ಕುಶಾಲನಗರ ಡಿ.18 NEWS DESK : ಕುಶಾಲನಗರ ಪಟ್ಟಣ ಒಳಚರಂಡಿ ಯೋಜನೆ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಕುಶಾಲನಗರ ಪುರಸಭೆ ಸದಸ್ಯರಾದ ಡಿ.ಕೆ.ತಿಮ್ಮಪ್ಪ ತಿಳಿಸಿದ್ದಾರೆ. ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ನಡೆದ 167 ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪುರಸಭೆ ವತಿಯಿಂದ ಈಗಾಗಲೇ ಪಟ್ಟಣ ವಿವಿಧ ಬಡಾವಣೆಗಳಲ್ಲಿ ನೇರವಾಗಿ ನದಿಗೆ ಸೇರುತ್ತಿದ್ದ ಕಲುಷಿತ ನೀರನ್ನು ನೈಸರ್ಗಿಕವಾಗಿ ಯು ಜಿ ಡಿ ಕೊಳವೆಗಳ ಮೂಲಕ ಹಾಯಿಸಿ ನದಿ ನೇರವಾಗಿ ಕಲುಷಿತಗೊಳ್ಳುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಹಿಂದಿನ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಹಾಗೂ ಈಗಿನ ಕ್ಷೇತ್ರ ಶಾಸಕರಾದ ಡಾ ಮಂತರ್ ಗೌಡ ಒಳಚರಂಡಿ ಯೋಜನೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು ಸದ್ಯದಲ್ಲೇ ಯೋಜನೆ ಪೂರ್ಣಗೊಂಡು ನದಿ ಕಲುಷಿತ ಮತ್ತು ಪಟ್ಟಣದ ಸ್ವಚ್ಛತೆಯ ಗುರಿ ಈ ಮೂಲಕ ಸಾಧನೆ ಸಾಧ್ಯವಾಗಲಿದೆ ಎಂದರು. ನಿರಂತರವಾಗಿ ಜೀವನದಿ ಕಾವೇರಿಗೆ…
ಲೇಖಕ: admin
ಮಡಿಕೇರಿ ಡಿ.18 NEWS DESK : 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in ಆಗಿದೆ. ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ : ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ. ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ : ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ…
*ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ಎಲ್ಲಾ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಡಿ.20 ರಂದು ಬೆಳಿಗ್ಗೆ 10 ಗಂಟೆಗೆ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಜಾಥ* ::: ಬೇಡಿಕೆಗಳು ::: *ಅವೈಜ್ಞಾನಿಕವಾಗಿ ಮಾಡಿರುವ ಸಿ & ಡಿ ಸರ್ವೆಯನ್ನು ರದ್ದುಗೊಳಿಸಿ, ಮರು ಸರ್ವೆ ಮಾಡಿ ರೈತರ ವ್ಯವಸಾಯ ಮಾಡಿರುವ ಭೂಮಿಯನ್ನು ರೈತರ ಹೆಸರಿಗೆ ಮಂಜೂರು ಮಾಡಬೇಕು. *ಯಾವುದೇ ಮಾಹಿತಿ ಇಲ್ಲದೆ ಮಾಡಿರುವ ಮೀಸಲು ಅರಣ್ಯ, ಸೆಕ್ಷನ್ 4/5 ಅನ್ನು ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು. *ಅರಣ್ಯ ಹಾಗೂ ಕಂದಾಯ ಇಲಾಖೆಯವರು ವಾಸ್ತವತೆ ಅರಿಯದೆ ಮಾಡಿರುವ ಡೀಮ್ಸ್ ಫಾರೆಸ್ಟ್ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. *ಕಸ್ತೂರಿರಂಗನ್ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿರಸ್ಕರಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದ ಹಾಗೆ ಕೇರಳ ಮಾದರಿಯಂತೆ ಚಾರಿ ಮಾಡಬೇಕು. *ಊರುಉಡುವೆ, ದೇವರಕಾಡು, ಗೋಮಾಳ ಇವುಗಳನ್ನು ನಮ್ಮ ಪೂರ್ವಿಕರು ಊರಿನ ಹಿತದೃಷ್ಠಿಯಿಂದ ಮೀಸಲು ಮಾಡಿರುವ ಭೂಮಿಯಾಗಿದ್ದು, ಅದನ್ನು ಅರಣ್ಯ ಇಲಾಖೆಯ…
ಮಡಿಕೇರಿ ಡಿ.17 NEWS DESK : 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ತಿಳಿಸಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು 2025 ರ ಜನವರಿ, 01 ರೊಳಗೆ ವೆಬ್ಸೈಟ್ ವಿಳಾಸ https://www.newindia.co.in/ ಕ್ಕೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫ಼ೌಂಡೇಶನ್ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಕೃಷಿಕ್ ಸರ್ವೋದಯ ಫ಼ೌಂಡೇಶನ್ನ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿದ್ದಾರೆ.
