ಲೇಖಕ: admin

ಸೋಮವಾರಪೇಟೆ ಡಿ.13 NEWS DESK : ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದು ಬಸವಪಟ್ಟಣದ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ತಿಳಿಸಿದರು. ಸೋಮವಾರಪೇಟೆಯ ಕರ್ಕಳ್ಳಿಯಲ್ಲಿರುವ ಅಕ್ಕನ ಬಳಗದ ಸಭಾಂಗಣದಲ್ಲಿ ಆಡಳಿತ ಮಂಡಳಿಯ ಸದಸ್ಯರಿಗೆ ಮಾರ್ಗದರ್ಶನ ನೀಡಿ ಮಾತನಾಡಿದರು. ಇಂದು ಮಕ್ಕಳಿಗೆ ಸಂಸ್ಕಾರದ ಅಗತ್ಯವಿದೆ. ತಾಯಂದಿರು ಜವಾಬ್ದಾರಿ ತೆಗೆದುಕೊಳ್ಳಬೇಕು, ಆಧುನಿಕತೆ ಬೆಳೆದಂತೆ ಆದ್ಯಾತ್ಮ, ಸಂಸ್ಕಾರ ಮರೆಯಾಗುತ್ತಿದೆ ಎಂದರು.  ಮಾಸಿಕ ಪೂಜೆಯ ದಿನ ಎಲ್ಲಾ ತಾಯಂದಿರು ತಮ್ಮ ಮಕ್ಕಳೊಂದಿಗೆ ವಚನಗಳ ಅಭ್ಯಾಸ, ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡಿ ಆ ಮೂಲಕ ಧಾರ್ಮಿಕ ಜಾಗೃತಿ ಮೂಡಿಸಿ ಹಾಗೂ ಸಮಾಜದಲ್ಲಿ ಅಕ್ಕಮಹಾದೇವಿ ಮತ್ತು ವಚನಕಾರರ ಬಗ್ಗೆ ಅರಿವು ಮೂಡಿಸುವ ಕೆಲಸವಾಗಲಿ ಎಂದು ತಿಳಿಸಿದರು. ಬೆಂಗಳೂರಿನ ಸ್ತ್ರೀರೋಗ ತಜ್ಞ ವೈದ್ಯರಾದ, ಡಾ.ಬಿ.ಎಂ.ಲತಾ ಸಾರ್ವಜನಿಕರ ಉಪಯೋಗಕ್ಕೆ ನೀಡಿದ್ದ ಅಡುಗೆ ಪಾತ್ರೆಗಳನ್ನು ತಪೂಕ್ಷೇತ್ರ ಮನೆಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಅಕ್ಕನ ಬಳಗಕ್ಕೆ ಹಸ್ತಾಂತರಿಸಿ ಆಶೀರ್ವದಿಸಿದರು.  ಈ ಸಂದರ್ಭ ಅಕ್ಕನ ಬಳಗದ ಅಧ್ಯಕ್ಷೆ ಗೀತಾರಾಜು,…

Read More

ಮಡಿಕೇರಿ ಡಿ.13 NEWS DESK  : ಕೊಡಗು ಜಿಲ್ಲೆಯ ನ್ಯಾಷನಲ್ ಮೆಡಿಕೋಸ್ ಸಂಸ್ಥೆ, ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್, ಸ್ವಸ್ಥ ಕೂರ್ಗ್ ಫೌಂಡೇಶನ್ ಸಹಯೋಗದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.26 ರಂದು ಕೃತಕ ಅಂಗಾಂಗಗಳ ಉಚಿತ ಜೋಡಣೆ, ವಿತರಣೆ ಮತ್ತು ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಖ್ಯಾತ ಇ.ಎನ್.ಟಿ ವೈದ್ಯರು ಹಾಗೂ ಸಂಸ್ಕೃತಿ ಸಿರಿ ಬಳಗದ ಟ್ರಸ್ಟಿ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಪೊಲೀಸ್ ಮೈತ್ರಿ ಭವನದಲ್ಲಿ ಉಚಿತ ಜೋಡಣೆ, ವಿತರಣೆ, ಆರೋಗ್ಯ ತಪಾಸಣೆ ಮತ್ತು ತಜ್ಞ ವೈದ್ಯರುಗಳ ಸಮ್ಮುಖದಲ್ಲಿ ಸಮಾಲೋಚನೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಐ.ಎಂ.ಎ ಕೊಡಗು, ಎ.ಓ.ಐ ಕೊಡಗು (ಇ.ಎನ್.ಟಿ ಸರ್ಜನ್ಸ್), ಸ್ವಸ್ಥ ಕೂರ್ಗ್, ಡಿಆರ್‍ಎಂ ಆಸ್ಪತ್ರೆ ಮೈಸೂರು, ಎನ್‍ಜಿಒ, ಕೊಡಗು ಕಾಫಿ ಪ್ಲಾಂಟರ್ಸ್ ಸದಸ್ಯರು ಕೊಡಗು ಇವರುಗಳ ಸಹಯೋಗದೊಂದಿಗೆ ನಡೆಸಲಾಗುವ ಉಚಿತ ಶಿಬಿರದಲ್ಲಿ 2ಆ ಇಕೋ ಮತ್ತು ಉಚಿತ ಲ್ಯಾಬ್…

