ಲೇಖಕ: admin

ಕುಶಾಲನಗರ NEWS DESK ಡಿ.15 : ಸ್ವಚ್ಛ ಶೌಚಾಲಯ ಸ್ವಚ್ಛ ಪರಿಸರ’ ಧ್ಯೇಯದಡಿ ಪ್ರತಿಯೊಬ್ಬರೂ ಶೌಚಾಲಯವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ಆದ  ಕೊಡಗು ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮ್‍ಕುಮಾರ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ಕುಶಾಲನಗರ ತಾಲ್ಲೂಕು ಪಂಚಾಯಿತಿ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಸ್ವಚ್ಛ ಭಾರತ ಅಭಿಯಾನದಡಿ ಕೂಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ಕೂಡಿಗೆ ಕ್ಲಸ್ಟರ್ ಮಟ್ಟದಲ್ಲಿ *ನಮ್ಮ ಶೌಚಾಲಯ: ನಮ್ಮ ಗೌರವ* ಎಂಬ ಧ್ಯೇಯದೊಂದಿಗೆ ಪ್ರಾಥಮಿಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿಶ್ವ ಶೌಚಾಲಯ ದಿನ -2024 ರ ಪರಿಸರ…

Read More

ಸುಂಟಿಕೊಪ್ಪ NEWS DESK ಡಿ.14: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿಗಳ “ಚಡ್ಡಿದೋಸ್ತ್’ ಬಳಗದ ವತಿಯಿಂದ ಆರನೇ ವರ್ಷದ ಸೌಹಾರ್ಧ ಕ್ರಿಕೆಟ್ ಟೂರ್ನಿಯು ಗುಡ್ಡೆಹೊಸೂರು ಐಎನ್‌ಎಸ್ ಅಕಾಡೆಮಿ ಮೈದಾನದಲ್ಲಿ ಡಿ.15ರಂದು ನಡೆಯಲಿದೆ. ಚಡ್ಡಿದೋಸ್ತ್ ಬಳಗದ ಸೌಹಾರ್ದ ಕ್ರಿಕೆಟ್ ಟೂರ್ನಿಯ ಉದ್ಘಾಟನೆಯನ್ನು ಗುಡ್ಡೆಹೊಸೂರು ಐಎನ್ಎಸ್ ಅಕಾಡಮಿಯ ಮಾಲೀಕರಾದ ಐಚೇಟ್ಟಿರ ಪೊನ್ನಪ್ಪ ಸೋಮಯ್ಯ ನೆರವೇರಿಸಲಿದ್ದಾರೆ. ಚಡ್ಡಿದೋಸ್ತ್ ಬಳಗ ಅಧ್ಯಕ್ಷ ಕೆ.ಕೆ.ಹರೀಶ್ ಮತ್ತು ಸ್ಥಾಪಕಾಧ್ಯಕ್ಷ ಎನ್.ಮೋಹನ್ ಉಪಸ್ಥಿತರಿರುವರು. ಸಂಜೆ ನಡೆಯುವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕರಾದ ಮೆಟಿಲ್ಡ ಫಾಯಾಸ್ , ಲೀಲಾ, ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಶಿವಪ್ಪ,ಅನಿತಾ, ಮೈಸೂರು ಕೆ.ಆರ್.ಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚಂದ್ರು, ಚಡ್ಡಿದೋಸ್ತ್ ಬಳಗದ ಸ್ಥಾಪಕಾಧ್ಯಕ್ಷ ಎನ್.ಮೋಹನ್ ಉಪಸ್ಥಿತರಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಕೆ.ಕೆ.ಹರೀಶ್ ವಹಿಸಲಿದ್ದಾರೆ.

Read More

ಮಡಿಕೇರಿ ಡಿ.14 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡದ ಮೇಲ್ಛಾವಣಿ ಕುಸಿದಿದ್ದು, ಅದನ್ನು ವಿಶೇಷ ಗ್ರಾಮ ಸಭೆಗೆ ಆಗಮಿಸಿದ್ದ ಕೋಡಿಮಣಿಯಂಡ ಶರಣ್ ಕುಟ್ಟಪ್ಪ  ವೀಕ್ಷಿಸಿ, ಸಾಮಾಜಿಕ ಕಳಕಳಿಯಿಂದ ಸ್ವಂತ ಖರ್ಚಿನಲ್ಲಿ ಮೇಲ್ಛಾವಣಿ ದುರಸ್ಥಿ ಕಾರ್ಯವನ್ನು ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶಾಲೆಯ ಮುಖ್ಯಶಿಕ್ಷಕರು, ಶಾಲಾ ಎಸ್.ಡಿ.ಎಂ.ಸಿ  ಸದಸ್ಯರು, ಪದಾಧಿಕಾರಿಗಳು, ಸಾರ್ವಜನಿಕರು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಡಿ.16 ರಿಂದ ಡಿ.22ರ ವರೆಗಿನ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ವಾರದಲ್ಲಿ ದೂರ ಪ್ರಯಾಣ ಮಾಡುವಿರಿ. ಹಿರಿಯರ ಆರೋಗ್ಯಕ್ಕೆ ತುಂಬಾ ಖರ್ಚಾಗಲಿದೆ. ಹಳೇ ಸಾಲ ವಸೂಲಿ ಆಗಿ ನಿಮ್ಮ ಹಣ ನಿಮ್ಮ ಕೈಗೆ ಬರಲಿದೆ. ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ಈ ವಾರ ತುಂಬಾ ಶುಭಯೋಗ. ಹಳೇ ಸಾಲವನ್ನು ತೀರಿಸುವಿರಿ. ದೂರದ ನೆಂಟರು ಭೇಟಿಯಾಗುವಿರಿ. ಹಣಕಾಸು ತುಂಬಾ ಖರ್ಚಾಗಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ವಾರ ನಿಮ್ಮ ರಾಶಿಯಲ್ಲಿ ನೀಚಗ್ರಹ ಪ್ರವೇಶದಿಂದ ಅನಾರೋಗ್ಯ, ಸುತ್ತಾಟಗಳು, ಕಲಹ, ಹಣವ್ಯೆಯ :: ಪರಿಹಾರ ಗುರುವಾರ ಶ್ರೀ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ :: ಶುಭಸಂಖ್ಯೆ : 3,…

