ಲೇಖಕ: admin

ವಿರಾಜಪೇಟೆ ಜ.27 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಡೆಸ್ಕ್ ಬೆಂಚು ವಿತರಣಾ ಕಾರ್ಯಕ್ರಮದಡಿಯಲ್ಲಿ, ಮೂರ್ನಾಡು ಸರಕಾರಿ ಪ್ರೌಢಶಾಲೆಗೆ ಡೆಸ್ಕ್-ಬೆಂಚ್ ಮಂಜುರಾಗಿದ್ದು, ಮಡಿಕೇರಿ ತಾಲ್ಲೂಕಿನ ನಿವೃತ್ತ ಪೊಲೀಸ್ ಅಧಿಕಾರಿ (ಪಿಎಸ್‍ಐ)ಸದಾಶಿವ ಹಾಗೂ ಮೂರ್ನಾಡು ಪಂಚಾಯಿತಿ ಅಧ್ಯಕ್ಷ ಕುಶನ್ ರೈ ಶಾಲೆಗೆ ಡೆಸ್ಕ್ ಬೆಂಚ್ ವಿತರಿಸಿದರು. ಈ ಸಂದರ್ಭ ಮಾತನಾಡಿದ ನಿವೃತ್ತ ಪಿಎಸ್‍ಐ ಸದಾಶಿವ, ಸರಕಾರಿ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳು ಹೆಚ್ಚಿನವರು ಮಧ್ಯಮ ವರ್ಗದವರಾಗಿರುತ್ತಾರೆ. ಶಾಲೆಗಳಿಗೆ ಪೀಠೋಪಕರಣ ನೀಡಿರುವುದರಿಂದ ಅವರ ಕಲಿಕಾ ವ್ಯವಸ್ಥೆಗೆ ಸಹಕಾರಿವಾಗಲಿದೆ ಎಂದರು. ಮನೆಯಲ್ಲಿ ಆರ್ಥಿಕವಾಗಿ ಬಡತನ ಇದ್ದರು ಕಲಿಕೆಯಲ್ಲಿ ಬಡತನ ಇರಬಾರದು, ಒಳ್ಳೆಯ ವಿದ್ಯಾವಂತರಾಗಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಸರಕಾರಿ ಕೆಲಸಗಳನ್ನು ಅಲಂಕರಿಸಿ ದೇಶಕ್ಕೆ ಮಾದರಿಯಾಗಿ ಬಾಳಬೇಕೆಂದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಪ್ರತಾಪ್ ದೇವಾಡಿಗ, ಕೃಷಿ ಮೇಲ್ವಿಚಾರಕರಾದ ವಸಂತ, ಶಾಲೆಯ ಮುಖ್ಯ ಶಿಕ್ಷಕ ಗುರುರಾಜ್, ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ರಮ್ಯ, ಸೇವಾ ಪ್ರತಿನಿಧಿ ಶಿವಾನಂದ,…

Read More

ಸುಂಟಿಕೊಪ್ಪ ಜ.27 NEWS DESK :  ಸೋಶಿಯಲ್ ಡೆಮೊಕ್ರೆಟಿಕ್ ಟ್ರೇಡ್‍ಯೂನಿಯನ್ (ಎಸ್‍ಡಿಟಿಯು) ಸುಂಟಿಕೊಪ್ಪ ನಗರ ಸಮಿತಿ ಅಧ್ಯಕ್ಷರಾಗಿ ಎಸ್.ಎಫ್.ಫಿರೋಜ್‍ಖಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎ.ನೌಶದ್ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪ ದ್ವಾರಕ ಸಭಾಂಗಣದಲ್ಲಿ ಎಸ್‍ಡಿಟಿಯು ಜಿಲ್ಲಾಧ್ಯಕ್ಷರ ಅಣ್ಣಾ ಶರೀಫ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುಂಟಿಕೊಪ್ಪ ನಗರ ಸಮಿತಿಯನ್ನು ರಚಿಸಲಾಗಿದ್ದು, ಉಪಾಧ್ಯಕ್ಷರಾಗಿ ಆರ್.ಎನ್.ರಿಯಾಜ್, ಕಾರ್ಯದರ್ಶಿ ಎಸ್.ಸಲೀಂ, ಖಜಾಂಚಿಯಾಗಿ ಸಿಕಂದರ್ ಶರೀಫ್, ಸಮಿತಿ ಸದ್ಯರುಗಳಾಗಿ ಸಲಾಂ, ಆರ್.ರಫೀಕ್, ಆಸೀಫ್ ಮತ್ತಿತರನ್ನು ನೇಮಕಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎ.ಲತೀಫ್ ಹಾಗೂ ಅಜೀಜ್ ಮತ್ತಿತರರು ಇದ್ದರು.

