ಲೇಖಕ: admin

ಸುಂಟಿಕೊಪ್ಪ ಏ.2 NEWS DESK : ಯಾವುದೇ ಶಾಲಾ ಕಾಲೇಜುಗಳಲ್ಲಿ ವಿದ್ಯೆ ಕಲಿಸಿದ ಗುರುಗಳನ್ನು ಎದುರಿಗೆ ಕಂಡಾಗ ನಮಸ್ಕರಿಸಿ ಗೌರವಿಸಲು ಆಗದಿದ್ದರೂ ಕನಿಷ್ಠ ಕಿರುನಗೆಯನ್ನಾದರೂ ಬಿರುವಂತೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಹೇಳಿದರು. ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಗದ್ದೆಹಳ್ಳದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಮಕ್ಕಳು ತಾವು ಕಲಿತ ಶಾಲೆಯನ್ನು ಮರೆಯಬಾರದು, ಶಿಕ್ಷಣ ನೀಡದ ಶಿಕ್ಷಕರನ್ನು ಎಂದಿಗೂ ಕಡೆಗಣಿಸ ಬೇಡಿ ಪ್ರಾಥಮಿಕ ಹಂತದಲ್ಲಿ ಪಡೆದಿರುವ ಶಿಕ್ಷಣವೇ ಪ್ರಮುಖ ಘಟ್ಟವಾಗಿರುತ್ತದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ತೋರುವಂತಾಗಬೇಕು ಎಂದು ಪಿ.ಆರ್.ಸುನಿಲ್‍ಕುಮಾರ್ ಕರೆ ನೀಡಿದರು. ಶಾಲೆಯ ಮುಖ್ಯೋಪಾದ್ಯಾಯನಿ ಹೆಚ್.ಸಿ.ಹೇಮಕುಮಾರಿ ಮಾತನಾಡಿ, ಕಠಿಣ ಪರಿಶ್ರಮದಿಂದ ಮಾತ್ರ ಶಿಕ್ಷಣದಲ್ಲಿ ಉತ್ತಮ ಸಾಧನೆಯನ್ನು ಮಾಡಲು ಸಾಧ್ಯ. ಇದರಿಂದ ಉನ್ನತ ಹುದ್ದೆಗಳು ದೊರೆಯಲು ಸಾಧ್ಯವೆಂದು ಹೇಮಲತಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನಿತಾ ವಹಿಸಿದ್ದರು. ಇದೇ ಸಂದರ್ಭ ತಮ್ಮಗೆ ಶಿಕ್ಷಣ ನೀಡಿದ ಶಿಕ್ಷಕರುಗಳನ್ನು ನೆನಪಿನ ಕಾಣಿಕೆಗಳನ್ನು…

