ಲೇಖಕ: admin

ನಾಪೋಕ್ಲು ಡಿ.18 NEWS DESK : ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ಜರುಗಿತು. ಕೇರಳದ ಪ್ರಖ್ಯಾತ ಮಡೆಯನ್ ಅವರಿಂದ ದೇವರನ್ನು ಮಲೆ ಇಳಿಸಲಾಯಿತು. ನಂತರ ಶ್ರೀ ಪೊನ್ನು ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಬಳಿಕ ಗುಳಿಗ, ಕುಟ್ಟಿಚಾತ ದೇವರ ವೆಳ್ಳಾಟಂ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭ ವಿವಿಧ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಪೊನ್ನುಮುತ್ತಪ್ಪ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಎ.ಕೆ.ಚಂದ್ರನ್, ಕಾರ್ಯದರ್ಶಿ ರಾಜೀವ, ಸಮಿತಿ ಸದಸ್ಯ ಶ್ರೀಧರ್, ವಿಜಯ್, ದೇವಾಲಯದ ಪೂಜಾರಿ ಹರಿದಾಸ್, ಸಮಿತಿ ಸದಸ್ಯರು ಹಾಗೂ ಗ್ರಾಮದ ಪ್ರಮುಖರು, ಸುತ್ತಮುತ್ತಲಿನ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಡಿ.18 NEWS DESK : ಇಗ್ಗುತ್ತಪ್ಪ ದೇವಡ ಪುತ್ತರಿ ನಮ್ಮೆ ನಾಪೋಕ್ಲುವಿನ ಬಿದ್ದಾಟಂಡ ವಾಡೆಯ ನೂರಂಬಾಡ ನಾಡ್‍ಮಂದ್ ನಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ನಾಪೋಕ್ಲು, ಬೇತು ಮತ್ತು ಕೋಕೇರಿ ಗ್ರಾಮಗಳನ್ನು ಒಳಗೊಂಡಂತೆ ನಡೆಯುವ ಐತಿಹಾಸಿಕ ನೂರಂಬಾಡ ಕೋಲ್ ಮಂದ್‍ನಲ್ಲಿ ಪುತ್ತರಿ ಕೋಲಾಟಕ್ಕೂ ಮುನ್ನ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಸಂಪ್ರದಾಯದಂತೆ ತಕ್ಕ ಮುಖ್ಯಸ್ಥರು ದೇವರ ತಿರುವಾಭರಣದೊಂದಿಗೆ ಕಾಪಾಳ ಕಳಿ ವೇಷಧಾರಿಗಳು ಮತ್ತು ಕೊಂಬು ಕೊಟ್ಟ್ ವಾಲಗದೊಂದಿಗೆ ಮೆರವಣಿಗೆಯ ಮೂಲಕ ನೂರಂಬಾಡ ಮಂದ್‍ನತ್ತ ಹೆಜ್ಜೆ ಹಾಕಿದರು. ಗ್ರಾಮದ ತಕ್ಕಮುಖ್ಯಸ್ಥರನ್ನು ಬಿದ್ದಾಟಂಡ ಕುಟುಂಬದ ತಕ್ಕಮುಖ್ಯಸ್ಥರು ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ವಾಗತಿಸಿದರು. ನಂತರ ಮಂದಿನಲ್ಲಿರುವ ಮರದ ಕೆಳಗೆ ದೇವರ ತಿರುವಾಭರಣ ಇಟ್ಟು ಪ್ರಾರ್ಥನೆ ಸಲ್ಲಿಸಿಲಾಯಿತು. ಬಳಿಕ ನಾಪೋಕ್ಲು ಗ್ರಾಮದವರು, ಕೊಳಕೇರಿಯ ಗ್ರಾಮಸ್ಥರನ್ನು ಬಿದ್ದಾಟಂಡ ವಾಡೆ ನಾಡ್ ಮಂದಿಗೆ ಬರಮಾಡಿ ಕೊಳ್ಳಲಾಯಿತು. ಈ ಸಂದರ್ಭ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ನೀಡಿ ಬಿದ್ದಾಟಂಡ ವಾಡೆ ನಾಡ್ ಮಂದಿನಲ್ಲಿ ಮೂರು ಗ್ರಾಮದ…

