ನಾಪೋಕ್ಲು ಮೇ 4 NEWS DESK : ಮಹಿಳೆಯರು ಸ್ವಾವಲಂಬಿಗಳಾಗಲು ಸಂತೆಮೇಳದಂತಹ ಕಾರ್ಯಕ್ರಮಗಳು ಪ್ರಯೋಜನಕಾರಿ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ಸ್ಥಳೀಯ ಮಹಿಳಾ ಸಮಾಜದಲ್ಲಿ ಸಂಜೀವಿನಿ ಒಕ್ಕೂಟ ಮತ್ತು ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಸಂತೆ ಮೇಳ ಕಾರ್ಯಕ್ರಮವನ್ನು ಹಾಗೂ ವಾರ್ಷಿಕ ಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಮಹಿಳೆಯರು ಸಂಘ ಸಂಸ್ಥೆಗಳೊಂದಿಗೆ ತಮ್ಮನ್ನು ತೊಡಗಿಸಿಕೊಂಡು ಸದೃಢರಾಗರಬೇಕೆಂದು ಹಿತನುಡಿಗಳನ್ನು ನಾಡಿ ಒಕ್ಕೂಟದ ಅಧ್ಯಕ್ಷರು, ಸಂಘದ ಸದಸ್ಯರು ಯಾವ ರೀತಿ ಕಾರ್ಯ ನಿರ್ವಹಿಸಬೇಕು ಹಾಗೂ ಕಸ ವಿಲೇವಾರಿಯ ಬಗೆಯು ಚರ್ಚೆಯನ್ನು ನಡೆಸಿದರು. ಸಂಜೀವಿನಿ ಒಕ್ಕೂಟದ ಮುಖ್ಯ ಲೆಕ್ಕ ಪತ್ರ ನಿರ್ವಹಾಕಿ ಯಮುನ ವರ್ಷಕ ವರದಿ ಮಂಡನೆಯನ್ನು ಮಾಡಿದರು. ಕಾರ್ಯಕ್ರಮವದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಲೋಚನಾ, ಪಂಚಾಯಿತಿ ಮಾಜಿ ಸದಸ್ಯ ಕಟ್ಟಿ, ಸಂಜೀವಿನಿ ಒಕ್ಕೂಟದ ಮೇಲ್ವಿಚಾರಕ ಕೃತಿಕಾರ ಪ್ರಸ್ತುತ ಸಾಲಿನಲ್ಲಿ ಆಯ್ಕೆಯಾದಂತಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶರೀಫ ಹಾಗೂ ಕಾರ್ಯದರ್ಶಿ ಮಂಜುಳಾ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ರೋಜಾ, ಕೃಷಿ…
ಲೇಖಕ: admin
ವಿರಾಜಪೇಟೆ ಮೇ 4 NEWS DESK : ವಿಷು ಹಬ್ಬದ ಪ್ರಯುಕ್ತ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಪ್ರಥಮ ವರ್ಷದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವೇದಿಯ ಮುಂಭಾಗದಲ್ಲಿ ವಿಶು ಕಣಿ ಪೂಜೆಯನ್ನು ಹಿರಿಯರು ಮಾಡಿದರು. ಬಳಿಕ ಮಲಯಾಳಿ ಬಾಂಧವರಿಗೆ ಕೈನೀಟಂ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಷು ಹಬ್ಬದ ಮಹತ್ವ ಸೇರಿದಂತೆ ಹಬ್ಬದ ವಿಷು ಕಣಿ ಮಡಗುವ ರೀತಿ, ದೀಪವನ್ನು ಹಚ್ಚುವುದು, ಸಾಂಪ್ರಾದಾಯಿಕವಾಗಿ ವಿಷು ಕಣಿ ಇಡುವ ಮತ್ತು ಆಚರಿಸುವ ರೀತಿಯನ್ನು ಪ್ರಸ್ತುತ ಪಡಿಸಲಾಯಿತು. ಮತ್ತು ಇಂದಿನ ಯುವಜನತೆಗೆ ವಿಷು ಹಬ್ಬದ ಮಹತ್ವವನ್ನು ತಿಳಿಯಪಡಿಸಿದರು. ಬಳಿಕ ಮೈದಾನದ ಮಧ್ಯಭಾಗದಲ್ಲಿ ದೇಪವನ್ನು ಬೆಳಗುವ ಮೂಲಕ ತಿರುವಾದಿರ ನೃತ್ಯ ಪ್ರದರ್ಶನಕ್ಕೆ ಅತಿಥಿ ಗಣ್ಯರು ಚಾಲನೆ ನೀಡಿದರು. ವಿಶು ಹಬ್ಬದ ಅಂಗವಾಗಿ ಹಿಂದೂ ಮಹಿಳಾ ಮಲಯಾಳಿ ಬಂಧುಗಳಿಂದ ಮೆಗಾ(100ಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿರುವ) ತಿರುವಾದಿರ ನೃತ್ಯವನ್ನು ಪ್ರಸ್ತುತ ಪಡಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ…
