ಮಡಿಕೇರಿ ಆ.15 NEWS DESK : ನಗರದ ರಾಘವೇಂದ್ರ ದೇವಾಲಯದ ಹತ್ತಿರವಿರುವ ನೇತಾಜಿ ಜಂಕ್ಷನ್ನಲ್ಲಿ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಮಡಿಕೇರಿಯ ಖ್ಯಾತ ನೋಟರಿ ಹಾಗೂ ವಕೀಲರಾದ ಮುಕ್ಕಾಟಿ ಜಯಚಂದ್ರ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ನಂತರ ನೆರೆದಿದ್ದ ಎಲ್ಲರೂ ಒಟ್ಟಾಗಿ ರಾಷ್ಟ್ರಗೀತೆ ಹಾಡುವ ಮೂಲಕ ದೇಶಭಕ್ತಿಯನ್ನು ಮೆರೆದರು. :: ಆಂತರಿಕ ಶತ್ರುಗಳ ಕುರಿತು ಎಚ್ಚರಿಕೆ :: ಧ್ವಜಾರೋಹಣದ ಬಳಿಕ ಮಾತನಾಡಿದ ಮುಕ್ಕಾಟಿ ಜಯಚಂದ್ರ ಅವರು, “ಅಖಂಡ ಭಾರತವು 1947ರಲ್ಲಿ ವಿಭಜನೆಗೊಂಡಿತು. ಪ್ರಸ್ತುತ ಪರಿಸ್ಥಿತಿಯಲ್ಲಿ ಹೊರಗಿನ ಶತ್ರುಗಳಿಗಿಂತ ದೇಶದ ಒಳಗಿರುವ ಶತ್ರುಗಳೇ ಅಧಿಕಗೊಳ್ಳುತ್ತಿದ್ದಾರೆ. ಆ ನಿಟ್ಟಿನಲ್ಲಿ ನಮ್ಮ ಯುವಪೀಳಿಗೆಯು ದಾರಿ ತಪ್ಪದಂತೆ ಎಚ್ಚೆತ್ತುಕೊಂಡು, ಅಖಂಡ ಭಾರತದ ಸಂಕಲ್ಪದೊಂದಿಗೆ ಮುನ್ನಡೆಯಬೇಕು” ಎಂದು ಕರೆ ನೀಡಿದರು. ಅಲ್ಲದೆ, ಸ್ವಾತಂತ್ರ್ಯ ದಿನಾಚರಣೆಯ ಐತಿಹಾಸಿಕ ಮಹತ್ವವನ್ನು ಸಭಿಕರಿಗೆ ವಿವರಿಸಿದರು. :: ವಿಶೇಷ ಆಹ್ವಾನಿತರ ಉಪಸ್ಥಿತಿ :: ಕಾರ್ಯಕ್ರಮದಲ್ಲಿ ಸ್ಥಳೀಯರಾದ ಹಿರಿಯರಾದ…
ಲೇಖಕ: admin
ಮಡಿಕೇರಿ ಆ.15 NEWS DESK : ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಮತ್ತು ಜಿಲ್ಲೆಯ ಜನತೆಗೆ ಹೊಸ ಚೈತನ್ಯವನ್ನ ನೀಡಿವೆ. ಜನಪರ ಯೋಜನೆಗಳ ಯಶಸ್ಸಿನ ಪ್ರತಿಫಲವನ್ನು ಸಂತೃಪ್ತ ಜನೆತೆಯ ಮುಖದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಕೋಟೆ ಆವರಣದಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ನಡೆದ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವರು ಮಾತನಾಡಿದರು. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು “ಬೆಂಗಳೂರು ನಮ್ಮ ಕಿರೀಟ, ಕರ್ನಾಟಕ ನಮ್ಮ ಹೃದಯ” ಎಂಬ ಮಾತನ್ನು ಹೇಳಿದ್ದಾರೆ. ಇದು ಮುಖ್ಯಮಂತ್ರಿಗಳ ದೂರದೃಷ್ಟಿಯ ಅಭಿವೃದ್ಧಿ ದೃಷ್ಟಿಕೋನ. ಕರ್ನಾಟಕದ ಅಭಿವೃದ್ಧಿಯನ್ನು ಬೆಂಗಳೂರು ಕೇಂದ್ರಿತವಾಗಿರಿಸದೆ, ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಅಭಿವೃದ್ಧಿಯ ಅವಕಾಶಗಳನ್ನು ವಿಸ್ತರಿಸಬೇಕು ಎಂದು ನಮ್ಮ ಸರ್ಕಾರ ನಾಡಿನ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಈ…
ಮಡಿಕೇರಿ NEWS DESK ಆ.15 : ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಚಾಲಕ ಉದಯ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ಗೌರವ ಅರ್ಪಿಸಿದರು. ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಸ್ಟೀಫನ್, ಖಜಾಂಚಿ ಉಮೇಶ್, ಎಲ್ಲಾ ಸದಸ್ಯರು, ಟೆಂಪೋ ಚಾಲಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದವರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಮಡಿಕೇರಿ NEWS DESK ಆ.15 : ಸಿದ್ದಾಪುರ ಸಮೀಪದ ಇಂಜಿಲಗೆರೆ ಭಗವತಿ ಯುವಕ ಸಂಘದ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮದ ಹಿರಿಯರಾದ ವೆಂಕಪ್ಪ ರೈ ಅವರು ಧ್ವಜಾರೋಹಣ ನೆರವೇರಿಸಿ ಗೌರವ ಅರ್ಪಿಸಿದರು. ಭಗವತಿ ಯುವಕ ಸಂಘದ ಪ್ರಮುಖರು, ಗ್ರಾಮಸ್ಥರು ಹಾಗೂ ಮಕ್ಕಳು ಪಾಲ್ಗೊಂಡು ಸಿಹಿ ಹಂಚಿ ಸಂಭ್ರಮಿಸಿದರು.
