ಲೇಖಕ: admin

ಮಡಿಕೇರಿ ಡಿ.18 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರರು, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ನೀರು ಘಂಟಿಗರು, ಜವಾನ, ಸ್ವಚ್ಛತಾ ಕೆಲಸಗಾರರನ್ನು ಏಕ ಕಾಲದಲ್ಲಿ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಟ ವೇತನವನ್ನು 31 ಸಾವಿರ ರೂ.ಗಳಿಗೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. ಕೊಡಗು ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಕೆಲಸ ಕಾರ್ಯಗಳಾಗದೆ ಜನ ಸಾಮಾನ್ಯರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಹುದ್ದೆ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ಗ್ರಾ.ಪಂ.ಗಳಲ್ಲಿ ಕೆಲಸ ಮಾಡಿ ನಿವೃತ್ತರಾದ ನೌಕರರ ಕುಟುಂಬಕ್ಕೆ ಪ್ರತಿ ತಿಂಗಳು 6 ಸಾವಿರ ರೂ. ಪಿಂಚಣಿ ನೀಡುವುದು, ನೀರು ಘಂಟಿಗಳನ್ನು ಮಲ್ಟಿ ಪರ್ಪಸ್ ಎಂದಿರುವುದನ್ನು ಕೈ ಬಿಟ್ಟು ನಿರ್ಧಿಷ್ಟಾವಧಿ ಕೆಲಸ ಎಂದು…

Read More

ಮಡಿಕೇರಿ ಡಿ.18 NEWS DESK : ಸಂಪೂರ್ಣವಾಗಿ ಹದಗೆಟ್ಟಿರುವ ಮತ್ತು ಸಂಚಾರಕ್ಕೆ ಯೋಗ್ಯವಲ್ಲದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು-ಕಾಲೂರು ಗ್ರಾಮಗಳ ನಡುವಿನ ಮುಖ್ಯ ರಸ್ತೆಯನ್ನು ತಕ್ಷಣ ಡಾಂಬರೀಕರಣಗೊಳಿಸುವಂತೆ ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಗಾಳಿಬೀಡು ರಸ್ತೆಯ 3ನೇ ಮೈಲ್ ಬಳಿ ಪ್ರತಿಭಟನೆ ನಡೆಸಿದರು. ಗಾಳಿಬೀಡು, ಕೋಳಿಗೂಡು, ವಣಚಲು, ಕಾಲೂರು, ಕೂಟುಹೊಳೆ, ಕೆ.ನಿಡುಗಣೆ ಮತ್ತು ಹೆಬ್ಬೆಟ್ಟಗೇರಿ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟನೆ ನಡೆಸಿ ಸರಕಾರ, ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಹಲವು ವರ್ಷಗಳಿಂದ ಗುಂಡಿ ಬಿದ್ದಿರುವ ರಸ್ತೆಯನ್ನು ದುರಸ್ತಿ ಪಡಿಸಿಲ್ಲ. ಸರಕಾರ, ಜಿಲ್ಲಾಡಳಿತ, ಶಾಸಕರು, ಸಂಬಂಧಿಸಿದ ಇಲಾಖೆಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಸೂಕ್ತ ಸ್ಪಂದನ ದೊರೆತ್ತಿಲ್ಲ, ಇದೀಗ ತೇಪೆ ಹಚ್ಚುವ ಕೆಲಸ ಮಾಡಲಾಗುತ್ತಿದ್ದು, ಇದಕ್ಕೆ ಗ್ರಾಮಸ್ಥರ ಒಪ್ಪಿಗೆ ಇಲ್ಲ. ಗ್ರಾಮೀಣ ರಸ್ತೆಯನ್ನು ಸಂಪೂರ್ಣ ಡಾಂಬರೀಕರಣಗೊಳಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ::: ಇಂಜಿನಿಯರ್ ತರಾಟೆಗೆ ::: ಪ್ರತಿಭಟನೆಯ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಲೋಕೋಪಯೋಗಿ ಇಲಾಖಾ ಸಹಾಯಕ ಕಾರ್ಯಪಾಲಕ ಅಭಿಯಂತರ…

