ಮಡಿಕೇರಿ NEWS DESK ಡಿ.29 : ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ನಡೆಯಿತು. ಬೈಠಕ್ ನಲ್ಲಿ ವೇಧಿಕೆಯ ನೂತನ ಜಿಲ್ಲಾ ಸಂಯೋಜಕರನ್ನಾಗಿ ಸೋಮವಾರಪೇಟೆ ತಾಲ್ಲೂಕಿನ ರಂಜನ್ ಗೌಡ(ಬೋಜೆ ಗೌಡ) ಅವರನ್ನು ಆಯ್ಕೆ ಮಾಡಲಾಯಿತು. ವೇದಿಕೆಯ ಕೊಡಗು ಜಿಲ್ಲಾ ಸಂಯೋಜಕರಾಗಿದ್ದ ಕುಕ್ಕೇರ ಅಜಿತ್ ಅವರನ್ನು ಕರ್ನಾಟಕ ದಕ್ಷಿಣ ಪ್ರಾಂತ ಸಮಿತಿಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.
ಲೇಖಕ: admin
ಮಡಿಕೇರಿ NEWS DESK ಡಿ.29 : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಸಋಷಿ, ರಾಷ್ಟçಕವಿ ಕುವೆಂಪು ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ನಗರದಲ್ಲಿ ಕುವೆಂಪು ಪುತ್ಥಳಿಗೆ ಗೌರವ ಅರ್ಪಿಸಿತು. ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಮೋಹನ್ ವಿ.ಜಿ ಅವರ ನೇತೃತ್ವದಲ್ಲಿ ಸಂಘದ ಪ್ರಮುಖರು ನಗರದ ರಾಜಾಸೀಟು ರಸ್ತೆಯಲ್ಲಿರುವ ವಿಶ್ವ ಮಾನವ ಕುವೆಂಪು ಉದ್ಯಾನವನದಲ್ಲಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಮೋಹನ್ ವಿ.ಜಿ ರಾಷ್ಟ್ರದ ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಅವರು ನೀಡಿದ ಕೊಡುಗೆಯನ್ನು ಬಣ್ಣಿಸಿದರು. ನಿರ್ದೇಶಕ ಹಾಗೂ ವಕೀಲ ಎಂ.ಎ.ನಿರಂಜನ್ ಅವರು ಮಾತನಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ಜ್ಞಾನಪೀಠ ಗಳಿಸಿದ ಅಗ್ರಗಣ್ಯ ಕುವೆಂಪು ಅವರ ಕೃತಿಗಳನ್ನು ಪ್ರತಿಯೊಬ್ಬರು ಓದಿ ಮನನ ಮಾಡಿಕೊಳ್ಳಬೇಕು. ಮುಂದಿನ ಪೀಳಿಗೆ ಕುವೆಂಪು ಅವರ ಆದರ್ಶಗಳನ್ನು ಮತ್ತು ಕವಿ ಮನಸ್ಸನ್ನು ನಿತ್ಯ ಸ್ಮರಿಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ರಾಷ್ಟ್ರಕವಿಯ ಬದುಕಿನ ಕುರಿತು ವಿವರಿಸಿದರು. ಸಂಘದ ಪದಾಧಿಕಾರಿಗಳಾದ ರಮೇಶ್ ಕೆ., ಮಂಜುನಾಥ ವಿ.ಎ,…
ಮಡಿಕೇರಿ NEWS DESK ಡಿ.29 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದಲ್ಲಿ ಡಿ.27 ರಂದು ಜಾತ್ರೋತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಶ್ರೀ ಮಹಾಮೃತ್ಯುಂಜಯ ದೇವಾಲಯದ ಸುತ್ತಮುತ್ತಲಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು 2024 ಡಿ.30ರ ಬೆಳಿಗ್ಗೆ 6 ಗಂಟೆಯಿಂದ 2025 ಜನವರಿ 2ರ ಬೆಳಿಗ್ಗೆ 6 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಜಾಥಾ ನಡೆಸದಂತೆ ಮತ್ತು ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಿದೆ. ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಉಪವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಈ ಆದೇಶ ಹೊರಡಿಸಿದ್ದಾರೆ. ಡಿ.27 ರಂದು ಜಾತ್ರೋತ್ಸವಕ್ಕೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಬಂದ ಕೊಡವರನ್ನು ಕೆಲವರು ತಡೆದಿದ್ದಾರೆ. ಕೊಡವ ಉಡುಪು…
ಸೋಮವಾರಪೇಟೆ NEWS DESK ಡಿ.29 : ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ವಿಸ್ತಿರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕಾಫಿ ಬೆಳೆಗಾರರ ಸಂಘ ಕಂದಾಯ ಮಂತ್ರಿಗಳಿಗೆ ಮನವಿ ಮಾಡಿದೆ. 1.1.2005 ರ ಪೂರ್ವದಲ್ಲಿ ಸರ್ಕಾರಿ ಜಮೀನನನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿರುವ ರೈತರಿಗೆ ಆ ಜಮೀನು ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸುವುದು ರೈತರಿಗೆ ಉಪಯೋಗವಾಗಿದೆ. ಅರ್ಜಿ ಸ್ವೀಕರಿಸುವ ಕಾಲಾವಕಾಶ 31.12.2024ರಂದು ಮುಕ್ತಾಯಗೊಳ್ಳಲಿದ್ದು, ದಿನಾಂಕವನ್ನು ವಿಸ್ತರಿಸಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲಾದ್ಯಂತ ಅರೇಬಿಕಾ ಹಾಗು ರೋಬಸ್ಟ ಕಾಫಿ ಮತ್ತು ಭತ್ತ ಕಟಾವು ಕೆಲಸ ನಡೆಯುತ್ತಿದೆ. ಅಕಾಲಿಕ ಮಳೆಯ ಭಯದಿಂದ ರೈತರು ಕೃಷಿ ಭೂಮಿಯಲ್ಲಿ ಕೆಲಸದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ತಾಲ್ಲೂಕು ಕಚೇರಿಗೆ ಬಂದು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಇವೆಲ್ಲಾ ಕಾರಣದಿಂದ ದಿನಾಂಕವನ್ನು ವಿಸ್ತರಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಕಳೆದ ಐದಾರು ವರ್ಷಗಳಿಂದ ಅಕಾಲಿಕ ಮಳೆ, ಅತೀವೃಷ್ಟಿ, ಅನಾವೃಷ್ಟಿಯಿಂದ ಕಾಫಿ…
