ಶನಿವಾರಸಂತೆ, NEWS DESK ಏ.03:- ಮಹಿಳಾ ದಿನಾಚರಣೆ ಹಾಗೂ ಶಿವಕುಮಾರ ಸ್ವಾಮೀಜಿ ಜಯಂತಿ ಅಂಗವಾಗಿ ಪಟ್ಟಣದಲ್ಲಿ ವಿಜೃಂಭಣೆಯ ಮೆರವಣಿಗೆ ನಡೆಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಕ್ಕಮಹಾದೇವಿ ಜಯಂತಿ,ಶಿವಕುಮಾರ ಸ್ವಾಮೀಜಿ ಜಯಂತಿ ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುಡುಗಳಲೆ ದೇವಾಲಯದ ಬಳಿಯಿಂದ ಪೂರ್ಣಕುಂಭ,ವೀರಗಾಸೆ,ಚಂಡೆ ವಾದ್ಯದೊಂದಿಗೆ ಶಿವಕುಮಾರ ಸ್ವಾಮೀಜಿ,ಅಕ್ಕಮಹಾದೇವಿಯವರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ಉದೂರು ರವಿಯವರ ವೀರಗಾಸೆ ವಿಶೇಷವಾಗಿ ಗಮನ ಸೆಳೆಯಿತು. ನಂತರ ನಡೆದ ಕಾರ್ಯಕ್ರಮದ ಸಾನಿಧ್ಯವನ್ನು ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ , ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ,ಶಿಡಿಗಳಲೆ ಮಠದ ಇಮ್ಮಡಿಶಿವಲಿಂಗ ಸ್ವಾಮೀಜಿ ವಹಿಸಿದ್ದರು, ಮಹಿಳಾ ಘಟದ ಅಧ್ಯಕ್ಷೆ ದೀಪಿಕಾ ಕರುಣಾಕರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ನಿರ್ದೇಶಕಿ ಅನುಚಂದ್ರಶೇಖರ್,ಜಿಲ್ಲಾ ಉಪಾಧ್ಯಕ್ಷ ಸುರೇಶ್,ಪ್ರಮುಖರುಗಳಾದ ಸುಮಾಸುದೀಪ್, ವೀರೇಂದ್ರ,ರಾಜೇಶ್,ಹಾಗೂ ಮುಂತಾದವರು ಉಪಸ್ತಿತರಿದ್ದರು.
ಲೇಖಕ: admin
ಕುಶಾಲನಗರ, NEWS DESK ಏ೩: ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದೂರು – ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿಯವರು ಶುಕ್ರವಾರದಂದು ಚಾಲನೆ ನೀಡಲಾಯಿತು. ಕಾಜೂರು ಉರೂಸ್ ಮಕಾಂ ನಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಉರೂಂ ಯಶಸ್ವಿಯಾಗಿ ನಡೆಯಲು ಪ್ರಾರ್ಥಿಸಿದರು. ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸುಲೈಮಾನ್ ಸಖಾಫಿ ಮಾತನಾಡಿ, ಉರೂಸ್ ಗೆ ಶುಕ್ರವಾರ ಚಾಲನೆ ನೀಡಲಾಗಿದ್ದು, ಸೋಮವಾರದಂದು ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲರೂ ಉರೂಸ್ ನಲ್ಲಿ ಭಾಗವಹಿಸುವ ಮೂಲಕ ಉರೂಸನ್ನು ಯಶಸ್ವಿಗೊಳಿಸಬೇಕು ಎಂದರು. ಹರದೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎ.ಮುಸ್ತಫಾ ಮಾತನಾಡಿ, ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕಾಜೂರು ಮಕಾಂ ಉರೂಸ್ ಗೆ ಇಂದು ಚಾಲನೆ ನೀಡಲಾಗಿದೆ. ಉರೂಸ್ ಕೊಡಗಿನ ಎಲ್ಲಾ ಕಡೆಗಳಿಂದಲೂ ಜನರು ಪಾಲ್ಗೊಳ್ಳುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಉರೂಸ್ ನ ಯಶಸ್ವಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು. ಈ ಸಂದರ್ಭ ಮಸ್ಜಿದುನ್ನೂರು ಮುಸ್ಲಿಂ ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ಲಾ, ಕಾರ್ಯದರ್ಶಿ ಅಜ಼ೀಜ಼್, ಖಜಾಂಜಿ…