ಮಡಿಕೇರಿ ಮೇ 4 NEWS DESK : ಪ್ರಸಕ್ತ (2026-27) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಕೊಡ್ಲಿಪೇಟೆ, ಹಾಗೂ ಮಹಿಳಾ ಪದವಿ ಪೂರ್ವ ಕಾಲೇಜು ಕುಶಾಲನಗರ ಇಲ್ಲಿನ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ, ಕನ್ನಡ, ಇಂಗ್ಲಿಷ್, ಹಿಂದಿ, ಭೌತಶಾಸ್ತ್ರ, ಜೀವಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಇತಿಹಾಸ, ಉರ್ದು, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಕಂಪ್ಯೂಟರ್ ವಿಜ್ಞಾನ ಈ ವಿಷಯಗಳಲ್ಲಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿಯೊಂದಿಗೆ ದೃಢೀಕೃತ ದಾಖಲೆಗಳನ್ನು ಮೇ, 12 ರಂದು ಸಂಜೆ 5 ಗಂಟೆ ಒಳಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಇಲ್ಲಿಗೆ ಸಲ್ಲಿಸಲು ಸೂಚಿಸಿದೆ. ಈ ವಿಷಯಗಳಿಗೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ, 12 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ…
ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಉಪಸ್ಥಿತಿಯಲ್ಲಿ ಮತ್ತು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಜನರ ಪಾಲ್ಗೊಳ್ಳುವಿಕೆ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಜನಪ್ರತಿನಿಧಿಗಳ ಜೊತೆಗೆ ಜನರ ಸಹಭಾಗಿತ್ವವೂ ಪ್ರಮುಖವಾಗಿದೆ ಎಂದರು. ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಯೋಜನೆ ರೂಪಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು, ಆ ದಿಸೆಯಲ್ಲಿ ಎಲ್ಲರ ಜೊತೆ ಚರ್ಚಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದರು. ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ ಅವರು ಮಾತನಾಡಿ ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ಧಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ಧಿಯ ಕ್ರಿಯಾಯೋಜನೆ…
ಗೋಣಿಕೊಪ್ಪ ಮೇ 4 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆಯಾಗಿದ್ದಾರೆ. ಕಾಕೂನ್ ಸಭಾಂಗಣದಲ್ಲಿ ನಡೆದ ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಾರ್ಷಿಕ ಸಭೆಯಲ್ಲಿ ಸೀನಿಯರ್ ಚೇಂಬರ್ ಇಂಟನ್ರ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ವಾಸುದೇವನ್, ಅವರ ಉಪಸ್ಥಿತಿಯಲ್ಲಿ ಪಿಪಿಎಫ್ ಆಶಿಕ್ ಚಂಗಪ್ಪ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಯಿತು. ಐಪಿಪಿ ಬಿ.ಎನ್.ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಶಿಕ್ ಚಂಗಪ್ಪ ಅಧಿಕಾರ ಸ್ವೀಕರಿಸಿದರು. ನೂತನ ಪದಾಧಿಕಾರಿಗಳಾಗಿ ಪಿಪಿಎಫ್ ಮೋಹನ್ ಮೆಕೇರಿರ, ಎಂ.