ಮಡಿಕೇರಿ NEWS DESK ಡಿ.29 : ಲಾರಿಯೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ಸಮೀಪ ಜೋಡುಪಾಲ ಹೆದ್ದಾರಿಯಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಉಡುಪಿಗೆ ಭತ್ತವನ್ನು ಕೊಂಡೊಯ್ಯುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ಕ್ಲೀನರ್ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೈಸೂರು NEWS DESK ಡಿ.29 : ಮೈಸೂರಿನಲ್ಲಿ ಹನುಮ ಜಯಂತಿಯ ಪ್ರಯುಕ್ತ ಮೈಸೂರು ಹನುಮಂತೋತ್ಸವ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 6ನೇ ವರ್ಷದ ಹನುಮ ಹಬ್ಬ ಹಾಗೂ ಶ್ರೀ ಆಂಜನೇಯಸ್ವಾಮಿಯ ಭವ್ಯ ಮೆರವಣಿಗೆಯ ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಪಾಲ್ಗೊಂಡರು. ವಿಶೇಷ ಪೂಜೆ ಸಲ್ಲಿಸಿದ ಅವರು ಯುವ ಸಮೂಹದೊಂದಿಗೆ ಹೆಜ್ಜೆ ಹಾಕಿದರು.
ನವದೆಹಲಿ NEWS DESK ಡಿ.29 : ತಾಲಿಬಾನ್ ಯೋಧರು ಇಂದು ಮುಂಜಾನೆ ಅಫ್ಘಾನಿಸ್ತಾನ-ಪಾಕ್ ಗಡಿಯಲ್ಲಿ ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿ ವಾಯುಪಡೆ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ತಾಲಿಬಾನಿಗಳು ಫಿರಂಗಿಗಳು ಮತ್ತು ಮೆಷಿನ್ ಗನ್ ಗಳ ಮೂಲಕ ದಾಳಿ ನಡೆಸಿದಾಗ ಸುಮಾರು 19 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.
ಸಿಯೋಲ್ NEWS DESK ಡಿ.29 : ರನ್ವೇಯಲ್ಲಿ ವಿಮಾನ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಕಾರಣ ಸುಮಾರು 85 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ನಡೆದಿದೆ. 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್ವೇಯಲ್ಲಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 85ಕ್ಕೇರಿದೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.
ನವದೆಹಲಿ NEWS DESK ಡಿ.29 : ತಾಲಿಬಾನ್ ಯೋಧರು ಇಂದು ಮುಂಜಾನೆ ಅಫ್ಘಾನಿಸ್ತಾನ-ಪಾಕ್ ಗಡಿಯಲ್ಲಿ ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿ ವಾಯುಪಡೆ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ತಾಲಿಬಾನಿಗಳು ಫಿರಂಗಿಗಳು ಮತ್ತು ಮೆಷಿನ್ ಗನ್ ಗಳ ಮೂಲಕ ದಾಳಿ ನಡೆಸಿದಾಗ ಸುಮಾರು 19 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.
ಕುಶಾಲನಗರ NEWS DESK ಡಿ.29 : ಮರಗೋಡಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭ ವಸ್ತç ಸಂಹಿತೆ ಕುರಿತು ನಡೆದ ಭಿನ್ನಾಭಿಪ್ರಾಯವನ್ನು ನೆಪ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪೋಸ್ಟ್ ಮಾಡುತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕುಶಾಲನಗರ ಗೌಡ ಸಮಾಜ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕ ಹೇಳಿಕೆಗಳನ್ನು ನೀಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇಬ್ಬರು ವ್ಯಕ್ತಿಗಳು ಪ್ರಚೋದನಕಾರಿ ಬರಹದ ಮೂಲಕ ಘರ್ಷಣೆಗೆ ಅವಕಾಶ ಕಲ್ಪಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತಕ್ಷಣ ಇವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಕರಂದ್ಲಾಜೆ ಆನಂದ್, ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಚೆರಿಯಮನೆ ರಷಿ ಹರೀಶ್, ಪದ್ಮಾವತಿ ಗೌಡ…