Read More

ಕುಶಾಲನಗರ ಡಿ.14 NEWS DESK :  ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೆ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.  ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಡಲ ಪೂಜೋತ್ಸವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದೇವಾಲಯದಲ್ಲಿ ಧ್ವಜಾರೋಹಣ ನಡೆಯಿತು.  ಅರ್ಚಕರಾದ ಕೃಷ್ಣಮೂರ್ತಿ ಭಟ್ ,ಸೋಮಶೇಖರ್ ವಿಷ್ಣುಮೂರ್ತಿ ಭಟ್ ಅವರುಗಳಿಂದ ಪೂಜಾ ಕಾರ್ಯಕ್ರಮ ನಡೆಯಿತು. ನಂತರ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳಿಂದ ಸಾಮೂಹಿಕ ಪೂಜೆ ಸಲ್ಲಿಸಲಾಯಿತು.  ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ.ಗಣಪತಿ, ಕಾರ್ಯದರ್ಶಿ ಮಹೇಶ ನಾಲ್ವಡೆ,  ಖಜಾಂಚಿ ಸುಬ್ರಮಣಿ, ಜಂಟಿ ಕಾರ್ಯದರ್ಶಿ ಶ್ರೀನಿವಾಸ್, ವಿ.ಎಸ್.ಆನಂದ್ ಕುಮಾರ್,  ಡಿ ಆರ್ ಸೋಮಶೇಖರ್ , ಕರ್ಪು ಸ್ವಾಮಿ, ಚಂದ್ರು , ದೇವಾಲಯಗಳ ಒಕ್ಕೂಟ ಉಪಾಧ್ಯಕ್ಷ ರಾಮದಾಸ್, ಖಜಾಂಚಿ ಎಸ್.ಕೆ.ಶ್ರೀನಿವಾಸರಾವ್, ಪ್ರಧಾನ ಕಾರ್ಯದರ್ಶಿ ಎಂ.ಎನ್.ಚಂದ್ರಮೋಹನ್  ಮತ್ತಿತರರು ಇದ್ದರು.

Read More

ಮಡಿಕೇರಿ ಡಿ.14 NEWS DESK : ಪುತ್ತರಿ ಹಬ್ಬದ ಪ್ರಯುಕ್ತ ಚೆಟ್ಟಳ್ಳಿಯ ಶ್ರೀಮಂಗಲ ಶ್ರೀಭಗವತಿ ದೇವಾಲಯದಲ್ಲಿ ಪುತ್ತರಿ ಧಾರೆ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದ ಕ್ಷೇತ್ರಪಾಲಕ, ನಾಗ, ಗಣಪತಿ ಪೂಜೆ ಸಲ್ಲಿಸಿ ಶ್ರೀ ಭಗವತಿ ದೇವಿಗೆ ಊರಿನವರ ಸಮ್ಮುಖದಲ್ಲಿ ಅರ್ಚಕಾರದ ರಾಧಾಕೃಷ್ಣ ಭಟ್ ವಿಶೇಷ ಪೂಜೆ ಸಲ್ಲಿಸಿದರು. ಕುಲದೇವರಾದ ಇಗ್ಗುತ್ತಪ್ಪ ನೆಲೆಯಲ್ಲಿ ಪುತ್ತರಿ ಹಬ್ಬ ಕಟ್ಟಿನ ನಿಯಮದಂತೆ ಎಲ್ಲೆಡೆ ಪುತ್ತರಿ ಆಚರಣೆ ನಡೆಯಲಿದೆ. ಧಾನ್ಯಲಕ್ಷ್ಮಿಯನ್ನು ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳುವ ಮೂಲಕ ದೇವರು ಎಲ್ಲರಿಗೂ ಒಳಿತನ್ನು ಮಾಡಲೆಂದು ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕ್ಯಾ.ಮುಳ್ಳಂಡ ಪ್ರಭಕ ತಿಮ್ಮಯ್ಯ ಬೇಡಿಕೊಂಡರು. ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.

Read More