ಲೇಖಕ: admin

ಕುಶಾಲನಗರ ಡಿ.10 NEWS DESK : ವಿದ್ಯಾರ್ಥಿಗಳು ಮೊಬೈಲ್ ಗಳ ದಾಸರಾಗದೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಮೂಲಕ ತಮ್ಮಲ್ಲಿನ ಮಸ್ತಕದ ಜ್ಞಾನವನ್ನು ಹೆಚ್ಚಿಸಿಕೊಂಡು ಸಮಾಜದಲ್ಲಿ ಆದರ್ಶ ಪ್ರಾಯರಾಗಬೇಕೆಂದು ಚಿಕ್ಕೋಡಿಯ ಕುಸುಮಾವತಿ ಮಿರಜಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಹೊಂಬಯ್ಯ ಹೊನ್ನಲಗೆರೆ ಕರೆ ನೀಡಿದರು.  ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಇಂದು ಜಗತ್ತು ಬೆರಳ ತುದಿಯಲ್ಲಿದ್ದರೂ ಕೂಡ ಸಾಧಕರಾಗುವಲ್ಲಿ ವಿದ್ಯಾರ್ಥಿಗಳು ಹಿಂದುಳಿಯುತ್ತಿದ್ದಾರೆ. ವಿಶ್ವಾಸ, ಆಸಕ್ತಿ ಹಾಗೂ ದೃಢ ಸಂಕಲ್ಪಗಳ ಕೊರತೆಯಿಂದಾಗಿ ತಂತ್ರಜ್ಞಾನಗಳನ್ನು ಒಳಿತಿಗೆ ಬಳಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ವಿಫಲರಾಗುತ್ತಿದ್ದಾರೆ ಎಂದು ವಿಷಾದಿಸಿದ ಅವರು, ಶಾಲೆ, ಕುಟುಂಬ, ಸಮಾಜ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ಕಟ್ಟಿಕೊಡುತ್ತವೆ ಎಂದು ಡಾ.ಹೊಂಬಯ್ಯ ಹೇಳಿದರು. ಮೈಸೂರು ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಪುಷ್ಪಲತಾ ಮಾತನಾಡಿ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಸಲುವಾಗಿ ಹೆತ್ತವರು ಎದುರಿಸುತ್ತಿರುವ ಸಂಕಷ್ಟಗಳನ್ನು ವಿದ್ಯಾರ್ಥಿಗಳು ಅರಿಯಬೇಕು‌. ಸ್ಪಷ್ಟವಾದ ಗುರಿಯೊಂದಿಗೆ ಮುಂದೆ…

Read More

ಮಡಿಕೇರಿ NEWS DESK ಡಿ.10 : ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಮತ್ತು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ತೀವ್ರ ಸಂತಾಪ ಸೂಚಿಸಿದ್ದಾರೆ. ಅಭಿವೃದ್ಧಿಪರ ಕಾಳಜಿ ಹೊಂದಿದ್ದ ಮತ್ತು ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ದಿದ್ದ ಅಪರೂಪದ ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಡಿ.10 NEWS DESK : ನಾಲ್ಕುನಾಡು ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಫೆ.8 ರಿಂದ 13 ರ ವರೆಗೆ ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿ ಪ್ರಥಮ ವರ್ಷದ ಕೊಡಗು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ ಪದಾಧಿಕಾರಿ ಪರವಂಡ ಸಿರಾಜ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ 6 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಪಂದ್ಯಾವಳಿಯು ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಒಂದು ತಂಡದಲ್ಲಿ ಒಂದು ಜಮಾಅತ್ತಿಗೆ ಒಳಪಟ್ಟ ಕ್ರೀಡಾಪಟುಗಳಿಗೆ ಮಾತ್ರ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ ಈ ನಿಯಮ ಮುಂದುವರೆಯಲಿದೆ ಎಂದು ಸಿರಾಜ್ ಹೇಳಿದರು. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ.55,555 ನಗದು ಮತ್ತು ಆಕರ್ಷಕ ಪಾರಿತೋಷಕ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.33,333 ನಗದು ಮತ್ತು ಆಕರ್ಷಕ…

