*ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು*
ಲೇಖಕ: admin
*ಸರ್ವರಿಗೂ ಹೊಸ ವರ್ಷ ಶುಭ ತರಲಿ, ಒಗ್ಗಟ್ಟಿನಿಂದ ನಾಡು ಕಟ್ಟೋಣ*
*ಹೊಸ ವರ್ಷ ಹೊಸ ಹರ್ಷ ತರಲಿ, ಸರ್ವರಿಗೂ ಶಾಂತಿ, ಸಮೃದ್ಧಿ ಸಿಗಲಿ*
ಮಡಿಕೇರಿ NEWS DESK ಜ.1 : ಅಪಘಾತದಲ್ಲಿ ಸಾವನ್ನಪ್ಪಿರುವ ಕೊಡಗಿನ ಯೋಧ ದಿವಿನ್ ಅವರ ಪಾರ್ಥೀವ ಶರೀರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಗೌರವ ಅರ್ಪಿಸಿದರು.
ಮಡಿಕೇರಿ ಜ.1 NEWS DESK : ಭುವನೇಶ್ವರದ ಕಾಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ ಹಾಗೂ ಕಾಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಕಿಟ್ ಮತ್ತು ಕಿಸ್) ಸ್ಟೇಡಿಯಂನಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜಿಲ್ಲೆಯ ಯುವತಿ ಬೊಳ್ಳಂಡ ಉನ್ನತಿ ಅಯ್ಯಪ್ಪ ಬೆಳ್ಳಿ ಪದಕದ ಸಾಧನೆ ಮಾಡಿದ್ದಾರೆ. 200 ಮೀಟರ್ಸ್ ಓಟದಲ್ಲಿ ಉನ್ನತಿ 23.98 ಸೆಕೆಂಡ್ನಲ್ಲಿ ಗುರಿ ತಲುಪಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಗಳಿಸಿದ್ದಾರೆ. ಬೆಂಗಳೂರಿನ ರೇವಾ ವಿವಿಯನ್ನು ಪ್ರತಿನಿಧಿಸಿದ್ದ ಉನ್ನತಿ ಮಡಿಕೇರಿಯವರಾದ ರಾಷ್ಟ್ರೀಯ ಅಥ್ಲೆಟಿಕ್ ಕೋಚ್ ಬೊಳ್ಳಂಡ ಅಯ್ಯಪ್ಪ ಹಾಗೂ ಮಾಜಿ ಒಲಂಪಿಯನ್ ಪ್ರಮೀಳಾ ದಂಪತಿಯ ಪುತ್ರಿ.
ಮಡಿಕೇರಿ ಜ.1 NEWS DESK : ಪೊನ್ನಂಪೇಟೆ ಪಟ್ಟಣ ವ್ಯಾಪ್ತಿಯ ವಾಣಿಜ್ಯ ಮಳಿಗೆದಾರರಿಗೆ/ ಉದ್ದಿಮೆದಾರರಿಗೆ, ಅಂಗಡಿ, ಹೋಟೆಲ್, ಲಾಡ್ಜ್ ಮಾಲೀಕರು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕಿದೆ. ಅದರಂತೆ, ಎಲ್ಲಾ ಅಂಗಡಿ/ ಮುಂಗಟ್ಟು/ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಪದ ಬಳಕೆಮಾಡುವಂತೆ ಆದೇಶವಿದೆ. ಆದ್ದರಿಂದ ಪೊನ್ನಂಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ಎಲ್ಲಾ ಅಂಗಡಿ /ಮುಂಗಟ್ಟು/ ವಾಣಿಜ್ಯ ಮಳಿಗೆಗಳಲ್ಲಿನ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ಕನ್ನಡ ಪದಗಳ ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಾಮಫಲಕದಲ್ಲಿ ಶೇ.60 ಕನ್ನಡ ಪದ ಬಳಕೆಯಾಗದೇ ಇದ್ದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಈ ನಾಮಫಲಕವನ್ನು ತೆರವುಗೊಳಿಸಿ, ಅದಕ್ಕೆ ತಗಲುವ ವೆಚ್ಚವನ್ನು ತಮ್ಮಿಂದ ವಸೂಲಿ ಮಾಡಲಾಗುವುದು ಹಾಗೂ ತಮಗೆ ನೀಡಿರುವ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನಿನಂತೆ ಕ್ರಮಕೈಗೊಳ್ಳಲಾಗವುದು. ಕಾರ್ಯಾಚರಣೆಯಿಂದ ಕಟ್ಟಡಗಳಿಗೆ ಯಾವುದೇ ಹಾನಿ ಉಂಟಾದಲ್ಲಿ ಪಟ್ಟಣ ಪಂಚಾಯಿತಿ ಜವಾಬ್ದಾರಿಯಲ್ಲ ಎಂದು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಗೋಪಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಡಿ.31 : ಹುತಾತ್ಮ ದಿವಿನ್ ಅವರ ಪಾರ್ಥಿವ ಶರೀರ ಇಂದು ರಾತ್ರಿ 11.30 ಗಂಟೆ ಸುಮಾರಿಗೆ ಕುಶಾಲನಗರ ತಾಲ್ಲೂಕಿನ ಸರಕಾರಿ ಆಸ್ಪತ್ರೆಗೆ ತಲುಪುತ್ತದೆ. ಈ ರಾತ್ರಿ ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ನಾಳೆ ಬೆಳಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಕುಶಾಲನಗರದ ಜಿ ಎಂ ಪಿ ಶಾಲಾ ಮೈದಾನದಲ್ಲಿ ಹುತಾತ್ಮ ದಿವಿನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಆ ಬಳಿಕ ಸ್ವಗ್ರಾಮ ಆಲೂರು ಸಿದ್ದಾಪುರಕ್ಕೆ ಕೊಂಡೊಯ್ದು ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ತರುವಾಯ ವಿಧಿ ವಿಧಾನಗಳ ಬಳಿಕ ಮಧ್ಯಾಹ್ನ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ. ಹುತಾತ್ಮ ದಿವಿನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತ ಕೂಡ ಎಲ್ಲಾ ವ್ಯವಸ್ಥೆಗೆ ಕೈಜೋಡಿಸಿದ್ದು, ಸಾರ್ವಜನಿಕರು ವೀರಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಾಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು…
ಮಡಿಕೇರಿ NEWS DESK ಡಿ.31 : ಹೊಸ ವರ್ಷಾಚರಣೆಯ ಹಿನ್ನೆಲೆ ಹಸಿರ ಪರಿಸರದ ಕೊಡಗಿನಲ್ಲಿ ಪ್ರವಾಸಿಗರ ದಂಡು ಕಂಡು ಬಂತು. ಮಂಜಿನ ನಗರಿ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ವರ್ಷದ ಕೊನೆಯ ದಿನದ ಸೂರ್ಯಾಸ್ತದ ಮನಮೋಹಕ ದೃಶ್ಯವನ್ನು ಸಾವಿರಾರು ಪ್ರವಾಸಿಗರು ಕಣ್ತುಂಬಿಕೊ0ಡರು. ಸೂರ್ಯಾಸ್ತವನ್ನು ವೀಕ್ಷಿಸಿ ಸಂಭ್ರಮಿಸಿದ ಪ್ರಕೃತಿ ಪ್ರಿಯರು ತಮ್ಮ ಮೊಬೈಲ್ಗಳಲ್ಲಿ ಸುಂದರ ದೃಶ್ಯವನ್ನು ಸೆರೆ ಹಿಡಿದರು. ನಗರದಂಚಿನ ಅಬ್ಬಿಫಾಲ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಪ್ರವಾಸಿತಾಣಗಳಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು. ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ಗಳು ಭರ್ತಿಯಾಗಿವೆ. ವಾಹನದಟ್ಟಣೆಯಿಂದ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಯಿತು.
