ಲೇಖಕ: admin

ಗೋಣಿಕೊಪ್ಪಲು ಡಿ.11 NEWS DESK : ಮನುಷ್ಯ ಮಾನವ ಹಕ್ಕನ್ನು ಅನುಭವಿಸುತ್ತಾನೆ ಅದು ನಮ್ಮ ಪ್ರಾಚೀನ ಧರ್ಮ ಗ್ರಂಥಗಳಿಂದಲೇ ತಿಳಿದುಬರುತ್ತದೆ. ಮಾನವ ಹಕ್ಕುಗಳ ಮೂಲ ಧರ್ಮ ಗ್ರಂಥಗಳಾಗಿವೆ ಎಂದು ವಕೀಲರಾದ ಬಿ.ಬಿ ಮಾದಪ್ಪ ಅಭಿಪ್ರಾಯಪಟ್ಟರು.  ಕಾವೇರಿ ಕಾಲೇಜು ಗೋಣಿಕೊಪ್ಪಲು ಮಾನವ ಹಕ್ಕುಗಳ ಸಮಿತಿ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾನವ ನಿಸರ್ಗದತ್ತವಾಗಿ ಹಕ್ಕುಗಳನ್ನು ಹೊಂದಿರುತ್ತಾನೆ. ಮಾನವ ಹಕ್ಕುಗಳು ನಮ್ಮ ನಮ್ಮಲೇ‌ ಇರುತ್ತವೆ. ಮಾನವ ಹಕ್ಕುಗಳ ಇತಿಹಾಸದ ಬಗ್ಗೆ ಪ್ರಾಚೀನ ಗ್ರಂಥಗಳೇ ತಿಳಿಸಿವೆ. ಪ್ರಾಚೀನ ಕಾಲದಲ್ಲಿ ,ಮಧ್ಯಯುಗದಲ್ಲಿ,21ನೇ ಶತಮಾನದಲ್ಲಿ ಮಾನವ ಹಕ್ಕುಗಳ ಬೆಳವಣಿಗೆ ಹೇಗೆ ಅಯಿತು ಎಂಬುದನ್ನು ತಿಳಿಸುವ ಜೊತೆಗೆ ಎಲ್ಲಾ ಧರ್ಮಗಳಲು ರಾಮಾಯಣ, ಮಹಾಭಾರತ, ಬೈಬಲ್, ಕೂರನ್ ನಂತಹ ಗ್ರಂಥಗಳಲ್ಲಿ ಮಾನವ ಹಕ್ಕಿನ ಕುರುಹುಗಳು ಕಂಡುಬರುತ್ತವೆ.ಹಕ್ಕುಗಳ ಜೊತೆಗೆ ಕರ್ತವ್ಯಕ್ಕೆ ಆದ್ಯತೆ ನೀಡಬೇಕು ಎಂದರು. ಭಾರತದ ಪ್ರಾಚೀನ ಗ್ರಂಥಗಳು ಧರ್ಮ ಮತ್ತು ಅಧರ್ಮಗಳ ಮೂಲಕ ಹಕ್ಕು…

