ಲೇಖಕ: admin

ಮಡಿಕೇರಿ ಜ.8 NEWS DESK : K SHIP – 4 ಯೋಜನೆಯಡಿಯಲ್ಲಿ ಮಡಿಕೇರಿ – ದೋಣಿಗಲ್ (NH 75) ರಸ್ತೆ ಅಭಿವೃದ್ಧಿಗೆ ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವ ಪ್ರಕ್ರಿಯೆಗಳ ತಾಂತ್ರಿಕ ಕಾರ್ಯಗಳು ಪ್ರಾರಂಭಗೊಂಡಿದೆ.  ಡಿಪಿಆರ್ ಸಿದ್ಧಪಡಿಸುವ ನಿಟ್ಟಿನಲ್ಲಿ ಈಗಾಗಲೇ 7 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಂಗಳೂರಿನ ಶಾಸಕರ ಭವನದ ಶಾಸಕರ ಕಚೇರಿಯಲ್ಲಿ ಡಿಪಿಆರ್ (DPR) ಸಂಬಂಧಿಸಿದಂತೆ ಕಂಪನಿಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಈ ರಸ್ತೆಯಿಂದ ಕೊಡಗಿನ ಜನತೆಗೆ ಹಾಗೂ ವಾಣಿಜ್ಯೋದ್ಯಮ, ನೂತನ ಕೈಗಾರಿಕೆಗಳು, ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.

Read More

ಕುಶಾಲನಗರ ಜ.8 NEWS DESK :  ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕರ ಸಂಘದ 1ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾಸಭೆ ನಡೆಯಿತು. ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸೌಂದರ್ಯ ವರ್ಧಕರು ಉತ್ತಮ ಗುಣಮಟ್ಟದ ಸೇವೆಯನ್ನು ಗ್ರಾಹಕರಿಗೆ ಒದಗಿಸಬೇಕು. ಒಗ್ಗಟ್ಟಿನಿಂದ ಸಂಘಟನೆ ಮೂಲಕ ತಮ್ಮ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡು ಹಿಡಿಯುವಂತಾಗಬೇಕು. ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸುವ ಮೂಲಕ ತಮ್ಮ ಅಭಿವೃದ್ಧಿ ಕಾಣುವಂತಾಗಬೇಕು ಎಂದರು. ಈ ಸಂಬಂಧ ತಾನು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ವ್ಯಕ್ತಪಡಿಸಿದರು. ಜಿಲ್ಲಾ ಬ್ಯೂಟಿಷಿಯನ್ ಅಸೋಸಿಯೇಷನ್ ಅಧ್ಯಕ್ಷರಾದ ರತ್ನ ಯತೀಶ್ ಅವರು ಮಾತನಾಡಿ ಸಂಘದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಶಾರದಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಾಂತ ಶ್ರೀಪತಿ ಅವರು ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲವಾಗಬೇಕು ಈ ನಿಟ್ಟಿನಲ್ಲಿ…

Read More

ಸುಂಟಿಕೊಪ್ಪ ಜ.8 NEWS DESK : ಕೊಡಗು ಪ್ರವಾಸಿಗಾರ ತಾಣವಾಗಿದ್ದು ಇಲ್ಲಿ ಬಂದು ಹೋಗುವ ಪ್ರವಾಸಿಗಾರನ್ನು ಹಾಗೂ ಸ್ಥಳೀಯವಾಗಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಆಟೋ ಚಾಲಕರು ಜೀವಂತ ಸಿಸಿಕ್ಯಾಮರವಿದ್ದಂತೆ ಅವರ ಬಗ್ಗೆ ನಿಖರ ಮಾಹಿತಿಗಳನ್ನು ನಿಮ್ಮಿಂದ ಮಾತ್ರ ಪಡೆಯಲು ಸಾಧ್ಯವೆಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ದಿನೇಶ್ ಕುಮಾರ್ ಬಾರಿಕೆ ಅಭಿಪ್ರಾಯ ವ್ಯಕ್ತಪಡಿಸಿದರು.  ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಡೆದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ದಿನೇಶ್ ಕುಮಾರ್ ಅವರು, ವಾಹನ ಚಾಲನೆಯ  ಸಂದರ್ಭ ಚಾಲನಾ ಪರವನಾಗಿ, ವಾಹನ ವಿಮೆ, ವಾಹನಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಯಾಕೆಂದರೆ ಅಪಘಾತಗಳು ಸಂಭವಿಸಿದಾಗ ದಾಖಲಾತಿ ಹೊಂದಿಲ್ಲದೆ ಇರುವ ಸಂದರ್ಭ ವಾಹನಗಳ ಮಾಲೀಕರಿಗೆ ದುಪ್ಪಟ್ಟು ದಂಡ ಅಥವಾ ಜೀವನ ಪರ್ಯಂತ ಜೈಲು ಶಿಕ್ಷೆ ಅಥವಾ ದಂಡಕ್ಕೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು. ಆದುರಿಂದ ಪ್ರತಿಯೊಬ್ಬ ಚಾಲಕರು ವಾಹನಗಳ…

