ಲೇಖಕ: admin

ಚೆಟ್ಟಳ್ಳಿ ಡಿ.17 NEWS DESK : ಪುತ್ತರಿ ನಮ್ಮೆಯ ಪ್ರಯುಕ್ತ ಚೆಟ್ಟಳ್ಳಿಯ ಶ್ರೀಮಂಗಲ ಶ್ರೀ ಭಗವತಿ ದೇವಾಲಯದಲ್ಲಿ ಊರಿನ ಹಿರಿಯರು ದುಡಿಕೊಟ್ಟ್ ‌ಪಾಟ್ ನೆರವೇರಿಸಿದರು. ಪುರಾತನ ಸಂಪ್ರದಾಯದಂತೆ‌ ಪುತ್ತರಿ ಪೌವುದ್ ನಡೆದ ಮಾರನೆಯ ದಿನ ಜೋಯಿ ಚೂಳೆ, ಮನೆ ಪಾಟ್ ನಡೆಯುತ್ತದೆ. ಊರಿನ‌ ಭಗವತಿ ದೇವಿಯನ್ನು ಹಾಡುವ ಸಂಪ್ರದಾಯದಂತೆ ಈ ಬಾರಿಯೂ‌ ಸಂಜೆ‌ ಊರಿನ‌ ಹಿರಿಯರು ಸೇರಿ ಸಂಪ್ರದಾಯವನ್ನು ನಡೆಸಿದರು. ನಂತರ ಪ್ರಸಾದ ವಿತರಣೆ ನೆರವೇರಿತು.

Read More

ಮಡಿಕೇರಿ ಡಿ.17 NEWS DESK : ಸಂಪೂರ್ಣವಾಗಿ ಹದಗೆಟ್ಟಿರುವ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ರಸ್ತೆಯನ್ನು ಡಾಂಬರೀಕರಣಗೊಳಿಸಬೇಕೆಂದು ಒತ್ತಾಯಿಸಿ ಡಿ.18 ರಂದು ಗಾಳಿಬೀಡು, ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ ಹಾಗೂ ಹೆಬ್ಬೆಟ್ಟಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಗಾಳಿಬೀಡು ಗ್ರಾಮದ ಪ್ರಮುಖ ಪಾಂಡೀರ ಸುಬ್ರಮಣಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ಬೆಳಿಗ್ಗೆ 10ಗಂಟೆಗೆ ಮೂರನೇ ಮೈಲು ಜಂಕ್ಷನ್ ಬಳಿ ಪ್ರತಿಭಟನೆ ನಡೆಯಲಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಲಿಖಿತ ಭರವಸೆ ನೀಡುವಲ್ಲಿಯವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದರು. ಗಾಳಿಬೀಡು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ ಹಲವು ವರ್ಷಗಳಿಂದ ಡಾಂಬರೀಕರಣವಾಗಿಲ್ಲ. ಹೊಂಡ ಗುಂಡಿಗಳಿಂದ ಕೂಡಿರುವ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾತ್ರ ನಡೆಯುತ್ತಿದೆ. ಈಗಲೂ ತೇಪೆ ಹಾಕುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಹದಗೆಟ್ಟ ರಸ್ತೆ ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ, ಹೆಬ್ಬೆಟ್ಟಗೇರಿ, ಪ್ರಾಕೃತಿಕ ವಿಕೋಪದ ನೆರೆ ಸಂತ್ರಸ್ಥರ ಮನೆಗಳಿಗೆ ಹಾಗೂ ಮಡಿಕೇರಿ ನಗರವನ್ನು ಸಂಪರ್ಕಿಸುವ…