Read More

ಮಡಿಕೇರಿ ಡಿ.11 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮತ್ತು ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳು ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮಹಿಳಾ ಬಿಜೆಪಿ ಅಧ್ಯಕ್ಷೆ ಅನಿತಾ ಪೂವಯ್ಯ, ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ರವಿ ಕಾಳಪ್ಪ, ಕೆ.ಎಸ್.ರಮೇಶ್, ಅರುಣ್ ಶೆಟ್ಟಿ, ನಾಗೇಶ್ ಕುಂದಲ್ಪಾಡಿ, ಮನು…

Read More

ಮಡಿಕೇರಿ ಡಿ.13 NEWS DESK : ಶಾಸಕರ ಅನುದಾನದಿಂದ ಬಿದ್ದಾಟಂಡ ವಾಡೆ ರಸ್ತೆಯಿಂದ ನಾಪೋಕ್ಲು ಸಂಪರ್ಕ ರಸ್ತೆ ಹಾಗೂ ಕೋಟೇರಿ ರಸ್ತೆಯಿಂದ ಮೂಟೇರಿ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ದೊರೆಯಿತು. ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ ಮಾತನಾಡಿ, ಕಾಮಗಾರಿ ನಡೆಯುವ ಸಂದರ್ಭ ಯಾವುದೇ ರೀತಿಯ ರಾಜೀ ಮಾಡಿಕೊಳ್ಳದೆ, ಉತ್ತಮ ರೀತಿಯ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲು ಸಹಕರಿಸಬೇಕೆಂದು ವಿನಂತಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸದಸ್ಯರಗಳಾದ ಸಾಬ ತಿಮ್ಮಯ್ಯ, ಕುಲ್ಲೇಟಿರ ಅರುಣ ಬೇಭ, ಹೇಮಾವತಿ, ಗಂಗಮ್ಮ, ಗ್ರಾಮಸ್ಥರಾದ ಬಿದ್ದಾಟಂಡ ಡಿಕ್ಕಿ, ಪಟ್ರಪಂಡ ಮೋಹನ್, ಬಿದ್ದಾಟಂಡ ದಿನೇಶ್, ಬಿದ್ದಾಟಂಡ ಜೀನ್ನು ನಾಣಯ್ಯ, ಬಿದ್ದಾಟಂಡ ರೋಜಿ, ಫುಲ್ಲೇರ ಪದ್ಮಿನಿ, ಬಿದ್ದಾಟಂಡ ಕುಟುಂಬಸ್ಥರು ಹಾಗೂ ಪುಲ್ಲೆರ ಕುಟುಂಬಸ್ಥರು ಹಾಜರಿದ್ದರು.