Read More

ನಾಪೋಕ್ಲು ಜ.8 NEWS DESK : ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡರು. ಮೂರ್ನಾಡು ಪ್ರೌಢಶಾಲೆಯ ಆಟದ ಮೈದಾನದಲ್ಲಿ ಚೆನಂಡ ಕುಟುಂಬಸ್ಥರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 5-1 ಗೋಲುಗಳ ಅಂತರದಿಂದ ಜಯಗಳಿಸಿ ಪ್ರಶಸ್ತಿಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ . – ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಜ.8 NEWS DESK : ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅನೀಮಿಯ ಕಾರ್ಯಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಜಿಲ್ಲಾ ಆರೋಗ್ಯ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾದ ಶಿಬಿರದಲ್ಲಿ ಮಕ್ಕಳ ರಕ್ತ ಹೀನತೆ, ಅಪೌಷ್ಟಿಕತೆಯ ತಪಾಸಣೆ ನಡೆಸಲಾಯಿತು. ಶಿಬಿರದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇರುವ ಮಕ್ಕಳಿಗೆ ಔಷಧಿಗಳನ್ನು ವಿತರಿಸಲಾಯಿತು. ಐದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿ, ಸರಿಯಾದ ಸಮಯಕ್ಕೆ ಅನೀಮಿಯ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಪೋಷಕರಿಗೆ ತಿಳಿಸಿದರು. ಅಂಗನವಾಡಿ ಕೇಂದ್ರಕ್ಕೆ ಒಳಪಡುವ ಐದು ವರ್ಷದೊಳಗಿನ ಮಕ್ಕಳನ್ನು ಪೋಷಕರು ಕರೆತಂದು ಆರೋಗ್ಯ ತಪಾಸಣೆ ನಡೆಸಿ ಶಿಬಿರದ ಪ್ರಯೋಜನ ಪಡೆದುಕೊಂಡರು ಶಿಬಿರದಲ್ಲಿ ಆರ್ ಬಿ ಎಸ್ ಕೆ ತಂಡದ ವೈದ್ಯಾಧಿಕಾರಿ ದ ಶೈಮಾ, ಶುಶ್ರೂಷಕಿ ಮಮತಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಈ ಸಂದರ್ಭ ಬೇತು ಅಂಗನವಾಡಿ ಕೇಂದ್ರದ ಕಾರ್ಯಕರ್ತ ಆಶಾ ಅಪ್ಪಣ್ಣ, ಸಹಾಯಕ ಲೀಲಾವತಿ ,ಆಶಾ ಕಾರ್ಯಕರ್ತೆಯರಾದ…

Read More

ಮಡಿಕೇರಿ ಜ.7 NEWS DESK : ಕೇರಳದ ಬೈತೂರಿನ ಉತ್ಸವಕ್ಕೆ ಕೊಡಗಿನ ಭಕ್ತ ಜನರನ್ನು ಆಹ್ವಾನಿಸಲು ಬೈತೂರು ದೇವಾಲಯದಿಂದ ಕೋಮರತಚ್ಚನ್ ಕೊಡಗು ಜಿಲ್ಲೆಗೆ ಆಗಮಿಸಿದ್ದಾರೆ. ಜ.7 ರಂದು ಮಡಿಕೇರಿಯ  ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಜಿಲ್ಲಾಧಿಕಾರಿಗಳನ್ನು ಕೂಡ ಭೇಟಿಯಾದರು. ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ಮತ್ತಿತರರು ಉಪಸ್ಥಿತರಿದ್ದರು. ಜ.9 ರವರೆಗೆ ಕೊಡಗಿನ ವಿವಿಧ ದೇವಾಲಯಗಳು ಹಾಗೂ ಐನ್ ಮನೆಗೆ ಭೇಟಿ ನೀಡಲಿದ್ದಾರೆ.

