ಲೇಖಕ: admin

ಭಾಗಮಂಡಲ NEWS DESK ಡಿ.16 : ಕೋರಂಗಾಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಹುಣಸೂರಿ ನ ಬಿ. ಜಿ ಎಸ್ ಸಭಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ವೈಟ್  ಬೆಲ್ಟ್ ವಿಭಾಗದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಕಥ ಮತ್ತು ಕುಮಿತೆ ವಿಭಾಗದಲ್ಲಿ  ಪದಕಗಳು ಮತ್ತು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯರ  ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ದೀಪಕ್ ಕೆ.ಕೆ  ಹರ್ಷ ವ್ಯಕ್ತಪಡಿಸಿದ್ದಾರೆ. ಕರಾಟೆ ಶಿಕ್ಷಕರಾದ ದಿಲೀತ್ ಉತ್ತಪ್ಪ. ದೈಹಿಕ ಶಿಕ್ಷಣ ಶಿಕ್ಷಕ ಪವನ್ ಸಾಗರ್ ಕೆ.ಪಿ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು. ಶಾಲೆಯ ಶಿಕ್ಷಕರಾದ ರಘು ಜಿ.ಎಸ್. ಲಿಂಗಸ್ವಾಮಿ ಕೆ. ಎಂ. ಹೇಮಂತ್. ರಾಜಶೇಖರ್ ಮೂರ್ತಿ. ಚೇತನ್ ಕೆ. ಜಿ. ಭಾಗವಹಿಸಿದ್ದರು.

Read More

ಭಾಗಮಂಡಲ NEWS DESK ಡಿ.16 : ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ವತಿಯಿಂದ ಆಯೋಜಿಸಿದ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬವಾರು ಹಗ್ಗ ಜಗ್ಗಾಟ ಪಂದ್ಯಾವಳಿಯ ಪ್ರಥಮ ವರ್ಷದ ಕೊಡಗು ಗೌಡ ಹುತ್ತರಿ ಕಪ್ – 2024 ಅನ್ನು ಪೆರಾಜೆಯ ಕುಂಬಳಚೇರಿ ಮನೆತನ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಪುರುಷರ ಹಗ್ಗಜಗ್ಗಾಟ ಪಂದ್ಯಾವಳಿಯ ಪೈನಲ್ ಪಂದ್ಯದಲ್ಲಿ ಕುಂಬಳಚೇರಿ ಕುಟುಂಬ ತಂಡವು ಎದುರಾಳಿ ಪರ್ಲಕೋಟಿ ಕುಟುಂಬವನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಹಗ್ಗ ಜಗ್ಗಾಟದ ರನ್ನರ್ ಅಪ್ ಪ್ರಶಸ್ತಿಯನ್ನು ಪರ್ಲಕೋಟಿ ಕುಟುಂಬ ತಂಡವು ಪಡೆದು ಕೊಂಡರೆ , ತೃತೀಯ ಹಾಗೂ ಚತುರ್ಥ ಸ್ಥಾನವನ್ನು ಪೆರಾಜೆಯ ನಿಡ್ಯಮಲೆ ಕುಟುಂಬ ಮತ್ತು ಮಜಿಕೋಡಿ ಕುಟುಂಬ ತಂಡ ಪಡೆದುಕೊಂಡಿತು. ಮಹಿಳೆಯರ ಕುಟುಂಬವಾರು ಹಗ್ಗಜಗ್ಗಾಟ ಪಂದ್ಯದಲ್ಲಿ ದಾಯನ ಕುಟುಂಬ ತಂಡ ಪ್ರಥಮ ಸ್ಥಾನ ಗಳಿಸಿದರು. ದ್ವಿತೀಯ ಸ್ಥಾನವನ್ನು ಅಮೆಮನೆ ಕುಟುಂಬಸ್ಥರ ತಂಡ, ತೃತೀಯ ಹಾಗೂ ಚತುರ್ಥ ಕುದುಪಜೆ ಮತ್ತು ಪೊನ್ನೇಟಿ…

Read More

ನವದೆಹಲಿ NEWS DESK ಡಿ.16 : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ವಿಜಯ್ ದಿವಸ್ ಅಂಗವಾಗಿ ಇಂದು ಸೇನಾ ಮುಖ್ಯಸ್ಥರು ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಹಾಗೂ ನೌಕಾಪಡೆಯ ಉಪಾಧ್ಯಕ್ಷ ವೈಸ್-ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಹಾಜರಿದ್ದರು.