Read More

ಸುಂಟಿಕೊಪ್ಪ,ಡಿ.18 NEWS DESK : ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಕಾವೇರಿ ನದಿ ಸ್ವಚ್ಚತೆಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಹಾಗೂ ವಿಜ್ಞಾನ ಸಮಾವೇಶದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಎ.ಶ್ರೀಶಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಕನ್ನಡ ನಾಡಿನ ಜೀವನದಿ ಮತ್ತು ತಮಿಳುನಾಡಿನ ಭಾಗ್ಯಲಕ್ಷ್ಮಿ ಎಂದು ಕರೆಸಿಕೊಂಡಿರುವ ಪವಿತ್ರ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವುದು ತೀರಾ ಗಂಭೀರ ವಿಚಾರವಾಗಿದೆ. ಕೃಷಿ ಮತ್ತು ಜೀವನಕ್ಕೆ ಆಧಾರವಾಗಿರುವ ನದಿಯನ್ನು ಕಲುಷಿತಗೊಳ್ಳದಂತೆ ನಾವೆಲ್ಲಾರೂ ಜಾಗೃತಿ ವಹಿಸುವುದು ಅತ್ಯವಶ್ಯವಾಗಿದೆ. ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಕಾವೇರಿ ನದಿ ಕಲುಷಿತವಾಗುತ್ತಿರುವ ಬಗ್ಗೆ ಗಮನಸೆಳೆದ ಶ್ರೀಶಾ ಅವರ ಪ್ರಯತ್ನ ಅಭಿನಂದನಾರ್ಹ ಎಂದು ವಿ.ಜಿ.ಲೋಕೇಶ್ ಹೇಳಿದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ಮಾತನಾಡಿ, ಎನ್.ಎ.ಶ್ರೀಶಾಳ…

Read More

ಮಡಿಕೇರಿ ಡಿ.18 NEWS DESK : ಕೊಡಗಿನ ಸಾಂಪ್ರದಾಯಿಕ ಸುಗ್ಗಿಹಬ್ಬ ಹುತ್ತರಿ ಹಬ್ಬವನ್ನು ಸುಂಟಿಕೊಪ್ಪ ಸಮೀಪದ ಪನ್ಯದ ಮಾಗುಲು ಐನ್ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮಾಗುಲು ವಸಂತ ಅವರ ಗದ್ದೆಯಲ್ಲಿ‌ ಮಾಗುಲು ರವೀಂದ್ರ ಕದಿರನ್ನು ತೆಗೆದು  ಅಯ್ಯಪ್ಪ ದೇವರ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ತಂದು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಧಾನ್ಯಲಕ್ಷ್ಮಿಯನ್ನು ಐನ್ ಮನೆಗೆ ತಂದು ವಿವಿಧ ಉಪಕರಣಗಳಿಗೆ ಕಟ್ಟಲಾಯಿತು. ಗದ್ದೆಯಿಂದ ತಂದ ಧಾನ್ಯಲಕ್ಷ್ಮಿಯ ಹೊಸ ಅಕ್ಕಿಯಿಂದ ಖಾದ್ಯ ತಯಾರಿಸಲಾಯಿತು.  ಹಿರಿಯರು, ಮಕ್ಕಳು  ಪಟಾಕಿ ಸಿಡಿಸಿ ಸಂಭ್ರಮಿಸಿದರು.

Read More

ಬೆಂಗಳೂರು ಡಿ.18 NEWS DESK : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ  ಹಸ್ತಾಂತರಿಸಿದರು. ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು. ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ’ ಎಂದರು. ಈ ಸಂದರ್ಭ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ…

Read More

ವಿರಾಜಪೇಟೆ ಡಿ.18 NEWS DESK : ಕೊಡಗು ಬಲಿಜ ಸಮಾಜದ ವತಿಯಿಂದ 2023/24ನೇ ಶೈಕ್ಷಣಿಕ ಸಾಲಿನ ಎಸ್‍ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಸಾಧನೆ ಮಾಡಿರುವ ಬಲಿಜ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ. ಕೊಡಗು ಜಿಲ್ಲೆಯ ಬಲಿಜ ವಿದ್ಯಾರ್ಥಿಗಳು IAS/IPS ಪರೀಕ್ಷೆಗೆ ತರಬೇತಿ ಹೊಂದುತ್ತಿದ್ದಲ್ಲಿ ರೂ.50 ಸಾವಿರ ಶಿಷ್ಯ ವೇತನ ನೀಡಲು ಉದ್ದೇಶಿಸಿದ್ದು ಈಗಾಗಲೇ ಓರ್ವ ವಿದ್ಯಾರ್ಥಿನಿ ಇದರ ಲಾಭ ಹೊಂದಿಕೊಂಡಿದ್ದಾರೆ. ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.70ಕ್ಕಿಂತಲೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳು ಜ.20ಕ್ಕೂ ಮುನ್ನ ಅಂಕಪಟ್ಟಿ ಪ್ರತಿ, ವಿದ್ಯಾರ್ಥಿಯ ಆಧಾರ್ ಪ್ರತಿ ಹಾಗೂ ಅರ್ಜಿಯೊಂದಿಗೆ (ಭಾವಚಿತ್ರ ಸಹಿತ) ಟಿ.ಎಲ್.ಶ್ರೀನಿವಾಸ್, ಅಧ್ಯಕ್ಷರು, ಕೊಡಗು ಬಲಿಜ ಸಮಾಜ, 5ನೇ ವಿಭಾಗ ಗೋಣಿಕೊಪ್ಪಲು – 571213 ಇಲ್ಲಿಗೆ ಅಂಚೆ ಮೂಲಕ ಕಳಿಸಬಹುದು. ಹೆಚ್ಚಿನ ವಿವರಗಳಿಗೆ 9945454133 ಅಥವಾ 8050023422 ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಕೊಡಗು ಬಲಿಜ ಸಮಾಜದ ನಿಗಧಿತ ಅರ್ಜಿ ನಮೂನೆಯನ್ನು ಹೊಂದಿಕೊಂಡು, ಜಾತಿ ಪ್ರಮಾಣ ಪತ್ರದೊಂದಿಗೆ ಜ.20ಕ್ಕೂ ಮುನ್ನ…

