ಸೋಮವಾರಪೇಟೆ ಜೂ.29 NEWS DESK : ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ. ಗ್ರಾಮೀಣ ರಸ್ತೆಗಳ ಕಾಮಗಾರಿ ಕಳಪೆಯಾಗದಂತೆ ಗ್ರಾಮಸ್ಥರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಶಾಸಕ ಡಾ.ಮಂತರ್ಗೌಡ ಹೇಳಿದರು. ಹೊನವಳ್ಳಿ, ಸುಳಿಮಳ್ತೆ ಮಾರ್ಗದಲ್ಲಿ 50 ಲಕ್ಷ ರೂ.ಗಳ ಹೊನ್ನಮ್ಮನ ಕೆರೆ ಸಂಪರ್ಕ ರಸ್ತೆ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮೀಣ ಭಾಗದ ರಸ್ತೆ ಕಾಮಗಾರಿಗಳು ನಡೆಯುವಾಗ ಅವಶ್ಯಕತೆವಿದ್ದಲ್ಲಿ ಗ್ರಾಮಸ್ಥರು ಒಂದಷ್ಟು ಜಾಗವನ್ನು ಬಿಟ್ಟುಕೊಡಬೇಕು. ಸುಗಮರಸ್ತೆಗಳ ನಿರ್ಮಾಣದಿಂದ ಮುಂದಿನ ಪೀಳಿಗೆಗೆ ಉಪಯೋಗವಾಗಲಿದೆ ಎಂದು ಹೇಳಿದರು. ಸುಳಿಮಳ್ತೆ ರಸ್ತೆಗಾಗಿ ಅನೇಕ ವರ್ಷಗಳಿಂದ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ ಎಂಬ ಸತ್ಯ ನಮಗೂ ತಿಳಿದಿದೆ. ಕಳೆದ ಮೂರು ವರ್ಷಗಳಿಂದ ಒಂದಷ್ಟು ಅನುದಾನ ಕಲ್ಪಿಸಿ ರಸ್ತೆ ಕಾಂಕ್ರೀಟಿಕರಣ ಮಾಡಲಾಗಿದೆ. ಈಗ ಸಚಿವ ಪ್ರಿಯಾಂಕ ಖರ್ಗೆ ಅವರು ಆರ್ಡಿಪಿಆರ್ ಯೋಜನೆಯಲ್ಲಿ ಅನುದಾನ ಕಲ್ಪಿಸಿ ನಮಗೆ ಸಹಾಯ ಮಾಡಿ ಗ್ರಾಮಸ್ಥರ ಬೇಡಿಕೆ ಈಡೇರಿಸಿದ್ದಾರೆ ಎಂದು ಹೇಳಿದರು. ಹೊನ್ನಮ್ಮನ ಕೆರೆ ಜಾತ್ರೋತ್ಸವ ಪ್ರಾರಂಭಕ್ಕೂ ಮೊದಲೇ…
ಲೇಖಕ: admin
ಸುಂಟಿಕೊಪ್ಪ ಜೂ.29 NEWS DESK : ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯ 2026-2027 ಸಾಲಿನ ನೂತನ ಅಧ್ಯಕ್ಷರಾಗಿ ಎಸ್.ಜಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ಗ್ಲೇನ್ ಮನೇಜಸ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಚೇರಿಯಲ್ಲಿ ಚೆಟ್ಟಿಮಾಡ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಕೆ.ಪಿ.ಜಗನ್ನಾಥ್ ಆಯ್ಕೆಯಾದರು. ನೂತನ ಪದಾಧಿಕಾರಿಗಳ ಹಾಗೂ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಸಂಸ್ಥೆಯ ಅಧ್ಯಕ್ಷ ಚೆಟ್ಟಿಮಾಡ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ಜು. 1 ರಂದು ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದ್ದು ಆಡಳಿತ ಮಂಡಳಿ ನೂತನ ತಂಡಕ್ಕೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಲಯನ್ಸ್ ರಾಜ್ಯಪಾಲರಾದ ಗೋವರ್ದನ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲ್ಲಿದ್ದಾರೆ.