Read More

ಸುಂಟಿಕೊಪ್ಪ ಡಿ.13 NEWS DESK : ಸುಂಟಿಕೊಪ್ಪ 1ನೇ ವಿಭಾಗ ಹಾಗೂ 3ನೇ ವಿಭಾಗದಲ್ಲಿ ಇದೀಗ ನೂತನ ಟ್ರಾನ್ಸ್‌ಫಾರಂ ಅಳವಡಿಸುವ ಮೂಲಕ ವಿದ್ಯುತ್ ಇಲಾಖೆ ಗ್ರಾಮಸ್ಥರ ಗಂಭೀರ ಸಮಸ್ಯೆಯ ಪರಿಹಾರಕ್ಕೆ ಮುಂದಾಗಿದ್ದು, ಚೆಸ್ಕಾಂ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಮಸ್ಥರು ಹಾಗೂ ಪಂಚಾಯಿತಿ ಶ್ಲಾಘನೆ ವ್ಯಕ್ತಪಡಿಸಿದೆ. ಸುಂಟಿಕೊಪ್ಪ 1ನೇ ವಿಭಾಗದ ಗುಡ್ಡಪ್ಪ ರೈ, ಶಿವರಾಮ ರೈ ಬಡಾವಣೆ ಹಾಗೂ ಮಾಸ್ಟರ್ ಬಡಾವಣೆಯಯಲ್ಲಿ ವಿದ್ಯುತ್ ಮಂದಬೆಳಕಿನ ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ಇಲ್ಲಿನ ನಿವಾಸಿಗಳು ಪಂಚಾಯಿತಿ ಸದಸ್ಯರುಗಳ ಗಮನಕ್ಕೆ ತಂದ ಮೇರೆಗೆ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಚೆಸ್ಕಾಂ ಇಲಾಖೆಗೆ ನೂತನ ಟ್ರಾನ್ಸ್‌ಫಾರಂ ಅಳವಡಿಸುವಂತೆ ಮನವಿ ಮಾಡಲಾಗಿತ್ತು. ಇದೀಗ ನೂತನ ಟ್ರಾನ್ಸ್‍ಫಾರಂ ಅಳವಡಿಸುವ ಮೂಲಕ ವಿದ್ಯುತ್ ಇಲಾಖೆ ಗ್ರಾಮಸ್ಥರ ಗಂಭೀರ ಸಮಸ್ಯೆಯನ್ನು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಸಭೆಯಲ್ಲಿ ನಿರ್ಣಯ ಕೈಗೊಂಡು ಪಂಚಾಯಿತಿ ವತಿಯಿಂದ ಚೆಸ್ಕಾಂ ಇಲಾಖೆಗೆ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಮನವಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಚೆಸ್ಕಾಂ…

Read More

ಮಡಿಕೇರಿ ಡಿ.13 NEWS DESK : ಭಾರತೀಯ ಭಾಷಾ ದಿವಸ ಹಾಗೂ ತಮಿಳು ಮಹಾ ಕವಿ ಸುಬ್ರಹ್ಮಣ್ಯ ಭಾರತಿಯಾರ್ ಅವರ 143 ನೇ ಜಯಂತಿಯ ಅಂಗವಾಗಿ ತಮಿಳುನಾಡಿನ ರಾಜಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಅವರನ್ನು ರಾಜ್ಯಪಾಲ ಆರ್.ಎನ್. ರವಿ ಅವರು ಸನ್ಮಾನಿಸಿದರು. ಪ್ರಾಚೀನ ತಮಿಳು ಗ್ರಂಥ ತಿರುಕುರಳ್ ಅನ್ನು ಕೊಡವ ಭಾಷಾ ಅನುವಾದದ ಮೂಲಕ ಭಾರತೀಯ ಭಾಷಾ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಇವರು ಮುಲ್ಲೇಂಗಡ ಮಧೋಶ್ ಪೂವಯ್ಯ ಅವರ ಪತ್ನಿ ಹಾಗೂ ನಾಲ್ಕೇರಿ ಗ್ರಾಮದ ಚೆಪ್ಪುಡಿರ ಸನ್ನು ಮುದ್ದಪ್ಪ ಮತ್ತು ನಳಿನಿ ದಂಪತಿಗಳ ಪುತ್ರಿ.