Read More

ನಾಪೋಕ್ಲು ಡಿ.18 NEWS DESK : ಧಾನ್ಯಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ಪುತ್ತರಿ ಹಬ್ಬವನ್ನು ನಾಲ್ಕುನಾಡು ವ್ಯಾಪ್ತಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಾಂಪ್ರದಾಯಿಕ ಆಚರಣೆಗಳೊಂದಿಗೆ ವಿವಿಧ ದೇವಾಲಯ, ಐನ್ ಮನೆ, ಕೊಡವ ಸಮಾಜಗಳಲ್ಲಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ನಾಡಿನಲ್ಲೆಡೆ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಅಮ್ಮಂಗೇರಿಯ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿಬೊಳಕ್ ಹಿಡಿದು ದೇವಾಲಯಕ್ಕೆ ಪ್ರದಕ್ಷಣೆ ಮಾಡಿ ಆಗಮಿಸಿದರು. ನಂತರ ದುಡಿಕೊಟ್ ಪಾಟ್‍ನ್ನು ಕುಡಿಯರ ಮುತ್ತಪ್ಪ, ಜೀವನ್ ದೇವಯ್ಯ ಮತ್ತು ಬಳಗ ನೆರವೇರಿಸಿದರು. ದೇವರ ಸನ್ನಿಧಿಯಲ್ಲಿ ಪೊಗೇರ ಉಲ್ಲಾಸ್ ನಾಡಿನ ಮಳೆ, ಬೆಲೆ, ಸುಭಿಕ್ಷಗಾಗಿ ಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅಮ್ಮಂಗೇರಿಯ ಜ್ಯೋತಿಷ್ಯರು ಈ ಹಿಂದೆ ನಿರ್ಧರಿಸಿದಂತೆ ಅಂಬಲವಾಸಿ ಸುಬ್ರಮಣಿ ಅವರು ಬೆಳ್ಳಿಯ ಬಿಂದಿಗೆಯೊಂದಿಗೆ ಗದ್ದೆ ಕಡೆ ಸಾಗಿ ಪೊಗೇರ ಅಪ್ಪಣ್ಣ ಅವರ ಗದ್ದೆಯಲ್ಲಿ ಕದಿರಿಗೆ ಪೂಜೆ ನೆರವೇರಿಸಿ ಕದಿರನ್ನು…

Read More

ನಾಪೋಕ್ಲು ಡಿ.18 NEWS DESK : ಮೈಸೂರು ಗೌಡ ಸಮಾಜದಲ್ಲಿ ಕೊಡಗಿನ ಸಾಂಪ್ರದಾಯಿಕ ಸುಗ್ಗಿಹಬ್ಬ ಹುತ್ತರಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಹಾಗೂ ಚೆರಿಯಮನೆ ಉಮೇಶ್ ಅವರ ನೇತೃತ್ವದಲ್ಲಿ ಕದಿರು ತೆಗೆಯಲಾಯಿತು. ಸಮುದಾಯ ಬಂಧುಗಳಿಗೆ ಸಮಾಜದ ಸಭಾಂಗಣದಲ್ಲಿ ನೆರೆ ಮತ್ತು ಕದಿರು ವಿತರಿಸಲಾಯಿತು. ಇದಕ್ಕೂ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರಿಗೂ ತಂಬಿಟ್ಟು ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ, ಸುಗ್ಗಿಕುಣಿತ, ಹುತ್ತರಿಹಾಡು ಮೊದಲಾದವು ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸಮಾಜದ ಪದಾಧಿಕಾರಿಗಳಾದ ಕುದುಪಜೆ ಚಂದ್ರಶೇಖರ್, ಪೊನ್ನೆಟ್ಟಿ ನಂದ, ನಡುಮನೆ ಚಂಗಪ್ಪ, ನಡುಬೆಟ್ಟಿ ಲಕ್ಷ್ಮಣ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಕೊಂಬಾರನ ಸುಬ್ಬಯ್ಯ, ಹೊಸೂರು ರಾಘವಯ್ಯ, ಕುಂಟುಪುನಿ ರಮೇಶ್, ಪಾಣತ್ತಲೆ ವಸಂತ, ತೋಟಂಬೈಲು ಇಂದಿರಾ, ಕುಂಟುಪುನಿ ಶೀಲಾ, ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲ್ ಮನೋಹರ್, ಕುದುಪಜೆ ಕುಶಾಲಪ್ಪ, ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ, ಹೂಟ್ಕಳ್ಳಿ ಗೌಡ ಸಂಘದ ಅಧ್ಯಕ್ಷ ಪೊನ್ನಚ್ಚನ ಅಪ್ಪಯ್ಯ, ಕೊಡಗು ಗೌಡ…