Read More

ಮಡಿಕೇರಿ ಏ.2 NEWS DESK : ಛಾಯಾಗ್ರಹಣಕ್ಕೆ ಸಂಬಂಧಿಸಿದ ಉಪಕರಣಗಳ ಬೆಲೆ ದುಪ್ಪಟ್ಟಾಗಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳನ್ನು ಒಳಗೊಂಡ ದಕ್ಷಿಣ ಕೊಡಗಿನ ವೃತ್ತಿನಿರತ ಛಾಯಾಗ್ರಾಹಕರಿಗೆ ಅನ್ವಯವಾಗುವಂತೆ ಛಾಯಾಗ್ರಹಣದ ದರವನ್ನು ಶೇ.10ರಷ್ಟು ಹೆಚ್ಚಿಸಿರುವುದಾಗಿ ದಕ್ಷಿಣ ಕೊಡಗು ಛಾಯಾಚಿತ್ರಗಾರರ ಸಂಘದ ಅಧ್ಯಕ್ಷರಾದ ಡಿ.ಸಿ.ರವೀಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪ್ರಸ್ತುತ ಪ್ರೊಫೇಷನಲ್ ಕ್ಯಾಮರಾಗಳ ಬೆಲೆ ಗಗನಕ್ಕೇರಿದ್ದರೆ, ವೃತ್ತಿಗೆ ಸಂಬಂಧಿಸಿದ ಪರಿಕರಗಳಾದ ಪೆನ್ ಡ್ರೈವ್, ಹಾರ್ಡ್ ಡಿಸ್ಕ್, ಮೆಮೋರಿ ಕಾರ್ಡ್, ಫೋಟೋ ಪ್ರಿಂಟ್, ಆಲ್ಬಮ್ ಮೊದಲಾದವುಗಳ ದರ ದುಪ್ಪಟ್ಟಾಗಿದೆ. ಇದರಿಂದ ಈಗಿನ ದರದಲ್ಲಿ ಸ್ಟುಡಿಯೋಗಳನ್ನು ನಡೆಸುವುದು ಪ್ರಯಾಸಕರವಾಗಿರುವುದರಿಂದ ದರ ಹೆಚ್ಚಳ ಮಾಡಿರುವುದಾಗಿ ಹೇಳಿದರು. ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚಿನ ಸ್ಟುಡಿಯೋಗಳಿದ್ದು, ಇದನ್ನು ನಂಬಿ ಬದುಕು ಕಟ್ಟಿಕೊಂಡಿರುವ ಕುಟುಂಬಗಳ ಸಂಖ್ಯೆ 150 ರಿಂದ 180ರಷ್ಟ್ಟಿದೆ. ಇಂದಿನ ದರ ಹೆಚ್ಚಳದ ಅವಧಿಯಲ್ಲಿ ಕುಟುಂಬ ನಿರ್ವಹಣೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗದಂತೆ ದರವನ್ನು ಹೆಚ್ಚಿಸಲಾಗಿದೆಯೆಂದರು. ಯಾವುದಕ್ಕೆ…

Read More

ಸುಂಟಿಕೊಪ್ಪ ಏ.2 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪವಿತ್ರ ಗುರುವಾರದ ಸಂಜೆ ಕಡೆಯ ಭೋಜನ ವಿಶೇಷ ಬಲಿಪೂಜೆಯನ್ನು ಸಂತ ಮೇರಿ ಶಾಲಾವರಣದಲ್ಲಿ ಪ್ರಾರ್ಥನಾ ಕೂಟವನ್ನು ಬೆಂಗಳೂರಿನ ಧರ್ಮಕೇಂದ್ರ ಪ್ರೇಮ್‍ಕುಮಾರ್ ಹಾಗೂ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಅವರು ನೇರವೇರಿಸಿದರು. ಈ ದಿನವು ಕ್ರೈಸ್ತರಿಗೆ ಪ್ರಥಮ ಬಲಿಪೂಜೆಯ ಸಂಸ್ಕಾರ ಸ್ಥಾಪನೆಯ ದಿನವಾಗಿದೆ, ಕ್ರೈಸ್ತ ಬಾಂಧದವರಿಗೆ ಗುರು ದೀಕ್ಷೆಯ ಸ್ಥಾಪಿತವಾದ ಸ್ಮರಣೆಯ ದಿನವಾಗಿದೆ, ಕ್ರೈಸ್ತ ಧರ್ಮ ಸಭೆಯು ಸೇವೆಯನ್ನು ಸ್ಮರಿಸಿಕೊಳ್ಳುವ ಸೇವಾ ಕಾರ್ಯವನ್ನು ವೃದ್ಧಿಸುವ ದಿನವಾಗಿದೆ. ನಾನು ನಿಮ್ಮನು ಪ್ರೀತಿಸಿದಂತೆ ಪರರನ್ನು ಪ್ರೀತಿಸಿ ಎಂಬ ಹೊಸ ಆಜ್ಞೆಯನ್ನು ಪ್ರಭು ಕ್ರಿಸ್ತರು ನೇರವೇರಿಸಿದ ದಿನವಾಗಿದೆ. ಪವಿತ್ರ ಗುರುವಾರ ಕಡೆಯ ಭೋಜನದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಬಲಿಪೂಜೆ ಹಾಗೂ ಪ್ರಭುಕ್ರಿಸ್ತರು ತಾವು ಮರಣಹೊಂದುವ ಮುನ್ನದಿನ ತಮ್ಮ ಶಿಷ್ಯರೊಂದಿಗೆ ಕಡೆಯ ಬೋಜನಕ್ಕೂ ಮುನ್ನ ಶಿಷ್ಯರ ಪಾದಗಳನ್ನು ತೊಳೆದು ಕಡೆಯ ಭೋಜನವನ್ನು ಸವಿದಿದ್ದ ಸ್ಮರಣೆಯ ಅಂಗವಾಗಿ ದೇವಾಲಯದಲ್ಲಿ ಬೆಂಗಳೂರಿನ ಧರ್ಮಕೇಂದ್ರದ ಪ್ರೇಮ್‍ಕುಮಾರ್ ಹಾಗೂ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್…