Read More

ಮಡಿಕೇರಿ ಜ.7 NEWS DESK : ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಇ-ಖಾತಾ, ಬಿ-ಖಾತಾ ಸೃಜಿಸುವುದು ಸರ್ಕಾರ ಕಡ್ಡಾಯಗೊಳಿಸಿದಂತೆ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಮಾಲೀಕರುಗಳು ಆಸ್ತಿಯ ಮಾಲೀಕತ್ವದ ದಾಖಲೆಗಳನ್ನು ನಗರಸಭೆಗೆ ಸಲ್ಲಿಸಿ ಇ-ಖಾತಾ ಪಡೆದುಕೊಳ್ಳಲು ಪತ್ರಿಕಾ ಪ್ರಕಟಣೆ, ಆಟೋ ಪ್ರಚಾರ, ನಗರದ ಪ್ರಮುಖ ಸ್ಥಳಗಳಲ್ಲಿ ಇ-ಖಾತಾ, ಬಿ-ಖಾತಾ ಪಡೆಯುವ ಬಗ್ಗೆ ಮತ್ತು ಇ-ಖಾತಾ, ಬಿ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳ ವಿವರ ಇರುವ ಪ್ಲೇಕ್ಸ್‍ಗಳ ಅಳವಡಿಕೆ ಮತ್ತು ಸ್ಥಳೀಯ ಚಾನೆಲ್‍ಗಳಲ್ಲಿ ಸುದ್ದಿಯಾಗಿ ಪ್ರಚಾರ ಹಾಗೂ ನಗರಸಭೆ ಸಿಬ್ಬಂದಿಗಳು ಪ್ರತಿ ವಾರ್ಡ್, ಪ್ರತಿ ಮನೆಗೆ ಖುದ್ದಾಗಿ ಭೇಟಿ ನೀಡಿ ಇ-ಖಾತಾ ಮಾಡಿಸಿಕೊಳ್ಳದೆ ಇರುವವರಿಗೆ ದಾಖಲೆ ನೀಡಿ ಇ-ಖಾತಾ ಪಡೆಯಲು ತಿಳಿಸಿ ದಾಖಲೆ ನೀಡಿದವರಿಗೆ ಇ-ಖಾತಾ ಸೃಜಿಸಿ ನೀಡುವ ಕೆಲಸವನ್ನು ನಗರಸಭೆಯಿಂದ ಕೈಗೊಂಡಿದ್ದಾರೆ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಲ್ಲಿ ಇನ್ನೂ ಕೂಡ 3036 ಆಸ್ತಿಯ ಮಾಲೀಕರುಗಳು ಇ-ಖಾತಾ, ಬಿ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳನ್ನು ಆಸ್ತಿತೆರಿಗೆ…

Read More

ಮಡಿಕೇರಿ ಜ.7 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆಸಿಟಿಯು), ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್), ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ರೈಸಿಂಗ್ ಅಂಡ್ ಎಕ್ಸಲರೇಟಿಂಗ್ ಎಂಎಸ್‍ಎಂಇ ಫರ್‍ಫಾರ್ಮೆನ್ಸ್ (ರ್ಯಾಂಪ್) ರಡಿ ಜೀರೋ ಡಿಪೆಕ್ಟ್ ಅಂಡ್ ಜೀರೋ ಇಪೆಕ್ಟ್  ಮತ್ತು ಎಲ್‍ಇಎಎನ್ ಯೋಜನೆ ಕುರಿತು  ಕುಶಾಲನಗರದ ಪಾಳ್ಯಂ ಎಮರಾಲ್ಡ್ ಸಭಾಂಗಣದಲ್ಲಿ ಎಂಎಸ್‍ಎಂಇ ಉದ್ದಿಮೆದಾರರಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಕುಶಾಲನಗರ ಕೂಡ್ಲೂರು ಕೈಗಾರಿಕಾ ಪ್ರದೇಶದ ಉದ್ದಿಮೆದಾರರ ಸಂಘದ ಅಧ್ಯಕ್ಷರಾದ ಪ್ರವೀಣ್ ಎ.ಎನ್.ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್. ನಾಗೇಂದ್ರಪ್ರಸಾದ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಬೆಂಗಳೂರು ಟೆಕ್ಸಾಕ್ ಮುಖ್ಯ ಸಲಹೆಗಾರರು ಹಾಗೂ ಸಿಇಒ ಸಿದ್ದರಾಜು ಅವರು ರ್ಯಾಂಪ್ ಯೋಜನೆಯ ಬಗ್ಗೆ ಪ್ರಸ್ತಾವಿಕ ಭಾಷಣವನ್ನು  ಮಾಡಿದರು. ಸಭೆಯಲ್ಲಿ ಮುಖ್ಯ ಅಥಿತಿಗಳಾಗಿ ಜಿಲ್ಲಾ ಕೈಗಾರಿಕಾ…