Read More

ಚೆಟ್ಟಳ್ಳಿ ಡಿ.18 NEWS DESK : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಸಂಭ್ರಮದ ಪುತ್ತರಿ ನಮ್ಮೆರ ಊರೊರ್ಮೆ ಕೂಟ ನಡೆಯಿತು. ತಳಿಯತಕ್ಕಿದೀಪ ಹಿಡಿದ ಮಹಿಳೆಯರು, ದುಡಿಕೊಟ್ಟ್ ಹಾಡಿನೊಂದಿಗೆ ಸಮಾಜದ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ ಕುತ್ತಿಹಿಡಿದು ಸಾಂಪ್ರದಾಯಿಕವಾಗಿ ಸಭಾಂಗಣಕ್ಕೆ ಬರುವಾಗ ಮುಳ್ಳಂಡ ಪ್ರೇಮಾ ಅಯ್ಯಪ್ಪ ಅಕ್ಕಿಹಾಕಿ ಸ್ವಾಗತಿಸಿದರು. ಸಮಾಜದ ಉಪಾದ್ಯಕ್ಷರು ಹಾಗೂ ಹಿರಿಯರಾದ ಬಿದ್ದಂಡ ಮಾದಯ್ಯ, ರಾಧಮಾದಯ್ಯ ದಂಪತಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜದ ನಿದೇರ್ಶಕಿ ಮುಳ್ಳಂಡ ಮಾಯಮ್ಮ ತಮ್ಮಯ್ಯ ಪ್ರಾರ್ಥಿಸಿದರು. ಜೋಮಾಲೆ ಪೊಮ್ಮಕ್ಕಡ ಕೂಟದಿಂದ ಉಮ್ಮತಾಟ್, ಕೋಲಾಟ್ ಹಾಗೂ ವಾಲಗತಾಟ್ ಪ್ರದರ್ಶನ, ಕೊಡವ ಹಾಡುಗಾರಿಕೆ ನಡೆಯಿತು. ಪುರುಷರಿಗೆ ಹಾಗೂ ಮಹಿಳೆಯರಿಗೆ ಒಳಂಗಣ ಕ್ರೀಡೆ ನಡೆಯಿತು. ಮಧ್ಯಾಹ್ನ ಕಾರ್ಯಕ್ರಮ ಅಂಗವಾಗಿ ಊರಿನ ಹಿರಿಯರು ಹಾಗೂ ವಾಯುಪಡೆಯ ನಿವೃತ್ತ ಸೇನಾನಿ ಪುತ್ತರಿರ ಗಣೇಶ್ ಭೀಮಯ್ಯ ಗುರುಕಾರೋಣರಿಗೆ ಮೀದಿನೀರಿಟ್ಟು ಎಲ್ಲರಿಗೂ ಒಳಿತನ್ನು ಮಾಡಲೆಂದು ಪ್ರಾರ್ಥಿಸಿದರು. ಊರೊರ್ಮೆ ಕೂಟದ ಅಂಗವಾಗಿ ತಂಬಿಟ್ಟು ಹಾಗೂ ವಿಶೇಷ ಭೋಜನವನ್ನು ಏರ್ಪಡಿಸಲಾಗಿತ್ತು. ಮಹಿಳೆಯರು ಗದ್ದೆಯಿಂದ ತಂದ ಭತ್ತವನ್ನು…

