ಲೇಖಕ: admin

ವಿರಾಜಪೇಟೆ ಮೇ 29 NEWS DESK :  ಅನ್ಯ ಭಾಷೆ ಹೊಂದಿರುವ ಮಕ್ಕಳಲ್ಲಿ ಬೋಧಕರು ನೈಜ ಭಾಷೆಯ ಮನೋಭಾವನೆ ಬರುವಂತೆ ನೋಡಿಕೊಂಡು ಬೋಧಿಸಬೇಕಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ದಲಿತ ಸಾಹಿತ್ಯ ಪರಿಷತ್ ನುಡಿ ಉತ್ಸವ ಮತ್ತು ಕೊಡಗು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಡಿ ಪ್ರದೇಶಗಳ ಪಠ್ಯ ಕ್ರಮದಲ್ಲಿ ಕನ್ನಡ ಭಾಷ ನೀತಿ ಹಾಗೂ ಬಹುಭಾಷ ವಾಸ್ತವಿಕತೆಗಳ ಮರುಚಿಂತನೆ ಎನ್ನುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಕನ್ನಡ ಭಾಷೆ ಸಾವಿರಾರು ವರ್ಷದ ಇತಿಹಾಸ ಇರುವ ಭಾಷೆ. ಇದಕ್ಕೆ 2008 ರಲ್ಲಿ ಶಾಸ್ತ್ರೀಯ ಸ್ಥಾನ ಬಂದಿರುವುದು ಹೆಮ್ಮೆ ಗೌರವ ಎಂದು ಹೇಳಿಕೊಂಡರೆ ಸಾಲದು. ಈ ಪುರಾತನ ಭಾಷೆಯಲ್ಲಿ ಸಾಹಿತ್ಯ, ಪರಂಪರೆ, ಸಂಸ್ಕೃತಿ, ಆಚಾರ-ವಿಚಾರ ಆಳವಾಗಿದ್ದು, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ಆಗಬೇಕು. ಇಂದು ಆಯೋಜಿಸಿರುವ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ಇದು ನಮ್ಮ ಸಾಹಿತ್ಯ…

Read More

ಮಡಿಕೇರಿ ಮೇ 29 NEWS DESK : ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರು/ ಗ್ರಾಹಕರು ಕ್ರಮವನ್ನು ಗಮನಿಸಿ ಪಾಲಿಸಬೇಕಾಗಿ ಇಲಾಖೆಯು ವಿನಂತಿಸುತ್ತಿದೆ. ಗೃಹ ಬಳಕೆ ವಿದ್ಯುತ್ ಗ್ರಾಹಕರು ಗಮನಿಸಬೇಕಾದ ಅಂಶಗಳು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಎಲ್ಲಾ ವಿದ್ಯುತ್ ಕಾಮಗಾರಿಗಳನ್ನು ಎಷ್ಟೇ ಚಿಕ್ಕದಿರಲಿ, ಪರಿಣಿತ ವ್ಯಕ್ತಿಗಳಿಂದ ನಿರ್ವಹಿಸಬೇಕು. ಭಾರತೀಯ ಗುಣಮಟ್ಟ ಸಂಸ್ಥೆಯ (ಐಎಸ್‍ಐ) ಪ್ರಮಾಣೀಕೃತ ವಿದ್ಯುತ್ ಉಪಕರಣ, ಕೇಬಲ್, ವೈರ್ ಹಾಗೂ ಸುರಕ್ಷತಾ ಉಪಕರಣಗಳನ್ನು ಬಳಸಬೇಕು. ವಿದ್ಯುತ್ ಸ್ಥಾವರದಲ್ಲಿ ಪರಿಣಾಮಕಾರಿ ಭೂಸಂಪರ್ಕ ವ್ಯವಸ್ಥೆ ಕಲ್ಪಿಸಿ, ನಿರ್ವಹಿಸಬೇಕಾಗಿರುತ್ತದೆ. ಜೀವ ರಕ್ಷಕ ಆರ್‍ಸಿಡಿ ಗಳನ್ನು ಬಳಸಿ ವಿದ್ಯುತ್ ಸೋರಿಕೆಯಿಂದ ಉಂಟಾಗುವ ಅಪಾಯವನ್ನು ತಪ್ಪಿಸುವುದು. ಭಾರಿ ವಿದ್ಯುತ್ ಪರಿಕರಗಳಾದ ರೆಫ್ರಿಜರೇಟರ್, ಮಿಕ್ಸರ್, ಘೀಸರ್, ವಾಷಿಂಗ್ ಮಷಿನ್ ಮುಂತಾದವುಗಳಿಗೆ ಮೂರು ಪಿನ್ ಪ್ಲಗ್ ಸಾಕೆಟ್ಸ್‍ಗಳಿರುವ ಪ್ರತ್ಯೇಕ ಸ್ವಿಚ್ ನಿಯಂತ್ರಣದಿಂದಲೇ ವಿದ್ಯುತ್ ಸರಬರಾಜು ಕಲ್ಪಿಸಿ, ಮೂರನೇ ಪಿನ್‍ಗೆ ಭೂಸಂಪರ್ಕ ಕಲ್ಪಿಸಬೇಕಿದೆ. ವಿದ್ಯುತ್ ಸ್ವಿಚ್ ಹಾಗೂ ಸಾಕೆಟ್‍ಗಳನ್ನು ಕೈಗೆ ಎಟುಕುವ ಎತ್ತರದಲ್ಲಿ ಮಕ್ಕಳಿಗೆ ಸಿಗದ ಹಾಗೆ…