Read More

ಮೈಸೂರು ಜ.7 NEWS DESK : ಸಾರ್ವಜನಿಕರ ಸಮಸ್ಯೆಗಳು/ಅಹವಾಲುಗಳನ್ನು ಸ್ವೀಕರಿಸುವುದು ಮಾತ್ರವಲ್ಲ, ಅದಕ್ಕೆ ಪರಿಹಾರ ಕೊಡುವುದಕ್ಕೆ ಕೂಡ ನಾನು ಆದ್ಯತೆ ನೀಡುತ್ತೇನೆ. ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದ ಲಕ್ಷ್ಮಿದೇವಿ ಆವರಣದಲ್ಲಿ, ಬೆಲವತ್ತ ಗ್ರಾಮದ ಸಮುದಾಯ ಭವನದಲ್ಲಿ, ಆಲನಹಳ್ಳಿಯ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜನ ಸಂಪರ್ಕ ಸಭೆ ನಡೆಸಿದ ನಂತರ ಸಂಸದರು ಮಾಹಿತಿ ನೀಡಿದ್ದಾರೆ. “ಜನ ಸಂಪರ್ಕ ಸಭೆಗಳು ಮೂಲಕ ಜನರೊಂದಿಗೆ ನಂಟು ಬೆಳೆಯಲು ಅವರ ಸಮಸ್ಯೆಗಳನ್ನು ಖುದ್ದಾಗಿ ತಿಳಿಯಲು ಅನುಕೂಲವಾಗಲಿದೆ ಎಂದರು. ಪ್ರತಿ ಪಂಚಾಯತ್‌ಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುವುದಲ್ಲದೆ ಅವುಗಳನ್ನು ತ್ವರಿತವಾಗಿ ಪರಿಹರಿಸಲು ಆದ್ಯತೆ ನೀಡುತ್ತೇವೆ. ರೈಲ್ವೆ, ರಸ್ತೆ ಮತ್ತು ಶಾಲಾ ಅಭಿವೃದ್ಧಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸಮಸ್ಯೆಗಳ ಬಗ್ಗೆ ನನಗೆ ಹಲವಾರು ಅಹವಾಲುಗಳು ಸಲ್ಲಿಕೆಯಾಗಿದೆ. ಅದೆಲ್ಲವನ್ನು ಬಗೆಹರಿಸಲು ಮುಂದಾಗುತ್ತೇನೆ, ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ…

Read More

ಮಡಿಕೇರಿ ಜ.6 NEWS DESK : ನಾಗರಿಕ ಸುರಕ್ಷೆ ಮತ್ತು ಸಂಭಾವ್ಯ ಉಗ್ರ ಕೃತ್ಯಗಳನ್ನು ಪತ್ತೆ ಹಚ್ಚುವ ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಮಡಿಕೇರಿಯ ಬಸ್ ನಿಲ್ದಾಣ, ನ್ಯಾಯಾಲಯ ಮತ್ತು ಇತರ ಕಚೇರಿಗಳಲ್ಲಿ ಜಿಲ್ಲಾ ಪೊಲೀಸ್ ಘಟಕದ ಸ್ಫೋಟಕ ಪತ್ತೆ ದಳದಿಂದ ಸ್ಫೋಟಕ ಪತ್ತೆ ಕಾರ್ಯವನ್ನು ನಡೆಸಲಾಯಿತು.

Read More