DESK : ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ಮನೋವಿಜ್ಞಾನದಲ್ಲಿ ಎಂ.ಎ., ಪತ್ರಿಕೋದ್ಯಮದಲ್ಲಿ ಎಂ.ಎ., ಗ್ರಾಮೀಣಾಭಿವೃದ್ಧಿಯಲ್ಲಿ ಎಂ.ಎ., ಸಮಾಜಶಾಸ್ತ್ರದಲ್ಲಿ ಎಂ.ಎ., ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಎಂ.ಕಾಂ, ಬಿಎಸ್ಸಿ, ಎಂಎಸ್ಡಬ್ಲ್ಯು, ಬಿಬಿಎಂ, ಬಿಎ, ಬಿಎಸ್ಸಿ ಜೊತೆಗೆ ಬಿಇಡಿ ಅಥವಾ ಎಂಇಡಿ ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು. ಕಂಪ್ಯೂಟರ್ನಲ್ಲಿ ಎಂಎಸ್ ವರ್ಡ್, ಎಂಎಸ್ ಎಕ್ಸೆಲ್ ಹಾಗೂ ಎಂಎಸ್ ಪವರ್ ಪಾಯಿಂಟ್ ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.comಇಲ್ಲಿಗೆ ಡಿಸೆಂಬರ್, 28 ರೊಳಗೆ ಕಳುಹಿಸಬೇಕು. ತಿಂಗಳ ಸಂಬಳ ರೂ. 30 ಸಾವಿರ ಇದ್ದು, ಹೆಚ್ಚಿನ ಮಾಹಿತಿಗೆ…
ಕುಶಾಲನಗರ NEWS DESK ಡಿ.18 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಿ.21 ಮತ್ತು 22 ರಂದು ( ಶನಿವಾರ ಮತ್ತು ಭಾನುವಾರದಂದು ) ಎರಡು ದಿನಗಳ ಕಾಲ ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ “*ರಾಷ್ಟ್ರೀಯ ಭಾವೈಕ್ಯತೆ ಬೆಸುಗೆ ಹಾಗೂ ಸ್ವಚ್ಛತೆಯೇ ಸೇವೆ*”ಎಂಬ ಧ್ಯೇಯ ವಾಕ್ಯದೊಂದಿಗೆ ಕೊಡಗು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ರ್ಯಾಲಿ ಏರ್ಪಡಿಸಲಾಗಿದೆ. ಕುಶಾಲನಗರ ಪತ್ರಕರ್ತರ ಸಂಘದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಕ್ಕಳ ರ್ಯಾಲಿ ಕುರಿತು ಮಾಹಿತಿ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಡಿ.21 ರಂದು ಶನಿವಾರ ಮಧ್ಯಾಹ್ನ 2.00 ಗಂಟೆಗೆ ನಡೆಯಲಿರುವ ಮಕ್ಕಳ ರ್ಯಾಲಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಸರ್…
ಮಡಿಕೇರಿ ಡಿ.18 NEWS DESK : ಅರಕಲಗೂಡು ನೋಡಲ್ ಕೇಂದ್ರ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ಯಸಳೂರು ಹಾಗೂ ಶನಿವಾರಸಂತೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲು ಉದ್ದೇಶಿಸಿದ್ದು, ಈ ದಿನದಂದು ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೋಗುವ 11 ಕೆವಿ ಗ್ರಾಮಾಂತರ ಮತ್ತು ಐಪಿ ಮಾರ್ಗಗಳಿಗೆ ಡಿಸೆಂಬರ್, 19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಶನಿವಾರಸಂತೆ, ಹಂಡ್ಲಿ, ಗೌಡಳ್ಳಿ, ಶುಂಠಿ, ಮಾದ್ರೆ, ಮಾದ್ರವಳ್ಳಿ, ಬಿಳಹ, ದುಂಡಳ್ಳಿ, ಬೆಸೂರು, ಕಟ್ಟೆಪುರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಪೊನ್ನಂಪೇಟೆ :: ಪೊನ್ನಂಪೇಟೆ 66/11 ಕೆವಿ ಹಾಗೂ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಡಿಸೆಂಬರ್, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಉಪ-ವಿಭಾಗ ವ್ಯಾಪ್ತಿಯ…
ಮಡಿಕೇರಿ ಡಿ.18 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೂರ್ನಾಡಿನ ಬಲಂಬೇರಿಯ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್ನಲ್ಲಿ 15ನೇ ವರ್ಷದ ಗನ್ ಕಾರ್ನಿವಲ್- ತೋಕ್ ನಮ್ಮೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಿ, ವಾಹನದಲ್ಲಿರಿಸಿ ದುಡಿಕೋಟ್ ಪಾಟ್ನೊಂದಿಗೆ ಮೆರವಣಿಗೆ ನಡೆಸಲಾಯಿತು. ನಂತರ ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಗಳು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕೊಡವತಿ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆರಂಭದಲ್ಲಿ ನಂದಿನೆರವಂಡ ನಿಶಾ ಅಚ್ಚಯ್ಯ ಅವರು ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ವಿರಚಿತ ತೋಕ್ಪಾಟ್ ಹಾಡಿದರು. ಎನ್.