ಮಡಿಕೇರಿ ಜೂ.29 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪೂಳಕಂಡ ರಾಜೇಶ್ ಮತ್ತು ಕಾಯ೯ದಶಿ೯ಯಾಗಿ ಡಾ.ಚೇತನ್ ಜಿ.ಡಿ. ಆಯ್ಕೆಯಾಗಿದ್ದಾರೆ. ನೂತನ ವಲಯ ಸೇನಾನಿಯಾಗಿ ಪೊನ್ನಚ್ಚನ ಮಧುಸೂದನ್ ಆಯ್ಕೆಯಾಗಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ 22 ನೇ ವಷ೯ದ ಅಧ್ಯಕ್ಷರಾಗಿ ಪಿ.ಆರ್. ರಾಜೇಶ್, ಕಾಯ೯ದಶಿ೯ಯಾಗಿ ಡಾ.ಚೇತನ್ ಜಿ.ಡಿ.ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 4 ರಂದು ಶನಿವಾರ ಮಡಿಕೇರಿ ಕೆಳಗಿನ ಗೌಡ ಸಮಾಜದಲ್ಲಿ ಆಯೋಜಿತವಾಗಿದೆ. ಬೆಂಗಳೂರಿನ ರೋಟರಿ ಜಿಲ್ಲೆ3191ನ ಮಾಜಿ ಸಹಾಯಕ ಗವನ೯ರ್ ಪ್ರಕಾಶ್ ಬೆಳವಾಡಿ ಪ್ರದಗ್ರಹಣ ನೆರವೇರಿಸಲಿದ್ದು, ಸಹಾಯಕ ಗವನ೯ರ್ ಎಚ್.ಎಸ್. ವಸಂತ್ ಕುಮಾರ್, ನಿಕಟಪೂವ೯ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ.ಕಾಯ೯ಪ್ಪ ವೇದಿಕೆಯಲ್ಲಿರುತ್ತಾರೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಪ್ರಕಟಣೆ ತಿಳಿಸಿದೆ.
ಚೆಟ್ಟಳ್ಳಿ ಜೂ.29 NEWS DESK : ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರೈಸಿದ ಪ್ರಯುಕ್ತ ಸಹಕಾರ ಸಪ್ತಾಹದ ಅಂಗವಾಗಿ ಚೆಟ್ಟಳ್ಳಿಯ ನರೇಂದ್ರ ಮೋದಿ ಸಹಕಾರ ಭವನದಲ್ಲಿ ರೈತರ ಸಮಾವೇಶ ಹಾಗೂ ಸಹಕಾರ ಜಾಗೃತಿ ಸಭೆ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡಗು ಜಿಲ್ಲೆ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ರೈತರ ಹಿತಾಸಕ್ತಿ ಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ್ದು, ಐದು ವರ್ಷಗಳ ಅವಧಿಯಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ ಎಂದರು. ರೈತರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳು ತಲುಪುತ್ತಿದ್ದು, ಸಹಕಾರ ಸಂಘಗಳು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುತ್ತಿವೆ. ಐದು ಲಕ್ಷ…