ಎಸ್.ಸಚಿನ್ ಬೆಳ್ಯಪ್ಪ, ಸಹ ಕಾರ್ಯದರ್ಶಿ ನಾಗೇಂದ್ರ, ಉಪಾಧ್ಯಕ್ಷರಾಗಿ ಪಿಪಿಎಪ್ ನಾಗೇಶ್ ಮೋಹನ್, ಕುಶಲಾಪ್ಪ, ಚೇತನ್, ವಿ.ವಿ.ಜೀತೆಂದ್ರ, ಅಟೋನಿ ಜೋಸೆಫ್, ಮಧುಮಾಚಯ್ಯ, ರವಿ, ಅಲ್ಲಮಾಡ ಸುನೀಲ್, ಶರತ್, ಅಟೋನಿ ಪಿ.ಜೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಇಂಧನ ಇಲಾಖೆಯ ಮುಖ್ಯ ವಿದ್ಯುತ್ ನಿರೀಕ್ಷಕ ತಿತೀರ ರೋಷನ್ ಅಪ್ಪಚ್ಚು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಒಗ್ಗಟ್ಟಿನ ಮನೋಭಾವದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ವಿಶೇಷತೆಯ ಗುಣವಾಗಿದೆ.…
ಮಡಿಕೇರಿ ಮೇ 4 NEWS DESK : ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಸೋಮವಾರ ನಡೆದಿದೆ. ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ನಾಗರಾಜು (41) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗುಹ್ಯ ದೇವಾಲಯ ಸಮೀಪದ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರ ಪೈಕಿ ನಾಗರಾಜು ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತ ನಾಗರಾಜು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗ್ರಾಮಸ್ಥರ ನೆರವಿನಿಂದ ಮೃತದೇಹವನ್ನು ಹೊರ ತೆಗೆಯಲಾಗಿದ್ದು, ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿಕೊಪ್ಪ ಮೇ 4 NEWS DESK : ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಫಲಿತಾಂಶ ಕಂಡುಕೊಂಡ ಹಿನ್ನೆಲೆ ಗೋಣಿಕೊಪ್ಪಲು ನಗರ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಶಕ್ತಿ ಕೇಂದ್ರದ ಪ್ರಮುಖ್ ಸುರೇಶ್ ರೈ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮತ್ತುಕಾರ್ಯಕರ್ತರು ನಗರದ ಬಸ್ಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಉಪಾಧ್ಯಕ್ಷಗುಮ್ಮಟ್ಟಿರ ಕಿಲನ್ ಗಣಪತಿಇದೊಂದು ಐತಿಹಾಸಿಕ ದಾಖಲೆಯಾಗಿದೆ. 15 ವರ್ಷಗಳ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪಥನವಾಗಿ ಆ ನೆಲದಲ್ಲಿ ಹಿಂದುತ್ವಧ್ವಜ ಹಾರಾಡುತ್ತಿದೆ. ಕಮಿನ್ಯುಸ್ಟ್ ಆಡಳಿತದಲ್ಲಿದ್ದ ಪಶ್ಚಿಮ ಬಂಗಾಳ ಇಂದು ಮೋದಿ, ಷಾ ಜೋಡಿಯತಂತ್ರಗಾರಿಕೆಗೆ ಒಲಿದಿದೆ. ಇದು ದಶಕಗಳ ಕನಸ್ಸಾಗಿತ್ತು ಎಂದು ಹೇಳಿದರು. ಪ್ರಮುಖರುಗಳಾದ ಸುಬ್ರಮಣಿ, ಕೊಣಿಯಂಡ ಬೋಜಮ್ಮ, ಚೈತ್ರ ಬಿ. ಚೇತನ್, ಚೇತನ್, ಪ್ರಭಾಕರ್ ನೆಲ್ಲಿತ್ತಾಯ, ದೀಪಕ್, ನೂರೇರರಂಜಿ, ಸುಬ್ರಮಣಿ, ಸುನೀಲ್ರೈ, ಧನಲಕ್ಷ್ಮಿ, ವಿವೇಕ್, ರಾಜೇಶ್ ಕೆ, ಅಖಿಲ್, ಸಾಜಿ ಇದ್ದರು.