Read More

ಸುಂಟಿಕೊಪ್ಪ ಜ.27 NEWS DESK : ಸುಂಟಿಕೊಪ್ಪ ಗ್ರಾಮದೇವರ ನೂತನ ಸಮಿತಿ ಅಧ್ಯಕ್ಷರಾಗಿ ಎ.ಶ್ರೀಧರ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಗೋಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮದೇವರ ಸಮಿತಿಯ ಸಭೆಯನ್ನು ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಎ.ಲೋಕೇಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆಸಲಾಯಿತು. ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಗಿ ಉಪಾಧ್ಯಕ್ಷರಾಗಿ ಬಿ.ಡಿ.ರಾಜು ರೈ, ಜೆ.ಎನ್.ಚಂದ್ರಶೇಖರ್, ಕಾರ್ಯದರ್ಶಿಯಾಗಿ ಎ.ಶ್ರೀಧರನ್, ಖಜಾಂಚಿಯಾಗಿ ದಿನು ದೇವಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ಧನು ಕಾವೇರಪ್ಪ, ಎಂ.ಎಸ್.ಸುನಿಲ್, ಪ್ರೀತಂ ಪ್ರಭಾಕರ್, ಸಮಿತಿ ಸದಸ್ಯರುಗಳಾಗಿ ಎಸ್.ರವಿ, ಬಸವರಾಜು, ಎಂ.ಆರ್.ಶಶಿಕುಮಾರ್, ಮಣಿಮುಖೇಶ್, ಬಿ.ಕೆ.ಪ್ರಶಾಂತ್, ಸಿ.ಸುನಿಲ್, ಬಿ.ವಿ.ಸುನಿಲ್ ಕುಮಾರ್, ಸುರೇಶ್ ಚಂದು, ಪ್ರಸಾದ್ ಕುಟ್ಟಪ್ಪ, ಪಿ.ಸಿ.ಮೋಹನ್, ಬಿ.ಎಂ.ಸುರೇಶ್, ಚಂದ್ರ, ಎಸ್.ವಿಘ್ನೇಶ್, ಎಂ.ಹೆಚ್.ನಿಖಿಲ್, ಪಿ.ಆರ್.ಸುಕುಮಾರ್, ಪಿ.ಆರ್.ಸುನಿಲ್ ಕುಮಾರ್, ಎಂ.ಮಂಜುನಾಥ್, ಅರುಣ, ಪಿ.ಸಿ.ಮೋಹನ, ಸಂದೀಪ್ ಬಾಳೆಕಾಡು, ಪ್ರಶಾಂತ್ (ಪ್ರಶು ಬಾಳೆಕಾಡು), ಅಯ್ಯಪ್ಪ, ಪಿ.ಕೆ.ಅನಿಲ್ ಕುಮಾರ್, ಮಾಗಲು ವಸಂತ, ರಮೇಶ್ ಚೌದರಿ, ಮೂರ್ತಿ, ಬಿ.ಕೆ.ಮೋಹನ್,ಆನಂದ,ಎ.ಎಂ. ರಘು, ಪಿ.ಲೋಕೇಶ್,ಪೃಥ್ವಿ ರಾಜ್, ಗೌರವ ಸಲಹೆಗಾರರಾಗಿ ಎ.ಲೋಕೇಶ್ ಕುಮಾರ್, ಶಾಂತರಾಮ್ ಕಾಮತ್, ಎಸ್.ಜಿ.ಶ್ರೀನಿವಾಸ್,…

