ಲೇಖಕ: admin

ಮಡಿಕೇರಿ ಡಿ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ನೆಮ್ಮಲೆ ಗ್ರಾಮದ ಕಿತ್ತ್ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ, ಮಹಾಮಂಗಳಾರತಿ ನಡೆಯಿತು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಡಿ.7 NEWS DESK : ಹದಿನೆಂಟು ವರ್ಷದೊಳಗಿನ ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ದೈಹಿಕ ಹಾಗೂ ಭಾಷಾ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದ್ದು, ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು. ವಯಸ್ಕ…

Read More

ಮಡಿಕೇರಿ ಡಿ.7 NEWS DESK :  ಕೊಡಗಿನ ಬಲ್ಯಮೀದೇರಿರ ಧೃತಿಗೆ ಕನ್ನಡ ವಿಕಾಸ ರತ್ನ ಪ್ರಶಸ್ತಿ ಲಭಿಸಿದೆ.  ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ ಭವನದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆದ ಕನ್ನಡ ಹಬ್ಬ ಆಚರಣೆಯಲ್ಲಿ ಸಾಹಿತಿ ಟಿ. ಸತೀಶ್ ಜವರೇಗೌಡ ಹಾಗೂ ಮೈಸೂರಿನ ಕ.ರಾ.ಒ.ವಿ ವೇದಿಕೆ ರಾಜ್ಯಾಧ್ಯಕ್ಷ ಚ್.ಎಲ್.ಯಮುನಾ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಟಿ. ಶೆಟ್ಟಿಗೇರಿ ರೂಟ್ಸ್ ವಿದ್ಯಾಸಂಸ್ಥೆಯ 9ನೇ ತರಗತಿ ವಿಧ್ಯಾರ್ಥಿನಿಯಾದ ಧೃತಿ ಬಲ್ಯಮೀದೇರಿರ ಬಿ.ಎಂ. ಪೆಮ್ಮಯ್ಯ ಹಾಗೂ ಶಬಾನ ದೇಚಮ್ಮ ದಂಪತಿಯ ಪುತ್ರಿ.

Read More

ಕುಶಾಲನಗರ ಡಿ.7 NEWS DESK : ಹಾರಂಗಿ ಹಾಗೂ ಕಾವೇರಿ ನದಿಗಳ ಸಂಗಮ ಕ್ಷೇತ್ರ ಕೂಡಿಗೆಯಲ್ಲಿರುವ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ರಥೋತ್ಸವವು ಶ್ರದ್ದಾಭಕ್ತಿಯಿಂದ ನೆರವೇರಿತು. ಕೂಡಿಗೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ ಹವನಗಳು ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಜರುಗಿದವು. ಬಳಿಕ  ಅಭಿಜಿನ್ ಲಗ್ನದಲ್ಲಿ ಸುಬ್ರಮಣ್ಯ ಸ್ವಾಮಿ ದೇವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ರಥವು ದೇವಾಲಯದ ಕಿರಿದಾದ ರಸ್ತೆಯ ಮೂಲಕ ಸಾಗಿ ಬಂದು ರಾಜ್ಯ ಹೆದ್ದಾರಿ ಮಾರ್ಗವಾಗಿ  ಕೂಡುಮಂಗಳೂರು ಗ್ರಾಮದ ಸರ್ಕಲ್ ವರೆಗೂ ಸಾಗಿ ಬಳಿಕ ಸ್ವಸ್ಥಾನಕ್ಕೆ ಮರಳಿತು. ರಥೊತ್ಸವದ ಅಂಗವಾಗಿ ಕೂಡಿಗೆ ಹಾಗೂ ಕೂಡುಮಂಗಳೂರು ಹನುಮ ಸೇವಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಚಂಡೆವಾದ್ಯ ಆಕರ್ಷಿಸಿತು. ದೇವಾಲಯ ಸಮಿತಿಯ ವತಿಯಿಂದ  ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ‌ ದೇವಸ್ಥಾನದ ಪ್ರಧಾನ ಅರ್ಚಕ ನವೀನ್ ಭಟ್ ಹಾಗೂ ಅರಕಲಗೂಡಿನ ಶ್ರೀ ಹರಿ ನೇತೃತ್ವದ ತಂಡದಿಂದ ಧಾರ್ಮಿಕ…

