ಲೇಖಕ: admin

ನಾಪೋಕ್ಲು ಡಿ.31 NEWS DESK : ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಪೋಕ್ಲುವಿನಲ್ಲಿ ಕ್ರೈಸ್ತ ಭಕ್ತಾಧಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ಸಂತ ಮೇರಿಮಾತೆಯ ದೇವಾಲಯದಲ್ಲಿ ದಿವ್ಯ ಬಲಿ ಪೂಜೆ ನಂತರ ಸಾಮೂಹಿಕವಾಗಿ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್, ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸಬಾರದು. ತಪ್ಪಿತಸ್ಥರನ್ನು ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ವರದಿ : ದುಗ್ಗಳ ಸದಾನಂದ.

Read More

ಸೋಮವಾರಪೇಟೆ ಡಿ.31 NEWS DESK : ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು  ರೈತ ಹೋರಾಟ ಸಮಿತಿ ಹಾಗೂ ರೈತಸಂಘದ ಒತ್ತಾಯಿಸಿದೆ. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಅರ್ಜಿ ಸ್ವೀಕರಿಸುವ ಕಾಲಾವಕಾಶ 31.12.2024ರಂದು ಮುಕ್ತಾಯಗೊಳ್ಳಲಿದ್ದು, ಮುಂದಿನ 3 ತಿಂಗಳ ವರಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭ ತಾಲ್ಲೂಕು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ದಿನೇಶ್, ಪ್ರಮುಖರಾದ ಅಶೋಕ್, ಆದಿತ್ಯ ಹರಗ, ಎಸ್.ಬಿ.ಭರತ್ ಕುಮಾರ್, ಯಡೂರು ಜಗದೀಶ್, ಲಿಂಗೇರಿ ರಾಜೇಶ್ ಇದ್ದರು.

Read More

ವಿರಾಜಪೇಟೆ ಡಿ.31 NEWS DESK : ಹೆಗ್ಗಳ ಗ್ರಾಮದ ಎಡಮಕ್ಕಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವವು ಎರಡು ದಿನಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.ಮುಂಜಾನೆಯಿಂದಲೇ ಶ್ರೀ ಗಣಪತಿ ಹೋಮ, ಧ್ವಜಾರೋಹಣ ಹಾಗೂ ದೀಪಾರಾಧನೆ ನಡೆಯಿತು. ಸಂಜೆ ಸಭಾ ಕಾರ್ಯಕ್ರಮ ನಡೆದು ಮಹಾಪೂಜೆಯ ಬಳಿಕ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉತ್ಸವದ ಎರಡನೆಯ ದಿವಸವು ಕೂಡ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಮುಂಜಾನೆಯಿಂದಲೇ ನಡೆದವು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಂತರ ಸಂಜೆ ದೀಪಾರಾಧನೆಯು ನಡೆದು ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಬೇಟೋಳಿ ಯಿಂದ ತಲಿಪೋಲಿ ಮೆರವಣಿಗೆಯು ಎಡಮಕ್ಕಿ ಸಾರ್ವಜನಿಕ ಮೈದಾನವರೆಗೆ ಸಾಗಿ ದೇವಸ್ಥಾನವನ್ನು ಪ್ರವೇಸಿಸಿತು. ಮಹಿಳೆಯರು ಹಾಗೂ ಮಕ್ಕಳು ದೀಪವನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ನಂತರ ಮಹಾಪೂಜೆ ನಡೆದು ತಾಯಂಭಗಂ ಸೇವೆಯು ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಸೇವೆ ಜರುಗಿತು. ಅಯ್ಯಪ್ಪ ಮಾಲಾ ವೃತಾಧಾರಿಗಳಿಂದ ಭಜನೆ ನಡೆಯಿತು.…

Read More

ವಿರಾಜಪೇಟೆ ಡಿ.31 NEWS DESK : ಭರತನಾಟ್ಯ ಕ್ಷೇತ್ರದ ಸಾಧನೆಗಾಗಿ ಕರುನಾಡ ಭೂಷಣ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ವಿದ್ಯಾರ್ಥಿನಿ ಆಕಾಂಕ್ಷ ಭಾಜನಾಲಾಗಿದ್ದಾಳೆ.  ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ವತಿಯಿಂದ ಬೆಂಗಳೂರಿನ ಕನ್ನಡ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಭರತನಾಟ್ಯದಲ್ಲಿ ಬಹುಮುಖ ಪ್ರತಿಭೆಯಾಗಿರುವ ಆಕಾಂಕ್ಷ ಮೂಲತಃ ಆರ್ಜಿ ಗ್ರಾಮದ ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ರತೀಶ್ ಆಚಾರ್ಯ ಹಾಗೂ ವಿನಾಯಕ ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಆಚಾರ್ಯ ದಂಪತಿಗಳ ಪುತ್ರಿ.