Read More

ಮಡಿಕೇರಿ NEWS DESK  ಡಿ.18 : ಸಂಪೂರ್ಣವಾಗಿ ಹದಗೆಟ್ಟಿರುವ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ರಸ್ತೆಯನ್ನು ಡಾಂಬರೀಕರಣಗೊಳಿಸಬೇಕೆAದು ಒತ್ತಾಯಿಸಿ ಗಾಳಿಬೀಡು, ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ ಹಾಗೂ ಹೆಬ್ಬೆಟ್ಟಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮೂರನೇ ಮೈಲು ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಲಿಖಿತ ಭರವಸೆ ನೀಡುವಲ್ಲಿಯವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ಗಾಳಿಬೀಡು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ ಹಲವು ವರ್ಷಗಳಿಂದ ಡಾಂಬರೀಕರಣವಾಗಿಲ್ಲ. ಹೊಂಡ ಗುಂಡಿಗಳಿoದ ಕೂಡಿರುವ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾತ್ರ ನಡೆಯುತ್ತಿದೆ. ಈಗಲೂ ತೇಪೆ ಹಾಕುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಹದಗೆಟ್ಟ ರಸ್ತೆ ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ, ಹೆಬ್ಬೆಟ್ಟಗೇರಿ, ಪ್ರಾಕೃತಿಕ ವಿಕೋಪದ ನೆರೆ ಸಂತ್ರಸ್ಥರ ಮನೆಗಳಿಗೆ ಹಾಗೂ ಮಡಿಕೇರಿ ನಗರವನ್ನು ಸಂಪರ್ಕಿಸುವ ರಸ್ತೆಯಾಗಿದೆ. ಈ ಭಾಗದಲ್ಲೇ ಜನಪ್ರಿಯ ಪ್ರವಾಸಿತಾಣ ಮಾಂದಲ್ ಪಟ್ಟಿ ಮತ್ತು ಹಲವು ಪ್ರತಿಷ್ಠಿತ ರೆಸಾರ್ಟ್ಗಳಿವೆ. ನಿತ್ಯ ಸಾವಿರಾರು ವಾಹನಗಳ…

Read More

ಮಡಿಕೇರಿ ಡಿ.18 NEWS DESK : ಹಲವಾರು ವರ್ಷಗಳಿಂದ ಹಾಕತ್ತೂರು ಗ್ರಾಮಸ್ಥರ ಬೇಡಿಕೆಯಾಗಿದ್ದ ಶಾಲಾ ಆಟದ ಮೈದಾನದ ಅಗಲೀಕರಣ ಕಾರ್ಯವು  ಆರಂಭಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ಣ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಕತ್ತೂರು ಮೈದಾನದಲ್ಲಿ ನಡೆದ ಹಾಕತ್ತೂರು ಪ್ರೀಮಿಯರ್ ಲೀಗ್ ನ ವೇದಿಕೆಯಲ್ಲಿ ಮೈದಾನದ ಅಭಿವೃದ್ಧಿಗಾಗಿ ಅನುದಾನ ನೀಡುವ ಆಶ್ವಾಸನೆ ನೀಡಿದ್ದ ಶಾಸಕರು ನುಡಿದಂತೆ ನಡೆದು ಹಾಕತ್ತೂರು ಮೈದಾನದ ಕಾಮಗಾರಿಗೆ 20 ಲಕ್ಷ  ಅನುದಾನ ನೀಡಿ ಕೆಲಸ ಕಾರ್ಯಗಳು ಇದೀಗ ಆರಂಭಗೊಂಡಿದೆ. ಗ್ರಾಮಸ್ಥರು ನುಡಿದಂತೆ ನಡೆದ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.