Read More

ಬೆಂಗಳೂರು, NEWS DESK ಏಪ್ರಿಲ್ 02: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ,ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ,ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ.ಸ್ಪರ್ಧೆಯು ಏಪ್ರೀಲ್ 12 ರಂದು ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ನಡೆಯಲಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ,ವಿದ್ಯಾರ್ಹತೆಯ ನಿರ್ಬಂಧ ಇರುವುದಿಲ್ಲ,ಎಲ್ಲ ಆಸಕ್ತರಿಗೂ ಮುಕ್ತ ಅವಕಾಶವಿರುತ್ತದೆ.ರಾಜ್ಯದ ಯಾವುದೇ ಜಿಲ್ಲೆಗಳ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡಿನ ನಕಲು ಪ್ರತಿ ಒದಗಿಸಿ ಭಾಗವಹಿಸಬಹುದು.ಮೊದಲ ಸುತ್ತಿನಲ್ಲಿ 50 ಅಂಕಗಳ ಬಹುಆಯ್ಕೆ ಮಾದರಿಯ ಸುತ್ತು , ಈ ಸುತ್ತಿನಲ್ಲಿ ಅತಿಹೆಚ್ಚು ಅಂಕಗಳಿಸಿದ ಮೊದಲ 12 ಅಭ್ಯರ್ಥಿಗಳು ಎರಡನೇ ಸುತ್ತಿಗೆ ಆಯ್ಕೆಯಾಗುತ್ತಾರೆ. ಈ 12 ಅಭ್ಯರ್ಥಿಗಳನ್ನು 6 ತಂಡಗಳಾಗಿ ವಿಂಗಡಿಸಿ ಎರಡನೇ ಹಂತದ ಮೌಖಿಕ ಸುತ್ತು ನಡೆಸಲಾಗುವುದು.ವಿಜೇತ ತಂಡಗಳಿಗೆ…