Read More

ಮಡಿಕೇರಿ NEWS DESK  ಡಿ.10 : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಜಾತೀಯ ಮತ್ತು ಮತೀಯ ಸಂಘರ್ಷ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಂಡು ಬರುತ್ತಿದೆ. ಇಂದು ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ಪೀಳಿಗೆ ಕೊಡಗಿನಲ್ಲಿ ಕೇವಲ ದ್ವೇಷ ಮತ್ತು ಅಸೂಯೆಯ ವಾತಾವರಣದಲ್ಲಿ ಬದುಕಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಂಭವವಿದೆ. ಈ ರೀತಿಯ ಪರಿಸ್ಥಿತಿ ಪುನರಾವರ್ತನೆಯಾಗಬಾರದು ಎನ್ನುವ ಉದ್ದೇಶದಿಂದ ಎಲ್ಲಾ ಜಾತಿ ಜನಾಂಗದವರನ್ನು ಒಗ್ಗೂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟವನ್ನು ರಚಿಸಿದ್ದು, ಇದರ ಮೂಲಕ ಒಗ್ಗಟ್ಟಿನ ಹೋರಾಟವನ್ನು…

Read More

ವಿರಾಜಪೇಟೆ ಡಿ.10 NEWS DESK : ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ನಾಟಿ ವೈದ್ಯ ಬಿ.ಜಿ.ನಟರಾಜ್ ಬೋರ್ಕರ್ ಅವರಿಗೆ  ಭಾರತ ಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಕೃಷಿ ಹಾಗೂ ನಾಟಿ ವೈದ್ಯ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಮೂಲತಃ ಬೇಟೋಳಿ ಗ್ರಾಮದ ರಾಮನಗರದ ನಿವಾಸಿಯಾಗಿರುವ ಬಿ. ಜಿ. ನಟರಾಜ್ ಬೋರ್ಕರ್ ಪ್ರಗತಿಪರ ಕೃಷಿಕರಾಗಿದ್ದು, ನಾಟಿ ವೈದ್ಯ ಸೇವೆಯನ್ನು ನೀಡುತ್ತಿದ್ದಾರೆ. ಅದರಲ್ಲೂ ಬಡವರಿಗೆ ಉಚಿತ ಸೇವೆಯನ್ನು ಹಲವಾರು ವರ್ಷಗಳಿಂದ ಸಲ್ಲಿಸುತ್ತಾ ಬಂದಿರುತ್ತಾರೆ. ಇವರು ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Read More

ಬೆಂಗಳೂರು ಡಿ.10 NEWS DESK : ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ಡಿ.11 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿ.10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.  

Read More

ಮಡಿಕೇರಿ NEWS DESK  ಡಿ.10 : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಜಾತೀಯ ಮತ್ತು ಮತೀಯ ಸಂಘರ್ಷ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಂಡು ಬರುತ್ತಿದೆ. ಇಂದು ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ಪೀಳಿಗೆ ಕೊಡಗಿನಲ್ಲಿ ಕೇವಲ ದ್ವೇಷ ಮತ್ತು ಅಸೂಯೆಯ ವಾತಾವರಣದಲ್ಲಿ ಬದುಕಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಂಭವವಿದೆ. ಈ ರೀತಿಯ ಪರಿಸ್ಥಿತಿ ಪುನರಾವರ್ತನೆಯಾಗಬಾರದು ಎನ್ನುವ ಉದ್ದೇಶದಿಂದ ಎಲ್ಲಾ ಜಾತಿ ಜನಾಂಗದವರನ್ನು ಒಗ್ಗೂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟವನ್ನು ರಚಿಸಿದ್ದು, ಇದರ ಮೂಲಕ ಒಗ್ಗಟ್ಟಿನ ಹೋರಾಟವನ್ನು…