Read More

ನಾಪೋಕ್ಲು ಡಿ.16 NEWS DESK : ಹಳೇ ತಾಲೂಕಿನಲ್ಲಿ ಕೊಡಗಿನ ಸುಗ್ಗಿಯ ಹಬ್ಬ ಪುತ್ತರಿಯನ್ನು ಕೊಡವರು ಹಾಗೂ ಮುಸ್ಲಿಂ ಬಾಂಧವರು ಪಾಲ್ಗೊಂಡು ಸಂಭ್ರಮದಿಂದ ಆಚರಿಸಿದರು. ವರ್ಷ ಪ್ರತಿ ಇಲ್ಲಿನ ಹಿರಿಯ ಬೊಪ್ಪೇರ ಕಾವೇರಪ್ಪ ಮತ್ತು ಅವರ ಮಗ ಜಯ ಉತ್ತಪ್ಪ ತಮ್ಮ ಮನೆಯಲ್ಲಿ ಪುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾ ಬರುತ್ತಿದ್ದು, ಇಲ್ಲಿನ ಮುಸ್ಲಿಂ ಜನಾಂಗದವರು ಹಲವು ವರ್ಷಗಳಿಂದ ಪುತ್ತರಿ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಸೌರ್ಹಾದತೆ, ಸಾಮರಸ್ಯಕ್ಕೆ ಸಾಕ್ಷಿಯಾದರು. ಎಲ್ಲರ ಆಗಮನದ ನಂತರ ನೆರೆ ಕಟ್ಟಿ, ಕದಿರು ತೆಗೆದು, ಪ್ರಸಾದವನ್ನು ಸ್ವೀಕರಿಸಿ ಊಟ ಉಪಚಾರದೊಂದಿಗೆ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು. ಈ ಸಮಯದಲ್ಲಿ ಪೋಲಿ ಪೋಲಿಯೇ ಬಾ ಎಂಬ ಉದ್ಘೋಷ ಹಾಗೂ ಪಟಾಕಿಗಳ ಆರ್ಭಟ ಮುಗಿಲಿಗೇರಿತು. ಈ ಸಂದರ್ಭ ಮಾತನಾಡಿದ ಹಿರಿಯರಾದ ಬೊಪ್ಪೇರ ಕಾವೇರಪ್ಪ, ನಾವು ಪ್ರತಿ ವರ್ಷವು ಹುತ್ತರಿ ಹಬ್ಬವನ್ನು ಆಚರಿಸುತ್ತಾ ಬರುತ್ತಿದ್ದು, ನಮ್ಮ ನೆರೆಯವರಾದ ಮುಸ್ಲಿಂ ಬಾಂಧವರು ಪ್ರತಿ ವರ್ಷವು ನಮ್ಮ ಮನೆಗೆ ಬಂದು ಹಬ್ಬದಲ್ಲಿ ಪಾಲ್ಗುಳ್ಳುತ್ತಾರೆ. ನಾವೇಲ್ಲರು ಸಹೋದರರಂತೆ ಅವರನ್ನು…

Read More

ನಾಪೋಕ್ಲು  ಡಿ.16 NEWS DESK : ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಗದ್ದೆಯಿಂದ ಭತ್ತದ ಕದಿರು ತಂದು ದೇವಾಲಯದ ನಮಸ್ಕಾರ ಮಂಟಪದಲ್ಲಿ ಇರಿಸಿ ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮುಖ್ಯ ಅರ್ಚಕ ಸುಧೀರ್ ವಿಶೇಷ ಪೂಜೆ ನೆರವೇರಿಸಿ ತೀರ್ಥ ಪ್ರಸಾದ ಹಾಗೂ ಕದಿರನ್ನು ಭಕ್ತಾಧಿಗಳಿಗೆ ವಿತರಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನವರು, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಡಿ.16 NEWS DESK : ನಾಪೋಕ್ಲು ಕೊಡವ ಸಮಾಜದಲ್ಲಿ ಪುತ್ತರಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಯಿತು. ಮೊದಲು ಕೊಡವ ಸಮಾಜದಲ್ಲಿ ನೆರೆಕಟ್ಟಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಸಮಾಜದ ಪ್ರಮುಖರು, ಹಿರಿಯರು ಹಾಗೂ ಪದಾಧಿಕಾರಿಗಳು ಬೊಟ್ಟೋಳಂಡ ರಾಜ ಬೋಜಪ್ಪ ಗದ್ದೆಗೆ ತೆರಳಿ ಶಸ್ತ್ರೋತ್ರವಾಗಿ ಭತ್ತದ ಕದಿರನ್ನು ತೆಗೆದು ಪುತ್ತರಿ ಕುತ್ತಿಯಲ್ಲಿ ಇರಿಸಿ ಸುಡುಮದ್ದುಗಳು ಹಾಗೂ ಪೊಲಿ ಪೊಲಿಯೇ ಬಾ ಉದ್ಘೋಷಗಳೊಂದಿಗೆ ಸಮಾಜಕ್ಕೆ ಹಿಂತಿರುಗಿದರು. ನಂತರ ಸಾಂಪ್ರದಾಯದಂತೆ ಆಚರಣೆ ಮಾಡಿ ಆಗಮಿಸಿದವರಿಗೆ ಕದಿರಲು ವಿತರಿಸಿದರು. ಈ ಸಂದರ್ಭ ಬೊಟ್ಟೋಳಂಡ ಗಣೇಶ, ಕನ್ನಂಬೀರ ಸುದೀಪ್ ತಿಮ್ಮಯ್ಯ, ಮಣವಟ್ಟಿರ ಡಿಕ್ಕ, ಕರ್ತಮಾಡ ವಿಜು, ಬೊಟ್ಟೋಳಂಡ ಚೇತನ್ ಸೇರಿದಂತೆ ಇತರರು ಇದ್ದರು. ವರದಿ : ದುಗ್ಗಳ ಸದಾನಂದ.