Read More

ಮಡಿಕೇರಿ NEWS DESK ಏ.2 : ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಸತ್ಯಾಗ್ರಹ ನಡೆಯಿತು. ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವರು ಪ್ರಕೃತಿಯ ಆರಾಧಕರು, ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಇವರು ಆದಿಮಸಂಜಾತ ಸಮುದಾಯದವರಾಗಿದ್ದು, ಭಾರತದ ಪ್ರಜಾಪ್ರಭುತ್ವ ರಚನೆಯಲ್ಲಿ ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ವಿಶೇಷ ಪ್ರಾತಿನಿಧ್ಯದ ಅಗತ್ಯವಿದೆ ಎಂದರು. ಈ “ವರ್ಚುವಲ್ ಕ್ಷೇತ್ರ” ವು ಯಾವುದೇ ನಿರ್ದಿಷ್ಟ ಭೌಗೋಳಿಕ ಗಡಿಗಳನ್ನು ಹೊಂದಿರುವುದಿಲ್ಲ. 1958 ರಲ್ಲಿ ರಚಿಸಲಾದ ಸಿಕ್ಕಿಂ ಸಂಘದ ಮಾದರಿಯಲ್ಲಿ, ಕೊಡಗು ಜಿಲ್ಲೆಯ ಎಲ್ಲೇ ವಾಸವಿದ್ದರೂ, ಕೊಡವ ಸಮುದಾಯದ ಸದಸ್ಯರು ಮಾತ್ರ ಸ್ಪರ್ಧಿಸಲು ಮತ್ತು ಮತ ಚಲಾಯಿಸಲು ಇದು ಅವಕಾಶ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು. ಭಾರತದಲ್ಲಿ ಸಿಕ್ಕಿಂ ಸಂಘ ಕ್ಷೇತ್ರವು ಒಂದು ವಿಶಿಷ್ಟವಾದ, ಭೌಗೋಳಿಕವಲ್ಲದ ಕ್ಷೇತ್ರವಾಗಿದ್ದು,…

Read More

ಮಡಿಕೇರಿ ಏ.2 NEWS DESK : ಹಿಂದೂ ಸುರಕ್ಷಾ ಸಮಿತಿ ವತಿಯಿಂದ ನಾಪೋಕ್ಲುವಿನಲ್ಲಿ ಹಿಂದೂ ಸಮಾಜದ ಸಂಘಟನೆಯ ಧ್ಯೇಯದೊಂದಿಗೆ ಬೃಹತ್ ಜನಜಾಗೃತಿ ಜಾಥ ನಡೆಯಿತು. ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಯೋಜಿತ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯ ಕಾರ್ಯಕಾರಿ ಸಮಿತಿಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ, ಹಿಂದು ಸಮಾಜಕ್ಕೆ ಸಂಕಷ್ಟ ತಲೆದೋರಿದಾಗ ಅದನ್ನು ದಿಟ್ಟವಾಗಿ ಎದುರಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ ಎಂದರು.  ಹಿಂದೂ ವಿರೋಧಿ ಶಕ್ತಿಗಳು ಸಮಾಜವನ್ನು ಕೆಣಕುವ ಮೊದಲು ಸಾವಿರ ಬಾರಿ ಯೋಚಿಸಬೇಕೆಂದು ತಿಳಿಸಿದ ಅವರು, ಇಂದು ಹಿಂದೂ ಸಮಾಜ ಜಾಗೃತವಾಗಿದೆ. ಒಂದು ಸಣ್ಣ ಘಟನೆಗೆ ಜಾಗೃತವಾಗಿ ಕೊಡಗಿನ ವೀರತ್ವ ಶೂರತ್ವವನ್ನು ಎಲ್ಲರಿಗೂ ಮನದಟ್ಟು ಮಾಡಿದೆ. ಹಿಂದೂ ಸಮಾಜದಲ್ಲಿ ಅನೇಕ ಜಾತಿ ಮತಗಳಿದ್ದು, ಇದನ್ನೆ ಅಸ್ತ್ರವನ್ನಾಗಿ ಹಿಂದೂ ಸಮಾಜದೊಳಗಡೆ ಜಾತಿಯ ವಿಷ ಬೀಜ ಬಿತ್ತುವ ಕೆಲಸ ಆಗುತ್ತಿದೆ, ಸಮಾಜದಲ್ಲಿ ಬೆಂಕಿ ಹುಟ್ಟದ ಹಾಗೆ ಜಾಗೃತೆ ವಹಿಸಬೇಕಿದ್ದು, ಇದಕ್ಕಾಗಿ ಹಿಂದೂ ಸಮಾಜ ಸಂಘಟನೆಯಾಗಬೇಕಾದ ಅನಿವಾರ್ಯತೆ ಇದೆ ಎಂದರು.  ನಾಪೋಕ್ಲು ಸುರಕ್ಷಾ…