Read More

ಬೆಂಗಳೂರು NEWS DESK ಡಿ.10 : ASC ಮೋಟಾರ್‌ಸೈಕಲ್ ಪ್ರದರ್ಶನ ತಂಡವು 264ನೇ ASC ಕಾರ್ಪ್ಸ್ ದಿನವನ್ನು ಆಚರಿಸಿ ಒಂದೇ ದಿನದಲ್ಲಿ ಮೂರು ಹೊಸ ವಿಶ್ವ ದಾಖಲೆಗಳನ್ನು ಸ್ಥಾಪಿಸಿದೆ. ಆರ್ಮಿ ಸರ್ವಿಸ್ ಕಾರ್ಪ್ಸ್ ಮೋಟಾರ್‌ಸೈಕಲ್ ಡಿಸ್‌ಪ್ಲೇ ಟೀಮ್ (ಟಾರ್ನಾಡೋಸ್) ಡಿಸೆಂಬರ್ 10 ರಂದು ಅಸಾಧಾರಣ ಸಾಧನೆಯನ್ನು ಸಾಧಿಸಿತು. ಒಂದೇ ದಿನದಲ್ಲಿ ಮೂರು ಹೊಸ ವಿಶ್ವ ದಾಖಲೆಗಳನ್ನು ಸ್ಥಾಪಿಸಿತು. 264 ನೇ ಆರ್ಮಿ ಸರ್ವಿಸ್ ಕಾರ್ಪ್ಸ್ ದಿನದ ಸ್ಮರಣಾರ್ಥ ನಡೆದ ಕಾರ್ಯಕ್ರಮವು ಎಎಸ್‌ಸಿ ಸೆಂಟರ್ ಮತ್ತು ಕಾಲೇಜು ಮತ್ತು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ನಡೆಯಿತು.  ಎಲ್ಲಾ ಪ್ರಯತ್ನಗಳನ್ನು ಗಿನ್ನೆಸ್ ವಿಶ್ವ ದಾಖಲೆಗಳ ಅಧಿಕೃತ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆಯಿತು. ಸುಬೇದಾರ್ ಪ್ರದೀಪ್ ಎಸ್‌ಎಸ್ ಅವರು ಮೋಟಾರ್‌ಸೈಕಲ್‌ನಲ್ಲಿ 361.56 ಕಿಲೋಮೀಟರ್‌ಗಳ ಪ್ರಭಾವಶಾಲಿ ದೂರವನ್ನು ಕ್ರಮಿಸುವ ಮೂಲಕ ಅತಿ ಉದ್ದದ ಹಿಂದುಳಿದ ಸವಾರಿಗಾಗಿ ವಿಶ್ವದಾಖಲೆಯನ್ನು ಸ್ಥಾಪಿಸಿದರು.  ಹವಾಲ್ದಾರ್ ಮನೀಶ್ ಅವರು 2.349 ಕಿಲೋಮೀಟರ್‌ಗಳಷ್ಟು ಉದ್ದವಾದ ಬೇಸಿಕ್ ಹ್ಯಾಂಡ್ಸ್-ಫ್ರೀ ವೀಲಿಗಾಗಿ ವಿಶ್ವದಾಖಲೆಯನ್ನು ಮುರಿದರು.  ಹೆಚ್ಚುವರಿಯಾಗಿ, ಸಿಪಾಯಿ ಸುಮಿತ್ ತೋಮರ್ ಅವರು…

Read More

ಕುಶಾಲನಗರ NEWS DESK ಡಿ.10 : ಕುಶಾಲನಗರ ಗೌಡ ಸಮಾಜದಲ್ಲಿ ಡಿ.14ರಂದು ಹುತ್ತರಿ ಹಬ್ಬ ಆಚರಣೆ ನಡೆಯಲಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್ ತಿಳಿಸಿದ್ದಾರೆ. ಅವರು ಸಮಾಜದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಗೌಡ ಸಮಾಜ, ಗೌಡ ಯುವಕ ಸಂಘ ಗೌಡ ಮಹಿಳಾ ಸ್ವಸಹಾಯ ಸಂಘ, ನಿವೃತ್ತ ಗೌಡ ಸೈನಿಕರ ಒಕ್ಕೂಟ ಸೇರಿದಂತೆ ಸಮಾಜದ ವಿವಿಧ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಅದ್ದೂರಿ ಹುತ್ತರಿ ಹಬ್ಬ ಆಚರಣೆ ಮಾಡಲಾಗುವುದು. ಸಂಜೆ 6.30ಕ್ಕೆ ಗೌಡ ಸಮಾಜದಲ್ಲಿ ಸೇರಿ ಫಲಹಾರ, ನಂತರ 7.50ಕ್ಕೆ ನೆರೆಕಟ್ಟುವುದು ತದನಂತರ ಗಣಪತಿ ದೇವಾಲಯಕ್ಕೆ ಮೆರವಣಿಗೆ ಮೂಲಕ ತೆರಳಿ ಪೂಜೆ ಸಲ್ಲಿಸಲಾಗುವುದು. 8:50ಕ್ಕೆ ಹಾರಂಗಿ ರಸ್ತೆಯಲ್ಲಿರುವ ಗೌಡ ಯುವಕ ಸಂಘ ಕಟ್ಟಡದ ಬಳಿ ಗದ್ದೆಯಿಂದ ಕದಿರು ತೆಗೆಯುವ ಕಾರ್ಯಕ್ರಮ ನಡೆಯಲಿದೆ. ಸ್ಥಳದಲ್ಲಿ ಸಮುದಾಯ ಬಾಂಧವರಿಗೆ, ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷರಾದ ಸೆಟ್ಟೇಜನ ದೊರೆಗಣಪತಿ, ಕುಲ್ಲಚೆಟ್ಟಿರ ಕಾಶಿಪೂವಯ್ಯ, ಗೌಡ ಯುವಕ ಸಂಘದ ಅಧ್ಯಕ್ಷರಾದ…