Read More

ಜಮ್ಮು NEWS DESK ಡಿ.18 : ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಥುವಾ ಜಿಲ್ಲೆಯ ಶಿವನಗರ ಪ್ರದೇಶದ ಮನೆಯೊಂದರಲ್ಲಿ ಇದ್ದವರು ಮಲಗಿದ್ದಾಗ ದಟ್ಟ ಹೊಗೆ ತುಂಬಿಕೊoಡು, ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ನಸುಕಿನ ಜಾವ 2.30ರ ಸುಮಾರಿಗೆ ಈ ಅಗ್ನಿ ಅವಘಡ ನಡೆದಿದೆ.

Read More

ಸುಂಟಿಕೊಪ್ಪ ಡಿ.18 NEWS DESK : ಮಾದಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಂ.ಜಿ.ಸೋಮಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾದಾಪುರ ಗ್ರಾ.ಪಂ ಅಧ್ಯಕ್ಷರಾಗಿದ್ದ ಮನುಬಿದ್ದಪ್ಪ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷರ ಮೀಸಲಾತಿ ನಿಗದಿಯಾಗಿದ್ದು, ಮರುವಂಡ ಜಾಲಿ ಸೋಮಣ್ಣ ಹಾಗೂ ಕೆ.ಎ.ಲತೀಫ್ ನಾಮಪತ್ರ ಸಲ್ಲಿಸಿದರು. ಕೊನೆಯ ಹಂತದಲ್ಲಿ ಕೆ.ಎ.ಲತೀಫ್ ನಾಮಪತ್ರ ಹಿಂಪಡೆದಿದ್ದರಿಂದ ಚುನಾವಣಾ ಅಧಿಕಾರಿಯಾಗಿದ್ದ ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಎಂ.ಜಿ.ಸೋಮಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿದರು. ಮಾದಾಪುರ ಗ್ರಾ.ಪಂ.ಉಪಾಧ್ಯಕ್ಷ ಸುರೇಶಭಾವೆ, ಸದಸ್ಯರುಗಳಾದ ಕೆ.ಎ.ಲತೀಪ್, ಮನುಬಿದ್ದಪ್ಪ, ನಿರೂಪ, ಪಿ.ಡಿ.ಅಂತೋಣಿ(ತಂಗಚ್ಚ), ಮಾನಸ, ದಮಯಂತಿ, ಕೆ.ಸಿಶೀಲ, ಗಿರೀಶ, ಜೆರ್ಮಿ, ಭಾಗಿರಥಿ ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ, ಕಾರ್ಯದರ್ಶಿ ಅನಿತಾ, ಸಿಬ್ಬಂದಿಗಳಾದ ರವಿ, ಪ್ರೀತಿ ಉಪಸ್ಥಿತರಿದ್ದರು.

Read More

ಸಿದ್ದಾಪುರ ಡಿ.18 NEWS DESK : ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ರಾತ್ರಿ ದೇವಾಲಯದ ಗದ್ದೆಯಿಂದ ಧಾನ್ಯಲಕ್ಷ್ಮಿಯ ಕದಿರು ತೆಗೆದು ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಹಂಚಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ದೇವಾಲಯದ ಅಧ್ಯಕ್ಷ ಪಾಲಚಂಡ ಚೀಯಣ್ಣ, ಕಾರ್ಯದರ್ಶಿ ರಾಜನ್, ಉಪಾಧ್ಯಕ್ಷ ದಾಸನ್, ಎಸ್‌ಎನ್‌ಡಿಪಿ ಅಧ್ಯಕ್ಷ ವಿ.ಕೆ.ಲೋಕೇಶ್, ಮಾಜಿ ಕಾರ್ಯದರ್ಶಿ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Read More