Read More

ವಿರಾಜಪೇಟೆ ಡಿ.18 NEWS DESK : ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ ವಿದ್ಯಾರ್ಥಿಗಳ ಪದವಿ ಪೂರ್ವ ಕಾಲೇಜು ಶಿಕ್ಷಣಕ್ಕೆ ಸಂಸ್ಥೆಯ ವತಿಯಿಂದ ಸಹಕಾರ ನೀಡುವುದಾಗಿ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ತಿಳಿಸಿದರು. ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮೇಳದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಹೆಚ್ಚುಹೆಚ್ಚಾಗಿ ಮೊಬೈಲ್ ಲೋಕದಲ್ಲಿ ಕಳೆದು ಹೋಗುವ ಮೂಲಕ ಕಲೆ ಸೇರಿದಂತೆ ದೈಹಿಕ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ ಎಂದು  ಬೇಸರ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಬೆನ್ನಿ ಜೋಸೆಫ್ ಮಾತನಾಡಿ, ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.95 ರಷ್ಟು ಅಂಕ ಪಡೆಯುವ ಯಾವುದೇ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ಘೋಷಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜಿನ…

Read More

ಸೋಮವಾರಪೇಟೆ ಡಿ.18 NEWS DESK :  ಕೂತಿ ಗ್ರಾಮದಲ್ಲಿ ಸ್ಥಳೀಯರೇ ಶ್ರಮದಾನ ಮಾಡುವ ಮೂಲಕ ರಸ್ತೆ ಸರಿ ಪಡಿಸಿದರು. ಮುಖ್ಯ ರಸ್ತೆಯಿಂದ 11 ಮನೆಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನಗಳು ಸಂಚಾರಿಸಲು ಯೋಗ್ಯವಲ್ಲದಂತಾಗಿತ್ತು. ಈ ಹಿನ್ನೆಲೆ ಸ್ಥಳೀಯರೇ ತಮ್ಮ ಸ್ವಂತ ಖರ್ಚಿನಿಂದ ಸುಮಾರು 1ಕಿ.ಮೀ ರಸ್ತೆಗೆ ವೆಟ್ ಮಿಕ್ಸ್ ಹಾಕುವ ಮೂಲಕ ರಸ್ತೆ ಸರಿಪಡಿಸಿದರು. ಹಲವು ವರ್ಷಗಳಿಂದ ಪಂಚಾಯಿತಿ ಅಧಿಕಾರಿಗಳಿಗೆ, ಸಂಬಂಧ ಪಟ್ಟ ಕೂತಿ ವಾರ್ಡ್ ಸದಸ್ಯರಿಗೆ ರಸ್ತೆ ಸರಿಪಡಿಸುವಂತೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ, ಆದ್ದರಿಂದ ಗ್ರಾಮಸ್ಥರೇ ಶ್ರಮದಾನದ ಮೂಲಕ ರಸ್ತೆ ಸರಿಪಡಿಸಿಕೊಳ್ಳುತ್ತಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದರು. ಈ ಸಂದರ್ಭ ಸ್ಥಳೀಯರಾದ ಜಿತೇಂದ್ರ, ಬೋಪಯ್ಯ, ಅಶ್ವಥ್, ಅಶೋಕ್ ಸೇರಿದಂತೆ ಇತರರಿದ್ದರು.