ಮಡಿಕೇರಿ NEWS DESK ಏ.3 : ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ ತಂಡದಲ್ಲಿದ್ದ ಕೇರಳ ಮೂಲದ ಮಹಿಳೆೆಯೊಬ್ಬರು ನಾಪತ್ತೆಯಾಗಿದ್ದಾರೆ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳ ಒಟ್ಟು ನಾಲ್ಕು ತಂಡಗಳು ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿವೆ. ತಡಿಯಂಡಮೋಳ್ ಬೆಟ್ಟದ ತಪ್ಪಲಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿ, ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ(36) ನಾಪತ್ತೆಯಾಗಿರುವ ಮಹಿಳೆಯಾಗಿದ್ದಾರೆ. ನಾಪೋಕ್ಲು ಸಮೀಪದ ಯವಕಪಾಡಿ ಕಕ್ಕಬ್ಬೆಯಿಂದ ಸುಮಾರು ಐದು ಕಿಲೋ ಮೀಟರ್ ದೂರ ಕಡಿದಾದ ಹಾದಿಯ ಚಾರಣ ನಡೆಸಿದಲ್ಲಿ, ತಡಿಯಂಡಮೋಳ್ ಶಿಖರವನ್ನು ತಲುಪಬಹುದು. ಗುರುವಾರ ಚಾರಣಕ್ಕೆ ಹೊರಟ ಶರಣ್ಯ ಅವರು ಒಬ್ಬಂಟಿಯಾಗಿದ್ದ ಹಿನ್ನೆಲೆಯಲ್ಲಿ, ಇತರೆ ಚಾರಣಿಗರ ಜೊತೆಗೆ ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ. ಚಾರಣ ತೆರಳಿದವರು ಮರಳಿ ಬಂದಿದ್ದರಾದರು, ಶರಣ್ಯ ಮಾತ್ರ ಹಿಂದಿರುಗಿರಲಿಲ್ಲ. ಈ ಬಗ್ಗೆ ಅಲ್ಲಿನ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ ಮೇರೆ, ಸ್ಥಳೀಯರು ಪೊಲೀಸರು ಹಾಗೂ ಗ್ರಾಮಸ್ಥರು ತಡಿಯಂಡಮೋಳ್ ಬೆಟ್ಟ ಪ್ರದೇಶದಲ್ಲಿ ಸಾಕಷ್ಟು ಹುಡುಕಾಟ ನಡೆಸಿದರಾದರು ಶರಣ್ಯ ಅವರ…
ಕುಶಾಲನಗರ, NEWS DESK ಏ.03: ಪ್ರಕೃತಿ ಪರಿಸರಕ್ಕೆ ವಿರೋಧವಾಗಿ ವರ್ತಿಸಿದಲ್ಲಿ ಪ್ರಾಣಿ ಸಂಕುಲದ ಅವನತಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಮಾಮಿ ಕಾವೇರಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಡೆದ 184ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು. ನಾಗಾಲೋಟದ ಅಭಿವೃದ್ಧಿ ನಡುವೆ ಪ್ರಕೃತಿ ಉಳಿಸಿ ನಾಡನ್ನು ಬೆಳೆಸುವ ಕೆಲಸ ಆಗಬೇಕು. ಅಭಿವೃದ್ಧಿ ಜೊತೆಗೆ ಪ್ರಕೃತಿ ಸಂರಕ್ಷಣೆ ಮಾಡುವ ಕಾರ್ಯ ನಿರಂತರವಾಗಿರಬೇಕು. ಪ್ರತಿಯೊಬ್ಬರೂ ಜಲಮೂಲಗಳ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಸೋಮನಾಥನಂದ ಗಿರಿ ಸ್ವಾಮೀಜಿ ಮಾತನಾಡಿ ಪ್ರಸಕ್ತ ಕಾವೇರಿ ತನ್ನ ಒಡಲಲ್ಲಿ ಕಲುಷಿತವನ್ನು ಹೊತ್ತು ಹರಿಯುವ ದುಸ್ಥಿತಿಗೆ ಬರುವಂತಾಗಿದೆ. ಪ್ರತಿಯೊಬ್ಬರಲ್ಲಿ ನದಿ ಸಂರಕ್ಷಣೆಯ ಪರಿಜ್ಞಾನ ಇರಬೇಕು ಎಂದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಸುತ್ತೂರು ಕ್ಷೇತ್ರಗಳ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ…