Read More

ಕುಶಾಲನಗರ NEWS DESK ಡಿ 10 : ಕುಶಾಲನಗರದಲ್ಲಿ ಡಿಸೆಂಬರ್ 13 ರಂದು 6ನೇ ವರ್ಷದ ಅದ್ದೂರಿ ಹನುಮ ಜಯಂತಿ ಮಹೋತ್ಸವ ನಡೆಯಲಿದ್ದು, ಈ ಸಂಬಂಧ ಕುಶಾಲನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸುವ ಮಂಟಪಗಳ ಅದ್ದೂರಿ ಶೋಭಾಯಾತ್ರೆ ನಡೆಯಲಿದೆ ಎಂದು ಹನುಮ ಜಯಂತಿ ದಶ ಮಂಟಪಗಳ ಸಮಿತಿ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥಬೀದಿಯಲ್ಲಿರುವ ಆಂಜನೇಯ ದೇವಾಲಯ ‌ಸಮಿತಿಯಿಂದ ಕಳೆದ 38 ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಹನುಮ ಜಯಂತಿ ಕಳೆದೈದು ವರ್ಷಗಳಿಂದ ತನ್ನ ಸ್ವರೂಪವನ್ನು ‌ವಿಸ್ತರಿಸಿಕೊಂಡಿದೆ. ಕುಶಾಲನಗರ ಸುತ್ತಮುತ್ತಲಿನ ಗ್ರಾಮಗಳನ್ನು ಒಳಗೊಂಡಂತೆ  ಹನುಮ ಜಯಂತಿ ಆಚರಣೆಗೆ ಮುಂದಾದ ನಂತರ ಮಡಿಕೇರಿ, ಗೋಣಿಕೊಪ್ಪಲಿನಲ್ಲಿ ನಡೆಯುವ ದಸರಾ ರೀತಿಯ  ವೈಭವ ಪಡೆದುಕೊಂಡಿದೆ ಎಂದು ಹೇಳಿದರು. ಆಂಜನೇಯ ದೇವಾಲಯದ ಮೂಲ ಮಂಟಪದೊಂದಿಗೆ ವಿವಿಧ ಗ್ರಾಮಗಳಿಂದ ಪ್ರತ್ಯೇಕ ಸಮಿತಿಗಳ  ಮಂಟಪಗಳು ಕೂಡ ಕಾರ್ಯಕ್ರಮದಲ್ಲಿ ತಮ್ಮ ಛಾಪು ಮೂಡಿಸಲು ಆರಂಭಿಸಿದೆ.   ಕುಶಾಲನಗರ ರಥಬೀದಿಯ ಆಂಜನೇಯ ದೇವಾಲಯದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಮಂಟಪ, ಕುಶಾಲನಗರದ ಗೋಪಾಲ್ ಸರ್ಕಲ್ ನ…

Read More

ಮಡಿಕೇರಿ NEWS DESK ಡಿ.10 : ಪೊಲೀಸ್ ಮತ್ತು ಸೈನ್ಯದ ಸಮವಸ್ತçದಲ್ಲಿ ಭಿನ್ನತೆ ಇದ್ದರೂ ಕರ್ತವ್ಯವೇ ಪ್ರಧಾನವಾಗಿದೆ. ಸಮವಸ್ತ್ರ ಧರಿಸಿದಾತ ಕರ್ತವ್ಯ ನಿಷ್ಠೆಯಿಂದ ಜನಸೇವೆಯ ತನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಲೆಫ್ಟಿನೆಂಟ್ ಜನರಲ್ ಡಾ.ಪ್ರೊ.ಬಿ.ಎನ್.ಬಿ.ಎಂ.ಪ್ರಸಾದ್ ಎಸ್‌ಎಂ., ವಿಎಸ್‌ಎಂ ಕರೆ ನೀಡಿದ್ದಾರೆ. ನಗರದ ಪೊಲೀಸ್ ಸಮುದಾಯ ಭವನ ಮೈತ್ರಿಯಲ್ಲಿ ನಡೆದ ಕೊಡಗು ಜಿಲ್ಲಾ ನಿವೃತ್ತ ಪೊಲಿಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ‘ಬೆಳ್ಳಿ ಹಬ್ಬ’ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರ ಸೇವೆಯನ್ನು ಸಮವಸ್ತ್ರ ತೊಟ್ಟು ಇಲ್ಲವೆ ಸಮವಸ್ತ್ರವಿಲ್ಲದೆಯೂ ಮಾಡಬಹುದು. ಹೀಗಿದ್ದೂ ಸಮವಸ್ತç ಧರಿಸಿದಾತ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಲೆ ಅದಕ್ಕೆ ತಕ್ಕ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯ. ತಮ್ಮ ಜವಾಬ್ದಾರಿಗಳ ನಿರ್ವಹಣೆಯಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವಂತೆ ಕಿವಿಮಾತುಗಳನ್ನಾಡಿದ ಅವರು, ಜನಸೇವೆಯ ಮೂಲಕ ರಾಷ್ಟç ಸೇವೆಯಲ್ಲಿ ತೊಡಗಿಸಿಕೊಂಡಾತನ ಮೊದಲ ಆದ್ಯತೆ ದೇಶಸೇವೆಯೇ ಆಗಿರುತ್ತದೆ ಎಂದರು. ಪೊಲೀಸ್, ಸೈನ್ಯದ ಯಾವುದೇ ಹಂತಗಳಲ್ಲಿ ಕೆಲಸ ಮಾಡುವವರು ತಮ್ಮ ಗೌರವವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದ ಅವರು, ಫೀ.ಮಾ.ಮಾಣಿಕ್ ಷಾ ಅವರು…