Read More

ಮಡಿಕೇರಿ ಜ.27 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನಿರ್ ಅಹ್ಮದ್ ಧ್ವಜಾರೋಹಣ ಮಾಡಿದರು. ನಂತರ ಗಣ್ಯರು ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದಿನದ ಮಹತ್ವದ ಕುರಿತು. ಈ ಸಂದರ್ಭ ಸೇವಾದಳದ ಜಿಲ್ಲಾಧ್ಯಕ್ಷ ಹಾಗೂ ಮೂಡ ಸದಸ್ಯ ಕಾನೇಹಿತ್ಲು ಮೊಣ್ಣಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮೂಡ ಸದಸ್ಯರಾದ ಆರ್.ಪಿ.ಚಂದ್ರಶೇಖರ್, ನಗರಸಭೆ ನಾಮ ನಿರ್ದೇಶಕ ಸದಸ್ಯ ಸದಾಮುದ್ದಪ್ಪ, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ಮಾಜಿ ನಗರಸಭಾ ಸದಸ್ಯರಾದ ಶ್ರೀಮತಿ ಬಂಗೇರ, ಮಾಜಿ ನಗರಸಭೆ ಉಪಾಧ್ಯಕ್ಷರಾದ ಲೀಲಾಶೇಷಮ್ಮ, ಪ್ರಮುಖರಾದ ಕವನ್ ಕೊತೋಳಿ, ನಜೀರ್ ಅಹ್ಮದ್, ಹಬೀಬ್ ಅಹಮದ್, ಸುಬ್ರಮಣಿ, ಸುನಂದ, ಉಷಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

Read More

ಸೋಮವಾರಪೇಟೆ NEWS DESK ಜ.27 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ  ವಾರ್ಡ್ ಸಂಖ್ಯೆ 9ರ ಮಹದೇಶ್ವರ ಬ್ಲಾಕ್ ಸದಸ್ಯರಾದ ನಾಗರತ್ನ (ರಾಣಿ) ಅವರ ಪತಿ ಪ್ರಕಾಶ್ ಅವರು ಇಂದು ಬೆಳಗ್ಗೆ  ನಿಧನರಾದರು.

Read More

ಕುಶಾಲನಗರ ಜ.27 NEWS DESK : ಶಾಲಾ- ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ವ್ಯಕ್ತಿತ್ವ ಹಾಗೂ ರಾಷ್ಟಪ್ರೇಮ ಬೆಳೆಸಿಕೊಳ್ಳಲು ದೇಶದ ಐಕ್ಯತೆ, ಸಮಗ್ರತೆಗೆ ಪಣ ತೊಡಬೇಕು ಎಂದು 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ಪಾಲ್ಗೊಂಡಿದ್ದ ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆಯ ಅಧ್ಯಕ್ಷ ಹಾಗೂ ಜೇಸಿ ತಂಬಂಡ  ತೇಜ ದಿನೇಶ್  ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಎನ್.ಎಸ್.ಎಸ್.ಘಟಕದ ವತಿಯಿಂದ ಭಾನುವಾರ ( ಜ.26 ರಂದು ) ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಸಂಭ್ರಮ, ಸಾಗರದಿಂದ ಏರ್ಪಡಿಸಿದ್ದ 76 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಶದ ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿ,…

Read More

ಮಡಿಕೇರಿ ಜ.27 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕು ಮೇಕೇರಿಯ ಯುವಕರು ಆಯೋಜಿಸಿದ ಎಂ.ಕೆ.ಎಲ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಫೈನಲ್ ಪಂದ್ಯಾವಳಿಗೆ ಬ್ಯಾಟ್ ಬೀಸುವ ಮೂಲಕ ಕ್ರೀಡಾಪಟುಗಳಿಗೆ ಹುರಿದುಂಬಿಸಿದರು. ನಂತರ ಮಾತನಾಡಿದ ಶಾಸಕರು, ಕ್ರೀಡೆ ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸಲು ಸಹಕಾರಿಯಾಗಿದೆ ಮತ್ತು ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಪಂದ್ಯಾವಳಿಗಳು ವೇದಿಕೆಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಕ್ರೀಡಾ ಆಯೋಜಕರು, ಕ್ರೀಡಾಪಟುಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, PDO, ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

Read More

ಪುತ್ತೂರು ಜ.27 NEWS DESK : ಪ್ರಜೆಗಳಿಗೆ ಸಮಾನ ಅಧಿಕಾರವನ್ನು ನೀಡುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿಯೇ ಅತಿ ಶ್ರೇಷ್ಟವಾದದ್ದು,  ಆದರೆ ನೆರೆ ರಾಷ್ಟ್ರಗಳಿಂದ ಮತ್ತು ದೇಶದ ರಾಜಕೀಯ ಮೇಲಾಟಗಳಿಂದ ಈ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಉಂಟಾಗಿದ್ದು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಾವು ಹೆಣಗಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಮಾಡಿ ಮಾತಾಡಿದರು. ಭದ್ರತೆಗೆ ಒತ್ತುಕೊಟ್ಟು ರಾಷ್ಟ್ರ ರಕ್ಷಣೆ ಮಾಡುವ ಸುಭದ್ರ ಸರ್ಕಾರವನ್ನು ಆರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಸಂಭ್ರಮದಿಂದ ಆಚರಿಸಬೇಕಾದ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಗಳು ರಜಾ ದಿನಗಳಾಗುತ್ತಿರುವುದು ದುರಂತ. ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು ಮಾತ್ರ ಇದನ್ನು ಆಚರಿಸುವಂತಾದುದು ವಿಪರ್ಯಾಸ ಎಂದರು. ಈ ಬಗ್ಗೆ…

