ಕುಶಾಲನಗರ ಡಿ.26 NEWS DESK : ಕೂಡುಮಂಗಳೂರು ಗ್ರಾ.ಪಂ ಸಾಮಾನ್ಯ ಸಭೆಯು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷ ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮಾ ಖರ್ಚಿನ ಬಗ್ಗೆ ಹಾಗೂ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಗಳ ಕುರಿತು ಚರ್ಚಿಸಲಾಯಿತು. ನಂತರ 15ನೇ ಹಣಕಾಸಿನ ಕ್ರಿಯಾಯೋಜನೆಯನ್ನು ಅನುಮೋದಿಸಲಾಯಿತು. ಪಂಚಾಯಿತಿ ನಿಧಿಯ ಕ್ರಿಯಾಯೋಜನೆಯ ಕಾಮಗಾರಿಯ ಬಗ್ಗೆ ಪಿಡಿಓ ಸದಸ್ಯರ ಗಮನಕ್ಕೆ ತಂದರು. ಸುಂದರನಗರ ಗ್ರಾಮದಲ್ಲಿ ಪಂಚಾಯಿತಿಯಿಂದ ಅನುಮತಿ ಪಡೆಯದೇ ಬಹು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದೆ. ಈ ಹಿಂದೆ ಕಾಮಗಾರಿ ನಡೆಸದಂತೆ ಸೂಚಿಸಲಾಗಿದ್ದರೂ, ಕೆಲಸ ಮಾಡಲಾಗುತ್ತಿದೆ. ಆದ್ದರಿಂದ ಆದಷ್ಟು ಬೇಗನೇ ಕಾಮಗಾರಿಗೆ ಬಳಸುತ್ತಿರುವ ವಸ್ತುಗಳನ್ನು ವಶಕ್ಕೆ ಪಡೆಯುವಂತೆ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ತಿಳಿಸಿದರು. ಇದಕ್ಕೆ ಸದಸ್ಯರಾದ ಆಶಾ ಧ್ವನಿಗೂಡಿಸಿದರು. ಚರಂಡಿ ಸ್ವಚ್ಚತೆ, ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಸದಸ್ಯರು ಆಗ್ರಹಿಸಿದರು. ಬಳಿಕ ಸಾರ್ವಜನಿಕರ ಅರ್ಜಿ ವಿಲೇವಾರಿ ನಡೆಯಿತು. ಅಧ್ಯಕ್ಷರ ಅನುಮತಿ ಮೇರೆಗೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ…
ಲೇಖಕ: admin
ಮಡಿಕೇರಿ ಡಿ.26 NEWS DESK : ನಮ್ಮ ಪೂರ್ವಜರು ಕಷ್ಟಪಟ್ಟು ಪದ್ದತಿ ಪರಂಪರೆ ಆಚಾರ, ವಿಚಾರ, ಸಹಬಾಳ್ವೆ ಸಂಸ್ಕಾರಗಳನ್ನು ನಮಗೆ ಕೊಟ್ಟು ಹೋಗಿದ್ದಾರೆ. ಅವುಗಳನ್ನು ನಮ್ಮ ಮುಂದಿನ ಪೀಳಗೆಯತ್ತ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸಮಾಜಗಳು, ಸಂಘ ಸಂಸ್ಥೆಗಳು ಜಾಗರೂಕತೆಯಿಂದ ಹೆಜ್ಜೆ ಇಡಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆದ ಸುವರ್ಣ ಮಹೋತ್ಸವ ( ಪೊನ್ನ್ ನಮ್ಮೆ) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಜಗತ್ತಿನಲ್ಲಿಯೇ ಕೊಡವ ಜನಾಂಗದ ಆಚಾರ ವಿಚಾರಗಳು, ಆಹಾರ ಪದ್ದತಿಗಳು, ಉಡುಗೆ, ತೊಡುಗೆಗಳು ವಿಶಿಷ್ಟವಾಗಿ ಇದ್ದು ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ತುಂಬಾ ಕಷ್ಟ ಪಟ್ಟು ಆಧುನಿಕತೆಯ ಕನಿಷ್ಠ ಸಂಪರ್ಕ ಇಲ್ಲದ ಕಾಲದಲ್ಲಿ ಇಂತಹ ಭವ್ಯ ಪರಂಪರೆಯನ್ನು ಬಳುವಳಿಯಾಗಿ ಉಳಿಸಿ ಹೋಗಿದ್ದಾರೆ.ಇವು ಶಾಶ್ವತವಾಗಿ ಉಳಿದರೇ ಮಾತ್ರ ಜನಾಂಗದ ಅಸ್ಮಿತೆ ಉಳಿಯುತ್ತದೆ. ಈ ನಿಟ್ಟಿನಲ್ಲಿ ಕೊಡವ ಸಮಾಜಗಳು ಪರಿಣಾಮಕಾರಿಯಾಗಿ…