ಮಡಿಕೇರಿ ಮೇ 4 NEWS DESK : ಹರಕೆಯ ಹಣವನ್ನು ಕಳೆದುಕೊಂಡ ವ್ಯಕ್ತಿಯೊಬ್ಬರಿಗೆ 500 ರೂ. ಮುಖಬೆಲೆಯ ಒಂದು ಬಂಡಲ್ ಹಣವನ್ನು ಕಾರ್ಮಿಕರೊಬ್ಬರು ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಹರಕೆ ರೂಪದಲ್ಲಿ 500 ರೂ. ಮುಖಬೆಲೆಯ ಒಂದು ಬಂಡಲ್ ಹಣವನ್ನು ಪಾಲಿಬೆಟ್ಟ ದರ್ಗಾಕ್ಕೆ ಒಪ್ಪಿಸಲೆಂದು ಹುಂಡಿ ಗ್ರಾಮದ ನಿವಾಸಿ ಸಿ.ಎಂ.ನಿಯಾಸ್(46) ಎಂಬುವವರು ತೆರಳುತ್ತಿದ್ದಾಗ ಮಾರ್ಗದ ಮಧ್ಯೆ ಹಣದ ಬಂಡಲ್ ಬಿದ್ದು ಹೋಗಿತ್ತು. ಗೋಣಿಕೊಪ್ಪ ಮಾರ್ಗವಾಗಿ ಕುಶಾಲನಗರ ಕಡೆಗೆ ಹೋಗುತ್ತಿದ್ದ ಕುಶಾಲನಗರದ ನಿವಾಸಿ ಕೂಲಿ ಕಾರ್ಮಿಕ ಎಂ.ಷಂಶುದ್ದೀನ್ ಎಂಬುವವರಿಗೆ 500 ರೂ. ಮುಖ ಬೆಲೆಯ ಹಣದ ಬಂಡಲ್ ಬಿದ್ದು ಸಿಕ್ಕಿತ್ತು. ಈ ವಿಚಾರವನ್ನು ಅವರು ತಮ್ಮ ಸ್ನೇಹಿತ ಸಿದ್ದಾಪುರ ಆಟೋ ಚಾಲಕರ ಸಂಘದ ಕಾರ್ಯದರ್ಶಿ ಗಿರೀಶ್ ಅವರಿಗೆ ತಿಳಿಸಿ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಆಗುವಂತೆ ನೋಡಿಕೊಂಡಿದ್ದರು. ಕೊಡಗು ಜಿಲ್ಲಾ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವ್ಯಾಟ್ಸ್ ಅಪ್ ಗ್ರೂಪ್ ನಲ್ಲೂ ಮಾಹಿತಿ ಒದಗಿಸಿದ್ದರು. ಸೂಕ್ತ ದಾಖಲಾತಿ ನೀಡಿದರೆ ಕುಶಾಲನಗರ ಪೊಲೀಸ್…
ಗೋಣಿಕೊಪ್ಪ ಮೇ 15 NEWS DESK : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣದಲ್ಲಿ ನಡೆದ ಉಪಚುನಾವಣೆಯಲ್ಲಿ ಸಮರ್ಥ ಶ್ಯಾಮನೂರು ಗೆಲುವಿನ ಫಲಿತಾಂಶ ಬಂದ ಹಿನ್ನೆಲೆ ಗೋಣಿಕೊಪ್ಪ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ಆಚರಿಸಲಾಯಿತು. ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ನಗರ ಕಾಂಗ್ರೆಸ್ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ನೇತೃತ್ವದಲ್ಲಿ ನಗರದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಘೋಷಣೆಗಳನ್ನು ಹಾಕುವ ಮೂಲಕ ಸಂಭ್ರಮವನ್ನು ಸವಿದರು. ಕಾಂಗ್ರೆಸಿನ ಪಿ.