ಲೇಖಕ: admin

ಮಡಿಕೇರಿ ಜ.1 NEWS DESK : ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಎನ್.ಎ.ರವಿ ಬಸಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನಗರದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಹಕಾರ ಭವನದ ಸಭಾಂಗಣದಲ್ಲಿ ನಡೆದಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ, ಗ್ರಾಹಕರ ಮತ್ತು ವಿವಿಧೊದ್ಧೇಶ ಸಹಕಾರ ಸಂಘ, ಜೇನು ಮಾರಾಟ ಸಹಕಾರ ಸಂಘ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯನಿರ್ವಾಹಕರಿಗೆ ವಿವಿಧ ರೀತಿಯ ತೆರಿಗೆಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಸೈಬರ್ ಭದ್ರತೆ ಮತ್ತು ವ್ಯಾವಹಾರಿಕ ಸಂವಹನೆ ಕುರಿತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರು ಕಾಯ್ದೆ, ಕಾನೂನು, ತೆರಿಗೆ, ಲೆಕ್ಕಪರಿಶೋಧನೆ ಇತ್ಯಾದಿ ಮಾಹಿತಿ ಇಲ್ಲದೆ ಆಡಳಿತ ನಡೆಸುವುದರಿಂದ ಸಂಘವು ನಷ್ಟವನ್ನು ಅನುಭವಿಸುತ್ತದೆ.…

Read More

*ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಸರ್ವರಿಗೂ ಸಮೃದ್ಧಿ ಸಿಗಲಿ*

Read More