ಮಡಿಕೇರಿ NEWS DESK ಜೂ.29 : ಬೆಂಗಳೂರಿನ ಹೆಬ್ಬಾಳದಲ್ಲಿ ಗೌಡ ರೈಡರ್ಸ್ ಕ್ಲಬ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. “ರೈಡ್ ಫಾರ್ ಯೂನಿಟಿ” ಎಂಬ ಗೌಡ ಸಮುದಾಯದ ಐಕ್ಯತಾ ರೈಡ್ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ 40 ರೈಡರ್ಸ್ ಹಾಗೂ 5 ಪಿಲಿಯನ್ ರೈಡರ್ಸ್ (ಹಿಂಬದಿ ಸವಾರರು) ಭಾಗವಹಿಸಿದ್ದರು. ವಿಶೇಷವಾಗಿ ಮಡಿಕೇರಿ, ಹಾಸನ, ಸುಳ್ಯ, ಮೈಸೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ರೈಡರ್ಸ್ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬೆಂಗಳೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ವಿಂಗ್ ಕಮಾಂಡರ್ (ನಿವೃತ್ತ) ಅಯ್ಯೇಟ್ಟಿರ ಮನೋಜ್ ಕುಮಾರ್, ಅವರು “ಗೌಡ ರೈಡರ್ಸ್ ಕ್ಲಬ್ ಕೇವಲ ಬೈಕ್ ರೈಡಿಂಗ್ ಗೆ ಮಾತ್ರ ಸೀಮಿತವಾಗದೆ, ಮುಂದಿನ ದಿನಗಳಲ್ಲಿ ಸಮಾಜ ಸೇವೆ, ಯುವಜನರ ಸಂಘಟನೆ ಹಾಗೂ ಸಮುದಾಯದ ಹಿತಕ್ಕಾಗಿ ವಿವಿಧ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಿದೆ” ಎಂದು ತಿಳಿಸಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕರು ಹಾಗೂ ಕೊಡಗು ಗೌಡ ಸಮಾಜದ ಕಾರ್ಯದರ್ಶಿ ಬೇಕಲ್ ಬಿಪಿನ್, ನಿರ್ದೇಶಕರಾದ ಕಾಳೆಯಂಡ ತೇಜ ಕುಮಾರ್,…
ಮಡಿಕೇರಿ NEWS DESK ಜೂ.29 : ಸಮಾಜದ ಸ್ವಾಸ್ಥ್ಯ ಮತ್ತು ಸಾಮರಸ್ಯವನ್ನು ಕದಡುತ್ತಿರುವ ಮತಾಂತರ ಚಟುವಟಿಕೆ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದ್ದು, ಇದರ ನಿರ್ಮೂಲನೆಗೆ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಬಿಜೆಪಿ ಎಸ್ಟಿ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಎಂ.ಎA.ಪರಮೇಶ್ವರ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕುಶಾಲನಗರ ವ್ಯಾಪ್ತಿಯಲ್ಲಿ ಮಹಿಳೆ ಹಾಗೂ ಆಕೆಯ ಪುತ್ರನನ್ನು ಮತಾಂತರ ಮಾಡಿರುವ ಪ್ರಕರಣ ಹೇಯ ಕೃತ್ಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಗಳ ವತಿಯಿಂದ ಜೂ.30 ರಂದು ಕುಶಾಲನಗರದಲ್ಲಿ ನಡೆಯುವ ಜನಾಂದೋಲನ ಜಾಗೃತಿ ಸಮಾವೇಶಕ್ಕೆ ಎಸ್ಟಿ ಮೋರ್ಚಾ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಅಲ್ಲದೆ ಮತಾಂತರ ಪಿಡುಗಿನ ನಿರ್ಮೂಲನೆಗೆ ಯಾವುದೇ ಹೋರಾಟಕ್ಕೂ ಸಿದ್ಧವಿದೆ ಎಂದು ತಿಳಿಸಿದ್ದಾರೆ. ಶಾಂತಿ, ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಎಲ್ಲಾ ಜಾತಿ, ಧರ್ಮದವರು ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಮತಾಂತರ ಚಟುವಟಿಕೆ ವ್ಯಾಪಕವಾಗುತ್ತಿದ್ದು, ಇದು ಅಶಾಂತಿಗೆ ಕಾರಣವಾಗುತ್ತಿದೆ. ಕಳೆದ ವರ್ಷ ದಕ್ಷಿಣ ಕೊಡಗಿನ ಮನೆಯೊಂದರಲ್ಲಿ ಕ್ರೈಸ್ತ…
