ಮಡಿಕೇರಿ ಮೇ 30 NEWS DESK : ಚೆಟ್ಟಳ್ಳಿ ಸಮೀಪದ ಚೇರಳ ಶ್ರೀಮಂಗಲ ಗ್ರಾಮದಲ್ಲಿ ವಿಜಯಲಕ್ಷಿ (86) ಎಂಬ ವೃದ್ಧೆಯ ಮೃತದೇಹ ಕಿರಿದಾದ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಾಹಿತಿ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲೆತ್ತಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರ ತನಿಖೆಯಿಂದ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಾದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೇಖಕ: admin
ಮಡಿಕೇರಿ NEWS DESK ಮೇ 30 : ರಾಜ್ಯದ ನೂತನ ಮಂತ್ರಿಮoಡಲದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತ್ಯಾತೀತ ಹಾಗೂ ಪಕ್ಷಾತೀತ ನಾಯಕರಾಗಿರುವ ಎ.ಎಸ್.ಪೊನ್ನಣ್ಣ ಅವರು ಕೇವಲ ಕೊಡಗು ಮಾತ್ರವಲ್ಲ ಇಡೀ ಕರ್ನಾಟಕದ ಆಸ್ತಿಯಾಗಿದ್ದು, ಇವರಿಗೆ ಸಚಿವ ಸ್ಥಾನ ನೀಡುವುದರಿಂದ ರಾಜ್ಯದ ಭವಿಷ್ಯ ಉತ್ತಮವಾಗಲಿದೆ ಎಂದು ತಿಳಿಸಿದ್ದಾರೆ. ವಿರಾಜಪೇಟೆ ಶಾಸಕರಾಗಿ ಯಾವುದೇ ಬೇಧಭಾವವಿಲ್ಲದೆ ಸರ್ವರೂ ಸಮಾನರು ಎಂಬ ಭಾವನೆಯಲ್ಲಿ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಹಾಗೂ ಜನಹಿತಕ್ಕಾಗಿ ಶ್ರಮಿಸಿದ್ದಾರೆ. ಕಳೆದ 10 ವರ್ಷಗಳಿಂದ ಸರಕಾರದೊಂದಿಗೆ ಒಡನಾಟ ಹೊಂದಿರುವ ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರನ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಮಂತ್ರಿಮAಡಲದ ಪ್ರತಿಯೊಬ್ಬರೊಂದಿಗೆ ಆತ್ಮೀಯರಾಗಿರುವ ಅವರು ತಮ್ಮ ದಕ್ಷ ಕಾರ್ಯವೈಖರಿಯಿಂದಲೇ ಹೈಕಮಾಂಡ್ ನ ಮೆಚ್ಚುಗೆ ಪಡೆದಿದ್ದಾರೆ. ಇವರಿಂದ ಕೊಡಗಿನಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಎಂ.ಸಿ.ನಾಣಯ್ಯ, ಎಂ.ಎo.ನಾಣಯ್ಯ…
ಮಡಿಕೇರಿ NEWS DESK ಮೇ 30 : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಮಂತ್ರಿಮoಡಲದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ನಗರದ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಪೂಜೆಯ ನೇತೃತ್ವ ವಹಿಸಿ ಮಾತನಾಡಿದ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್ ಅವರು ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಹೊಂದಲು ಸಮರ್ಥರಾಗಿದ್ದಾರೆ. ನಾಡಿನ ಒಳಿತಿಗಾಗಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ, ಕೆಪಿಸಿಸಿ ಸದಸ್ಯ ಹೆಚ್.ಎಂ.ನoದಕುಮಾರ್, ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರಸ್ ಅಧ್ಯಕ್ಷೆ ಶಶಿ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಪ್ರಚಾರ ಸಮಿತಿ ಉಪಾಧ್ಯಕ್ಷ ದೇರಾಜೆ ಕಿರಣ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಹರಿಪ್ರಸಾದ್ ಕೋಚನ, ಮನು…