ಮಡಿಕೇರಿ NEWS DESK ಏ.3 : ಕೊಡವ ಕುಟುಂಬಗಳ ನಡುವೆ ಆಯೋಜಿತ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ 2026’ ಕ್ಕೆ ವಿದ್ಯುಕ್ತ ಚಾಲನೆ ದೊರೆತ್ತಿದೆ. ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಚೆಪ್ಪುಡಿರ ಅರುಣ್ ಮಾಚಯ್ಯ, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕ್ರೀಡಾಕೂಟದ ಅಧ್ಯಕ್ಷ ಮುಕ್ಕಾಟಿರ ಸುರೇಶ್ ಪೆಮ್ಮಯ್ಯ ಮತ್ತಿತರ ಗಣ್ಯರು ಕೊಡವ ಕ್ರಿಕೆಟ್ ಅಸೋಷಿಯೇಷನ್ ನ ಧ್ವಜಾರೋಹಣ ನೆರವೇರಿಸಿದರು. ಅಸೋಸಿಯೇಷನ್ ಅಧ್ಯಕ್ಷ ಕೀತಿಯಂಡ ಕಾರ್ಸನ್ ಕಾರ್ಯಪ್ಪ ಅವರು ಬೆಳ್ಳಿಯ ಬ್ಯಾಟ್ನಿಂದ ಬಾಲ್ ಅನ್ನು ಹೊಡೆಯುವ ಮೂಲಕ ಪ್ರತಿಷ್ಠಿತ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಗೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಅವರು ಕೇಂದ್ರ ಸರಕಾರ ಗುರುತು ಮಾಡಿರುವ ದೇಶದ 10 ಕ್ರೀಡಾ ಜಿಲ್ಲೆಗಳ ಪೈಕಿ…
ಮಡಿಕೇರಿ ಏ.2 NEWS DESK : 2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಏಪ್ರಿಲ್, 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಮೌಲನಾ ಆಜಾದ್ ಮಾದರಿ ಶಾಲೆ, ಜಿಎಂಪಿ ಶಾಲೆ ಕ್ಯಾಂಪಸ್, ಕೆನರಾ ಬ್ಯಾಂಕ್ ಮುಂಭಾಗ ಬಿ.ಎಂ.ರೋಡ್ ಕುಶಾಲನಗರ ಇಲ್ಲಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ ತಿಂಗಳ ಮೊದಲನೇ ವಾರ ಪ್ರವೇಶ ಪತ್ರಗಳನ್ನು https://dom.karnataka.gov.in ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿ ಅಥವಾ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ ಮತ್ತು ತಾಲ್ಲೂಕು ಕಚೇರಿಗಳು ಹಾಗೂ ಸಂಬಂಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರುಗಳನ್ನು ಸಂಪರ್ಕಿಸಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-225528/220214/ 9972799091…
ಮಡಿಕೇರಿ ಏ.2 NEWS DESK : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿರುವ ಶ್ರೀ ತಲಕಾವೇರಿ ದೇವಾಲಯದಲ್ಲಿ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಏಪ್ರಿಲ್, 10 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಏಪ್ರಿಲ್, 10 ರಂದು ಬೆಳಗ್ಗೆ 9 ಗಂಟೆಯಿಂದ ಗಣಪತಿ ಹೋಮ, ಪುಣ್ಯಾಹ, ಅಗಸ್ತ್ಯೇಶ್ವರ ಸಾನಿಧ್ಯದಲ್ಲಿ ಕಳಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಕಾವೇರಿ ಅಮ್ಮನವರಿಗೆ ಸಂಪ್ರೋಕ್ಷಣೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ಕೋರಿದ್ದಾರೆ.
