ಮಡಿಕೇರಿ, NEWS DESK ಫೆ.12 : ಶಿವರಾತ್ರಿ ಪ್ರಯುಕ್ತ ಶ್ರೀ ರಾಮಾಂಜನೇಯ ಭಜನಾ ಮಂಡಳಿ ವತಿಯಿಂದ ಫೆ.15ರಂದು ವಿವಿಧ ಭಜನಾ ತಂಡಗಳಿಂದ ನಗರದಲ್ಲಿ ಸಂಕೀರ್ತನೆ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಕೆ.ಕೆ.ಮಹೇಶ್ ಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಮತ್ತು ಗ್ರಾಮಾಂತದ ೨೫ ಭಜನಾ ತಂಡಗಳು ಪಾಲ್ಗೊಳ್ಳಲಿವೆ. ನಗರ ಸಂಕೀರ್ತನೆ ಸಂಜೆ 6 ಗಂಟೆಗೆ ಕೋದಂಡರಾಮ ದೇವಸ್ಥಾನದಿಂದ ಆರಂಭಗೊಳ್ಳಲಿದೆ. ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ಹಾಗೂ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರು ಉದ್ಘಾಟಿಸಲಿದ್ದಾರೆ. ನಂತರ ಮುತ್ತಪ್ಪ ದೇವಸ್ಥಾನ, ಬನ್ನಿಮಂಟಪ, ಚೌಕಿ, ನಗರದ ಪೊಲೀಸ್ ಠಾಣೆ, ಜಿ.ಟಿ ವೃತ್ತ, ಎಂ.ಎಂ.ವೃತ್ತವಾಗಿ ಆಂಜನೇಯ ದೇವಸ್ಥಾನದ ಮೂಲಕ ಓಂಕಾರೇಶ್ವರ ದೇವಾಲಯದಲ್ಲಿ ಮಂಗಳವಾಗಲಿದೆ ಎಂದರು. ಮೆರವಣಿಗೆಯಲ್ಲಿ ಭಜನಾ ಸಂಕೀರ್ತನೆಗಳು ಮೊಳಗಲಿದೆ. ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲೊಂಡು ಕಾರ್ಯಕ್ರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ರಾಮಾಂಜನೇಯ ಭಜನಾ ಮಂಡಳಿಯ ಪ್ರಮುಖರಾದ ದಿನೇಶ್ ಕುಮಾರ್, ಚಂದ್ರಶೇಖರ್, ವಿಶಾಲಾಕ್ಷಿ ಹಾಗೂ ರಂಜನ್ ಉಪಸ್ಥಿತರಿದ್ದರು.
ಲೇಖಕ: admin
ಕುಶಾಲನಗರ, NEWS DESK ಫೆ.12 : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿರುವ ಎಂಪ್ಲಾಯೀಸ್ ಯೂನಿಯನ್ ಹಾಗೂ ಮೈಸೂರು ವಿಭಾಗದ ಕೈಗಾರಿಕಾ ಕಾರ್ಮಿಕ ಯೂನಿಯನ್ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯಿದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಕೈಗಾರಿಕಾ ಕೇಂದ್ರದಿಂದ ಕುಶಾಲನಗರ ತಾಲ್ಲೂಕು ತಹಶಿಲ್ದಾರರ ಕಚೇರಿಯವರೆಗೆ ಮೆರವಣಿಗೆ ಸಾಗಿದರು. ನಂತರ ಕಾರ್ಮಿಕರ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ತಹಶಿಲ್ದಾರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯ ಮೆರವಣಿಗೆಯಲ್ಲಿ ಎಸ್.ಎಲ್.