ಕೆ.ಪ್ರವೀಣ್ ಮತ್ತು ಕೆಡಿಸಿಸಿ ಸದಸ್ಯ ಸಮ್ಮದ್ಕಾಂಗ್ರೆಸ್ ಪಕ್ಷದ ಗೆಲುವಿನ ಹಾದಿಯ ಬಗ್ಗೆ ಮಾತನಾಡಿದರು. ಕಾಂಗ್ರೆಸಿನ ಹಿರಿಯ ಮುಖಂಡ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುಳ ಎಂ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಖಾಲೀದ್, ಯುವಕಾಂಗ್ರೆಸ್ ಉಪಾಧ್ಯಕ್ಷ ಅಂಕಿತ್, ಪ್ರಮುಖರಾದ ರಾಜಶೇಖರ್, ನಾರಾಯಣ ಸ್ವಾಮಿ ನಾಯ್ಡು, ಧನಲಕ್ಷ್ಮಿ, ಇದ್ದರು.
ಸೋಮವಾರಪೇಟೆ ಮೇ 4 NEWS DESK : ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸೋಮವಾರವೂ ಮುಂದುವರಿದಿದೆ. ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬೂರು ಸರ್ಕಾರಿ ಜಾಗದಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ಜಾಗ ಒದಗಿಸುವಂತೆ ಒತ್ತಾಯಿಸಿ, ಧರಣಿ ನಡೆಸುತ್ತಿದ್ದಾರೆ. ಅಲ್ಲಲ್ಲಿ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದಾರೆ. ಧರಣಿ ನಡೆಯುತ್ತಿರುವ ಪೈಸಾರಿ ಜಾಗವನ್ನು ಧರಣಿ ನಿರತರು ಕಂಡು ಹಿಡಿದಿದ್ದು, ಆ ಜಾಗದ ಆರ್ಟಿಸಿಯನ್ನು ತೆಗೆದು, ಆ ಜಾಗದಲ್ಲಿ ನಿವೇಶನ ರಹಿತ ಕಾರ್ಮಿಕರಿಗೆ ನಿವೇಶನ ನೀಡುವಂತೆ ಜಿಲ್ಲಾಧಿಕಾರಿ, ಕಂದಾಯ ಸಚಿವರನ್ನು ಒತ್ತಾಯಿಸಿದ್ದಾರೆ. ಈ ಪೈಸಾರಿ ಜಾಗವನ್ನು ಅನೇಕರು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದಾರೆ. ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ಹಂಚುವಂತೆ ಸಂಬಂಧಪಟ್ಟವರಿಗೆ ಮನವಿ ಪತ್ರ ನೀಡಲಾಗುವುದು ಎಂದು ಕಾರ್ಮಿಕ ಸಂಘಟನೆ ಅಧ್ಯಕ್ಷ ಕೆ.ಮೊಣ್ಣಪ್ಪ ಹೇಳಿದರು. ಸುತ್ತಮುತ್ತಲಿನ ಗ್ರಾಮಗಳ ಸುಮಾರು 290 ಕ್ಕೂ ಹೆಚ್ಚು ಕಾರ್ಮಿಕರು ಧರಣಿಯಲ್ಲಿ…