Read More

ಸುಂಟಿಕೊಪ್ಪ,ಡಿ.16 NEWS DESK : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಎ.ಎಸ್.ಶ್ರೀಶಾ ಕಲಬುರ್ಗಿಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಯುವ ವಿಜ್ಞಾನಿಯಾಗಿ ಆಯ್ಕೆಯಾಗಿದ್ದು, ಜನವರಿಯಲ್ಲಿ ಮಧ್ಯ ಪ್ರದೇಶದ ಭೂಪಾಲ್‍ನಲ್ಲಿ ನಡೆಯುವ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾಳೆ.

Read More

ಸುಂಟಿಕೊಪ್ಪ ಡಿ.16 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ದುರ್ಗಾಲಕ್ಷ್ಮಿ ದೇವಿಯ ಪ್ರತಿಷ್ಠಾಪನಾ ಅಷ್ಠಬಂಧ ಬ್ರಹ್ಮಕಲಶೋತ್ಸವು ಡಿ.21 ರಿಂದ 25ರವರೆಗೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ. ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು 1992 ಮೇ 8 ರಂದು ಸ್ಥಾಪನೆಗೊಂಡ ನಂತರದ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ, ಶ್ರೀ ಕನ್ನಿಮೂಲ ಗಣಪತಿ, ಹಾಗೂ ನೈವೇದ್ಯ ಕೊಠಡಿ ಮತ್ತು ದೇವಸ್ಥಾನದ ಕಚೇರಿ ನಿರ್ಮಿಸಲಾಗಿತ್ತು. ಅದರಂತೆ ದುರ್ಗಾ ದೇವಿಯ ದೇವಸ್ಥಾನವನ್ನು ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಶ್ರೀ ದುರ್ಗಾಲಕ್ಷ್ಮಿ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಕಳೆದ 8 ತಿಂಗಳ ಹಿಂದೆ ಪುತ್ತೂರಿನ ಜಗನಿವಾಸ್ ರಾವ್ ಭೂಮಿ ಪೂಜೆ ನೇರವೇರಿಸಿದರು. ಪುತ್ತೂರಿನ ಶಿಲ್ಪಿಗಳಾದ ಕೃಷ್ಣಪ್ರಸಾದ್ ರವರು ಶಿಲ್ಪಿ ಕಾರ್ಯವನ್ನು ನಿರ್ವಹಿಸುವ ಮೂಲಕ ದೇವಸ್ಥಾನವು ಜೀರ್ಣೋದ್ಧಾರಕ್ಕೆ ಸನ್ನದ್ಧವಾಗಿದೆ. ಊರಿನ ಭಕ್ತಾಧಿಗಳು ಮತ್ತು ಸುತ್ತ ಮುತ್ತಲಿನ ದಾನಿಗಳ ಸಹಾಯದಿಂದ ಸರಿಸುಮಾರು 18 ರಿಂದ 20…

Read More

ನವದೆಹಲಿ NEWS DESK ಡಿ.15 : ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮೊದಲಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಜಾಕೀರ್ ಹುಸೇನ್  ಅವರು ತಬಲಾ ವಾದನದ ಮೂಲಕ ಕಲಾಭಿಮಾನಿಗಳ ಮನಸೂರೆಗೊಂಡಿದ್ದರು.

Read More

ಸುಂಟಿಕೊಪ್ಪ NEWS DESK ಡಿ15 : ಸುಂಟಿಕೊಪ್ಪದ ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ ವತಿಯಿಂದ ಭಾನುವಾರ ರಾತ್ರಿ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ಹೋಬಳಿ ವ್ಯಾಪ್ತಿಯ ಕೆದಕಲ್, ಏಳನೇ ಹೊಸಕೋಟೆ, ಕೊಡಗರಹಳ್ಳಿ, ಅತ್ತೂರು, ಬಾಳೆಕಾಡು, ಶ್ರೀದೇವಿಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಭಕ್ತರು ಹರಕೆ ಸಲ್ಲಿಸಿದರು. ರಾತ್ರಿ ಕುಂದನ್ ನೃತ್ಯಾಲಯ ತಂಡದಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯ ಸಮಿತಿಯ ಪಟ್ಟೆಮನೆ ಉದಯಕುಮಾರ್, ರಮೇಶ್ ಪಿಳ್ಳೈಜಿ.ಪಿ.ಅನಿಲ್ ಕುಮಾರ್, ಯಂಕನ ಕೌಶಿಕ್, ಮುತ್ತಪ್ಪ ದೇವಾಲಯದ ಪೂಜಾರಿ ಶಿವರಾಮು, ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ‌ ಸೇರಿದಂತೆ ಸಮಿತಿ ಸದಸ್ಯರು ಇದ್ದರು.

Read More