ಎನ್ ಕಾಫಿ ಎಂಪ್ಲಾಯೀಸ್ ಯೂನಿಯನ್ ನ ಐವತ್ತಕ್ಕೂ ಹೆಚ್ಚು ಕಾರ್ಮಿಕರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆಗಳ ಭಿತ್ತಿಪತ್ರಗಳನ್ನು ಇಡಿದು ಮೆರವಣಿಗೆಯಲ್ಲಿ ಸಾಗಿದರು. ಈ ಸಂದರ್ಭದಲ್ಲಿ ಎ.ಐ.ಟಿ.ಯು.ಸಿ ಮೈಸೂರು ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಜೆ. ಸೋಮಶೇಖರ್ ಅರಸ್, ರಾಜ್ಯ ಸಮಿತಿ ಕಾರ್ಯದರ್ಶಿ ಹೆಚ್.ಬಿ.ರಾಮಕೃಷ್ಣ, ಎಸ್.ಎಲ್.ಎನ್ ಘಟಕದ ಅಧ್ಯಕ್ಷ ಎಸ್.ಶಿವರಾಘವೇಂದ್ರ, ಡಿ.ಆರ್. ರವಿತೇಜ, ಎಸ್.ಆರ್.ಲೋಕೇಶ್,…
ಮಡಿಕೇರಿ NEWS DESK ಫೆ.12 : ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ತಡಿಯಪ್ಪನ ನರೇಂದ್ರ, ಪೊಕ್ಕುಳಂಡ್ರ ರಮೇಶ್, ಕಾರ್ಯದರ್ಶಿಯಾಗಿ ಮಂಜAಡ್ರ ರೇಖಾ ಉಲ್ಲಾಸ್, ಜಂಟಿ ಕಾರ್ಯದರ್ಶಿಯಾಗಿ ಚಂಡಿರ ಸುಂದರ, ಖಜಾಂಚಿಯಾಗಿ ಬಿಳಿಯಂಡ್ರ ಹರಿಪ್ರಸಾದ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಪೊಕ್ಕುಲಂಡ್ರ ದನೋಜ್ (ದಿವ್ಯ), ಗೌಡದಾರೆ ಚೋಟು ಬಿದ್ದಪ್ಪ, ಕತ್ರಿ ಕೊಲ್ಲಿ ನಂಜುಂಡ, ತೆಕ್ಕಡೆ ಗಾಯತ್ರಿ, ಉಪ್ಪುಂಡಿ ಬಾಬಿ ದೇವಯ್ಯ, ಮುಕ್ಕಾಟಿ ದಿಲೀಪ್, ಪೊಕ್ಕುಳಂಡ್ರ ದಿನೇಶ್, ಕಾಯರ ತೋಡಿ ನಾಣಯ್ಯ, ಕೊಂಪುಳಿರ ಪೃಥ್ವಿ, ಜೈನೀರ ತನು ತಮ್ಮಯ್ಯ, ಖಾಯಂ ಗೌರವ ಅಧ್ಯಕ್ಷರಾಗಿ ಡಾ.ಕೆ.ವಿ.ಚಿದಾನಂದ, ಡಾ.ಕೆ.ವಿ.ರೇಣುಕಾ ಪ್ರಸಾದ್, ಖಾಯಂ ಸಲಹೆಗಾರರಾಗಿ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಹಾಗೂ ಉಪಾಧ್ಯಕ್ಷ ಡಾ.ರಾಜೇಶ್ ತೇನನ ಅವರು ಮುಂದುವರೆಯಲಿದ್ದಾರೆ ಎಂದು ವಿರಾಜಪೇಟೆ ಗೌಡ ಸಮಾಜದ ಪ್ರಕಟಣೆ ತಿಳಿಸಿದೆ. ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ, ಮಡಿಕೇರಿ ಗೌಡ ಸಮಾಜದ ನಿರ್ದೇಶಕ ತೋಟಂಬೈಲು…
ಕಣಿವೆ NEWS DESK ಫೆ.12 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರನ್ನು ಭೇಟಿ ಮಾಡಿ ಫಲತಾಂಬೂಲ ನೀಡಿ ಅಭಿನಂದಿಸಿದರು. ಹಾಗೆಯೇ ಈ ತಿಂಗಳ ತಾ. 14 ರಂದು ಕುಶಾಲನಗರದಲ್ಲಿ ಆಯೋಜಿಸಿರುವ ಪುಲ್ವಾಮಾ ಹುತಾತ್ಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪುಲಿಯಂಡ.ಎಂ.ಚಂಗಪ್ಪ, ಬಿ.ಎಂ.ರವೀಂದ್ರ, ಜಿ.ಕೆ.ದಿನೇಶ್ ಕುಮಾರ್, ಹರೀಶ್ ಕುಮಾರ್, ಎನ್.ಎಂ.ಭೀಮಯ್ಯ ಇದ್ದರು.