Read More

ಕುಶಾಲನಗರ ಡಿ.17 NEWS DESK :  ಕೊಡಗಿನ ಸೈನಿಕ ಶಾಲೆಯಲ್ಲಿ 28ನೇ ಸ್ಥಳೀಯ ಆಡಳಿತ ಮಂಡಳಿ (ಎಲ್‌.ಬಿ.ಎ) ಸಭೆ ನಡೆಯಿತು. ಶಾಲೆಯ ಸಭಾಂಗಣದಲ್ಲಿ  ನಡೆದ ಸಭೆಯಲ್ಲಿ ಶಾಲೆಯು ಮುಂದಿನ ದಿನಗಳಲ್ಲಿ ಹೊಂದಬೇಕಾದ ಬೆಳವಣಿಗೆ ಮತ್ತು ಅಭಿವೃದ್ಧಿಯ ಗುರಿಯನ್ನು ನಿರ್ಧರಿಸಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಹಿರಿಯ ಅಧಿಕಾರಿ-ಪ್ರಭಾರ ಆಡಳಿತ, ತರಬೇತಿ ಕಮಾಂಡ್, ಬೆಂಗಳೂರು ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿ-ಪ್ರಭಾರ ಆಡಳಿತ, ತರಬೇತಿ ಕಮಾಂಡ್ ಏರ್ ವೈಸ್ ಮಾರ್ಷಲ್ ಪಿ.ಸಿ.ಪಿ.ಆನಂದ್, ವಿ ಎಸ್‌ ಎಂ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕಾರಣಕರ್ತರಾದ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ಅಭೂತಪೂರ್ವವಾದ ಆರ್ಥಿಕ ಬೆಂಬಲವನ್ನು ಸ್ಮರಿಸುತ್ತಾ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಎಸ್‌ ಎಸ್‌ ಬಿ ತರಬೇತಿಯ ಕುರಿತು ಶಾಲೆಯು ಹೊಂದಿರುವ ನಿಖರವಾದ ಮಾರ್ಗವನ್ನು ಪ್ರಶಂಸಿಸಿದರು. ಇದರೊಂದಿಗೆ ಶಾಲೆಯು ಹೊಂದಿರುವ ಶೈಕ್ಷಣಿಕ, ಕ್ರೀಡೆ, ಸಹಪಠ್ಯ ಚಟುವಟಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಶಾಲೆಯ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು. ಜೊತೆಗೆ ಶಾಲೆಯ ಸಿಬ್ಬಂದಿ ಮತ್ತು…

Read More

ನಾಪೋಕ್ಲು ಡಿ.17 NEWS DESK : ಮೂರ್ನಾಡಿನ ಆಪ್ತಮಿತ್ರ ಬಳಗದ ವತಿಯಿಂದ ಫೆ.8 ರಂದು ಮೂರ್ನಾಡಿನಲ್ಲಿ ನಡೆಯುವ ಎರಡನೇ ವರ್ಷದ ಯಕ್ಷೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಮೂರ್ನಾಡು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಯ ಕುರಿತು ಚರ್ಚಿಸಲಾಯಿತು. ಅಂದು ಸಂಜೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಹನುಮಗಿರಿ ಮೇಳದವರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಗ್ರಾಮಸ್ಥರ ಸಹಕಾರ ಕೋರಲಾಯಿತು. ಈ ಸಂದರ್ಭ ಆಪ್ತಮಿತ್ರ ಬಳಗದ ಸದಸ್ಯರುಗಳಾದ ಕುಶನ್ ರೈ, ವಿಶ್ವನಾಥ್, ಜಯಂತ್, ಪುರುಷೋತ್ತಮ್, ಗಿರೀಶ್ ರೈ, ಚಿನ್ನು, ಅಶ್ವತ್ ರೈ, ಚಂದನ್, ಪುರುಷೋತ್ತಮ್ ಕುಲಾಲ್, ಸಜೀವ, ಮೋಹನ್, ಜಿತಿನ್, ವಿನಯ್, ಚಂದ್ರಶೇಖರ್ ಹೊದ್ದೂರು, ಚಂದ್ರಶೇಖರ್ ಕುಲಾಲ್, ತನ್ಮಯ್, ಧ್ಯಾನಿಕ್, ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಡಿ.17 NEWS DESK : ನರಿಯಂದಡ ಗ್ರಾಮದ ಎಡಪಾಲಕೇರಿ ಅಯ್ಯಪ್ಪ ದೇವಾಲಯದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ, ಮಹಾಪೂಜೆ, ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು. ಹಲವು ವ್ರತದಾರಿ ಅಯ್ಯಪ್ಪ ಭಕ್ತರು ದೇವರನ್ನು ಸ್ತುತಿಸಿ ಹಾಡಿ ತಮ್ಮ ಸೇವೆಯನ್ನು ನೆರವೇರಿಸಿದರು. ಭಕ್ತಾದಿಗಳು ವಿಶೇಷ ಹರಕೆ, ಸೇವೆಗಳನ್ನು ಸಮರ್ಪಿಸಿದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಅಯ್ಯಪ್ಪ ದೇವಾಲಯದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್, ಕಾರ್ಯದರ್ಶಿ ಪೊಕ್ಕುಳಂಡ್ರ ಅಭಿಲಾಷ್, ಉಪಾಧ್ಯಕ್ಷ ಪೊಕ್ಕುಳಂಡ್ರ ಸೂರಜ್, ಗೌರವ ಅಧ್ಯಕ್ಷ ತೋಟಂಬೈಲ್ ಅನಂತ್ ಕುಮಾರ್, ಆಡಳಿತ ಮಂಡಳಿ ಸದಸ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಹಬ್ಬದ ಪ್ರಯುಕ್ತ ದೇವಾಲಯದ ಆವರಣ ವಿಶೇಷ ಅಲಂಕಾರದಿಂದ ಕಂಗೊಳಿಸುತ್ತಿತ್ತು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಡಿ.17 NEWS DESK : ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಆಳ್ವಾರ್ ಶಿಕ್ಷಣ ಸಂಸ್ಥೆಯಲ್ಲಿ ಡಿ.10 ರಿಂದ 15 ರವರೆಗೆ 6 ದಿನಗಳ ಕಾಲ ನಡೆದ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಶಿಬಿರದಲ್ಲಿ ಕೊಡಗು ಜಿಲ್ಲೆಯಿಂದ ನಾಪೋಕ್ಲು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕಿ ಸುಸ್ಮಿತ ದಳ ನಾಯಕಿಯಾಗಿ ಭಾಗವಹಿಸಿದ್ದರು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಈ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆಯ ಪಿ.ಆರ್.ಒ.ಆದ ಸ್ಕೌಟ್ಸ್ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ.ಪ್ರೇಮಕುಮಾರ್ ಭಾಗವಹಿಸಿದ್ದರು. ಶಿಬಿರದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಗೈಡ್ಸ್ ಕ್ಯಾಪ್ಟನ್ ಸುಶ್ಮಿತ, ಸ್ಕೌಟ್ಸ್ ವಿಭಾಗದಿಂದ ಲಿತೇಶ್, ಮನ್ವಿತ್, ಪ್ರೀತೇಶ್, ಗೌತಮ್, ಕಾರ್ತಿಕ್ ಹಾಗೂ ಗೈಡ್ಸ್ ವಿಭಾಗದಿಂದ ತೀರ್ಥ, ಅದಿತಿ, ಪ್ರಿಯನ್ಸಿ, ಅನುಶ್ರೇಯ,…