Read More

ಮಡಿಕೇರಿ NEWS DESK ಡಿ.30 : ಹೊಸ ವರ್ಷಾಚರಣೆಯ ಸಂದರ್ಭ ಯಾವುದೇ ರೇವ್ ಪಾರ್ಟಿ, ಮಾದಕ ವಸ್ತು ಮಾರಾಟ-ಸೇವನೆಗಳಿಗೆ ಅವಕಾಶವಿರುವುದಿಲ್ಲ. ಈ ರೀತಿಯ ಪ್ರಕರಣಗಳು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮಜರಾಜನ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆೆಗೆ ರಾತ್ರಿ 10 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಅದನ್ನು ಮೀರಿ ಸಾರ್ವಜನಿಕವಾಗಿ ಅಥವಾ ಅಕ್ಕ ಪಕ್ಕದ ಜನರಿಗೆ ತೊಂದರೆ ನೀಡಿ ಪಾರ್ಟಿ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಗುಪ್ತಚರ ಇಲಾಖೆ ಮತ್ತು ತಾಂತ್ರಿಕ ಗುಪ್ತಚರ ವಿಭಾಗದ ಸಭೆ ನಡೆಸಿ ಕಾನೂನು ಉಲ್ಲಂಘಿಸುವವರ ಮೇಲೆ ನಿಗಾ ವಹಿಸಲು ಸೂಚನೆ ನೀಡಲಾಗಿದೆ ಎಂದರು. ಕೆಲವೊಂದು ಹೋಂ ಸ್ಟೇ- ರೆಸಾರ್ಟ್ಗಳಿಗೆ ಅನಿರೀಕ್ಷಿತವಾಗಿ ಪೊಲೀಸರು ಭೇಟಿ ನೀಡುವ ಸಾಧ್ಯತೆಗಳಿದೆ. ಯಾವುದಾದರು ಹೋಂ ಸ್ಟೇ ಅಥವಾ ರೆಸಾರ್ಟ್ ಕಾನೂನು ಉಲ್ಲಂಘಿಸಿದರೆ ಬಂದ್ ಮಾಡಲಾಗುವುದು ಎಂದು ಎಸ್‌ಪಿ ತಿಳಿಸಿದರು. ಹೊಸ ವರ್ಷಾಚರಣೆ ಪಾರ್ಟಿಯಿಂದ ಸಾರ್ವಜನಿಕರಿಗೆ ತೊಂದರೆಯಾದರೆ…

Read More

ಮಡಿಕೇರಿ NEWS DESK ಡಿ.30 : ಸಾಂಪ್ರದಾಯಿಕ ‘ಕೊಡವ ಉಡುಪು’ ವಿಷಯದ ಕುರಿತು ಎರಡು ಸಮುದಾಯಗಳ ನಡುವೆ ಉದ್ಭವಿಸಿರುವ ಸೂಕ್ಷ್ಮ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಎಎಸ್‌ಪಿ ಸುಂದರರಾಜ್ ಅವರು ಖುದ್ದು ಕಟ್ಟೆಮಾಡು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕ್ರಮ ಕೈಗೊಂಡರು. ದೇವಸ್ಥಾನದ 5 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಒಬ್ಬರು ಎಎಸ್‌ಪಿ, ಇಬ್ಬರು ಡಿವೈಎಸ್‌ಪಿ, 5 ವೃತ್ತ ನಿರೀಕ್ಷಕರು, 10 ಮಂದಿ ಪಿಎಸ್‌ಐ ಸೇರಿದಂತೆ 300 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ದೇವಸ್ಥಾನ ವ್ಯಾಪ್ತಿಯಲ್ಲಿ ನಿಯೋಜಿಸಲಾಗಿದೆ. ಇದರೊಂದಿಗೆ ಮೂರು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