ಬೆಂಗಳೂರು ಆ.14 NEWS DESK : ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರನ್ನು ಆಯೋಗದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೇಂದ್ರ ಲೋಕಸೇವಾ ಆಯೋಗ (UPSC) ಮಾದರಿಯಲ್ಲಿ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಪದ್ಧತಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ 3 ರಿಂದ 5 ತಿಂಗಳೊಳಗೆ ಫಲಿತಾಂಶ ಪ್ರಕಟಿಸಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಉದ್ದೇಶವನ್ನು ಹೆಚ್. ಪ್ರಸನ್ನ ಅವರು ವಿವರಿಸಿದರು. ನೇಮಕಾತಿ ಪರೀಕ್ಷೆಗಳು ಪೂರ್ಣಗೊಂಡ ಕೂಡಲೇ ಆಯಾ ಜಿಲ್ಲೆಗಳಲ್ಲಿ ಲಭ್ಯವಿರುವ ಸ್ಕ್ಯಾನಿಂಗ್ ಯಂತ್ರಗಳ ಮೂಲಕ ಔಒಖ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ, ಆಯೋಗದ ಅಧಿಕೃತ ಅಂತರ್ಜಾಲ ತಾಣದಲ್ಲಿ ಅಪ್ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು.…
ಮಡಿಕೇರಿ, ಆ.14 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಆಗಸ್ಟ್ 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ಮಡಿಕೇರಿ, ಆ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಇಲಾಖೆ, ವಿಶೇಷ ಮಕ್ಕಳ ಪೊಲೀಸ್ ಘಟಕ, ಅಕ್ಕಪಡೆ ಹಾಗೂ ಹಾಡಿ ಬುಡಕಟ್ಟು ಸಮುದಾಯದ ಮುಖಂಡರ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿಗಳ ತಂಡವು ಕೆ.ಬಾಡಗ ಗ್ರಾಮ ಪಂಚಾಯಿತಿಯ ಹೊಸಕೊಲ್ಲಿ ಹಾಡಿಗೆ ಭೇಟಿ ನೀಡಿ, ಹಾಡಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿತು. ಈ ಸಂದರ್ಭದಲ್ಲಿ ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹದಿಂದ ಉಂಟಾಗುವ ಪರಿಣಾಮಗಳು, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಲಭ್ಯವಿರುವ ವಿವಿಧ ಸಹಾಯವಾಣಿ ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಲಾಯಿತು. ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು 181 ಮಹಿಳಾ ಸಹಾಯವಾಣಿ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಾಂತ್ವನ ಕೇಂದ್ರದ ನೆರವು ಪಡೆಯಬಹುದಾಗಿದೆ. ಮಕ್ಕಳ ಸಮಸ್ಯೆಗಳಿಗೆ 1098 ಮಕ್ಕಳ ಸಹಾಯವಾಣಿ ಹಾಗೂ ತುರ್ತು ಸಂದರ್ಭಗಳಲ್ಲಿ 112 ತುರ್ತು ಸಹಾಯವಾಣಿ ಸಂಪರ್ಕಿಸುವಂತೆ…
