ಲೇಖಕ: admin

ಮಡಿಕೇರಿ ಜ.7 NEWS DESK : ಗಡಿಗ್ರಾಮ ಕರಿಕೆ ಭಾಗದ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸುವ ಕೇಂದ್ರವನ್ನು ಮೂರಕ್ಕೆ ಬದಲಾಗಿ ಒಂದಕ್ಕೆ ಸೀಮಿತಗೊಳಿಸಿರುವ ಕ್ರಮವನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸಿದ್ದಾರೆ. ಮಾಜಿ ಮಂಡಲ ಪ್ರಧಾನ ಕೋಡಿ ಕೆ.ಪೊನ್ನಪ್ಪ ಹಾಗೂ ಸಾಮಾಜಿಕ ಕಾರ್ಯಕರ್ತ, ಕರಿಕೆ ಹಲ್ಪ್ ಲೈನ್ ಸೆಂಟರ್ ನ ಸ್ಥಾಪಕ ಶಿವಗಿರಿ ರಾಜೇಶ್ ಅವರು ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಪತ್ರ ಸಲ್ಲಿಸಿ ಒಂದು ಕೇಂದ್ರದಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರಿಕೆ ಗ್ರಾಮದಲ್ಲಿ ಸುಮಾರು 42 ವರ್ಷಗಳಿಂದಲೂ ಕರಿಕೆ ಸೊಸೈಟಿಯ ಅಕ್ಕಿಯನ್ನು ಗ್ರಾಮದ ಒಂದನೇ ಚೆತ್ತುಕಾಯ, ಎರಡನೇ ಎಳ್ಳುಕೊಚ್ಚಿ ಮತ್ತು ಮೂರನೇ ತೋಟಂ ಎಂಬಲ್ಲಿ ಆಯಾ ಭಾಗದ ಬಡವರಿಗೆ ವಿತರಣೆ ಮಾಡಲಾಗುತ್ತಿತ್ತು. ಪಡಿತರ ಚೀಟಿದಾರದಿಂದ ಒಂದೂ ರೂ. ವಸೂಲಿ ಮಾಡಲಾಗುತ್ತಿತ್ತು. ಅಲ್ಲದೆ ಖಾಲಿ ಗೋಣಿಚೀಲ ಮಾರಾಟ ಮಾಡಿಯೂ ಹಣ ಸಂಗ್ರಹಿಸಲಾಗುತ್ತಿತ್ತು. ಈ ನಿಯಮಬಾಹಿರ ಕ್ರಮದ ವಿರುದ್ಧ ಗ್ರಾಮಸ್ಥರು ಧ್ವನಿ ಎತ್ತಿದ ಕಾರಣಕ್ಕಾಗಿ ಅಥವಾ ಪ್ರತೀಕಾರವಾಗಿ ಎರಡು ಕೇಂದ್ರಗಳನ್ನು ಮುಚ್ಚಿ ಇದೀಗ ಒಂದು ಕೇಂದ್ರದಲ್ಲಿ…

Read More

ಮಡಿಕೇರಿ ಜ.7 NEWS DESK : ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಆಶ್ರಯದಲ್ಲಿ ಇದೇ ಮೊದಲ ಬಾರಿಗೆ ಪತ್ರಕರ್ತರ ಟರ್ಫ್ ಕ್ರಿಕೆಟ್ ಪಂದ್ಯಾವಳಿ ಮಾ.29 ರಂದು ಸಿದ್ದಾಪುರದಲ್ಲಿ ನಡೆಯಲಿದೆ. ಕುಶಾಲನಗರ ತಾಲ್ಲೂಕಿನ ಹೊಸಕೋಟೆಯ ಕೂರ್ಗ್ ಆರೆಂಜ್ ಬ್ಲಾಸಮ್  ಸ್ಪಾ ಮತ್ತು ರೆಸಾರ್ಟ್ ನಲ್ಲಿ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಸದಸ್ಯರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ವಿನೂತನವಾಗಿ ಟರ್ಫ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಎಂಟು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಹೇಳಿದರು.  ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ,ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕಿ ಸವಿತಾ ರೈ, ಮೊದಲ ಬಾರಿಗೆ ಐಪಿಎಲ್ ಮಾದರಿಯಲ್ಲಿ ಪತ್ರಕರ್ತರ ಕ್ರಿಕೆಟ್…

Read More

ಮಡಿಕೇರಿ ಜ.7 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಜ.9 ರಿಂದ 11ರ ವರೆಗೆ ನಗರದಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಸಿ.ಅರುಣ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಶಾಖೆ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ ಎಂದರು. ಕಾರ್ಯಕ್ರಮವನ್ನು ಜ.9 ರಂದು ಬೆಳಗ್ಗೆ 11 ಗಂಟೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ…