Read More

ಮಡಿಕೇರಿ NEWS DESK ಡಿ.30 : ಕೊಡಗು ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯ ನಂತರ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ಸ್ವಾಮಿ ದೇವಾಲಯ ಆಡಳಿತ ಮಂಡಳಿಯ ಕೋರಿಕೆಯಂತೆ ಜಿಲ್ಲಾಡಳಿತ ಒಂದು ವಾರದ ಕಾಲಾವಕಾಶ ನೀಡಿದೆ. ನಂತರ ನಡೆಯುವ ಸಭೆಯಲ್ಲಿ ಒಮ್ಮತದ ನಿರ್ಧಾರವಾದರೆ ಸ್ವಾಗತಾರ್ಹ. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದು ಅಥವಾ ದೇವಾಲಯಕ್ಕೆ ನುಗ್ಗಲು ಮುಂದಾಗುವುದಕ್ಕೆ ಪೊಲೀಸ್ ಇಲಾಖೆ ಅವಕಾಶ ನಿಡುವುದಿಲ್ಲ. ಉದ್ದೇಶ ಪೂರ್ವಕವಾಗಿ ಶಾಂತಿಭಂಗ ಮಾಡಲು ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದರು. ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಒಪ್ಪಿಗೆಯಾಗದಿದ್ದಲ್ಲಿ ನ್ಯಾಯಾಲಯಕ್ಕೆ ಹೋಗಲು ಅವಕಾಶವಿದೆ, ಅಲ್ಲಿ ನ್ಯಾಯವನ್ನು ಪಡೆಯಬಹುದಾಗಿದೆ. ಅದನ್ನು ಬಿಟ್ಟು ಶಾಂತಿಭಂಗ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸೂಕ್ತ ನಿರ್ಧಾರ ಕೈಗೊಳ್ಳಲು ಒಂದು ವಾರದ ಕಾಲಾವಕಾಶವನ್ನು ಜಿಲ್ಲಾಡಳಿತ ನೀಡಿರುವುದರಿಂದ ಮತ್ತು ಸಭೆಯಲ್ಲಿ ಇದ್ದವರು ಇದಕ್ಕೆ ಸಮ್ಮತಿ ಸೂಚಿಸಿರುವುದರಿಂದ ಪ್ರತಿಭಟನೆಗಳನ್ನು ವಾಪಾಸು ಪಡೆಯಲಿದ್ದಾರೆ ಎನ್ನುವ ವಿಶ್ವಾಸವಿದೆಯೆಂದು ಎಸ್‌ಪಿ ತಿಳಿಸಿದರು.

Read More

ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಐದು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜಾಥಾ ನಡೆಸುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಕೊಡವ ಮತ್ತು ಗೌಡ ಎರಡು ಜನಾಂಗಗಳ ನಡುವಿನ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿದ್ದು, ಉಭಯ ಗುಂಪು ಸೋಮವಾರ ಕಟ್ಟೆಮಾಡಿಗೆ ಜಾಥಾ ನಡೆಸುವ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ನೂರಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ::: ಎಸ್‌ಪಿ ಎಚ್ಚರಿಕೆ ::: ಈಗಾಗಲೇ ದೇವಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಯಾರಾದರು ಶಾಂತಿಭಂಗ ಮಾಡಲು ಯತ್ನಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಯಿಸಲು ಅವಕಾಶವಿದ್ದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಜನಾಂಗಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವವರ ಪರ ಯಾರೂ…