Read More

ಮೈಸೂರು, ಮೇ 29 NEWS DESK : ಮೈಸೂರು ಜಿಲ್ಲೆಯಾದ್ಯಂತ ರಸ್ತೆ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂಸದ ಯದುವೀರ್ ಒಡೆಯರ್ ಅವರು ಮೈಸೂರು, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳನ್ನು ಒಳಗೊಂಡಂತೆ ಹಲವು ಪ್ರಮುಖ ರಸ್ತೆ ಅಭಿವೃದ್ಧಿ ಮತ್ತು ಸುಧಾರಣಾ ಕಾಮಗಾರಿಗಳನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ರೂ.50 ಕೋಟಿ ಮೌಲ್ಯದ ಕೇಂದ್ರ ರಸ್ತೆ ನಿಧಿ ಮೂಲಕ ಕೈಗೆತ್ತಿಕೊಳ್ಳಲಾಗುತ್ತಿರುವ ಈ ಕಾಮಗಾರಿಗಳು ರಸ್ತೆ ಸಂಪರ್ಕ ಸುಧಾರಣೆ, ಸುರಕ್ಷಿತ ಸಂಚಾರ, ವಾಹನ ದಟ್ಟಣೆ ನಿವಾರಣೆ ಹಾಗೂ ಗ್ರಾಮೀಣ ಮತ್ತು ಆರ್ಥಿಕ ಅಭಿವೃದ್ಧಿಗೆ ನೆರವಾಗಲಿವೆ. ಈ ಯೋಜನೆಗಳಡಿ ಹುಣಸೂರು ತಾಲ್ಲೂಕಿನ ರಾಮನಾಥಪುರ–ತೆರಕನಾಂಬಿ ವಿಭಾಗದ SH-86 ರಸ್ತೆಯ ಕಿಮೀ 50.75 ರಿಂದ 64.87ರವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಸುಧಾರಣಾ ಕಾಮಗಾರಿಗೆ ರೂ.6 ಕೋಟಿ ಮಂಜೂರಾಗಿದೆ. ಅದೇ ರೀತಿ, ಹಾದ್ಯ (SH-86)ದಿಂದ ಅವರ್ತಿ (SH-287)ವರೆಗೆ ಕಿತ್ತೂರು, ಅತ್ತಿಗುಡು, ಬೆಟ್ಟದಪುರ (SH-21) ಹಾಗೂ ಚಿಕ್ಕನೇರಳೆ ಮಾರ್ಗವಾಗಿ ಪಿರಿಯಾಪಟ್ಟಣ ತಾಲ್ಲೂಕಿನ ಕಿಮೀ 24.75 ರಿಂದ…