Read More

ಮಡಿಕೇರಿ ಜ.7 NEWS DESK : ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ಕೊಡಗು ಜಿಲ್ಲೆಯ ಶನಿವಾರಸಂತೆಯ ಅರುಣ್ ಪ್ರಸಾದ್ ಎಂ.ಎಸ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ‘Novelist as a Teacher: Canadian Jewish Fictional World of Mordecai Richler’ ಎಂಬ ಪ್ರೌಢಪ್ರಬಂಧಕ್ಕೆ ಇಂಗ್ಲೀಷ್ ವಿಷಯದಲ್ಲಿ ಪಿಹೆಚ್‍ಡಿ ಪದವಿಯನ್ನು ನೀಡಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಪ್ರೊ.ವಿಜಯ್ ಶೇಷಾದ್ರಿ ಅವರ ಮಾರ್ಗದರ್ಶನದಲ್ಲಿ ಅರುಣ್ ಪ್ರಸಾದ್ ಎಂ.ಎಸ್ ಪ್ರೌಢಪ್ರಬಂಧವನ್ನು ಮಂಡಿಸಿದ್ದರು. ಅರುಣ್ ಪ್ರಸಾದ್ ಎಂ.ಎಸ್ ಅವರು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ, ನಿವೃತ್ತ ಮುಖ್ಯ ಶಿಕ್ಷಕ ದಿ.ಶಿವಶಂಕರ್ ಎಂ.ಜಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ನಂಜಮ್ಮ ಕೆ.ಎಂ ದಂಪತಿಯ ಹಿರಿಯ ಪುತ್ರ.

Read More

ಸೋಮವಾರಪೇಟೆ ಜ.7 NEWS DESK :  ಪರ್ವತಾರೋಹಿ ಡಾ. ಬಿ.ಎಂ.ಲತಾ ಅವರನ್ನು ಅಕ್ಕನ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಅಕ್ಕನಬಳಗದ ಪದಾಧಿಕಾರಿಗಳು ಲತಾ ಅವರನ್ನು ಶಾಲುಹೂದಿಸಿ ಸನ್ಮಾನಿಸಿ, ಗೌರವಿಸಿದರು. ಮೂಲತಃ ಬಡುಬನ ಹಳ್ಳಿ ಗ್ರಾಮದವರಾದ ಲತಾ ಬೆಂಗಳೂರಿನಲ್ಲಿ ಸ್ತ್ರೀರೋಗ ತಜ್ಞರಾಗಿದ್ದಾರೆ. 57 ವರ್ಷದ ಪ್ರಾಯದ ಇವರು ಇತ್ತೀಚೆಗೆ ಎವರೆಸ್ಟ್ ಬೆಸ್ಕ್ಯಾಂಪ್ ಮೂಲಕ ಪರ್ವತವೇರಿ 18,514ಅಡಿ ಎತ್ತರದ ಕಾಲಾಪತ್ತರ್ ಎಂಬ ಸ್ಥಳ ಕ್ರಮಿಸಿ ಸಾಹಸಮೆರೆದಿದ್ದರು.  ವೃತ್ತಿಯಲ್ಲಿ ವೈದ್ಯರಾದರೂ ಮೆರಥಾನ್ ಓಟ ಇನ್ನಿತರೆ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಇವರು, ಈಗಾಗಲೇ 86 ದೇಶಗಳಿಗೆ ಭೇಟಿ ಕೊಟ್ಟು ಅಲ್ಲಿನ ಜನಜೀವನ ಹಾಗೂ ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಸನ್ಮಾನ ಸಂದರ್ಭ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ವೀರಶೈವ ಲಿಂಗಾಯತ ಸಂಘಟನಾವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಮಹೇಶ್, ಅಕ್ಕನ ಬಳಗದ ಅಧ್ಯಕ್ಷೆ ಗೀತಾರಾಜು, ಕಾರ್ಯದರ್ಶಿ ಮಾಯಾ ಗಿರೀಶ್, ಉಪಾಧ್ಯಕ್ಷೆ ಸರಿತ ಮಲ್ಲಿಕಾರ್ಜುನ,…