ಮಡಿಕೇರಿ NEWS DESK ಡಿ.31 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡಿನ ಶ್ರೀಮಹಾ ಮೃತ್ಯುಂಜಯ ದೇವಾಲಯದಲ್ಲಿ ಶ್ರೀಮಂತ, ಬಡವ, ಜಾತಿ, ಜನಾಂಗ ಎನ್ನುವ ಬೇಧಭಾವವಿಲ್ಲದೆ ಹಿಂದೂ ಸಮಾಜದ ಎಲ್ಲಾ ಜನಾಂಗದವರು ಒಂದೇ ಎಂದು ಪರಿಗಣಿಸಲು ಯಾವುದೇ ಸಮುದಾಯದ ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯಕ್ಕೆ ಬರಲು ದೇವಾಲಯ ಸಮಿತಿಯ ಬೈಲಾದಲ್ಲಿ ಅವಕಾಶ ನೀಡಿಲ್ಲ. ಸರ್ವರೂ ಒಪ್ಪಿಕೊಂಡಿರುವ ಬೈಲಾ ಇದಾಗಿರುವುದರಿಂದ ಅಧಿಕಾರಿಗಳು ಇದಕ್ಕೆ ಸಮ್ಮತಿ ಸೂಚಿಸಬೇಕೆಂದು ಎಸ್ ಕಟ್ಟೆಮಾಡು ಪರಂಬು ಪೈಸಾರಿಯ ಗಣಪತಿ ಸೇವಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮಾಜಿ ಅಧ್ಯಕ್ಷ ಬಿ.ಕೆ.ಉಮೇಶ್ ಹಾಗೂ ಪ್ರಮುಖರು ಗ್ರಾಮದ ಎಲ್ಲಾ ಜನಾಂಗದವರು ಒಗ್ಗೂಡಿ, ಅವಿರತ ಶ್ರಮವಹಿಸಿ, ಕೋಟ್ಯಾಂತರ ರೂ. ಖರ್ಚು ಮಾಡಿ ಶ್ರೀಮಹಾ ಮೃತ್ಯುಂಜಯ ದೇವಾಲಯವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಒಗ್ಗಟ್ಟು ಹೀಗೆ ಉಳಿಯಬೇಕು, ದೇವರ ಎದುರು ಎಲ್ಲರೂ ಸಮಾನರು ಎನ್ನುವ ಕಾರಣಕ್ಕಾಗಿ ಬೈಲಾದಲ್ಲಿ ಸಾಂಪ್ರದಾಯಿಕ ಉಡುಪಿಗೆ ಅವಕಾಶ ನೀಡಿಲ್ಲ. ಗೌಡರಿಗೂ ಸಾಂಪ್ರದಾಯಿಕ ಉಡುಪು ಇದೆ, ಆದರೆ ಬೈಲಾದ ಪ್ರಕಾರ ಅವರು ನಡೆದುಕೊಳ್ಳುತ್ತಿದ್ದು, ಸಾಂಪ್ರದಾಯಿಕ…
ಮಡಿಕೇರಿ NEWS DESK ಡಿ.31 : ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಸಂಭವಿಸಿದ ಸೇನಾ ವಾಹನ ಅವಘಡದಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ವೀರ ಯೋಧ ಕೊಡಗಿನ ಪಳಂಗೋಟು ಪಿ.ದಿವಿನ್(28) ಅವರ ಅಂತ್ಯಕ್ರಿಯೆ ಜ.1 ರಂದು ಬುಧವಾರ ಅವರ ಸ್ವಗ್ರಾಮದಲ್ಲಿ ನಡೆಯಲಿದೆ. ಕೆಲವು ದಿನಗಳ ಹಿಂದೆ ಪೂಂಚ್ನಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಗಾಯಗೊಂಡಿದ್ದ ದಿವಿನ್ ಅವರಿಗೆ ಶ್ರೀನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಇಂದು ಶ್ರೀನಗರದಿಂದ ವಿಮಾನದ ಮೂಲಕ ದಿವಿನ್ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದೆ. ಈ ಸಂದರ್ಭ ಸಂಸದ ಯದುವೀರ್ ಅವರು ವೀರ ಯೋಧನಿಗೆ ಗೌರವ ನಮನ ಸಲ್ಲಿಸಿದರು. ಕೊಡಗಿನ ಕುಶಾಲನಗರದ ಮೂಲಕ ಉತ್ತರ ಕೊಡಗಿನ ಶನಿವಾರಸಂತೆ ಬಳಿಯ ಆಲೂರು ಸಿದ್ದಾಪುರಕ್ಕೆ ರಾತ್ರಿ ಪಾರ್ಥಿವ ಶರೀರ ತಲುಪಲಿದ್ದು, ಬುಧವಾರ ಆಲೂರು ಸಿದ್ದಾಪುರದ ಸರಕಾರಿ ಶಾಲೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.