ಸೋಮವಾರಪೇಟೆ NEWS DESK ಡಿ.26 : ಕಳೆದೆರಡು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಶ್ರೀಗಂಧ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಹೊರ ಜಿಲ್ಲೆಯ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಬೀರನಹಳ್ಳಿ ಕಾವಲು ಗ್ರಾಮದ ಚಂದ್ರು ಹಾಗೂ ಸುರೇಶ್ ಬಂಧಿತ ಆರೋಪಿಗಳು. ಅರೋಪಿಗಳು ಸಣ್ಣ ಗಾತ್ರದ ಮರಗಳನ್ನು ಕಡಿದು ಮೂಟೆಗಳಲ್ಲಿ ಸಾಗಿಸುತ್ತಿದ್ದರು. ಗಂಧದ ತುಂಡುಗಳನ್ನು ಬೆಮ್ಮತ್ತಿಯ ವ್ಯಕ್ತಿಯೋರ್ವನಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಅರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಸಿಎಫ್ ಎ.ಎ.ಗೋಪಾಲ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್ಎಫ್ಒಗಳಾದ ಶೈಲೇಂದ್ರ ಕುಮಾರ್, ಪೂಜಶ್ರೀ, ಡಿಆರ್ಎಫ್ಗಳಾದ ಶ್ರವಣಕುಮಾರ್, ಸೂರ್ಯ, ಲೋಹಿತ್, ರೇಣುಕುಮಾರ್, ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ರಂಜಿತ್, ಸತೀಶ್, ದರ್ಶನ್, ರಾಕೇಶ್, ಪ್ರವೀಣ್, ಹರೀಶ್, ನಂದೀಶ್, ಸಂತೋಷ್ ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಡಿ.26 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ಆವರಣದಲ್ಲಿ ರೂ 20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ದುರ್ಗಾಲಕ್ಷ್ಮಿ ದೇವಾಲಯದ ಪ್ರತಿಷ್ಠಾಪನಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಕೇರಳದ ತಳಿಪರಂಬ ಕಾಳೇಘಾಟ್ ಇಲ್ಲಂ ಮಧುಸೂಧನ್ ತಂತ್ರಿ ಮತ್ತು ತಂಡದವರು ದೇವಾಲಯಕ್ಕೆ ವಿವಿಧ ವಿಶೇಷ ಪೂಜಾ ಕೈಂಕರ್ಯಗಳನ್ನು ನೇರವೇರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಐದು ದಿನಗಳ ಕಾಲ ನಡೆದ ಬ್ರಹ್ಮಕಲಶೋತ್ಸವದಲ್ಲಿ ಗಣಪತಿ ಹೋಮ, ತಿಲಾಹೋಮ, ಸಾಯುಜ್ಯಪೂಜೆ, ಪ್ರಸಾದಬಿಂಬ ಪರಿಗ್ರಹ, ಜಲಾದಿವಾಸ ಪುಣ್ಯಹಃ, ಪ್ರಸಾದಶುದ್ಧಿ, ಅಸ್ತ್ರಕಲಶಪೂಜೆ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಬಲಿ, ವಾಸ್ತುಕಲಶಾಭಿಷೇಕ, ಅತ್ತಾಯ ಪೂಜೆ ಮಹಾಮಂಗಳಾರತಿ ನೆರವೇರಿತು. ನಂತರ ಗಣಪತಿ ಹೋಮ, ಆದಿವಾಹನ ವಿಡರ್ತಿ ಪೂಜೆ, ಶ್ರೀ.ಅಯ್ಯಪ್ಪ ಸ್ವಾಮಿಯ ಬ್ರಹ್ಮಕಲಶ ಪೂಜೆ, ಶ್ರೀ ಭಗವತಿಯ ಬ್ರಹ್ಮಕಲಶ ಪೂಜೆ, ಶ್ರೀ ಗಣಪತಿಯ ಬ್ರಹ್ಮಕಲಶಾಭಿಷೇಕ, ಶ್ರೀ ಭಗವತಿಯ ಪ್ರಸಾದ ಪ್ರತಿಷ್ಟೆ ನೆರವೇರಿದ್ದು, ಶುಭ ಮುಹೂರ್ತ ಕುಂಭ ಲಗ್ನದಲ್ಲಿ ಶ್ರೀ ದುರ್ಗ ಲಕ್ಷ್ಮಿ ದೇವಿಯ ಪ್ರತಿಷ್ಟೆ,…
ಮಡಿಕೇರಿ NEWS DESK ಡಿ.25 : ಚಿರತೆಯನ್ನು ಹೋಲುವ ಕಾಡುಬೆಕ್ಕು ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ನಿಟ್ಟೂರು ಸಮೀಪದ ತಟ್ಟಕೆರೆ ಪೈಸಾರಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ರಾಜನ್ (48) ಎಂಬುವವರೇ ಕಾಡುಬೆಕ್ಕಿನ ದಾಳಿಗೊಳಗಾದವರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ವನ್ಯಜೀವಿ ದಾಳಿ ಮಾಡಿ ಕಿವಿ ಮತ್ತು ತಲೆಯ ಭಾಗಕ್ಕೆ ಘಾಸಿಗೊಳಿಸಿತು. ಅದೃಷ್ಟವಶಾತ್ ಕಿರುಚಾಟ ಕೇಳಿ ಪ್ರಾಣಿ ಅಲ್ಲಿಂದ ಕಾಲ್ಕಿತ್ತಿದೆ. ನಂತರ ಗಾಯಾಳು ರಾಜನ್ ಅವರನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಯಿತು. ರಾಜನ್ ಅವರು ಗಾಬರಿಯಿಂದ ನನ್ನ ಮೇಲೆ ಹುಲಿ ದಾಳಿಯಾಗಿದೆ ಎಂದು ಹೇಳಿಕೆ ನೀಡಿದ ಪರಿಣಾಮ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು. ಅಲ್ಲದೆ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ರಾಜನ್ ಅವರ ಆರೋಗ್ಯ ವಿಚಾರಿಸಿದರು. ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ…
ವಿರಾಜಪೇಟೆ NEWS DESK ಡಿ.25 : ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ನಲ್ಲಿ ಶಾಂತಿಧೂತ ಯೇಸುಕ್ರಿಸ್ತರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸುವ ಮೂಲಕ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಪ್ರಧಾನ ಧರ್ಮಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್ ಹಾಗೂ ಸಹ ಧರ್ಮ ಗುರುಗಳಾದ ರೆ.ಫಾ.ಮದಲೈ ಮುತ್ತು ಅವರುಗಳ ಸಾನಿಧ್ಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೈಬಲ್ ಪಠಣ ಹಾಗೂ ಧರ್ಮಕೇಂದ್ರದ ಗಾಯನ ವೃಂದದಿಂದ ಕ್ಯಾರಲ್ ಗಾಯನ ನಡೆಯಿತು. ಪ್ರಧಾನ ಧರ್ಮಗುರುಗಳು ಬಾಲಯೇಸುವಿನ ಮೂರ್ತಿಯನ್ನು ದೇವಾಲಯದಲ್ಲಿ ನಿರ್ಮಿಸಲಾದ ಗೋದಲಿಯಲ್ಲಿ ಪ್ರತಿಷ್ಠಾಪನೆ ಮಾಡಿದರು. ನಂತರ ಬಲಿಪೂಜೆ ಮತ್ತು ಯೇಸುಕ್ರಿಸ್ತರ ದಿವ್ಯ ಗಾಯನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಗುರುಗಳು ಧರ್ಮ ಸಂದೇಶದಲ್ಲಿ ಪ್ರೀತಿ ಮತ್ತು ಶಾಂತಿಯ ಸಮಾಜ ನಿರ್ಮಾಣಕ್ಕಾಗಿ ಕರೆ ನೀಡಿದರು. ನೆರೆದಿದ್ದವರು ಕೇಕ್ ಹಂಚಿ ಪರಸ್ಪರ ಶುಭ ಸಂದೇಶವನ್ನು ವಿನಿಮಯ ಮಾಡಿಕೊಂಡು ಹಬ್ಬವನ್ನು ಸಂಭ್ರಮವನ್ನು ಆಚರಿಸಿದರು. ::: ಪೊನ್ನಣ್ಣ ಭೇಟಿ ::: ಕ್ರಿಸ್ಮಸ್ ಅಂಗವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು…
ಮಡಿಕೇರಿ NEWS DESK ಡಿ.25 : ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ. ನೆಲ್ಲಿಹುದಿಕೇರಿಯ ನಿವಾಸಿಗಳಾದ ಚಿದಾನಂದ ಆಚಾರ್ಯ (48) ಹಾಗೂ ಪತ್ನಿ ನಳಿನಿ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮಂಗಳೂರಿನಲ್ಲಿ ನಡೆಯುವ ತಮ್ಮ ಸಂಬAಧಿಕರ ಉಪನಯನ ಕಾರ್ಯಕ್ರಮಕ್ಕೆಂದು ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕೊಯನಾಡಿನ ಚಡಾವು ಎಂಬಲ್ಲಿ ಅಪಘಾತ ಸಂಭವಿಸಿದೆ. ಚಿದಾನಂದ ಆಚಾರ್ಯ ಅವರು ಸ್ಥಳದಲ್ಲೇ ಮೃತಪಟ್ಟರೆ, ನಳಿನಿ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಕೊನೆಯುಸಿರೆಳೆದಿದ್ದಾರೆ. ಮೃತರು 14 ವರ್ಷದ ಓರ್ವ ಪುತ್ರನನ್ನು ಅಗಲಿದ್ದಾರೆ. ಗ್ರಾಮಾಂತರ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಡಿ.25 NEWS DESK : ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ, ಬಾಳೆಹೊನ್ನೂರು, 2025 ನೇ ಇಸವಿಯಲ್ಲಿ 