ಲೋವರ್ ಸಿಯಾಂಗ್ NEWS DESK ಜೂ.29 : ಈಶಾನ್ಯ ಭಾರತದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ವಿವಿಧೆಡೆ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ತೀವ್ರತೆಯನ್ನು ಪಡೆದುಕೊಂಡಿರುವುದರಿಂದ ಗುಡ್ಡಗಳು ಕುಸಿಯುತ್ತಿವೆ. ಅರುಣಾಚಲ ಪ್ರದೇಶದ ಲೋವರ್ ಸಿಯಾಂಗ್ ಜಿಲ್ಲೆಯ ಸಿಜೆ ಪ್ರದೇಶದಲ್ಲಿ ಭೀಕರ ಗುಡ್ಡ ಕುಸಿತವಾಗಿದೆ. ಬೃಹತ್ ಗುಡ್ಡ ಕುಸಿಯುವ ಸಂದರ್ಭ ಕೆಸರುಮಯ ರಸ್ತೆಯಲ್ಲಿದ್ದ ಬೈಕ್ ಸವಾರನನ್ನು ಬೈಕ್ ಸಹಿತ ಮಣ್ಣು, ಕಲ್ಲಿನ ರಾಶಿ ಕೆಳಭಾಗಕ್ಕೆ ಎಳೆದುಕೊಂಡು ಹೋಗಿದೆ. ಆದರೆ ಅದೃಷ್ಟವಶಾತ್ ಬೈಕ್ ಸವಾರನ ಮೇಲೆ ಮಣ್ಣಿನ ರಾಶಿ ಬೀಳದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ದೃಶ್ಯಕ್ಕೆ ಸಾಕ್ಷಿಯಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಮಡಿಕೇರಿ NEWS DESK ಜೂ.29 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದಿಂದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿವಿಧ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಾಂಶುಪಾಲರ ಪೂರ್ಣ ಸಹಕಾರದೊಂದಿಗೆ ಕಳೆದ ಎರಡು ವರ್ಷದಲ್ಲಿ 200ಕ್ಕೂ ಹೆಚ್ಚು ಹೊಸ ಸದಸ್ಯತ್ವವವನ್ನು ಮಾಡಿರುವುದಲ್ಲದೆ, ಕಾಲೇಜಿನ ಅಭಿವೃದ್ಧಿಗಾಗಿ ಹಲವು ಕಾಮಗಾರಿಗಳನ್ನು ಮಾಡಲಾಗಿದೆ. ಅಲ್ಲದೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹಾಗೂ ಅವರ ಬೆಳವಣಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದರು. ಮುಂದಿನ ಎರಡು ತಿಂಗಳಲ್ಲಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ, ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಎದುರಿಸಲು ಬೇಕಾದ ತರಬೇತಿ ಕಾರ್ಯಾಗಾರವನ್ನು ನಡೆಸುವಂತೆ ಹಾಗೂ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳವನ್ನು ಹಾಗೂ ಇತರ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ನಡೆಸುವುದಾಗಿ ತಿಳಿಸಿದರು. ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಮುಂದಿನ ದಿನಗಳಲ್ಲಿ…