Read More

ಮಡಿಕೇರಿ ಡಿ.7 NEWS DESK : ಆರೋಗ್ಯಯುತ ಸಮಾಜದೆಡೆಗೆ ಮುನ್ನಡೆಯಲು ನಮಗುಳಿದಿರುವ ಏಕೈಕ ಹಾದಿಯಾಗಿರುವ ಸಂವಿಧಾನದ ಪರವಾದ ಧ್ವನಿ ಮೊಳಗಿದಾಗ ಮಾತ್ರ ಸಮಾನತೆ ಮತ್ತು ಭಾತೃತ್ವವನ್ನು ಉಳಿಸಲು ಸಾಧ್ಯವೆಂದು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ‘ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಸರಿಯಾದ ನಿರ್ಧಾರಗಳನ್ನು ತಳೆಯಲು ಸಂವಿಧಾನದ ಅರಿವು ನಮಗೆ ಬೇಕಾಗಿದೆ. ಬದುಕಿನಲ್ಲಿ ಕಾನೂನಿನ ಪರಿಜ್ಞಾನದೊಂದಿಗೆ ಮೌಲ್ಯಗಳು ಅತ್ಯವಶ್ಯವೆಂದು ಹೇಳಿದರು. ::: ಜಿಲ್ಲೆಗೆ 100 ಮಂದಿ ::: ಶಾಂತಿಯುತವಾದ, ಭಾತೃತ್ವದ ಸಮಾನತೆಯ ಸಮ ಸಮಾಜದ ನಿಮಾಣಕ್ಕೆ ‘ಸಂವಿಧಾನ’ ಒಂದೇ ಹಾದಿಯಾಗಿದ್ದು, ಈ ನಿಟ್ಟಿನಲ್ಲಿ ಸಂವಿಧಾನದ ಪರವಾದ ಧ್ವನಿಗಳನ್ನು ಹುಟ್ಟು ಹಾಕಲು ಸಂವಿಧಾನದ ಓದು ಶಿಬಿರಗಳನ್ನು ರಾಜ್ಯವ್ಯಾಪಿ ಆಯೋಜಿಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಸಂವಿಧಾನದ ಮೂಲ ಆಶಯಗಳನ್ನು ಆಳವಾಗಿ ಅರಿತ ನೂರು ಮಂದಿಯನ್ನು ಸಜ್ಜುಗೊಳಿಸುವುದು ಕಾರ್ಯಕ್ರಮದ ಮೂಲ ಉದ್ದೇಶವೆಂದರು. ಸಂವಿಧಾನವನ್ನು ಅರಿತು ಬದುಕನ್ನು ಹಸನಾಗಿಸಿಕೊಳ್ಳುವುದರೊಂದಿಗೆ ಸವಾಲುಗಳನ್ನು ಮೆಟ್ಟಿ ನಿಲ್ಲೋಣವೆಂದು ಕರೆ ನೀಡಿದ ನಾಗಮೋಹನ್…

Read More

ಸೋಮವಾರಪೇಟೆ ಡಿ.7 NEWS DESK : ಸೋಮವಾರಪೇಟೆಯ ವಿವಿದ ದೇವಾಲಯಗಳಲ್ಲಿ ವಿವಿಧ ದೇವಾಲಯಗಳಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ನಡೆಯಿತು. ಕರ್ಕಳ್ಳಿಯ ಕಟ್ಟೆ ಬಸವೇಶ್ವರ ದೇವಾಲಯ ಹಾಗೂ ದೇವಾಲಯದ ಸಮೀಪವಿರುವ ನಾಗಬನದಲ್ಲಿ ಅರ್ಚಕರಾದ ವಿರುಪಾಕ್ಷ ಪುರೋಹಿತ್ವದಲ್ಲಿ ಅರ್ಚನೆ, ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗದೇವರಿಗೆ ಹಾಲು, ಎಳನೀರು, ಅರಿಶಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸೋಮೇಶ್ವರ ದೇವಾಲಯ, ಅಯ್ಯಪ್ಪಸ್ವಾಮಿ ದೇವಾಲಯ, ಮಸಗೂಡು ಗ್ರಾಮದ ದೇವಾಲಯಗಳಲ್ಲಿ ಷಷ್ಟಿಯ ವಿಶೇಷ ಪೂಜೆ ನೆರವೇರಿತು.

Read More

ಕುಶಾಲನಗರ, ಡಿ.7 NEWS DESK :  ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕೊಡಗು ಜಿಲ್ಲಾ ಘಟಕ ಹಾಗೂ ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಕುಶಾಲನಗರ ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಕುಶಾಲನಗರ ತಾಲ್ಲೂಕು ತಾಹಶೀಲ್ದಾರ್ ಕಿರಣ್ ಜಿ ಗೌರಯ್ಯ  ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷರು ಸಂಗಮ ಟಿವಿ ಮತ್ತು ವಂಶಿನ್ಯೂಸ್ ಪ್ರಧಾನ ಸಂಪಾದಕ ಹೆಚ್.ಎಂ.ರಘುಕೋಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಸದಾಶೀವ ಪಲ್ಲೇದ್, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ಕಾನೂನು ಸಲಹೆಗಾರ ಆರ್.ಕೆ. ನಾಗೇಂದ್ರ ಬಾಬು, ಉದ್ಯಮಿ ಬಿ.ಎಸ್. ಸದಾಶಿವಶೆಟ್ಟಿ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗೇಶ, ಜಿಲ್ಲಾ ಪದವಿಪೂರ್ವ ಉಪನ್ಯಸಂಘದ ಅಧ್ಯಕ್ಷ…