Read More

ಮಡಿಕೇರಿ ಜ.7 NEWS DESK : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 34ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನಾಚರಣೆಯ ಅಂಗವಾಗಿ ಜ.23 ರಂದು ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್, ಜಿಲ್ಲಾ ಮಟ್ಟದ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಪುರುಷರ ಮಹಿಳೆಯರ ಮತ್ತು ಪೌಢಶಾಲಾ ಮಕ್ಕಳ ಮ್ಯಾರಾಥಾನ್ ನಡೆಯಲಿದೆ. ಮೈ ಭಾರತ್, ಯುವ ಸಮಬಲೀರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿ ಮತ್ತು ಮಹಿಳೆಯರ ಹಗ್ಗಜಗ್ಗಾಟದಲ್ಲಿ ಭಾಗವಹಿಸುವ ಕ್ರೀಡಾ ತಂಡಗಳು ಜ.20 ರ ಒಳಗಾಗಿ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ತಾಳತ್ತಮನೆ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9741771810, 8762066118, 9632007915 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಜ.7 NEWS DESK : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಕೂಡಿಗೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಮತ್ತು ಜಾಗೃತಿ ಕಾರ್ಯ ನಡೆಯಿತು.  ಈ ಸಂದರ್ಭ ಠಾಣೆಯ ಅಧಿಕಾರಿಗಳು ಅಂಜಲ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಕೂಡಿಗೆ ಸರ್ಕಲ್ ನಲ್ಲಿ  ಸಭೆ‌ ನಡೆಸಿ ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲಿಸುವ ಕುರಿತು, ರಸ್ತೆ ಅಪಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.

Read More

ಮಡಿಕೇರಿ ಜ.7 NEWS DESK : ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ಕಾರ್ಯಕ್ರಮ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಜ.8 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಸಂಜೆ 4.30 ಗಂಟೆಗೆ ಶ್ರೀಶ್ರೀಗಳ ಪುರಪ್ರವೇಶವಾಗಲಿದೆ. ನಂತರ ಪೂರ್ಣ ಕುಂಭ ಮೆರವಣಿಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಚೌಡೇಶ್ವರಿ ದೇವಾಲಯದವರೆಗೆ ಸಾಗಲಿದೆ. ನಂತರ ಶ್ರೀಗಳಿಗೆ ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಫುಲಪುಷ್ಪ ಸಮರ್ಪಣೆ, ಫಲ ಮಂತ್ರಾಕ್ಷತೆ ನೆರವೇರಲಿದೆ ಎಂದು ದೈವಜ್ಞ ಬ್ರಾಹ್ಮಣ ಸಮಾಜದ ಪ್ರಮುಖರು ಮಾಹಿತಿ ನೀಡಿದ್ದಾರೆ. ಸ್ವಾಮೀಜಿಗಳ ಭವ್ಯ ಸ್ವಾಗತಕ್ಕಾಗಿ ನಗರದ ಮಹದೇವಪೇಟೆ ಹಾಗೂ ಶ್ರೀಚೌಡೇಶ್ವರಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಆಕರ್ಷಣೀಯವಾಗಿ ಅಲಂಕಾರಗೊಳಿಸಲಾಗಿದೆ. ದೈವಜ್ಞ ಬ್ರಾಹ್ಮಣ ಸಮಾಜದ ಬಂಧುಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

Read More

ಸುಂಟಿಕೊಪ್ಪ ಜ.7 NEWS DESK  : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿಯ ಕೊಳಂಬೆ ಗ್ರಾಮದ ಕೃಷಿಕ ದಿವಂಗತ ಮಾದಪ್ಪ ಅವರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ದೇವಕ್ಕಿ (83) ಅವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು.

Read More

ಮಡಿಕೇರಿ  ಜ.7  NEWS DESK : ಬೆಳಗಾವಿಯ ಹಾರೋಗೇರಿ ಆಜೂರ ಪ್ರತಿಷ್ಠಾನ ನೀಡುವ ರಾಜ್ಯ ಮಟ್ಟದ ಆಜೂರ ಪ್ರಶಸ್ತಿಗೆ ಮಡಿಕೇರಿಯ ಬರಹಗಾರ್ತಿ ಕೆ.ಜಯಲಕ್ಷ್ಮಿ ಅವರು ರಚಿಸಿರುವ ‘ಮತ್ತೆ ವಸಂತ’ ಕಥಾ ಸಂಕಲನ ಆಯ್ಕೆಯಾಗಿದೆ. ಜ.15 ರಂದು ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. ‘ಮತ್ತೆ ವಸಂತ’ ಕಥಾ ಸಂಕಲನ 2024 ರಲ್ಲಿ ಪ್ರಕಟಗೊಂಡಿತ್ತು. ಜಯಲಕ್ಷ್ಮಿ ಅವರು ಮಡಿಕೇರಿಯ ಸಂತ ಜೋಸೆಫರ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮಡಿಕೇರಿಯ ಜೀವ ವಿಮಾ ನಿಗಮದ ಉದ್ಯೋಗಿ ವಿ.ಹೆಚ್.ಜಯಕುಮಾರ್ ಅವರ ಪತ್ನಿ.

Read More