ಮಡಿಕೇರಿ NEWS DESK ಮೇ 30 : ರಾಜ್ಯದಲ್ಲಿ ನೂತನ ಮಂತ್ರಿಮoಡಲ ರಚನೆಯ ಸಂದರ್ಭ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮೂರ್ನಾಡು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸಿ.ಸುಬ್ಬಯ್ಯ ಅವರು ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಿದರೆ ಅತ್ಯಂತ ಸೂಕ್ಷ್ಮ ಜನಾಂಗದ ಕೊಡವರಿಗೆ ಹೆಮ್ಮೆ ಎನಿಸಲಿದೆ, ಅಲ್ಲದೆ ಕೊಡವರು ಹಾಗೂ ಕೊಡಗಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜಕೀಯವಾಗಿ ಕೊಡಗು ಜಿಲ್ಲೆ ರಾಜ್ಯದ ಗಮನ ಸೆಳೆದಿದ್ದರೂ ಕಳೆದ ಅನೇಕ ವರ್ಷಗಳಿಂದ ಕೊಡವರಿಗೆ ಯಾವುದೇ ಸರಕಾರ ಸಚಿವ ಸ್ಥಾನವನ್ನು ನೀಡಿಲ್ಲ. ಪ್ರಸ್ತುತ ನೂತನ ಮಂತ್ರಿ ಮಂಡಲದ ಸಂದರ್ಭವಾದರೂ ಕೊಡವ ಜನಾಂಗದ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸವಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವ ಪೊನ್ನಣ್ಣ ಅವರು ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಡವರು ಮಾತ್ರವಲ್ಲದೆ ಎಲ್ಲಾ ಜಾತಿ, ಜನಾಂಗದ…
ಬೆಂಗಳೂರು, ಮೇ 29 NEWS DESK : ಬಾಳೆ ಹಣ್ಣು ದೇಶದ ಅತ್ಯಂತ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಇದರ ಉತ್ಪಾದಕತೆಯನ್ನು ಹೆಚ್ಚಿಸಲು ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ (Tissue Culture) ಬಾಳೆ ಸಸಿಗಳನ್ನು ಬಳಸುವಂತೆ ತೋಟಗಾರಿಕೆ ಇಲಾಖೆ ರೈತರಲ್ಲಿ ವಿನಂತಿಸಿದೆ. ಭಾರತದಲ್ಲಿ ವಾರ್ಷಿಕವಾಗಿ 9.00 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 383.00 ಲಕ್ಷ ಮೆಟ್ರಿಕ್ ಟನ್ ಬಾಳೆ ಉತ್ಪಾದನೆಯಾಗುತ್ತಿದ್ದು, ಪ್ರತಿ ಹೆಕ್ಟೇರ್ಗೆ 42.00 ಮೆಟ್ರಿಕ್ ಟನ್ ಉತ್ಪಾದಕತೆ ಇದೆ. ಆದರೆ, ಕರ್ನಾಟಕದಲ್ಲಿ 46.00 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೇವಲ 12.00 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುತ್ತಿದ್ದು, ಪ್ರತಿ ಹೆಕ್ಟೇರ್ಗೆ ಉತ್ಪಾದಕತೆ ಕೇವಲ 26.00 ಮೆಟ್ರಿಕ್ ಟನ್ಗಳಷ್ಟಿದೆ. ಇದು ರಾಷ್ಟ್ರೀಯ ಸರಾಸರಿಗಿಂತ ಗಣನೀಯವಾಗಿ ಕಡಿಮೆಯಾಗಿದೆ. ರೈತರಲ್ಲಿ ಸಮರ್ಪಕ ಮಾಹಿತಿಯ ಕೊರತೆಯಿಂದಾಗಿ ಇಂದಿಗೂ ಹಳೆಯ ಹಾಗೂ ಸಾಂಪ್ರದಾಯಿಕ ಬಾಳೆ ಕಂದುಗಳನ್ನು ನಾಟಿ ಮಾಡುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ರಾಜ್ಯದಲ್ಲಿ ಬಾಳೆ ಇಳುವರಿಯನ್ನು ಹೆಚ್ಚಿಸಲು ತೋಟಗಾರಿಕೆ ಇಲಾಖೆಯು…