Read More

ಮಡಿಕೇರಿ ಏ.2 NEWS DESK : ಚೇರಂಬಾಣೆ ಸಮೀಪದ ಬೇಂಗೂರಿನ ಶ್ರೀ ಸುಬ್ರಹ್ಮಣ್ಯ ದೇವಾಲಯದ ಪಂಚ ಲೋಹದ ಬಿಂಬ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶಾಭೀಷೆಕ ಏ.8ರಿಂದ 10ರವರೆಗೆ ನಡೆಯಲಿದೆಯೆಂದು ದೇವಾಲಯ ಸಮಿತಿ ಅಧ್ಯಕ್ಷರಾದ ಪಟ್ಟಮಾಡ ಡಿ.ಪೊನ್ನಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪಟ್ಟಮಾಡ ಕುಟುಂಬಸ್ಥರ ವತಿಯಿಂದ ದೇವಸ್ಥಾನದಲ್ಲಿ ಕಾರ್ಯಕ್ರಮಗಳು ಆಯೋಜಿತವಾಗಿದೆಯೆಂದರು. ಏ.8 ರಂದು ಸಂಜೆ 7 ಗಂಟೆಗೆ ಪ್ರಾರ್ಥನೆ, ಬಿಂಬ ಪರಿಗ್ರಹ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ ಮತ್ತು ವಾಸ್ತು ಬಲಿ ನಡೆಯಲಿದೆ. ಏ.9 ರಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಸ್ಕಂದ ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಪ್ರೋಕ್ತ ಹೋಮ, ಅನುಜ್ಞಾ ಕಲಶ ಪೂಜೆ, ಅನುಜ್ಞಾ ಪ್ರಾರ್ಥನೆ, ಸಂಹಾರ ತತ್ವ ಹೋಮ, ಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋದ್ವಾಸನೆ, ಜೀವಕಲಶ,…

Read More

ಮಡಿಕೇರಿ NEWS DESK ಏ.2 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಭಾಂಗಣದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ ಮತ್ತು ತುರ್ತು ಚಿಕಿತ್ಸಾ ವಿಭಾಗದ ಸಹಯೋಗದಲ್ಲಿ “ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ” ಕಾರ್ಯಕ್ರಮವು ಗುರುವಾರ ನಡೆಯಿತು. ಉಪ ವಿಭಾಗಧಿಕಾರಿಯಾದ ನಿತಿನ್ ಚಕ್ಕಿ, ಅವರು ಮಾತನಾಡಿ ಸುಟ್ಟ ಗಾಯಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಚಿಕಿತ್ಸೆ ನೀಡುವುದು, ಸೋಂಕು ನಿಯಂತ್ರಣದ ಮಹತ್ವವನ್ನು ಒತ್ತಿ ಹೇಳಿದರು. ಆರಂಭಿಕ ಚಿಕಿತ್ಸೆಯಿಂದ ಪುನರ್ವಸತಿ ವರೆಗೆ ವ್ಯವಸ್ಥಿತ ರೀತಿಯ ನಿರ್ವಹಣೆ ಬಗ್ಗೆ ಚರ್ಚೆ ಪ್ರಾಯೋಗಿಕವಾಗಿ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು. ಮಿಸ್ ಟೀನ್ ಯೂನಿವರ್ಸ್ ಇಂಡಿಯಾ 2024 ಕರಿಸ್ಸಾ ಬೋಪಣ್ಣ ಅವರು ತಮ್ಮ ಫ್ಯಾಷನ್ ಡಿಸೈನಿಂಗ್ ವಿದ್ಯಾಭ್ಯಾಸದ ಅನುಭವ ಹಂಚಿಕೊoಡು, ವೈದ್ಯಕೀಯ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು. ಜೀವನದಲ್ಲಿ ಮನಸ್ಸು ಕುಗ್ಗಿದಾಗ ವೈದ್ಯಕೀಯ ಕ್ಷೇತ್ರವನ್ನು ಆಯ್ಕೆ ಮಾಡಿದ ಉದ್ದೇಶವನ್ನು ನೆನಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಟ್ರಸ್ಟ್ವೆಲ್ ಆಸ್ಪತ್ರೆಯ ಓರೋ-ಫೇಷಿಯಲ್ ಮತ್ತು ಪ್ಲಾಸ್ಟಿಕ್ ಸರ್ಜರಿ ಸಲಹೆಗಾರರಾದ…