Read More

ಪುತ್ತೂರು ಡಿ.17 NEWS DESK : ಕಲಿಕೆಯ ಜತೆಯಲ್ಲಿ ಉದ್ಯೋಗಕ್ಕೋ, ಉದ್ಯಮಕ್ಕೋ ಪೂರಕವಾದ ಕೌಶಲ್ಯವನ್ನು ಹೊಂದಿದ್ದರೆ ಮಾತ್ರ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ಅಸ್ತಿತ್ವವನ್ನು ತೋರಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಬಂಟ್ವಾಳ ತಾಲೂಕಿನ ಪೇರಮೊಗರುವಿನಲ್ಲಿರುವ ಜಿಕೆ ಇಂಡಸ್ಟ್ರೀಸ್‍ನ ಮಾಲೀಕ ಅಜಯ್ ಕೃಷ್ಣ.ಕೆ ಸಲಹೆ ನೀಡಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತಾಡಿದರು. ಮೊದಲಿಗೆ ಗುರಿಯನ್ನು ನಿರ್ಧರಿಸಿ ಅದಕ್ಕೆ ಬೇಕಾದ ತಾಂತ್ರಿಕತೆ, ಸಂವಹನ, ಸಮಯ ನಿರ್ವಹನೆ, ಸೃಜನಶಿಲತೆಯನ್ನು ಬೆಳೆಸಿಕೊಂಡು ಅದನ್ನು ಬೇಕಾದ ಕಡೆ ಪ್ರದರ್ಶಿಸುವ ಸಾಮರ್ಥ್ಯವನ್ನು ಗಳಿಸಿಕೊಂಡರೆ ಉನ್ನತ ಸ್ಥಾನಕ್ಕೆ ಏರುವುದು ಕಷ್ಟವೇನಲ್ಲ ಎಂದು ನುಡಿದರು. ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್.ಬಿ ಮಾತನಾಡಿ ವಿಸಿಇಟಿ ಯಲ್ಲಿ ಕಲಿಕೆಗಾಗಿ ಸೇರಿದ್ದೀರಿ ಅದರ ವಿಸ್ತೃತ ರೂಪ ವಿಶನ್, ಕರೇಜ್, ಎಜುಕೇಶನ್…