Read More

ಸುಂಟಿಕೊಪ್ಪ ಜ.27 NEWS DESK : ಸಮಾಜದ ಕಟ್ಟಕಡೆಯ ವ್ಯಕ್ತಿಕೂಡ ರಾಜ್ಯ ಅಥವಾ ರಾಷ್ಟ್ರಮಟ್ಟದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ಭಾರತದ ಸಂವಿಧಾನ ನೀಡಿರುವುದು ನಮ್ಮ ಸಂವಿಧಾನದ ಹೆಗ್ಗಳಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾ.ಪಂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು, ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ನಮ್ಮ ದೇಶದ ಸಂವಿಧಾನ ಒಂದಾಗಿದ್ದು, ಇದನ್ನು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ್ದಾರೆಂದು ಸ್ಮರಿಸಿದರು. 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಬಂದಿದ್ದರೂ ಕೂಡ ನಮಗೆ ನಮ್ಮದೆಯಾದ ಮತ್ತು ಆಡಳಿತ ವ್ಯವಸ್ಥೆಗಳು ಇರಲಿಲ್ಲ. ಇದನ್ನು ಮನಗಂಡು ಮೊದಲ ರಾಷ್ಟ್ರಪತಿಗಳಾಗಿದ್ದ ಬಾಬು ರಾಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಂವಿಧಾನ ರಚನಾ ಸಮಿತಿಯನ್ನು ಮಾಡಿ ಕರಡು ಸಮಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು ಎಂದು ಸಾಯಿಕುಮಾರ್ ಸ್ಮರಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದ…

Read More

ಮಡಿಕೇರಿ NEWS DESK ಜ.26 : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ನಡೆಯಿತು. ಧ್ವಜಾರೋಹಣ ಮಾಡಿ ಮಾತನಾಡಿದ ಪ್ರಾಂಶುಪಾಲ ಫ್ರೋ ಮೇಜರ್ ರಾಘವ ಭಾರತ ಗಣರಾಜ್ಯವಾದ ಕುರಿತ ಇತಿಹಾಸವನ್ನು ನೆನಪಿಸಿಕೊಂಡರು ಹಾಗು ಕಾಲೇಜಿನ ಆರು ವಿದ್ಯಾರ್ಥಿಗಳು ಭಾರತೀಯ ಸೇನೆಗೆ ಆಯ್ಕೆಯಾದ ಕುರಿತು ಸಂತಸ ಹಂಚಿಕೊಂಡರು. ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ದೇಶಕ್ಕೆ ನೀಡಿದ ಸೇವೆಯನ್ನು ಸ್ಮರಿಸಿಕೊಂಡರು. ಮುಖ್ಯ ಅಥಿತಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ಡಾ ಬಿ ಆರ್ ಅಂಬೆಡ್ಕರ್ ನೇತೃತ್ವದಲ್ಲಿ ಭಾರತಕ್ಕೆ ಸಂವಿಧಾನ ರಚನೆಯಾಗಿ ಅದರ ಆಧಾರದಲ್ಲಿ ಭಾರತವು ಗಣರಾಜ್ಯವಾದುದು ಇತಿಹಾಸ, ಅಂದಿನಿಂದ ಇಂದಿನವರೆಗಿನ ಜನರು ನಿಶ್ಚಿಂತೆಯಿಂದ ಬದುಕಲು ಭಾರತದ ಸಂವಿಧಾನ ಅವಕಾಶ ಮಾಡಿಕೊಟ್ಟಿದ. ಇದಕ್ಕೆ ನಾವೆಲ್ಲರು ಗೌರವ ನೀಡಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಮವಸ್ತ್ರದಲ್ಲಿ ನೆರೆದಿದ್ದ ಎನ್ ಸಿ ಸಿ ಕೆಡೆಟ್ ಗಳನ್ನು ಗುರುತಿಸಿ, ತಮ್ಮ ಕಾಲೇಜಿನ…

Read More