ಮಡಿಕೇರಿ ಆ.14 NEWS DESK : ತಾಲೂಕಿನ ವಿವಿಧೆಡೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯಡಿ ತಪಾಸಣೆ ನಡೆಸಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು. ಮಡಿಕೇರಿ, ಮೇಕೇರಿ, ಹಾಕತ್ತೂರು, ಮೂರ್ನಾಡು, ಬಾವಲಿ, ಪಾರಾಣೆ, ವಾಟೆಕಾಡು ಹಾಗೂ ನರಿಯಂದಡ-ಚೆಯ್ಯಂಡಾಣೆ ವ್ಯಾಪ್ತಿಯಲ್ಲಿ ತಪಾಸಣೆ ಕೈಗೊಳ್ಳಲಾಯಿತು. ಈ ವೇಳೆ ಹೋಟೆಲ್, ದಿನಸಿ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕಾಫಿ-ಟೀ ಕ್ಯಾಂಟೀನ್, ಗೃಹೋಪಯೋಗಿ ಹಾಗೂ ದಿನಬಳಕೆ ವಸ್ತುಗಳ ಮಾರಾಟ ಮಳಿಗೆಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳು ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಂಗಡಿ ಹಾಗೂ ಸಂಸ್ಥೆಗಳ ಮಾಲೀಕರಿಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ಕಾಯ್ದೆ ಹಾಗೂ ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು. ಕಾಯ್ದೆಗೆ ಸಂಬಂಧಿಸಿದ ಜಾಗೃತಿ ಬಿತ್ತಿಪತ್ರಗಳನ್ನು ವಿತರಿಸುವುದರ ಜೊತೆಗೆ, ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ ಎಂಬ ಸ್ವಯಂ ಘೋಷಣಾ ಪತ್ರಗಳನ್ನು ಪಡೆಯುವ ಮೂಲಕ ಜಾಗೃತಿ…
ಮಡಿಕೇರಿ ಆ.14 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಸ್ಟ್ 16 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಆಗಸ್ಟ್ 16 ರಂದು ಬೆಳಗ್ಗೆ 11.45 ಗಂಟೆಗೆ ಭಾಗಮಂಡಲದ ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12.45 ಗಂಟೆಗೆ ನಗರದ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾಮದ ವಿರಾಜಪೇಟೆ ಮುಖ್ಯ ರಸ್ತೆಯಲ್ಲಿರುವ ಕೂರ್ಗ್ ವೈಲ್ಡರ್ನೆಸ್ ರೆಸಾರ್ಟ್ಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.14 NEWS DESK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಸುಮಾರು 52 ಸಾವಿರ ಕೋಟಿ ರೂ. ಅನ್ನು ವಾರ್ಷಿಕವಾಗಿ ಖರ್ಚು ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪಂತಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಅವರು ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಸಂವಿಧಾನ ಆಶಯದಂತೆ ನಡೆಯುತ್ತಿದ್ದು, ಬಡವರಿಗೆ, ನಿರ್ಗತಿಕರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಶ್ರಮಿಸುತ್ತಿದೆ. ಆ ದಿಸೆಯಲ್ಲಿ ಗೃಹಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳ ಪರಿಶೀಲನಾ ಕಾರ್ಯವೂ ಸಹ ನಡೆಯುತ್ತಿದ್ದು, ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಬೇಕು ಎಂದು ಅವರು ಪ್ರತಿಪಾದಿಸಿದರು. ಸರ್ಕಾರ ಗ್ಯಾರಂಟಿ ಯೋಜನೆಯನ್ನು 2023ರಲ್ಲಿ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಶೇ.98 ರಷ್ಟು ಪ್ರಗತಿ ಸಾಧಿಸಿದೆ. ಆ ದಿಸೆಯಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕು ಎಂದು ಮೆಹರೋಜ್ ಖಾನ್ ಅವರು ತಿಳಿಸಿದರು. ಅನ್ನಭ್ಯಾಗ್ಯ ಯೋಜನೆ ಬಡವರಿಗೆ…