Read More

ಮಡಿಕೇರಿ ಮೇ 28 NEWS DESK :  ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯ ಸಂರಕ್ಷಣೆಯ ಪ್ರಚಾರದ ಮೂಲಕ ಮಾರುಕಟ್ಟೆ ವ್ಯಾಪಿಸುತ್ತಿರುವ ಈ ದಿನಗಳಲ್ಲಿ ಎಲ್ಲಾ ರೀತಿಯ  ಪ್ರಚಾರವನ್ನೂ ನಂಬುವ ಬದಲಿಗೆ ಸೂಕ್ತ ವೈದ್ಯರ ಸಲಹೆಯಂತೆ   ಚಿಕಿತ್ಸೆ ಪಡೆಯಬೇಕೆಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆಯ ವೈದ್ಯೆ ಡಾ ಕೆ.ಟಿ.ರಾಜಶ್ರೀ ಸಲಹೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ರಾಜಶ್ರೀ,  ಹಿಂದಿನ ಕಾಲದಲ್ಲಿ ನೀಡಲಾಗುತ್ತಿದ್ದ ಚಿಕಿತ್ಸೆ ಮತ್ತು ಹಳೇ ಆರೋಗ್ಯ ಪದ್ದತಿಯನ್ನೇ ನಂಬಿಕೊಂಡಿರಬಾರದು. ಆರೋಗ್ಯ ಪದ್ದತಿ ಕೂಡ ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಹೋಗುತ್ತದೆ ಎಂದರು.  ಇಂದಿನ ನವ ತಂತ್ರಜ್ಞಾನದ ಕಾಲದಲ್ಲಿ   ಸಾಮಾಜಿಕ ಜಾಲತಾಣಗಳ ಮೂಲಕ ಆರೋಗ್ಯ ಚಿಕಿತ್ಸೆ ಸಂಬಂಧಿತ ಪ್ರಚಾರ ನಡೆಯುತ್ತಿದೆ ಆದರೆ ಇಂಥ ಪ್ರಚಾರವನ್ನು ನಂಬುವ ಬದಲಿಗೆ ಸೂಕ್ತ ವೈದ್ಯರನ್ನು ಮುಖತ ಭೇಟಿಯಾಗಿ ಚಿಕತ್ಸೆ ಪಡೆಯುವುದು ಅಗತ್ಯ ಎಂದೂ ಅವರು ಹೇಳಿದರು. ರೋಟರಿ ಜಿಲ್ಲೆ 3181 ನ…

Read More

ಮಡಿಕೇರಿ ಮೇ 29 NEWS DESK : ಕನ್ನಡ ಭಾಷೆಯ ಅಭಿವೃದ್ಧಿಗೆ ಸಣ್ಣ ಸಣ್ಣ ಭಾಷೆಗಳ ಕೊಡುಗೆ ಅಪಾರವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಹಾಗೂ ಶಿಕ್ಷಣಕ್ಕೆ ಒತ್ತು ನೀಡುವಲ್ಲಿ ಸರಕಾರದ ಶಿಕ್ಷಣ ನೀತಿಯಲ್ಲಿ ಶಾಲಾ ಗ್ರಂಥಾಲಯಗಳ ಪಾತ್ರ ಪ್ರಮುಖವಾಗಿದೆ ಎಂದು ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಸಾಹಿತಿ ಹಾಗೂ ಕಥೆಗಾರ ಅಬ್ದುಲ್ ರಶೀದ್ ಬಣ್ಣಿಸಿದ್ದಾರೆ. ಸುಂಟಿಕೊಪ್ಪದ ಎಸ್.ಎಸ್.ಇಂಟರ್‍ನ್ಯಾಷನಲ್ ಸಭಾಂಗಣದ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ಶುಕ್ರವಾರ ನಡೆದ ಕೊಡಗು ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗನ್ನು ಕರ್ನಾಟಕದ ಕಾಶ್ಮೀರ ಎಂದು ಹೇಳುತ್ತಾರೆ. ಆದರೆ ಈ ಹೋಲಿಕೆ ಯಾಕೋ ಸರಿ ಬರುತ್ತಿಲ್ಲ ಕಾಶ್ಮೀರದ ಕಷ್ಟ ಕಾರ್ಪಣ್ಯಗಳ ಅರಿವು ಇರುವವರು ಮತ್ತು ಕೊಡಗಿನ ಚೆಲುವನ್ನು ಚೆನ್ನಾಗಿ ಬಲ್ಲವರು ಯಾರೂ ಸಹ ಈ ಹೋಲಿಕೆ ಸರಿಯಲ್ಲ ಎಂದು ಹೇಳುತ್ತಾರೆ. ಈ ನೆಲದ ಮಣ್ಣು, ಗಾಳಿ, ಇಲ್ಲಿನ ಗುಡಿಗಳು, ಭಗವತಿ, ಈಶ್ವರ,…