Read More

ಮಡಿಕೇರಿ ಡಿ.6 NEWS DESK : ನಗರದ ಕೋಟೆ ಮಾರಿಯಮ್ಮ ದೇವಾಲಯದ ನಾಗಬನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಪ್ರಯುಕ್ತ ವಿಶೇಷ ಪೂಜೆ ಪೂಜೆ ನಡೆಯಿತು. ನಾಗದೇವರಿಗೆ ಎಳನೀರು ಅಭಿಷೇಕ, ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಡಿ.7 NEWS DESK : ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ನಿಯಂತ್ರಿಸದಿದ್ದಲ್ಲಿ ಕರ್ನಾಟಕ ಆದಿವಾಸಿಗಳ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಮಿತಿಯ ಜಿಲ್ಲಾಧ್ಯಕ್ಷ ವೈ.ಕೆ.ಗಣೇಶ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೌರ್ಜನ್ಯ ಪ್ರಕರಣಗಳ ಕುರಿತು ಆಯಾ ಪೊಲೀಸ್ ಠಾಣೆಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆಡಳಿತ ವ್ಯವಸ್ಥೆ ಹಣವಂತರ ಪರವಾಗಿದೆ, ಸಮಾಜದಲ್ಲಿ ಸಮಾನತೆ ಇಲ್ಲದಾಗಿದೆ. ಸಂವಿಧಾನದ ಆಶಯಗಳು ಈಡೇರುತ್ತಿಲ್ಲವೆಂದು ಟೀಕಿಸಿದರು. ಪೊಲೀಸ್ ಠಾಣೆಗಳಲ್ಲಿ ಕ್ರಮ ಕೈಗೊಳ್ಳದೆ ಇದ್ದಾಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಆದರೆ ಯಾವುದೇ ಸ್ಪಂದನೆ ಸಿಗುತ್ತಿಲ್ಲ ಮತ್ತು ತಪ್ಪಿತಸ್ಥರಿಗೆ ಶಿಕ್ಷಯಾಗುತ್ತಿಲ್ಲ. ಜಾತಿ ನಿಂದನೆ ಮಾಡಿದವರು ಕಾನೂನು ಕ್ರಮಕ್ಕೆ ಒಳಗಾಗದೆ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಆದಿವಾಸಿಗಳು ನಿತ್ಯ ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ದೌರ್ಜನ್ಯ ನಡೆಸಿದವರು ಬೆದರಿಕೆವೊಡ್ಡುತ್ತಿರುವುದರಿಂದ ಅನ್ಯಾಯಕ್ಕೊಳಗಾದವರು ದೂರು…

Read More

ಮಡಿಕೇರಿ ಡಿ.7 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣದ ಅಂಗವಾಗಿ ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಶನಿವಾರಸಂತೆಯ ಮಾದ್ರೆ ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಮೌಢ್ಯ ಮುಕ್ತ ಸಮಾಜಕ್ಕಾಗಿ ಪರಿವರ್ತನಾ ದಿನಾಚರಣೆಯನ್ನು ಆಚರಿಸಲಾಯಿತು. ಸ್ಮಶಾನದಲ್ಲೇ ಅಡುಗೆ ಮಾಡಿ ಊಟ ಮಾಡುವ ಮೂಲಕ ಮೂಢ ನಂಬಿಕೆಯಿಂದ ಎಲ್ಲರೂ ಹೊರ ಬರಬೇಕೆಂದು ಕರೆ ನೀಡಲಾಯಿತು. ಮಾದ್ರೆ ಗ್ರಾಮದ ಸ್ಮಶಾನ ಜಾಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್, ಮಾನವ ಬಂಧುತ್ವ ವೇದಿಕೆಯು ಕರ್ನಾಟಕದಲ್ಲಿ ವೈಚಾರಿಕ ಕ್ರಾಂತಿಯನ್ನು ಎಲ್ಲರಲ್ಲಿ ಮೂಡಿಸುತ್ತಿದೆ ಎಂದರು. ಅಜ್ಞಾನದಿಂದ ವಿಜ್ಞಾನದ ಕಡೆಗೆ ಹಾಗೂ ಮೂಢನಂಬಿಕೆ, ಕಂದಾಚಾರಗಳನ್ನು ಹೋಗಲಾಡಿಸುವ ಸಲುವಾಗಿ ರಾಜ್ಯಾದ್ಯಂತ ಕಾರ್ಯಕ್ರಮ ನಡೆಯುತ್ತಿದೆ. ಜನಪ್ರತಿನಿಧಿ ಸತೀಶ್ ಜಾರಕಿಹೊಳಿ ಅವರು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ವೈಚಾರಿಕ ಕ್ರಾಂತಿಯನ್ನೇ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊಡಗು ಮಾನವ ಬಂಧುತ್ವ ವೇದಿಕೆಯಿಂದಲೂ ಮಾದ್ರೆ ಗ್ರಾಮದ ಸ್ಮಶಾನ ಜಾಗದಲ್ಲಿ ಅಡುಗೆ ಮಾಡಿ ಊಟ ಮಾಡುವ ಮೂಲಕ…

Read More