Read More

ಕುಶಾಲನಗರ ಡಿ.18 NEWS DESK : ಸೈನಿಕ ಶಾಲೆ ಕೊಡಗಿನಲ್ಲಿ ಡಿ.13 ಮತ್ತು 14ರಂದು 2024-25ನೇ ಸಾಲಿನ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್  ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾ ಸ್ಪೂರ್ತಿ, ಸಹಿಷ್ಣುತೆಯೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಂಡು, ಗೆಲುವು ಮತ್ತು ಸೋಲಿನ ಆಚೆಗೆ ಕ್ರೀಡೆಗಳು ನೀಡುವ ಅಮೂಲ್ಯವಾದ ಪಾಠಗಳ ಮಹತ್ವವನ್ನು ಎಲ್ಲಾ ವಿದ್ಯಾರ್ಥಿಗಳು ಕಲಿಯಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಮನಃಪೂರ್ವಕವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮತ್ತು ಸೌಹಾರ್ದ ಕ್ರೀಡೆಯ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು. ಕ್ರೀಡಾ ಜ್ಯೋತಿ ರಿಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಕೆಡೆಟ್ ಸಾಹಿಲ್ ರಾಜ್, ಕೆಡೆಟ್ ಶಿವರಾಜ್, ಕೆಡೆಟ್ ವಿಠ್ಠಲ್ , ಕೆಡೆಟ್ ಅಫ್ತಾಬ್, ಕೆಡೆಟ್ ಸಾನಿಕಾ ಉದಯ್ ಮತ್ತು ಕೆಡೆಟ್ ಪ್ರಜ್ವಲ್ ಪಾಲ್ಗೊಂಡಿದ್ದರು. ಶಾಲೆಯ ಕ್ರೀಡಾ ನಾಯಕ ಕೆಡೆಟ್ ಸಾಹಿಲ್ ರಾಜ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಈ ಸಂದರ್ಭ ಕೆಡೆಟ್ ಸಾಹಿಲ್ ರಾಜ್ ಸ್ಪರ್ಧಾಳುಗಳಿಗೆ ಪ್ರಮಾಣ ವಚನ…

Read More

ವಿರಾಜಪೇಟೆ ಡಿ.18 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಪುತ್ತರಿ ಹಬ್ಬದವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಭಾಂಗಣದಲ್ಲಿ ಪ್ರಾರ್ಥನಾ ಗೀತೆ, ನುಡಿಮುತ್ತು ಹಾಗೂ ಸುದ್ದಿ ಸಮಾಚಾರ ಒಳಗೊಂಡ ಸಂಪೂರ್ಣ ಕಾರ್ಯಕ್ರಮವನ್ನು ಕೊಡವ ಭಾಷೆಯಲ್ಲಿ ಹಮ್ಮಿಕೊಳ್ಳಲಾಯಿತು. ಕೊಡವ ಭಾಷೆಯ ಪ್ರಾರ್ಥನಾ ಗೀತೆಯನ್ನು 10ನೇ ತರಗತಿ ವಿದ್ಯಾರ್ಥಿಗಳಾದ ಆಶ್ರಯ ಅಕ್ಕಮ್ಮ, ಮಾನ್ವಿ ಮುತ್ತಮ್ಮ, ಜಿ.ಎ.ದೇಚಮ್ಮ ಹಾಗೂ 9ನೇ ತರಗತಿಯ ವಿದ್ಯಾರ್ಥಿಯಾದ ಎಂ.ಜೆ.ಪೂರ್ವಿಕ ಹಾಡಿದರು. 8ನೇ ತರಗತಿಯ ಭೂಮಿಕ ಭೋಜಮ್ಮ ಕೊಡವ ನುಡಿಮುತ್ತು ಹಾಗೂ 9ನೇ ತರಗತಿಯ ವಿದ್ಯಾರ್ಥಿಯಾದ ಪಿ.ಸಿ.ಕಾಜಲ್ ಸುದ್ದಿ ಸಮಾಚಾರ ಓದಿದರು. ಸಹ ಶಿಕ್ಷಕಿ ವೀಣಾ ಪುತ್ತರಿ ಹಬ್ಬದ ವಿಶೇಷತೆಯನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು. ನಂತರ ಕೊಡಗಿನ ಜನಪದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಉಡುಗೆಯಲ್ಲಿ ತಾಳಕ್ಕೆ ತಕ್ಕಂತೆ ಉಮ್ಮತಾಟ್ ನೃತ್ಯವನ್ನು 8ನೇ ತರಗತಿಯ ವಿದ್ಯಾರ್ಥಿಗಳಾದ ಎನ್.ಎನ್.ನ್ನಮ್ಮ, ಜಿ.ಟಿ.ಮುತ್ತಮ್ಮ, ಎ.ಎಂ.ರಿಷಿಕಾ, 7ನೇ ತರಗತಿಯ ವಿದ್ಯಾರ್ಥಿಗಳಾದ ಸ್ಪೂರ್ತಿ, ಪಿ.ಬಿ.ದೇಚಮ್ಮ, ಕೆ.ಎಂ.ದೇಚಮ್ಮ, ನಿ.ಶಿಯಾನ, ಕೆ.ಬಿ.ಪ್ರಿಶ, ಎ.ಪಿ.ರಿಷ, ಸಿ.ಎ.ದಿತಿ, ಟಿ.ಎಂ.ಡಿಯಾನ, ಪಿ.ಎಸ್.ಪ್ರಾಧಿನ್ಯ ಪ್ರದರ್ಶಿಸಿದರು. 10ನೇ ತರಗತಿಯ…

Read More