Read More

ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಜಾತ್ರೋತ್ಸವದ ಸಂದರ್ಭ ಸಾಂಪ್ರದಾಯಿಕ “ಕೊಡವ ಉಡುಪು” ಕುಪ್ಯಚೇಲೆ ತೊಟ್ಟವರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡದಿರುವುದನ್ನು ಖಂಡಿಸಿ ಜಿಲ್ಲೆಯ ವಿವಿಧೆಡೆ ಕೊಡವ ಸಮುದಾಯದವರು ರಸ್ತೆತಡೆ ಪ್ರತಿಭಟನೆ ನಡೆದರು. ದೇವಸ್ಥಾನ ಸಮಿತಿಯ ನಿಲುವಿನ ವಿರುದ್ಧ ಕೊಡವ ಸಮುದಾಯದ ವಿವಿಧ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದವು. ದಕ್ಷಿಣ ಕೊಡಗಿನ ವಿರಾಜಪೇಟೆ, ಗೋಣಿಕೊಪ್ಪಲು, ಪೊನ್ನಂಪೇಟೆ, ಶ್ರೀಮಂಗಲ, ಟಿ.ಶೆಟ್ಟಿಗೇರಿ, ಮಡಿಕೇರಿ ತಾಲ್ಲೂಕಿನ ಮೂರ್ನಾಡು, ನಾಪೋಕ್ಲುವಿನಲ್ಲಿ ತೀವ್ರ ಪ್ರತಿಭಟನೆ ನಡೆಯಿತು. ಕಟ್ಟೆಮಾಡು ಭಾಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊನ್ನಂಪೇಟೆಯಿಂದ ಕಟ್ಟೆಮಾಡು ದೇವಾಲಯಕ್ಕೆ ಬೈಕ್ ಜಾಥ ನಡೆಸಲು ಮುಂದಾದವರನ್ನು ಪೊಲೀಸರು ವಶಕ್ಕೆ ಪಡೆದರು. ಬೈಕ್ ಜಾಥಕ್ಕೆ ಸಜ್ಜಾಗಿದ್ದ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ, ಚಮ್ಮಟಿರ ಪ್ರವೀಣ್ ಉತ್ತಪ್ಪ ಹಾಗೂ ಸಣ್ಣುವಂಡ ದರ್ಶನ್ ಕಾವೇರಪ್ಪ ಅವರನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು, ಅವರನ್ನು ಕೆಲ ಕಾಲ ಅಲ್ಲ್ಲಿರಿಸಿಕೊಂಡು ಜಾಥ ಹೊರಡದಂತೆ ಮನವೊಲಿಸುವ ಪ್ರಯತ್ನಗಳನ್ನು…

Read More

ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡು ಜನಾಂಗಗಳ ನಡುವೆ ನಡೆದ ಸಂಘರ್ಷವನ್ನು ಶಮನ ಮಾಡಲು ಕೊಡಗು ಜಿಲ್ಲಾಡಳಿತ ಇಂದು ಉಭಯ ಕಡೆಗಳ ಶಾಂತಿ ಸಭೆ ನಡೆಸಿತು. ಸುಮಾರು ಮೂರು ಗಂಟೆಗಳ ಸಭೆಯಲ್ಲಿ ಕೊಡವ ಸಮಾಜಗಳ ಒಕ್ಕೂಟ, ಗೌಡ ಸಮಾಜಗಳ ಒಕ್ಕೂಟ ಹಾಗೂ ಶ್ರೀ ಮಹಾ ಮೃತ್ಯಂಜಯ ದೇವಾಲಯ ಆಡಳಿತ ಮಂಡಳಿಯ ಅಭಿಪ್ರಾಯಗಳನ್ನು ಜಿಲ್ಲಾಡಳಿತ ಆಲಿಸಿತು. ಸಭೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ದೇವಸ್ಥಾನದ ಬೈಲಾದಲ್ಲಿರುವ ಗೊಂದಲ ನಿವಾರಣೆಗಾಗಿ ದೇವಾಲಯದ ಆಡಳಿತ ಮಂಡಳಿಯ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಮುಂದಿನ ಸೋಮವಾರದವರೆಗೆ ಕಾಲಾವಕಾಶ ಬೇಕೆಂದು ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಕೋರಿಕೊಂಡಿದ್ದಾರೆ. ಈ ಹಿನ್ನೆಲೆ ಅಂತಿಮ ನಿರ್ಧಾರಕ್ಕೆ ಬರಲು ಏಳು ದಿನಗಳ ಕಾಲಾವಕಾಶ ನಿಡಲಾಗಿದೆ ಎಂದರು. ಆಡಳಿತ ಮಂಡಳಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಏಳು ದಿನಗಳ ಕಾಲಾವಕಾಶ ಕೋರಿಕೊಂಡ ಹಿನ್ನೆಲೆಯಲ್ಲಿ ಎಲ್ಲರು…

Read More