ವಿರಾಜಪೇಟೆ NEWS DESK ಫೆ.12 : ವಿದ್ಯಾರ್ಥಿಗಳಲ್ಲಿ “ವಿವಿಧತೆಯಲ್ಲಿ ಏಕತೆ”ಯ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ನರ್ಸರಿ ವಿಭಾಗದ ವಿದ್ಯಾರ್ಥಿಗಳಿಗೆ ಜನಾಂಗೀಯ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳೊಂದಿಗೆ ಸಾಂಪ್ರದಾಯಿಕ ಉಡುಗೆ ಯನ್ನು ತೊಟ್ಟು ಬಹಳ ಉತ್ಸಾಹದಿಂದ ಭಾಗವಹಿಸಿ, ಪೋಷಕರೇ ತಯಾರಿಸಿ ತಂದಿದ್ದ ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ಹಂಚಿ ಪರಸ್ಪರ ಸಂತೋಷವನ್ನು ವ್ಯಕ್ತಪಡಿಸಿದರು. ಈ ಒಂದು ಸಂದರ್ಭದಲ್ಲಿ ಪೋಷಕರಿಗೆ ಮನೋರಂಜನ ಕ್ರೀಡೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾ ನ್ ಸುದೇಶ್ ಬಿ.ಎಸ್, ಕಾರ್ಯದರ್ಶಿಯವರಾದ ಶ್ರೀಮಾನ್ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು, ಸಂಯೋಜಕಿ ಅಮೃತ ಅರ್ಜುನ್, ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕಿ ಶ್ರೀಮತಿ ಲೀನಾ ಹಾಗೂ ಶ್ರೀಮತಿ ಗಂಗಾ ನೆರವೇರಿಸಿದರು.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಹನಿಯ ಎ ಚಿತ್ರಕಲೆ ಸ್ಪರ್ಧೆಯಲ್ಲಿ ಹಾಗೂ ಬೋವ್ವೆರಿಯಂಡ ಹನ್ಸಿಕ ಪೊನ್ನಪ್ಪ ಭರತನಾಟ್ಯ ಸ್ಪರ್ಧೆಯಲ್ಲಿ ಉತ್ತಮ ರೀತಿಯ ಪ್ರದರ್ಶನವನ್ನು ನೀಡಿ ನಾಲ್ಕನೇ ಸ್ಥಾನ ಗಳಿಸಿರುತ್ತಾರೆ. ಇವರಿಗೆ ಸಮಾಧಾನಕರ ಬಹುಮಾನದೊಂದಿಗೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. ತಮ್ಮ ಅದ್ಭುತ ಪ್ರತಿಭೆಯಿಂದ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸುಧೇಶ್ ಬಿ. ಎಸ್, ಕಾರ್ಯದರ್ಶಿಯರಾದ ಶ್ರೀಮಾನ್ ವಿನೋದ್ ಪಿ. ಎನ್, ಮುಖ್ಯ ಶಿಕ್ಷಕಿಯಾದ ಪಾರ್ವತಿ ಯು.ಪಿ, ಸಂಯೋಜಕಿ ಯಾದ ಅಮೃತ ಅರ್ಜುನ್, ಶಿಕ್ಷಕ ಶಿಕ್ಷಕೇತರ ವೃಂದದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ದಾಖಲಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದಿನ ದರ ಪಟ್ಟಿ (ಫೆಬ್ರವರಿ 11, 2026) ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಂದಾಜು ದರಗಳು ಹೀಗಿವೆ: 1. ಶುದ್ಧ ಚಿನ್ನ (24 ಕ್ಯಾರೆಟ್): 1 ಗ್ರಾಂ: ₹15,851 (₹27 ಇಳಿಕೆ) 10 ಗ್ರಾಂ: ₹1,58,510 (₹270 ಇಳಿಕೆ) 2. ಆಭರಣ ಚಿನ್ನ (22 ಕ್ಯಾರೆಟ್): 1 ಗ್ರಾಂ: ₹14,530 (₹25 ಇಳಿಕೆ) 10 ಗ್ರಾಂ: ₹1,45,300 (₹250 ಇಳಿಕೆ) 3. ಬೆಳ್ಳಿ ದರ (Silver Rate): ಬೆಳ್ಳಿ ಬೆಲೆಯು ಏರಿಕೆಯೂ ಆಗದೆ, ಇಳಿಕೆಯೂ ಆಗದೆ ತಟಸ್ಥವಾಗಿದೆ. 1 ಕೆಜಿ ಬೆಳ್ಳಿ: ₹2,90,000 ಫೆಬ್ರವರಿ ತಿಂಗಳ ಏರಿಳಿತದ ಹಾದಿ ಫೆಬ್ರವರಿ ತಿಂಗಳ ಆರಂಭದಿಂದ ಚಿನ್ನದ ದರವು ತೀವ್ರ ಏರಿಳಿತಕ್ಕೆ ಸಾಕ್ಷಿಯಾಗಿದೆ: ಗರಿಷ್ಠ ದರ:…
ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಒಂದು ತಿಂಗಳಿನಿoದ 7 ಜಾನುವಾರುಗಳನ್ನು ಮತ್ತು ಬೆಸಗೂರು ಗ್ರಾಮದಲ್ಲಿ ಒಂದೇ ದಿನ 3 ಹಸುಗಳನ್ನು ಬಲಿ ಪಡೆದ ಹುಲಿ ಇಂದು ಬಂಧಿಯಾಗಿದೆ. ಕೊಡಗು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಠಿ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಡಿಸಿಎಫ್ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗಿನಿಂದಲೇ ಡ್ರೋಣ್ ಕ್ಯಾಮೆರಾ ಬಳಸಿ ಆರ್.ಆರ್.ಟಿ ಸಿಬ್ಬಂದಿಗಳ ಮೂಲಕ ಹುಲಿಯ ಚಲನವಲನ ಪತ್ತೆ ಮಾಡಲು ಕೂಂಬಿAಗ್ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಯಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಸಾಕಾನೆ ಶಿಬಿರದಿಂದ ಮಹೇಂದ್ರ ಹಾಗೂ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರದಿಂದ ಭೀಮ ಆನೆಯನ್ನು ಬಳಸಿಕೊಳ್ಳಲಾಗಿತ್ತು. ಗ್ರಾಮಸ್ಥರ ತೋಟಗಳು ಹಾಗೂ ಕೀರೆಹೊಳೆಯ ಸುತ್ತಮುತ್ತಲಿನಲ್ಲಿ ದ್ರೋಣ್ ಕ್ಯಾಮರಾ ಬಳಸಿ ಹುಲಿಯ ಚಲನವಲನ ಪತ್ತೆ ಕಾರ್ಯಾಚರಣೆ ನಡೆಸಲಾಯಿತು. ಕೀರೆಹೊಳೆಯ…
ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು ವಿರೋಧಿಸಿ ಫೆಬ್ರವರಿ 12ರಂದು (ಗುರುವಾರ) ದೇಶಾದ್ಯಂತ ಬೃಹತ್ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC) ಸೇರಿದಂತೆ 10ಕ್ಕೂ ಹೆಚ್ಚು ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಹೋರಾಟಕ್ಕೆ ಕೈಜೋಡಿಸಿದ್ದು, ಸುಮಾರು 30 ಕೋಟಿ ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯಿದೆ. ಏಕೆ ಈ ಮುಷ್ಕರ? ಪ್ರಮುಖ ಬೇಡಿಕೆಗಳೇನು? ಕಾರ್ಮಿಕ ಸಂಘಟನೆಗಳ ಪ್ರಕಾರ, ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲಿವೆ. ಕಾರ್ಮಿಕ ಸಂಹಿತೆ ರದ್ದತಿ: 29 ಹಳೆಯ ಕಾನೂನುಗಳನ್ನು ಬದಲಿಸಿ ತರಲಾದ 4 ಹೊಸ ಸಂಹಿತೆಗಳನ್ನು ಕೈಬಿಡಬೇಕು. ಖಾಸಗೀಕರಣಕ್ಕೆ ವಿರೋಧ: ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಕನಿಷ್ಠ ವೇತನ: ಕಾರ್ಮಿಕರಿಗೆ ಗೌರವಯುತ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು. ರೈತರ ಬೆಂಬಲ: ಕೃಷಿ ಕಾಯ್ದೆಗಳ ತಿದ್ದುಪಡಿ…
ಮಡಿಕೇರಿ NEWS DESK ಫೆ.11 : ಪಿ.ಕೃಷ್ಣೇಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆಯಾಗಿದ್ದಾರೆ. ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ನಡೆದ ರಕ್ಷಣಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಂಯೋಜಕರಾಗಿ ತನು ಕಿಶೋರ್ ಕೆ.ಕೆ, ಜಿಲ್ಲಾ ಸಮಿತಿಯ ವಕ್ತಾರರಾಗಿ ಜೀವನ್ ಎಂ.ಜಿ, ಪ್ರಚಾರ ಸಮಿತಿಯ ಜಿಲ್ಲಾ ಉಸ್ತುವಾರಿಯಾಗಿ ಶಶಿಕುಮಾರ್ ಹೆಚ್.ಎಂ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಕಲಾ ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷರಾಗಿ ಸೋನಿ, ವಿರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಕಾರ್ಯಪ್ಪ ಎ.ಜಿ, ಉಸ್ತುವಾರಿಯಾಗಿ ರಂಜನ್ ಕೆ.ಐ, ಜಿಲ್ಲಾ ಮಹಿಳಾ ಉಸ್ತುವಾರಿಗಳಾಗಿ ಮಂಜುಳಾ ಹಾಗೂ ಭವ್ಯ ವಿನೋದ್ ಆಯ್ಕೆಯಾದರು. ಜಿಲ್ಲೆಯ ಗಡಿಭಾಗವಾದ ಸಂಪಾಜೆ ಹೋಬಳಿಯಲ್ಲಿ ಸಂಘಟನೆಯನ್ನು ಸದೃಢಗೊಳಿಸುವ ಸಲುವಾಗಿ ಉಸ್ತುವಾರಿಯಾಗಿ ಸುಕುಮಾರ್ ಕೆ.ಕೆ ಅವರನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನಾಯಕ ಪಿ.ಕೃಷ್ಣೇಗೌಡ ಅವರು ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಕನ್ನಡ ನಾಡು, ನುಡಿ, ನೆಲ ಜಲದ ಉಳಿವಿಗಾಗಿ ಮತ್ತು…