ಮಡಿಕೇರಿ ಮೇ 29 NEWS DESK : ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ನಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಮೇ, 30 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅವರೆದಾಳು, ಬ್ಯಾಡಗೊಟ್ಟ, ದೊಡ್ಡಕುಂದ, ಚಿಕ್ಕಕುಂದ, ನೀರುಗುಂದ, ಬೆಸೂರು, ದೊಡ್ಡಭಂಡಾರ, ಕಟ್ಟೆಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
ಮಡಿಕೇರಿ ಮೇ 29 NEWS DESK : ವಿಶ್ವ ಪರಿಸರ ದಿನಾಚರಣೆ-2026 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ “ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ.” ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಜೂ.2 ರಂದು ಬೆಳಗ್ಗೆ 09.30 ಗಂಟೆಗೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲೆ ವಿಭಾಗದ ಜಿಮ್ನಾಸ್ಟಿಕ್ ಹಾಲ್ನಲ್ಲಿ ಏರ್ಪಡಿಸಲಾಗಿದೆ. (ಈ ಸ್ಫರ್ದೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್ ಮತ್ತು ಪ್ರಬಂಧ ಬರೆಯುವ ಹಾಳೆಯನ್ನು ಮಾತ್ರ ನೀಡಲಾಗುವುದು). ಚಿತ್ರಕಲೆ ಹಾಗೂ ಪ್ರಬಂಧ ಬರೆಯಲು ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು). ಸ್ಪರ್ದೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಈ ವರ್ಷದ ಘೋಷಣ ವಾಕ್ಯವು “ಪ್ರಕೃತಿಯಿಂದ ಸ್ಪೂರ್ತಿ. ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ.” “Inspired by Nature. For Climate. For Our Future”…
ಅಮ್ಮತಿ, ಮೇ 29 NEWS DESK : ಅಮೃತ ಯುವ ಮೊಗೇರ ಸೇವಾ ಸಮಿತಿ ಇವರ ಸಹಭಾಗಿತ್ವದಲ್ಲಿ, ಶ್ರೀ ಕಲ್ಲುರ್ಟಿ ಮೊಗೇರ ಫುಟ್ಬಾಲ್ ಅಮ್ಮತಿ ವತಿಯಿಂದ ರಾಜ್ಯ ಮಟ್ಟದ “ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ – 2026” ಪಂದ್ಯಾವಳಿಯನ್ನು ಮೇ 30 ಹಾಗೂ 31 ರಂದು ಅಮ್ಮತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಮೊಗೇರ ಸಮುದಾಯದ ಕ್ರೀಡಾಪಟುಗಳಿಗೆ ಮಾತ್ರ ಸೀಮಿತವಾಗಿರುವ ಈ ರಾಜ್ಯ ಮಟ್ಟದ ಲೀಗ್ ಪಂದ್ಯಾವಳಿಯಲ್ಲಿ ಒಟ್ಟು 8 ಮಾಲೀಕತ್ವದ ತಂಡಗಳು ಭಾಗವಹಿಸಲಿದ್ದು, ಎರಡು ದಿನಗಳ ಕಾಲ ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಕೊಡಗು ಸೇರಿದಂತೆ ಮಂಗಳೂರು, ಉಡುಪಿ, ಕಾಸರಗೋಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಾವಂತ ಆಟಗಾರರು ಭಾಗವಹಿಸಲಿದ್ದು, ಪ್ರತಿಯೊಂದು ಪಂದ್ಯವೂ ರೋಚಕ ಪೈಪೋಟಿಗೆ ಸಾಕ್ಷಿಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಪಂದ್ಯಾವಳಿಯ ಚಾಂಪಿಯನ್ ತಂಡಕ್ಕೆ ರೂ.50,000 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತಿದ್ದು, ರನ್ನರ್ಸ್ ತಂಡಕ್ಕೆ ರೂ.30,000 ನಗದು ಮತ್ತು…