Read More

ಮಡಿಕೇರಿ ಡಿ.10 NEWS DESK : ಕರ್ನಾಟಕ ನಿವೃತ್ತ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.16 ರಂದು ಸುವರ್ಣ ಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕೊಡಗು ಜಿಲ್ಲಾ ಘಟಕದ ಸಂಚಾಲಕ ಪಿ.ಎಸ್.ಜನಾರ್ಧನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೋಗ ಅವಧಿಯಲ್ಲಿಯೇ ಸೇವೆ ಸಲ್ಲಿಸಿರುವ ಕರ್ನಾಟಕ ನಿವೃತ್ತ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯುಟೇಶನ್, ಗಳಿಕೆ ರಜೆ, ನಗದೀಕರಣದ ಮೊತ್ತವನ್ನು ನೀಡದೆ ಇರುವುದು ಖಂಡನೀಯ ಎಂದರು. ರಾಜ್ಯದಲ್ಲಿ 4.50ಲಕ್ಷ ನಿವೃತ್ತ ನೌಕರರಿದ್ದು, 1.7.2022 ರಿಂದ 31.7.2024ರ ಅವಧಿಯಲ್ಲಿ ನಿವೃತ್ತರಾದ 26,423 ಅಧಿಕಾರಿ, ನೌಕರ ವರ್ಗದವರಿಗೆ 7ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ಆರ್ಥಿಕ ಸೌಲಭ್ಯವನ್ನು ನೀಡದೆ 6ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿಯೇ ನೀಡಲಾಗಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರಿಗೆ ಎ ದರ್ಜೆಯಿಂದ ಡಿ ದರ್ಜೆಯ ನೌಕರರಿಗೆ 6 ಲಕ್ಷದವರೆಗೆ ಆರ್ಥಿಕ ನಷ್ಟವಾಗಿದೆ. ಈ ಕುರಿತು ಸರ್ಕಾರದ ಗಮನ ಸೆಳೆಯುವಲ್ಲಿ ಸತತ ನಾಲ್ಕು ತಿಂಗಳುಗಳಿಂದ ಸಮಾವೇಶಗೊಂಡು ತಾಲ್ಲೂಕು,…