ಯು.ನಾಚಪ್ಪ ಅವರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಂದೂಕು/ತೋಕ್ ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆಯ ಹೆಗ್ಗುರುತಾಗಿದ್ದು, ಪೂರ್ವಕಾಲದ ಸಂಪ್ರದಾಯ, ಆಚರಣೆಗಳು ಮತ್ತು ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಹಾಗೂ ಸಂರಕ್ಷಿಸಲು ಸಿಎನ್ಸಿ ಪ್ರತಿವರ್ಷ ತೋಕ್ ನಮ್ಮೆಯನ್ನು ಸಾರ್ವಜನಿಕ ಗನ್…
ಮಡಿಕೇರಿ ಡಿ.18 NEWS DESK : ಕಾಡುಕೋಣ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನಯ್ಯಕೋಟೆ ಗ್ರಾಮದ ಆಬ್ಬೂರು ಎಂಬಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ರಾಜು.ಜೆ (52) ಹಾಗೂ ಬೋಜಿ ಜೆ.ಟಿ (48) ಗಾಯಗೊಂಡವರು. ಎಂದಿನಂತೆ ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಜಿ ಹಾಗೂ ರಾಜು ಮೇಲೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ. ಗಾಯಾಳುಗಳನ್ನು ಪಾಲಿಬೆಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಚೆನ್ನವೀರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಡಿ.18 NEWS DESK : ನಗರದ ಪಿ.ಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ 112 ಸಹಾಯವಾಣಿಯ ಬಗ್ಗೆ ಅರಿವು ಕಾರ್ಯಕ್ರಮವು ನಡೆಯಿತು. ಪೊಲೀಸ್ ಇಲಾಖೆಯ ಮಕ್ಕಳ ಕಲ್ಯಾಣಾಧಿಕಾರಿ ಸುಮತಿ ಅವರು ಮಕ್ಕಳ ಸಹಾಯವಣಿ 112 ರ ಬಗ್ಗೆ ಮಾಹಿತಿ ನೀಡಿದರು. ಯಾರೇ ಆದರೂ ಅಸಭ್ಯವಾಗಿ ನಡೆದುಕೊಂಡರೆ, ಮೊದಲಿಗೆ 112 ಅನ್ನು ಮೊಬೈಲ್ನಲ್ಲಿ ಡಯಲ್ ಮಾಡಿದ ನಂತರ 8ನೇ ನಂಬರ್ ಅಥವಾ ಸಂಖ್ಯೆಗೆ ಡಯಲ್ ಮಾಡಿ ಸಮಸ್ಯೆ ತಿಳಿಸಲು ಮನವರಿಕೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರು ಮಾತನಾಡಿ ಮಕ್ಕಳು ಅರಿತುಕೊಂಡಂತಹ ಮಾಹಿತಿಯನ್ನು ಹಾಗೂ ಶಾಲಾ ಉಪಹಾರ ಬಿಸಿಯೂಟ ಹಾಗೂ ಪಾಠಕ್ಕೆ ಸಂಬಂಧಿಸಿದಂತಹ ಸಮಸ್ಯೆಗಳ ವಿವರಗಳನ್ನು ಕೂಡ ನೀವು 112 ಸಹಾಯವಾಣಿಯ ಮೂಲಕ ತಿಳಿಸಬಹುದು ಎಂದರು. ಮಡಿಕೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮೋಹನ ಕುಮಾರಿ ಅವರು ಮಾತನಾಡಿ ಮಕ್ಕಳಿಗೆ ಅವಶ್ಯಕತೆ ಇದ್ದಲ್ಲಿ ಮಾತ್ರ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.…
ಮಡಿಕೇರಿ ಡಿ.18 NEWS DESK : ಅರಣ್ಯ ಹಾಗೂ ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದ ಮೂಲ ಜೇನುಕುರುಬ ಸಮುದಾಯಕ್ಕೆ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯುತ್ ಸಂಪರ್ಕ ಕಲ್ಪಿಸುವುದು ಮತ್ತಿತರ ಮೂಲ ಸೌಲಭ್ಯ ಕಲ್ಪಿಸುವ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ವೀಡಿಯೊ ಸಂವಾದ ನಡೆಯಿತು. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಮೂಲನಿವಾಸಿ ಜೇನುಕುರುಬ ಸಮುದಾಯದವರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕಿದ್ದು, ಮೂಲ ಸೌಲಭ್ಯ ಕಲ್ಪಿಸಲು ಬಾಕಿ ಇರುವ ಕುಟುಂಬಗಳಿಗೆ ತುರ್ತು ಕ್ರಮಕೈಗೊಳ್ಳುವಂತೆ ಆರ್.ಐಶ್ವರ್ಯ ಅವರು ಸೂಚಿಸಿದರು. ಈ ಬಗ್ಗೆ ಮಾತನಾಡಿದ ಸಮಗ್ರ ಗಿರಿಜನ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ ಅವರು ಜಿಲ್ಲೆಯಲ್ಲಿ 9 ಸಾವಿರಕ್ಕೂ ಹೆಚ್ಚು ಜೇನುಕುರುಬ ಸಮಾಜದವರು ಇದ್ದು, 3 ಸಾವಿರಕ್ಕೂ ಹೆಚ್ಚು ಜೇನುಕುರುಬ ಕುಟುಂಬಗಳು ಇವೆ. ಈಗಾಗಲೇ 8,710 ಜನರಿಗೆ ಆಧಾರ್ ಕಾಡ್ಣ್ನೀಡಲಾಗಿದೆ. ಉಳಿದಂತೆ 500…