Read More

ಮಡಿಕೇರಿ NEWS DESK  ಡಿ.12 :    ಭಾರತೀಯ ರೋಲರ್  ಸ್ಕೇಟಿಂಗ್ ಸಂಸ್ಥೆಯ ವತಿಯಿಂದ  ಮೈಸೂರಿನಲ್ಲಿ ನಡೆದ  62 ನೇ   ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಯುರೋ ಸ್ಕೂಲ್  ‌ಚಿಮ್ಮಿ ಹಿಲ್ಸ್ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿ ಡಿವಿನ್ ಗಣಪತಿ  400 ಮೀಟರ್ ಓಟದ ಸ್ಪರ್ಧೆಯಲ್ಲಿ  ಚಿನ್ನದ ಪದಕ ಮತ್ತು 600 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನುಗಳಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಅಯ್ಕೆಯಾಗಿದ್ದಾನೆ. ಮೂಲತಃ ಕೊಡಗಿನವರಾದ ಕೋಲೇರ ರೋಷನ್‌ ಹಾಗೂ ತಾಲಿ  ಧರ್ಮಾವತಿ ದಂಪತಿಯ ಪುತ್ರ ಡಿವಿನ್ ಗಣಪತಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾನೆ. ಇವರಿಗೆ ಬೃಂದಾವನ ಸ್ಕೇಟಿಂಗ್ ಸಂಸ್ಥೆಯ ತರಬೇತುದಾರರಾದ ಸಿ.ಎಂ.ನಾಗೇಶ್ ಹಾಗೂ ಮಧುಚಂದ್ರು ತರಬೇತಿ ನೀಡಿದ್ದಾರೆ.

Read More

ಕುಶಾಲನಗರ NEWS DESK ಡಿ.12 : ಕುಶಾಲನಗರ ಸಮೀಪದ ಹೆಬ್ಬಾಲೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಬನಶಂಕರಿ ಇಕೋ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳು ಕಣಿವೆ ಸಮೀಪದ ಭುವನಗಿರಿಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಇಂದು ಭೇಟಿ ನೀಡಿದರು. ಘಟಕದಲ್ಲಿ ನಡೆಯುವ  ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಹಸಿಕಸ ಮತ್ತು ಒಣಕಸ ವಿಂಗಡಣೆ ಮಾಡಿ ಈ ಕಸಗಳಿಂದ ಮನೆ ಕಟ್ಟುವ ಇಟ್ಟಿಗೆಯ ತಯಾರಿ ಮತ್ತು ಕಾಂಪೋಸ್ಟ್ ಗೊಬ್ಬರವನ್ನು ಹೇಗೆ ತಯಾರಿ ಮಾಡುತ್ತಾರೆ ಎಂಬ ಮಾಹಿತಿಯನ್ನು ಮನದಟ್ಟು ಮಾಡಿಕೊಂಡರು.  ನಂತರ ಕಣಿವೆಯ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಸ್ಥಳದ ಇತಿಹಾಸವನ್ನು ತಿಳಿದುಕೊಂಡರು. ಸ್ನೇಹಿತರೊಂದಿಗೆ ಹಾಗೂ ಶಿಕ್ಷಕರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡರು. ಈ ಸಂದರ್ಭ ಶಾಲೆಯ ಇಕೋ ಕ್ಲಬ್ ಮತ್ತು ವಿಜ್ಞಾನ ಶಿಕ್ಷಕಿ ಕೆ.ಎಸ್.ರಮ್ಯಾ ಮತ್ತು ಆಂಗ್ಲ ಭಾಷೆ ಶಿಕ್ಷಕಿ  ರಂಜನ ಹಾಜರಿದ್ದರು.