100 ನೇ ವರ್ಷದ ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದು, ಇದರ ಪ್ರಯುಕ್ತ ಕಾಫಿ ಬೆಳೆಯುವ ಪ್ರದೇಶಗಳಿಂದ 100 ಪ್ರಗತಿಪರ ಕಾಫಿ ಬೆಳೆಗಾರರನ್ನ ಗುರುತಿಸಿ ಸನ್ಮಾನಿಸಲು ನಿರ್ಧರಿಸಲಾಗಿದೆ. ಆದ್ದರಿಂದ, ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಕಾಫಿ ಬೆಳೆಗಾರರು ಹತ್ತಿರದ ಕಾಫಿ ಮಂಡಳಿಯ ಕಚೇರಿಯಿಂದ ಅರ್ಜಿಯನ್ನು ಪಡೆದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 10/01/2025 ರ ಒಳಗೆ ಸಲ್ಲಿಸಲು ಕೋರಿಕೊಳ್ಳಲಾಗಿದೆ.
ಮಡಿಕೇರಿ ಡಿ.25 NEWS DESK : ಕರ್ನಾಟಕ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಕೊಡಗು ಗೌಡ ಸಮಾಜದ ಮೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪುಟಾಣಿಗಳ ಮೂಲಕ ಉದ್ಘಾಟಿಸಿ ಮಾತನಾಡಿದ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಹಾಗೂ ವಿದ್ಯಾ ಸಂಘದ ನಿರ್ದೇಶಕ ಸೂದನ ಎಸ್.ಈರಪ್ಪ ಅವರು, ಅರೆಭಾಷೆ ಸಾಹಿತ್ಯ, ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಂಪ್ರದಾಯದ ಕುರಿತು ಸಮಾಜದ ಬಂಧುಗಳು ಅರಿತುಕೊಳ್ಳಬೇಕು. ಈ ರೀತಿಯ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಮಕ್ಕಳು ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಮತ್ತು ಅರೆಭಾಷೆ ಐನ್ಮನೆ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲು ಅರೆಭಾಷೆ ಅಕಾಡೆಮಿ ಸದಾ ಸಿದ್ಧವಿದೆ ಎಂದು ತಿಳಿಸಿದರು. ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು ಮಾತನಾಡಿ ವಿದ್ಯಾ ಸಂಘದ ಕಟ್ಟಡದ ನವೀಕರಣ ಕಾರ್ಯ ನಡೆಯುತ್ತಿದ್ದರೂ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕೆನ್ನುವ…
ಮಡಿಕೇರಿ ಡಿ.25 NEWS DESK : ಹುಲಿಯೊಂದು ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ನಿಟ್ಟೂರು ಸಮೀಪದ ತಟ್ಟಕೆರೆ ಪೈಸಾರಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ರಾಜನ್ (48) ಎಂಬುವವರೇ ಹುಲಿ ದಾಳಿಗೊಳಗಾದವರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹುಲಿ ದಾಳಿ ಮಾಡಿ ಕಿವಿ ಮತ್ತು ತಲೆಯ ಭಾಗಕ್ಕೆ ಘಾಸಿಗೊಳಿಸಿದೆ. ಅದೃಷ್ಟವಶಾತ್ ಕಿರುಚಾಟ ಕೇಳಿ ಹುಲಿ ಅಲ್ಲಿಂದ ಕಾಲ್ಕಿತ್ತಿದೆ. ನಂತರ ಗಾಯಾಳು ರಾಜನ್ ಅವರನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ರಾಜನ್ ಅವರ ಆರೋಗ್ಯ ವಿಚಾರಿಸಿದರು. ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹುಲಿ ಸೆರೆಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಆದಿಕಾರಿಗಳಿಗೆ ಸೂಚನೆ ನೀಡಿದರು. ಹುಲಿ ದಾಳಿಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು,…