Read More

ಮಡಿಕೇರಿ NEWS DESK ಮೇ 29 : ಕೊಡಗು ಜಿಲ್ಲೆಯಲ್ಲಿ ಸ್ವಂತ ಸೂರಿಲ್ಲದೆ ಸಂಕಷ್ಟದ ಬದುಕು ಸಾಗಿಸುತ್ತಿರುವ ಸುಮಾರು 60 ಸಾವಿರಕ್ಕೂ ಅಧಿಕ ನಿವೇಶನ ರಹಿತ ಬಡವರಿಗೆ ತಲಾ 5 ಸೆಂಟ್ ನಿವೇಶನ ಹಂಚಿಕೆ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಮತ್ತು ನವ ಕರ್ನಾಟಕ ನಿರ್ಮಾಣ ಆಂದೋಲನ ಸಮಿತಿಯ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬೇಡಿಕೆ ಈಡೇರಿಸಲು ಸರಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪ್ರತಿಭಟನಾಕಾರರು, ಸೂಕ್ತ ಸ್ಪಂದನೆ ದೊರೆಯದೇ ಇದ್ದಲ್ಲಿ ರಾಜ್ಯ ಮಟ್ಟದ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದರು. ಭೂಕಬಳಿಕೆದಾರರ ಬಳಿ ಇರುವ ಸರಕಾರಿ ಭೂಮಿಯ ಒತ್ತುವರಿಯನ್ನು ತಕ್ಷಣ ತೆರವು ಮಾಡಬೇಕು. ಬಡವರಿಗೆ ನಿವೇಶನ ಹಂಚಿಕೆ ಮಾಡಲು ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ 50 ಎಕರೆ ಭೂಮಿ ಕಾಯ್ದಿರಿಸಬೇಕು. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಪೊನ್ನತ್ ಮೊಟ್ಟೆ ಭಾಗದಲ್ಲಿ ಮತ್ತು ಮಾದಾಪುರದ ಕುಂಬೂರು…

Read More

ಮಡಿಕೇರಿ NEWS DESK ಮೇ 29 : ಚೆನ್ನೈನ ಮನೋಗಾನಂ ಸಂಗೀತ ವಿದ್ಯಾ ಸಂಸ್ಥೆ ಮಡಿಕೇರಿ ಹಾಗೂ ತಲಕಾವೇರಿಯಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮೇ 30ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 8.30 ಕ್ಕೆ ಹಾಗೂ ಮೇ 31ರಂದು ಮಡಿಕೇರಿಯ ಗೌಳಿ ಬೀದಿಯ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಗೆ ಕಾರ್ಯಕ್ರಮಗಳು ನಡೆಯಲಿದೆ. ಈ ಸಂಗೀತ ವಿದ್ಯಾ ಸಂಸ್ಥೆ ಪ್ರತಿ ವರ್ಷ ತನ್ನ ವಿದ್ಯಾರ್ಥಿಗಳನ್ನು ದೇಶದ ವಿವಿಧ ದೇವಾಲಯಗಳಿಗೆ ಕರೆದುಕೊಂಡು ಹೋಗಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಸಂಸ್ಥೆಯ ಆರು ಮತ್ತು ಏಳನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಕೊಡಗಿನಲ್ಲಿ ಸಂಗೀತ ಸುಧೆ ನಡೆಯಲಿದ್ದು, ಮಕ್ಕಳ ಸಂಗೀತದೊoದಿಗೆ ಪಿಟೀಲು ವಾದನ ಕೂಡ ಇರಲಿದೆ. ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಅವರ ಸಹಕಾರದಿಂದ ಈ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ರಮಶ್ರೀ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಮೇ 28 : ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ತರಬೇಕು ಮತ್ತು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಡೆದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಮೇ 30 ರಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟವನ್ನು ರೂಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರು ರಾಜ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿರುವ ಸಂಘಟಿತ, ಅಸಂಘಟಿತ ಮತ್ತು ಯೋಜನಾ ಕಾರ್ಮಿಕರ ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರಕಾರ ಜಾರಿಗೆ ತರುತ್ತಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನ ನೀಡಿರುವ ಅಧಿಕಾರವನ್ನು ರಾಜ್ಯ ಸರಕಾರ ಬಳಸಿಕೊಂಡು ಇದನ್ನು ತಡೆಯಬೇಕು. ಆ ಮೂಲಕ ಸೂಕ್ತ ತಿದ್ದುಪಡಿಗಳೊಂದಿಗೆ…