Read More

ಕುಶಾಲನಗರ NEWS DESK ಡಿ.12 : ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಫರ್ಟಿಲಿಟಿ‌ ಸೆಂಟರ್ ವತಿಯಿಂದ ಕುಶಾಲನಗರದಲ್ಲಿ ಔಟ್ರೀಚ್ ಕ್ಲಿನಿಕ್ ಸ್ಥಾಪಿಸುವ ಮೂಲಕ ಶೀಘ್ರದಲ್ಲೇ ಸೇವೆ ಒದಗಿಸಲಾಗುವುದು ಎಂದು ಕಾಂಗರೂ ಕೇರ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ನ ಫೌಂಡರ್ ಹಾಗೂ ಸಿಇಒ ಕೂಡ ಆದ ಮಕ್ಕಳ ತಜ್ಞ ಡಾ.ಶೇಖರ್ ಸುಬ್ಬಯ್ಯ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಮಹಿಳಾ ಮತ್ತು ಮಕ್ಕಳ ಚಿಕಿತ್ಸೆಗಾಗಿ ಸ್ಥಾಪಿಸಿರುವ ಆಸ್ಪತ್ರೆ ಬೆಂಗಳೂರು, ರಾಮನಗರ ಹಾಗೂ‌ ಮೈಸೂರಿನಲ್ಲಿ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮೈಸೂರು ಸುತ್ತಮುತ್ತಲ ವ್ಯಾಪ್ತಿಯಲ್ಲಿ ಸೇವೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಮೆಡಿ ಪ್ಲೆಕ್ಸ್ ಡಯಗ್ನಾಸ್ಟಿಕ್ ಲ್ಯಾಬ್ ಕೇಂದ್ರದಲ್ಲಿ ಔಟ್ ರೀಚ್ ಕ್ಲಿನಿಕ್ ಮುಂದಿನ ವಾರದಿಂದ ಕಾರ್ಯಾರಂಭ‌ ಮಾಡಲಿದೆ. ಕೊಡಗು ಜಿಲ್ಲೆಯ ವಿವಿಧೆಡೆಗಳಿಂದ ಹಾಗೂ ಗಡಿಭಾಗದಿಂದ ಮೈಸೂರಿಗೆ ಆಗಮಿಸುವವರಿಗೆ ಕುಶಾಲನಗರದಲ್ಲಿ ಔಟ್ ರೀಚ್ ಕ್ಲಿನಿಕ್ ಸ್ಥಾಪನೆಯಿಂದ ಅತ್ಯಂತ ಅನುಕೂಲ ಒದಗಲಿದೆ. ಮೈಸೂರಿನಿಂದ ತಜ್ಞ ವೈದ್ಯರು ತಪಾಸಣೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ. ಕೊಡಗು…

Read More

ಮಡಿಕೇರಿ NEWS DESK  ಡಿ.12 : ದೇವಟ್ ಪರಂಬು ಹತ್ಯಾಕಾಂಡದ 239ನೇ ವರ್ಷಾಚರಣೆ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಕೊಡವ ನರಮೇಧ ಸ್ಮಾರಕ ಸಮಾಧಿಯಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಹಿರಿಯರಿಗೆ ಗೌರವ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕುಗಳೊಂದಿಗೆ ಕೊಡವ ಸ್ವಯಂ ಆಡಳಿತ ಲ್ಯಾಂಡ್ ಅನ್ನು ರೂಪಿಸಬೇಕೆಂದು ಒತ್ತಾಯಿಸಿದರು. ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಆದಿಮಸಂಜಾತ ಕೊಡವರನ್ನು ಗುರುತಿಸಿ ಮತ್ತು ವಿದೇಶಿ ಆಡಳಿತಗಾರರು ಹಿಂದೆ ವಶಪಡಿಸಿಕೊಂಡ ಅಥವಾ ಅಡಮಾನ ಇಟ್ಟಿರುವ ಅವರ ಆನುವಂಶಿಕ ಭೂಮಿಯನ್ನು ಪುನಃಸ್ಥಾಪಿಸಬೇಕು. ದೇವಾಟ್‌ಪರಂಬ್‌ನಲ್ಲಿ ಅಂತರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯೆಯ ಸ್ಮಾರಕವನ್ನು ನಿರ್ಮಿಸಬೇಕು. ವಿಶ್ವಸಂಸ್ಥೆ (ಯುಎನ್‌ಒ) ಮತ್ತು ಭಾರತ ಸರ್ಕಾರವು ದೇವಾಟ್‌ಪರಂಬ್ ದುರಂತ ಮಡಿಕೇರಿ ಕೋಟೆ, ನಾಲ್ನಾಡು ಅರಮನೆಯಲ್ಲಿ ನಡೆದ ಕೊಡವ ಜನಾಂಗದ ರಾಜಕೀಯ ಹತ್ಯೆಗಳನ್ನು ಜಂಟಿಯಾಗಿ ಖಂಡಿಸಬೇಕು. ವಿಶ್ವರಾಷ್ಟ್ರ ಸಂಸ್ಥೆ (UNO) ದ ಅಂತರರಾಷ್ಟ್ರೀಯ…

Read More