Read More

ವಿರಾಜಪೇಟೆ ಡಿ.9 NEWS DESK : ಪೊಂಬೊಳ್ಚ ಕೂಟದ ಮಹಾಸಭೆಯು ವಿರಾಜಪೇಟೆಯ ಬೊರೆಗೌಡ ಕಟ್ಟಡದಲ್ಲಿನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ನಂತರ ಭಾರತ ದೇಶದ ವೀರಾಸೇನಾನಿಯಾಗಿ ಸೇವೆಯಲ್ಲಿ ಇರುವ, ಕೊಡವ ಪಾಜೆಯ ಹೆಸರಾಂತ ಸಾಹಿತಿ ಪೊಂಬೊಳ್ಚ ಕೂಟದ ಸದಸ್ಯ ಕ್ಯಾಪ್ಟನ್ ಬಿದ್ದಂಡ ನಾಣಿ ದೇವಯ್ಯ, ಪೊಂಬೊಳ್ಚ ಕೂಟದ ಅಧ್ಯಕ್ಷರೂ ಮತ್ತು ಹಿರಿಯ ಹಾಕಿ ಆಟಗಾರರಾದ ಮಾಳೇಟಿರ ಶ್ರೀನಿವಾಸ್ ಹಾಗೂ ಪೊಂಬೊಳ್ಚ ಕೂಟವನ್ನು ಸ್ಥಾಪನೆ ಮಾಡಿದ ಸ್ಥಾಪಕ ಅಧ್ಯಕ್ಷ ಮತ್ತು ಸಾಹಿತಿ ಕೋಟೆರ ಪೂಣಚ್ಚ ಅವರನ್ನು ಕೂಟದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಹಲವ ಸಾಹಿತಿಗಳನ್ನು ಗುರುತಿಸಿ ಅವರಿಗೆ ಕೂಟದ ವತಿಯಿಂದ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು.

Read More

ಬೆಂಗಳೂರು ಡಿ.10 NEWS DESK : ಕರ್ನಾಟಕ ಕಂಡ ಅಪರೂಪದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್‌ಎಂ ಕೃಷ್ಣ ( 92) ವಿಧಿವಶರಾಗಿದ್ದಾರೆ. ಮಾಜಿ ಕೇಂದ್ರ ಸಚಿವರೂ ಆಗಿದ್ದ ಅವರು ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ನಸುಕಿನ 2.45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸದಾಶಿವನಗರದ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ (ಡಿ.11) ಅಂತ್ಯಕ್ರಿಯೆ ನಡೆಯಲಿದೆ. ಎಸ್‌ಎಂ ಕೃಷ್ಣ ಅವರು ಪತ್ನಿ ಪ್ರೇಮಾ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ರಾಜ್ಯದಲ್ಲಿ 3 ದಿನ ಶೋಕಾಚರಣೆ :: ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ…

Read More

ಸೋಮವಾರಪೇಟೆ ಡಿ.10 NEWS DESK : ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗೌಡಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು. ಶ್ರೀ ನವದುರ್ಗ ಪರಮೇಶ್ವರಿ ದೇವಾಲಯ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕರುಂಬಯ್ಯ ಉದ್ಘಾಟಿಸಿದರು. ಆರೋಗ್ಯವಂತರು ನಿಯಮಿತ ರಕ್ತದಾನದಿಂದ ಉತ್ತಮ ಆರೋಗ್ಯ ವೃದ್ಧಿಸುತ್ತದೆ. ದೇಹದಲ್ಲಿ ಕಬ್ಬಿಣಾಂಶ ಸಮತೋಲನದಲ್ಲಿಡುತ್ತದೆ. ಹೃದಯಾಘಾತದಿಂದ ಪಾರಾಗಬಹುದು ಎಂದು ಹೇಳಿದರು. ರಕ್ತದಾನದ ಮಹತ್ವದ ಬಗ್ಗೆ ಗ್ರಾಮೀಣ ಜನರಲ್ಲೂ ಜಾಗೃತಿ ಮೂಡಿದೆ. ಗ್ರಾಮೀಣ ಭಾಗದಲ್ಲೂ ರಕ್ತದಾನ ಶಿಬಿರಗಳು ನಡೆಯುತ್ತಿವೆ ಎಂದು ಹೇಳಿದರು. ರಕ್ತದಾನದಿಂದ ಇನ್ನೊಂದು ಜೀವ ಉಳಿಸುವುದರ ಜೊತೆಗೆ ದಾನಿಗಳ ದೇಹದಲ್ಲಿ ಹೊಸ ಜೀವಕೋಶಗಳು ಉತ್ಪತ್ತಿಯಾಗಲು ಸಹಾಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಧರಣೇಶ್ ಇದ್ದರು. 20 ಮಂದಿ ರಕ್ತದಾನ ಮಾಡಿದರು.

Read More