Read More

ಮಡಿಕೇರಿ NEWS DESK ಮೇ 28 : ತಾಲ್ಲೂಕು ಮಟ್ಟದಲ್ಲಿ ನಡೆಯುವ ರೂ.50 ಲಕ್ಷಕ್ಕೆ ಒಳಪಟ್ಟ ಕಾಮಗಾರಿಗಳನ್ನು ಆಯಾ ತಾಲ್ಲೂಕಿನ ಗುತ್ತಿಗೆದಾರರೇ ಪಡೆಯಬೇಕು ಎಂದು ಈಗಾಗಲೇ ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಸಂಘಗಳಿಗೆ ಮನವಿ ಮಾಡಿದೆ. ಇದರೊಂದಿಗೆ ಹೊರ ಜಿಲ್ಲೆಯ ಗುತ್ತಿಗೆದಾರರ ಮನವೊಲಿಸುವ ಪ್ತಯತ್ನ ಮಾಡಲಾಗುತ್ತದೆ ಎಂದು ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರ ಸಂಕಷ್ಟ್ಟದ ಪರಿಹಾರಕ್ಕೆ ಪೂರಕವಾಗಿ, ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿನ 50 ಲಕ್ಷ ರೂ. ಮೊತ್ತದ ಕಾಮಗಾರಿಯ ಟೆಂಡರನ್ನು ಇತರ ತಾಲ್ಲೂಕು ಮತ್ತು ಜಿಲ್ಲೆಯವರು ಪಡೆಯದಂತೆ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬoಧಿಸಿದoತೆ, ಹೊರ ಜಿಲ್ಲೆಯ ಗುತ್ತಿಗೆದಾರರು ಶೇ.25 ರಿಂದ 30 ರಷ್ಟು ಕಡಿಮೆ ಮೊತ್ತಕ್ಕೆ ಟೆಂಡರ್‌ಗಳನ್ನು ಕರೆಯುತ್ತಿರುವುದು ಸಮಸ್ಯೆಯನ್ನು ಸೃಷ್ಟಿಸಿದೆ. ಇಷ್ಟು ಕಡಿಮೆ…

Read More

ಮಡಿಕೇರಿ NEWS DESK ಮೇ 28 : ಸರಕಾರ ವಿಧಿಸುತ್ತಿರುವ ತೆರಿಗೆ ಹೊರೆ ದೇಶದ ಜನಸಾಮಾನ್ಯರನ್ನು ಕಂಗಾಲಾಗಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಮಧ್ಯ ಪ್ರಾಚ್ಯದ ಯುದ್ಧದ ಹಿನ್ನೆಲೆ ತೈಲದ ಕೊರತೆ ಇರುವುದರಿಂದ ಬೆಲೆ ಹೆಚ್ಚಳವೆನ್ನಲಾಗುತ್ತ್ತಿದೆ. ಬೆಲೆ ಹೆಚ್ಚಳ ಮಾಡಿದರೆ ಕೊರತೆ ಇರುವ ತೈಲ ಲಭ್ಯವಾಗುತ್ತದೆಯೇ ಎಂದು ಲೇವಡಿ ಮಾಡಿದರು. ತೈಲ ಬೆಲೆ ಹೆಚ್ಚಳದಿಂದ ಬೃಹತ್ ತೈಲ ಕಂಪೆನಿಗಳು ಲಾಭ ಪಡೆಯುತ್ತಿವೆ, ಇಂತಹ ವಿಚಾರಗಳನ್ನು ಜನಸಾಮಾನ್ಯರು ಪ್ರಶ್ನಿಸಬೇಕಿದೆ. ಒಂದು ಟೂತ್ ಪೇಸ್ಟ್ ಕೊಳ್ಳುವಾಗ ಅದಾನಿ ನೀಡುವಷ್ಟೆ ತೆರಿಗೆಯನ್ನು ಸಮಾಜದ ಕೆಳ ಸ್ತರದಲ್ಲಿರುವ ಜನಸಾಮಾನ್ಯರು ಕೂಡ ನೀಡುತ್ತಾರೆ. ಪ್ರಸ್ತುತ ಅತ್ಯಧಿಕ ತೆರಿಗೆ ಪಾವತಿಸುತ್ತಿರುವವರು ಜನಸಾಮಾನ್ಯರೇ ಆಗಿದ್ದಾರೆ. ಇಂದಿನ ತೆರಿಗೆಗಳು ಹೆಚ್ಚಿನ ಹೊರೆಯಾಗುತ್ತಿರುವುದು ಕಳವಳಕಾರಿ ಎಂದರು. ಪ್ರಮುಖ ರಾಜಕೀಯ ಪಕ್ಷಗಳು ಜನ ಹಿತಕ್ಕೆ ಪೂರಕವಾಗಿ ಕಾರ್ಯನಿರ್ವಹಿಸದೆ ಸ್ವಹಿತಾಸಕ್ತಿ ಮತ್ತು ಕುಟುಂಬ ರಾಜಕಾರಣದಲ್ಲಿ…

Read More