ಮಡಿಕೇರಿ ಏ.2 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್, 08 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಕಾರ್ಕಳ ಏ.2 NEWS DESK : ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ಮೂರು ದಿನಗಳ ಬೇಸಿಗೆ ಶಿಬಿರಕ್ಕೆ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್ .ಎಲ್. ಅವರು, ನಾಲ್ಕು ಗೋಡೆಗಳ ಮಧ್ಯೆ ನಡೆಯುವಪಾಠ ಪ್ರವಚನಗಳಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯಬೇಕು. ಮಕ್ಕಳು ತಮ್ಮ ಸುಂದರ ಬಾಲ್ಯವನ್ನು ಮೊಬೈಲ್ ನಿಂದ ದೂರವಿದ್ದು ತಮ್ಮ ಬದುಕನ್ನು ಸವಿಯಬೇಕೆಂಬ ಸದಾಶಯವನ್ನಿಟ್ಟುಕೊಂಡು ಈ ಚಿಲಿಪಿಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ. ಮಾತ್ರವಲ್ಲದೆ ಕ್ರಿಯೇಟಿವ್ ಸಂಸ್ಥೆಯ ಹೊಸ ಪರಿಕಲ್ಪನೆಯಾದ ಎಳೆಯ ಮನಸ್ಸುಗಳಿಗೆ ಮುಂದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಮತ್ತು ನಮ್ಮ ಸಂಸ್ಕೃತಿ, ದೇಶಾಭಿಮಾನವನ್ನು ಹೊಂದಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲನ್ನು ಪ್ರಾರಂಭಿಸುತ್ತಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಇಂದು ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ನುಡಿದರು. ಸಹ ಸಂಸ್ಥಾಪಕರಲ್ಲಿ ಓರ್ವರಾದ ಡಾ.ಗಣನಾಥ…
ವಿರಾಜಪೇಟೆ ಏ.2 NEWS DESK : ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಡ ಕೂಲಿ ಕಾರ್ಮಿಕ ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡುತ್ತಿರುವುದರಿಂದ ಬಡ ಕುಟುಂಬಗಳಿಗೆ ಸರಕಾರದ ಪಡಿತರ ಸೌಲಭ್ಯಗಳು ದೊರಕುತ್ತಿಲ್ಲ. ತಕ್ಷಣವೇ ಸರಕಾರ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ [ಮಾರ್ಕ್ಸ್ವಾದಿ] ವಿರಾಜಪೇಟೆ ನಗರ ಸಮಿತಿ ಆಗ್ರಹಿಸಿದೆ. ವಿರಾಜಪೇಟೆ ವಿರಾಜಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಪ್ರವೀಣ್ ಕುಮಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭ ಸಿ.ಪಿ.ಐ.ಎಂ. ಪಕ್ಷದ ಜಿಲ್ಲಾ ಸಮಿತಿಯ ಎ.ಸಿ. ಸಾಬು ಅವರು ಮಾತನಾಡಿ, ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯ ಸರಕಾರ ಬಡ ಕೂಲಿ ಕಾರ್ಮಿಕರ ಪಡಿತರ ಸೌಲಭ್ಯವನ್ನು ರದ್ದು ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿ 7,76 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಆಹಾರ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ 3 ಲಕ್ಷದ 65 ಸಾವಿರ ಪಡಿತರ…