Read More

ಮಡಿಕೇರಿ, NEWS DESK ಏ.2 : ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆಯಿತು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯ ಕಂಪ್ಯೂಟರ್ ವಿಭಾಗದಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಎಸ್.ತಿಮ್ಮಯ್ಯ ಅವರಿಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ವಿತರಿಸಿದರು. ಪೊಲೀಸ್ ಇಲಾಖೆಯ ಜಿಲ್ಲಾ ಸಶಸ್ತç ಪೊಲೀಸ್ ಪಡೆ ವಿಭಾಗದಲ್ಲಿ ಎಎಚ್‌ಸಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್.ಸುಧೀರ್ ಅವರಿಗೆ ಪೊಲೀಸ್ ವಿಶೇಷ ಘಟಕಗಳ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದಕ್ಕೆ ಪೊಲೀಸ್ ಟ್ರೋಫಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ನೀಡಿದರು. ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಪೊಲೀಸ್ ಉಪ ನಿರೀಕ್ಷಕರಾದ ಕೆ.ಬಿ.ಅಚ್ಚಮ್ಮ ಅವರು ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ…

Read More

ಮಡಿಕೇರಿ, NEWS DESK ಏ.2 –  ಚೆಟ್ಟಳ್ಳಿಯ  ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿತ ಪ್ರಥಮ ವಷ೯ದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟ ತಂಡವು ಚಾಂಪಿಯನ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಪೊನ್ನಂಪೇಟೆಯ ಕೊಡವ ರೈಡರ್ಸ್ ಕ್ಲಬ್ ತಂಡವು ದ್ವಿತೀಯ ಸ್ಥಾನ ಪಡೆಯಿತು. ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ  ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ   ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಲಾಗಿದ್ದ   ಪ್ರಥಮ ವಷ೯ದ    ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯ  ಆಕಷ೯ಕ ಫೈನಲ್ ಪಂದ್ಯಾವಳಿಯಲ್ಲಿ   ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟ ತಂಡವು  . ಪೊನ್ನಂಪೇಟೆಯ ಕೊಡವ ರೈಡರ್ಸ್ ಕ್ಲಬ್ ತಂಡದ ವಿರುದ್ದ ಗೆಲವು ಸಾಧಿಸಿತು. ಮೈಸೂರು ಹೂಟಗಳ್ಳಿಯ ಶ್ರೀ ತಲಕಾವೇರಿ ಪೊಮ್ಮಕ್ಕಡ ಕೂಟ ತಂಡವು ತೖತೀಯ ಸ್ಥಾನ ಮತ್ತು ಮಡಿಕೇರಿ ಕೊಡವ ಪೊಮ್ಮಕ್ಕಡ ಕೂಟದ ಬಿ ಟೀಮ್ ನಾಲ್ಕನೇ ಸ್ಥಾನ ತನ್ನದಾಗಿಸಿಕೊಂಡಿತು. ಬೆಂಗಳೂರು ದಾಸರಹಳ್ಳಿಯ ಪೊಮ್ಮಕ್ಕಡ ಕೂಟ ತಂಡವು ಶಿಸ್ತಿನ ತಂಡವಾಗಿ, ಪೊನ್ನಂಪೇಟೆ…

Read More