ಮಡಿಕೇರಿ NEWS DESK ಜೂ.29 : ಈಗಾಗಲೇ ಕಂಡು ಬಂದಿರುವ ಹಾಗೆ ಪ್ರಸ್ತುತ 2026ರ ಮುಂಗಾರು ಮಳೆಯ ಕೊರತೆ ಸ್ಪಷ್ಟವಾಗಿ ಕಾಣುತ್ತಿದೆ. ಇದಕ್ಕೆ Geometeorology ಅಧ್ಯಯನದ ಮೂಲಕ ಕಂಡು ಬರುವ ಅಂಶವೆಂದರೆ ಭಾರತದ ಸುತ್ತಮುತ್ತಲು ಹಾಗೂ ವಿಶ್ವದ ಬೇರೆ ಬೇರೆ ಭಾಗಗಳಲ್ಲಿ ಇರುವ ಆವಿಯ ಮೂಲಗಳಾದ ಜ್ವಾಲಾಮುಖಿಗಳ ಚಟುವಟಿಗಳು ತುಂಬಾ ಇಳಿಮುಖವಾಗಿರುವುದು. ಇವುಗಳ ಮುಂದಿನ ಆರು ತಿಂಗಳುಗಳ ಚಟುವಟಿಕೆಗಳ ಮುನ್ಸೂಚನಾ ವರದಿಗಳ ಅಧ್ಯಯನದಿಂದ ಕಂಡು ಬರುವುದೇನೆಂದರೆ 2026ರ ಹಿಂಗಾರು ಅವಧಿಯಾದ ಅಕ್ಟೋಬರ್ ನವೆಂಬರ್ ಡಿಸೆಂಬರ್ ತಿಂಗಳುಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಅದರಿಂದಾಗಿ ಮತ್ತಷ್ಟು ಕೊರತೆ ಉಂಟಾಗುವ ಸಾಧ್ಯತೆ ಇದೆ. ಎಲ್ ನಿನೋ ಪರಿಸ್ಥಿತಿಗೂ ಸಹ ಸಮುದ್ರದೊಳಗಿನ ಭೀಕರ ಜ್ವಾಲಾಮುಖಿಗಳು ಕಾರಣ ಎನ್ನುವುದನ್ನು ವಿಜ್ಞಾನಿಗಳು ಗಮನಿಸಬೇಕು. ಇದರ ಬಗ್ಗೆ ಸರಕಾರ ಹಾಗೂ ಇತರ ಸಂಸ್ಥೆಗಳು ಸೂಕ್ತ ಮುಂಜಾಗರೂಕತೆಯ ಕ್ರಮಗಳನ್ನು ಜಾರಿಗೊಳಿಸಬೇಕೆಂದು ಈ ಮೂಲಕ ಕೋರುತ್ತೇನೆ. ( ಹೆಚ್.ಎಸ್.ಎಂ.ಪ್ರಕಾಶ್, ಭೂವಿಜ್ಞಾನಿ, ಬೆಂಗಳೂರು, 9535416639 )
ವಿರಾಜಪೇಟೆ NEWS DESK ಜೂ.28 : ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಕ್ಯಾಪ್ಟನ್ ಬಾಚುರ ಎಸ್.ಪೂಣಚ್ಚ ಅವರು ದೀಪ ಬೆಳಗುವ ಮೂಲಕ ಘಟಕವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುತ್ತದೆ. ನಾಯಕತ್ವದ ಗುಣಗಳನ್ನು ವೃದ್ಧಿಸುತ್ತದೆ. ಶಿಸ್ತು, ಸಮಯಪಾಲನೆ ಮತ್ತು ಜವಾಬ್ದಾರಿಯನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪರಿಪಾಲನೆಯನ್ನು ರೂಢಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು, ಸಾಮಾಜಿಕ ಜಾಲತಾಣ, ಕಾನೂನುಬಾಹಿರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಉತ್ತಮ ಜೀವನವನ್ನು ನಡೆಸಬೇಕೆಂದು ಕರೆ ನೀಡಿದರು. ದೇಶ ನಮಗೆ ಎಲ್ಲವನ್ನೂ ನೀಡಿದೆ, ಆದ್ದರಿಂದ ದೇಶ ಸೇವೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ದೇಶ ಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರುವುದು ಮಾತ್ರವಲ್ಲ, ಕಾನೂನು ಪಾಲಿಸುವುದು, ಸಮಾಜದ ಒಳಿತಿಗಾಗಿ ದುಡಿಯುವುದು ಹಾಗೂ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುವುದೂ ದೇಶ…