ವಿರಾಜಪೇಟೆ ಮೇ 29 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಜಿಲ್ಲಾಧ್ಯಕ್ಷರಾಗಿ ಮಾತಂಡ ಗೌರು ಸೋಮಣ್ಣ ಅವಿರೋಧ ಆಯ್ಕೆಯಾಗಿದ್ದಾರೆ. ವಿರಾಜಪೇಟೆಯ ಪುರಭವನದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ಒಂಬತ್ತನೇ ವರ್ಷದ ವಾರ್ಷಿಕ ಸಾಮಾನ್ಯ ಮಹಾಸಭೆ ಮತ್ತು ಚುನಾವಣೆಯಲ್ಲಿ ಆಯ್ಕೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ, ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷ ಮಾತಂಡ ಗೌರು ಸೋಮಣ್ಣ ಸಂಘದ ಸರ್ವ ಸದಸ್ಯರ ಉಪಸ್ಥಿತಿ ಮತ್ತು ಭಾಗವಹಿಸುವಿಕೆ ನಮ್ಮ ಸಂಘಕ್ಕೆ ಶಕ್ತಿ, ಏಕತೆ ಮತ್ತು ಮುಂದಿನ ಉದ್ದೇಶವನ್ನು ಒಳಗೊಂಡಿರುತ್ತದೆ. ಕಳೆದ ಸಾಲಿನಲ್ಲಿ ಸರ್ವರೂ ಒಟ್ಟುಗೂಡಿ ಸಮರ್ಪಣಾ ಭಾವದಿಂದ ಒಟ್ಟಾಗಿ ಸೇವೆ ಸಲ್ಲಿಸುವುದರ ಮೂಲಕ ಕೆಡಿಡಿಎ ಗೆ ಒಳ್ಳೆಯ ಕಾರ್ಯವನ್ನು ಮಾಡುತ್ತಾ ಬರುತ್ತಿದ್ದೇವೆ .ನಮ್ಮ ಸಂಘದ ಗೌರವಾಧ್ಯಕ್ಷರು ದಣಿವರಿಯದೆ ನಮ್ಮ ಜೊತೆಗೆ ನಿರಂತರ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಅವರ ದೂರ ದೃಷ್ಟಿಯಿಂದ ಇಂದು ಸಂಘ ಯಶಸ್ವಿಯ ಹಾದಿಯಲ್ಲಿದೆ. ಸಂಘದ ಸರ್ವ ಪದಾಧಿಕಾರಿಗಳಿಗೆ ಧನ್ಯವಾದಗಳು ಸಲ್ಲಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೌರವಾಧ್ಯಕ್ಷ ಜೋಸೆಫ್…
ವಿರಾಜಪೇಟೆ ಮೇ 29 NEWS DESK : ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಯಶಸ್ವಿಯಾಗಿ ಜರುಗಿತು. ಸ್ಲ್ಯಾಶ್ ಅಂಡ್ ಸ್ಪಾರ್ಕ್ 2026 ಎಂಬ ಧ್ಯೇಯದಡಿಯಲ್ಲಿ ನಾಲ್ಕು ವಾರಗಳ ಕಾಲ ಜರುಗಿದ ಶಿಬಿರಕ್ಕೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಚಾಲನೆ ನೀಡಿದರು. ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಸೃಜನಾತ್ಮಕ ಕಲಿಕೆಯ ಜೊತೆಗೆ ಮನರಂಜನೆಯನ್ನು ಒದಗಿಸಲಾಯಿತು. ಕಲೆ, ಕ್ರೀಡೆ ಹಾಗೂ ವಿಜ್ಞಾನದ ಕುರಿತಾದ ಚಟುವಟಿಕೆಗಳ ಕುರಿತು ಪರಿಚಯಿಸಲಾಯಿತು. ಮಕ್ಕಳಿಗೆ ಕಾರ್ಡ್ ಬೋರ್ಡ್ ಕ್ರಿಯೇಷನ್, ಡೂಡಲ್ ಆರ್ಟ್, ಸ್ಕ್ರಿಬಲ್ ಆರ್ಟ್, ಬಾಟಲ್ ಪೇಂಟಿಂಗ್, ಅಡುಗೆ ತಯಾರಿಸುವ ವಿಧಾನಗಳು, ಪರಿಸರ ವಿಜ್ಞಾನ, ಆಡಿಯೋ ವಿಜುವಲ್ ಕಮ್ಯುನಿಕೇಶನ್, ರೊಬೊಟಿಕ್ಸ್ ಮುಂತಾದ ವಿಷಯದ ಕುರಿತು ತರಬೇತಿಯನ್ನು ನೀಡಲಾಯಿತು. ಮಕ್ಕಳು ಕೂಡ ತಮ್ಮ ಕೈ ಚಳಕದಿಂದ ಅನೇಕ ಸುಂದರ ಕಲಾಕೃತಿಗಳನ್ನು ತಯಾರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳಲ್ಲಿ ಭಾಗವಹಿಸಿ ಪರಸ್ಪರ ಸ್ನೇಹ, ಸಹಕಾರ ಹಾಗೂ ತಂಡದ…