Read More

ವಿರಾಜಪೇಟೆ  ಡಿ.17 NEWS DESK : ತ್ರಿವೇಣಿ ಶಾಲೆಯಲ್ಲಿ  ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಎರಡನೇ ತರಗತಿಯ ಶ್ರೀನಿತ್ ಛದ್ಮವೇಷ ಸ್ಪರ್ಧೆಯಲ್ಲಿ  ದ್ವಿತೀಯ, ಮೂರನೇ ತರಗತಿಯ ಶಿಖಾ ಮುತ್ತಮ್ಮ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ಎರಡನೇ ತರಗತಿಯ ವಿ.ಆದ್ಯ  ಭಕ್ತಿಗೀತೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ರವೀಂದ್ರ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಡಿ.17 NEWS DESK : ಕೃಷಿ ಮಾಡುತ್ತಿರುವ ಸಿ ಆ್ಯಂಡ್ ಡಿ ಜಾಗಕ್ಕೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಡಿ.20ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಿರುವ ರೈತರ ಅಹೋರಾತ್ರಿ ಪ್ರತಿಭಟನೆಗೆ ಪೂರ್ವಭಾವಿ ಸಭೆ ಒಕ್ಕಲಿಗರ ಸಮುದಾಯಭವನದಲ್ಲಿ ನಡೆಯಿತು. ತಾಲ್ಲೂಕಿನ ಗ್ರಾಮಗಳಿಂದ 65 ಬಸ್‍ಗಳಲ್ಲಿ ರೈತರು ಪ್ರತಿಭಟನೆಗೆ ತೆರಳಲಿದ್ದಾರೆ. ಬೆಳಿಗ್ಗೆ 8.30ಕ್ಕೆ ಕಕ್ಕೆಹೊಳೆ ಜಂಕ್ಷನ್‍ನಿಂದ ಎಲ್ಲಾ ಬಸ್‍ಗಳು ಹೊರಡಲಿದ್ದು, ಕುಶಾಲನಗರ , ಸುಂಠಿಕೊಪ್ಪ ಮಾರ್ಗವಾಗಿ 10.30ಕ್ಕೆ ಸುದರ್ಶನ ಸರ್ಕಲ್ ತಲುಪಲಿವೆ. ಅಲ್ಲಿಂದ ಮೆರವಣಿಗೆ ನಡೆಯಲಿದ್ದು ಗಾಂಧಿ ಮೈದಾನದಲ್ಲಿ ಧರಣಿ ನಡೆಯಲಿದೆ ಎಂದು ರೈತಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು. ಹಾಲಿ, ಮಾಜಿ ಶಾಸಕರುಗಳು, ಸಂಸದರಿಗೆ ಆಹ್ವಾನ ನೀಡಲಾಗಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗು ಸಿ.ಸಿ.ಎಫ್ ಅವರುಗಳು ಧರಣಿ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಬೇಕು ಎಂದು ಹೇಳಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ರೈತ ಮುಖಂಡರಾದ ಕೆ.ಎಂ.ದಿನೇಶ್, ಕೆ.ಎಂ.ಲೋಕೇಶ್, ಎಸ್.ಬಿ.ಭರತ್ ಕುಮಾರ್, ಬಗ್ಗನ ಅನಿಲ್, ನಂದಕುಮಾರ್, ಮಿಥುನ್ ಹಾನಗಲ್, ವಿ.ಎಂ.ವಿಜಯ,…

Read More

ಮಡಿಕೇರಿ NEWS DESK ಡಿ.16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಡಿ.18ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. 15ನೇ ವಾರ್ಷಿಕ ಸಾರ್ವಜನಿಕ ಗನ್ ಕಾರ್ನಿವಲ್-ತೋಕ್ ನಮ್ಮೆಯನ್ನು ಮೂರ್ನಾಡ್ ನ ಬಲಂಬೇರಿ ರಸ್ತೆಯ ಬಳಿ ಕಡಿಯತ್ನಾಡ್ ಗಡಿರೇಖೆಯ ಸಮೀಪ ಚೇನಂಡ ಪೃಥ್ವಿ ಅವರ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್‌ ನಲ್ಲಿ ಜಾನಪದ ಸಂಭ್ರಮ ಮತ್ತು ಉತ್ಸಾಹದೊಂದಿಗೆ ಆಚರಿಸಲಾಗುತ್ತಿದೆ. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ, ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಗಳು ನಡೆಯುತ್ತವೆ. ಹೆಚ್ಚಿನ ಸಂಖ್ಯೆಯಲ್ಲಿ ಕೊಡವ, ಕೊಡವತಿ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಬಂದೂಕು ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆ, ಹಳೆಯ ಸಂಪ್ರದಾಯದ ಆಚರಣೆಗಳು ಮತ್ತು ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಮತ್ತು ಸಂರಕ್ಷಿಸಲು, ಸಿಎನ್‌ಸಿ ವಾರ್ಷಿಕವಾಗಿ ತೋಕ್ ನಮ್ಮೆ ಸಾರ್ವಜನಿಕ ಗನ್ ಕಾರ್ನಿವಲ್ ಅನ್ನು ಆಯೋಜಿಸುತ್ತದೆ. ಆದಿಮ ಸಂಜಾತ ಕೊಡವ…

Read More