ಮಡಿಕೇರಿ ಡಿ.17 NEWS DESK : ಮಕ್ಕಳಿಗೆ ಮಾನವೀಯ ಹಾಗೂ ಮೌಲ್ಯಯುತ ಶಿಕ್ಷಣ ನೀಡುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಪ್ರತಿಪಾದಿಸಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಆರ್ಟಿಇ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಬಗ್ಗೆ ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ’ ಕುರಿತು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳ ಜೀವನದ ಪರಿಪೂರ್ಣ ಬೆಳವಣಿಗೆಗೆ ಮೌಲ್ಯಯುತ ಶಿಕ್ಷಣ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಅವರು ಸಲಹೆ ನೀಡಿದರು. ಮಕ್ಕಳ ಹಕ್ಕುಗಳ ಕುರಿತು ಸಾಕಷ್ಟು ಕಾನೂನುಗಳು, ಕಾಯ್ದೆಗಳು ಇದ್ದರೂ ಸಹ ಒಂದಲ್ಲ ಒಂದು ರೀತಿಯಲ್ಲಿ ಶೋಷಣೆ, ದೌರ್ಜನ್ಯಗಳು ನಡೆಯುತ್ತಿದ್ದು, ಇದನ್ನು ತಡೆಯಬೇಕು ಎಂದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡುವಂತಾಗಬೇಕು. ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ನಿಗಾವಹಿಸಬೇಕು.…
ಮಡಿಕೇರಿ ಡಿ.17 NEWS DESK : ಬೆಳಗಾವಿ ಸುವರ್ಣ ಸೌಧದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಕುರಿತು ಗಮನ ಸೆಳೆದು ಮನವಿ ಸಲ್ಲಿಸಿದರು. ಈ ಸಂದರ್ಭ ಶಾಸಕರು, ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಉಪಸ್ಥಿತರಿದ್ದರು.
ಮಡಿಕೇರಿ ಡಿ.17 NEWS DESK : ಕುಶಾಲನಗರದ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಕೂಡಿಗೆ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ರೈತರಿಗೆ ವಿವಿಧ ಯೋಜನೆಗೆ ಸಂಬಂಧಿಸಿದಂತೆ ಮತ್ತು ಕೃಷಿ, ಹೈನುಗಾರಿಕೆಗೆ ಸಂಬಂಧಿಸಿದ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಬ್ಯಾಂಕ್ ನ ವಿಭಾಗಿಯ ಮೇನೆಜರ್ ಸಿಜೀತ್ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಸಂಧ್ಯಾಶಿಬಿರ, ಕಿಸಾನ್ ಯೋಜನೆ, ಮತ್ತು ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಕುರಿ ಸಾಕಾಣಿಕೆಗೆ ಸಾಲ ಸೌಲಭ್ಯಗಳನ್ನು ಒದಗಿಸುವ ಯೋಜನೆಯ ಹಂತಗಳ ಬಗ್ಗೆ, ರೈತರ ಜಮೀನಿನ ಅಧಾರದ ಮೇಲೆ ಸರಕಾರದ ನಿಯಮಾನುಸಾರ ವಿವಿಧ ಬಗೆಯ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳಲು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು. ರಾಮೇಶ್ವರ ಕೂಡುಮಂಗಳೂರು ಸಹಕಾರ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಕೆ.ಪಿ.ರಾಜು, ಆರ್. ಕೆ.ನಾಗೇಂದ್ರ ಬಾಬು, ಜಯಶ್ರೀ, ಕುಮಾರ್, ಎಸ್. ಎಸ್…