Read More

ಮಡಿಕೇರಿ ಡಿ.10 NEWS DESK : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ ಕೃಷ್ಣ ರವರು ನಿಧನ ಹೊಂದಿರುವ ಹಿನ್ನೆಲೆ ದಿವಂಗತರ ಗೌರವಾರ್ಥವಾಗಿ ಡಿಸೆಂಬರ್, 11 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿರುವುದರಿಂದ ಕುಶಾಲನಗರ ಹಾಗೂ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸೆಸ್ಕ್ ವತಿಯಿಂದ ನಿಗದಿಪಡಿಸಲಾಗಿರುವ ಜನಸಂಪರ್ಕ ಸಭೆಯನ್ನು ಮುಂದೂಡಲಾಗಿದೆ ಎಂದು ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.10 NEWS DESK : ಸಮಾಜದಲ್ಲಿ ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ಮಾನವ ಹಕ್ಕುಗಳನ್ನು ಸಂರಕ್ಷಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕರೆ ನೀಡಿದ್ದಾರೆ. ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಮನುಷ್ಯ ಜಾತಿ ತಾನೊಂದೇ ವಲಂ’ ಪಂಪ ಹೇಳಿರುವಂತೆ ಯಾವುದೇ ಜಾತಿ, ಧರ್ಮ, ಅಸಮಾನತೆ ಇಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಮಾನವ ಹಕ್ಕುಗಳನ್ನು ಉಳಿಸಿ ವಿಶ್ವ ಮಾನವರಾಗಬೇಕು ಎಂದು ಅವರು ಹೇಳಿದರು. ‘ಮಹಿಳೆಯರ ಮತ್ತು ಮಕ್ಕಳ ಶೋಷಣೆ, ಜಾತಿ ಹೆಸರಿನಲ್ಲಿ ನಿಂದನೆ ಮಾಡುವುದು ಮಾನವ ಹಕ್ಕು ಉಲ್ಲಂಘನೆ ಮಾಡಿದಂತೆ. ಆದ್ದರಿಂದ ಮಾನವ ಹಕ್ಕುಗಳನ್ನು ರಕ್ಷಿಸುವ ಮೂಲಕ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.’ ಶರಣರು, ದಾಸರು ಸೇರಿದಂತೆ ಎಲ್ಲರೂ ಮಾನವ ಹಕ್ಕುಗಳ ಉಳಿವಿಗಾಗಿ ಹೋರಾಡಿದ್ದಾರೆ. ಜಾತಿ ಪದ್ಧತಿ ಮತ್ತು ಮೌಢ್ಯತೆ ನಿರ್ಮೂಲನೆಗೆ ಶ್ರಮಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಹ ಸಂವಿಧಾನದಲ್ಲಿ ಮಾನವ ಹಕ್ಕುಗಳಿಗಾಗಿ…

Read More

ಮಡಿಕೇರಿ NEWS DESK ಡಿ.10 : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ನಾಪಂಡ ಮುತ್ತಪ್ಪ ಸಂತಾಪ ಸೂಚಿಸಿದ್ದಾರೆ. ಓರ್ವ ಅಭಿವೃದ್ಧಿಶೀಲ, ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡ ಬಗ್ಗೆ ನಮಗೆ ದು:ಖವಿದೆ. ಹಲವು ಸಂದರ್ಭಗಳಲ್ಲಿ ಎಸ್.ಎಂ.ಕೃಷ್ಣ ಅವರೊಂದಿಗೆ ಒಡನಾಡುವ ಸದಾವಕಾಶ ದೊರೆತದ್ದು ನನ್ನ ಬದುಕಿನ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಬೆಂಗಳೂರನ್ನು ವಿಶ್ವದ ಗಮನ ಸೆಳೆದ ನಗರವನ್ನಾಗಿ ರೂಪಿಸಿದ ಹೆಗ್ಗಳಿಕೆ ಕೃಷ್ಣ ಅವರದ್ದಾಗಿದೆ ಎಂದು ಶ್ಲಾಘಿಸಿರುವ ಅವರು, ತಮ್ಮ ಕೆಲಸ ಮತ್ತು ಸಮಯ ಪರಿಪಾಲನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದ ಅಪರೂಪದ ರಾಜಕಾರಣಿಗೆ ತೀವ್ರ ಸಂತಾಪ ಸೂಚಿಸುವುದಾಗಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.10 NEWS DESK : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ವ್ಯಕ್ತಿಯ ಗಡಿಪಾರಿಗೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಕರೆ ನೀಡಿರುವ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗಿನ ಕೊಡಗು ಬಂದ್ ಗೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಅವರು, ಭಾರತೀಯ ಸೇನೆಯ ಪಿತಾಮಹ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ಗಳ ಜನರಲ್ ಖ್ಯಾತಿಯ ಜನರಲ್ ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಈ ಪ್ರಕರಣ ಕೊಡಗು ಮಾತ್ರವಲ್ಲದೆ ಇಡೀ ದೇಶದ ಜನರಿಗೆ ನೋವನ್ನುಂಟು ಮಾಡಿದೆ. ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಿಗೆ ಅಗೌರವ ತೋರಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಕರೆ ನೀಡಲಾಗಿರುವ ಬಂದ್ ಗೆ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸಮಸ್ತ ಜನತೆ…

Read More