ಮಡಿಕೇರಿ ಡಿ.17 NEWS DESK : ಕೊಡಗು ಜಿಲ್ಲಾ ಸರಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ ನಡೆಸಿದರು. ಬೆಳಗಾವಿ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಸಭೆ ನಡೆಸಿದ ಸಚಿವರು ಹಾಗೂ ಶಾಸಕರು ಕೊಡಗು ಜಿಲ್ಲೆಯ ಅನುದಾನಿತ ಶಾಲಾ- ಕಾಲೇಜುಗಳ ನೌಕರರ ಸಂಘ ಸರಕಾರದ ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಅನುದಾನಿತ ಕಾಲೇಜು ತರಬೇತಿವಾರು ಕನಿಷ್ಠ 40 ವಿದ್ಯಾರ್ಥಿಗಳನ್ನು ನಿಗದಿಪಡಿಸಲಾಗಿದೆ. ಆದರೆ ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿರುವುದರಿಂದ ಕನಿಷ್ಠ 40 ವಿದ್ಯಾರ್ಥಿಗಳ ಸಂಖ್ಯೆಯನ್ನು 20 ವಿದ್ಯಾರ್ಥಿಗಳಿಗೆ ಇಳಿಸಬೇಕು, ಉಪನ್ಯಾಸಕರ ವೇತನವನ್ನು ತಡೆಹಿಡಿಯದೆ ಪಾವತಿಸಬೇಕು. ಪ್ರಜಾ ಪ್ರತಿನಿಧಿ ಕಾಯ್ದೆಯ ತಿದ್ದುಪಡಿಯನ್ವಯ ಕೊಡಗು ಮತ್ತು ಮಲೆನಾಡು ಜಿಲ್ಲೆಗಳನ್ನು ವಿಶೇಷವಾಗಿ ಪರಿಗಣಿಸಬೇಕು. ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೊಡವ ಜಾತಿಯನ್ನು ಕೊಡವ ಎಂದು ನಮೂದಿಸಿ ಅಧಿಸೂಚನೆ ಹೊರಡಿಸುವುದು. ಜಿಲ್ಲೆಯ ಸಾಂಧೀಪನಿ ವಿದ್ಯಾಪೀಠ…
ಮಡಿಕೇರಿ ಡಿ.17 NEWS DESK : ಹುಣಸೂರು ಬಿ.ಜಿ.ಎಸ್ ಸಮುದಾಯ ಭವನದಲ್ಲಿ ಓಕೆನವ ಡ್ರ್ಯಾಗನ್ ಮಿಕ್ಸ್ ಮಾರ್ಷಲ್ ಆರ್ಟ್ಸ್ ಚೋಟು ಖಾನ್ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗಮಂಡಲ ಮತ್ತು ಮೈಸೂರು ತಂಡಗಳು ಚಾಂಪಿಯನ್ ಪಟ್ಟ ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಓ.ಡಿ.ಎಂ.ಎಂ. ಎ.ಎಸ್ ಅಧ್ಯಕ್ಷ, ಬ್ಲಾಕ್ ಬೆಲ್ಟ್ 7 ಡಾನ್ ಡಾ .ಡಿಲಿತ್ ಉತ್ತಪ್ಪ ತರಬೇತಿ ನೀಡಿದ್ದಾರೆ.
ಮಡಿಕೇರಿ ಡಿ.17 NEWS DESK : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ನಡೆದ ಕಾವೇರಿ ಕಾರ್ನಿವಲ್-2024 ಕಾರ್ಯಕ್ರಮದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಚಾಂಪಿಯನ್ಶಿಪ್ನ್ನು ತನ್ನದಾಗಿಸಿಕೊಂಡಿದೆ. ಜಾನಪದಗೀತೆ ಸ್ಪರ್ಧೆಯಲ್ಲಿ ಟಿ.ಎಮ್.ಆಶ್ರಯ್ ಅಕ್ಕಮ್ಮ (10ನೇ), ಜಶ್ವಂತ್ ಬೋಪಣ್ಣ (10ನೇ), ಪಿ.ಜಿ.ಸಾಹಿತ್ಯ (8ನೇ), ಎಂ.ಡಿ.ಜೀವನ್ಯ (8ನೇ) ಎ.ಹನಿಯಾ (8ನೇ), ಎನ್.ಎನ್.ಪೊನ್ನಮ್ಮ (8ನೇ) ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಂಡರು. ಬಾಲಕಿಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಎಂ.ಶಿಪ್ರಾಕಾಳಪ್ಪ (10ನೇ), ಪಿ.ಪಿ.ಕ್ಷಮಾ ಕಾವೇರಮ್ಮ (10ನೇ), ಜಿ.ಬಿ.ಸ್ಪೂರ್ತಿ ಪೂವಮ್ಮ (10ನೇ), ಎಸ್.ಪುಷ್ಪಿತಾವಿ (10ನೇ) ಕೆ.ಎಸ್.ಆವಂದಿ (10ನೇ) ಎಸ್.ಎಸ್.ರಶ್ಮಿ ಪೊನ್ನಮ್ಮ (9ನೇ) ಬಿ.ಎಸ್.ತನ್ಯಾರೈ (9ನೇ) ಪೂರ್ವಿಕ ಪೂವಮ್ಮ(9ನೇ) ಪ್ರಥಮ ಬಹುಮಾನ ಪಡೆದುಕೊಂಡರು. ರೆಟ್ರೋಡ್ಯಾನ್ಸ್ ಸ್ಪರ್ಧೆಯಲ್ಲಿ ಶಕ್ತಿದೇಚಮ್ಮ (10ನೇ), ಸಾಂಚ್ ಬೋಪಣ್ಣ (10ನೇ), ತಾನಿಯಾ ಅಯ್ಯಪ್ಪ (10ನೇ), ಎಸ್.ಎಂ.ಹನಾಫಲಕ್ (9ನೇ) ಐ.ಹೈಜಾûಬಿ. (9ನೇ) ಸುಹಾನಿರಾಜ್ಪುರೋಹಿತ್ (9ನೇ), ದೀಪ್ತಿ ತಂಗಮ್ಮ(9ನೇ), ಬಿ.ಹನ್ಸಿಕಾ ಪೊನ್ನಪ್ಪ (8ನೇ) ವಿದ್ಯಾರ್ಥಿನಿಯರು ಪಾಲ್ಗೊಂಡು ದ್ವಿತೀಯ ಬಹುಮಾನ ಪಡೆದುಕೊಂಡರು. ವಿಜ್ಞಾನಮಾದರಿ ಸ್ಪರ್ಧೆಯಲ್ಲಿ ಬಿ.ಎಸ್.ಸೃಷ್ಟಿ (9ನೇ), ತರುಣ್ (9ನೇ)…






