ಲೇಖಕ: admin

ಮಡಿಕೇರಿ ಏ.9 NEWS DESK : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ 3 ಸ್ಥಾನ ಪಡೆದು ಉತ್ತಮ ಸಾಧನೆ ತೋರಿದೆ. ಕಳೆದ ಬಾರಿ ಶೇ.83.84 ರಷ್ಟು ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದ್ದರೆ, ಈ ಬಾರಿ ಶೇ.92.34 ಫಲಿತಾಂಶದೊಂದಿಗೆ 3ನೇ ಸ್ಥಾನಕ್ಕೇರಿದೆ. ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಯಲ್ಲಿ 4745 ವಿದ್ಯಾರ್ಥಿಗಳ ಪೈಕಿ 1898 ಗಂಡು ಹಾಗೂ 2847 ಹೆಣ್ಣು ಮಕ್ಕಳು ಪರೀಕ್ಷೆ ಬರೆದಿದ್ದು, ಈ ಪೈಕಿ ಒಟ್ಟು 4380 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜಿಲ್ಲೆಯ ಒಟ್ಟು 13 ಪಿ.ಯು ಕಾಲೇಜುಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. *ಕಲಾ ವಿಭಾಗ* ಕಲಾ ವಿಭಾಗದಲ್ಲಿ ಶನಿವಾರಸಂತೆ ಭಾರತಿ ಪದವಿ ಪೂರ್ವ ಕಾಲೇಜಿನ ಫಾತಿಮಾ ಎಸ್.ಎ.(592) ಪ್ರಥಮ, ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನ ನಂದಿತಾ(584) ದ್ವಿತೀಯ ಸ್ಥಾನ, ಮೂರ್ನಾಡು ಪಿ.ಯು ಕಾಲೇಜು ಮೂರ್ನಾಡುವಿನ ಕೆ.ಎಂ.ಜುಹಾರ(570) ತೃತೀಯ ಸ್ಥಾನ…

Read More

ಮಡಿಕೇರಿ ಏ.9 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.9ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಮುಕ್ಕಾಟಿರ (ಕಡಗದಾಳು) ಮತ್ತು ಕನ್ನಂಡ ತಂಡಗಳ ನಡುವಿನ ಪಂದ್ಯದಲ್ಲಿ ಕನ್ನಂಡ 9 ವಿಕೆಟ್‍ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಕ್ಕಾಟಿರ ತಂಡ 6 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 29 ರನ್ ಗಳನ್ನು ಗಳಿಸಿತು. ಕನ್ನಂಡ ಕೇವಲ 2.4 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 30 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಮಂಡೀರ (ನೆಲಜಿ) ಮತ್ತು ಕೆಚ್ಚೆಟ್ಟಿರ (ಬೇಗೂರು) ನಡುವಿನ ಪಂದ್ಯದಲ್ಲಿ ಮಂಡೀರ 3 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡೀರ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 76 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೆಚ್ಚೆಟ್ಟಿರ…

Read More

ಮಡಿಕೇರಿ ಏ.9 NEWS DESK : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಹಾಲೇರಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಹಾಲೇರಿ ಗ್ರಾಮದ ನಿವಾಸಿ ರವಿ ರೈ(67) ಎಂಬುವವರೇ ಮೃತ ದುರ್ದೈವಿ. ಮನೆ ಬಳಿಯ ತೋಟದಲ್ಲಿನ ಮರವನ್ನೇರಿ ಕೊಂಬೆಗಳನ್ನು ಕಡಿಯುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಏ.9 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.10ರಂದು ಆಯೋಜಿಸಿರುವ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಆಚೆಯಡ ಮತ್ತು ಕರಿನೆರವಂಡ, 10ಕ್ಕೆ ಬೊಳ್ಳೆಪಂಡ ಮತ್ತು ಕಾಟಿಮಾಡ, 11ಕ್ಕೆ ಐಚಂಡ (ದೇವಣಗೇರಿ) ಮತ್ತು ಅಣ್ಣಳಮಾಡ (ಬಿರುನಾಣಿ), ಮಧ್ಯಾಹ್ನ 12ಕ್ಕೆ ಬೊಪ್ಪಡ್ತಂಡ ಮತ್ತು ಕೋಳೆರ ಹಾಗೂ 1 ಗಂಟೆಗೆ ಚೇರಂಡ ಮತ್ತು ಕಾಯಪಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಬೋಂದ ಮುಕ್ಕಾಟಿರ ಮತ್ತು ಕಂಬೀರಂಡ, 10ಕ್ಕೆ ಬೊಟ್ಟೋಳಂಡ ಮತ್ತು ಕುಂಜಿಯಂಡ, 11ಕ್ಕೆ ಗೌಡಂಡ (ಸೂರ್ಲಬಿ) ಮತ್ತು ಕೊಟ್ಟಂಗಡ, ಮಧ್ಯಾಹ್ನ 12ಕ್ಕೆ ಕೊಟ್ರಮಾಡ ಮತ್ತು ಬುಟ್ಟಿಯಂಡ ಹಾಗೂ 1 ಗಂಟೆಗೆ ಕೋಣಿಯಂಡ ಮತ್ತು ನಾಗಂಡ

Read More

ಮಡಿಕೇರಿ ಏ.8 NEWS DESK : 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್‍ನಲ್ಲಿ ಏಪ್ರಿಲ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಕುಡಿಗಾಣ, ಕೊತ್ನಳ್ಳಿ, ತೋಳೂರು ಶೆಟ್ಟಳ್ಳಿ, ಕೂತಿ, ಹೊಸಬೀಡು, ನಗರಳ್ಳಿ, ಯಡೂರು, ಹೆಗ್ಗಡಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಏ.8 NEWS DESK : ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಕುರಿತು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಪೊಲೀಸ್ ಉಪ ಅಧೀಕ್ಷಕರಾದ ದಿನಕರ ಶೆಟ್ಟಿ ಅವರು ದೂರು ಅರ್ಜಿ ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರಿಂದ ಸಲ್ಲಿಕೆಯಾದ 6 ಅರ್ಜಿಗಳಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು. ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸರ್ಕಾರಿ ನೌಕರರು ಸ್ಪಂದಿಸುವಂತಾಗಬೇಕು. ಆಗದಿರುವ ಕೆಲಸಕ್ಕೆ ಹಿಂಬರಹ ನೀಡುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರಿ ಕೆಲಸ ಸಾರ್ವಜನಿಕರ ಕೆಲಸವಾಗಿದ್ದು, ಅದನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ದಿನಕರ ಶೆಟ್ಟಿ ಅವರು ಎಚ್ಚರಿಸಿದರು. ಸಾರ್ವಜನಿಕರಿಂದ ಸಲ್ಲಿಕೆಯಾಗುವ ಮನವಿಗಳಿಗೆ ಒಂದು ಅಥವಾ ಎರಡು ವರ್ಷವಾದರೂ ಬಗೆಹರಿಸಿಲ್ಲ. ಹೀಗೆ ಆದರೆ…

Read More

ಮಡಿಕೇರಿ ಏ.8 NEWS DESK : ಕೊಡಗು ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದಿಂದ ಕೇಂದ್ರ ವಿದೇಶಾಂಗ ಸಚಿವಾಲಯ ಸಹಕಾರದಲ್ಲಿ ಪಾಸ್‍ಪೋರ್ಟ್ ಮೇಳಕ್ಕೆ ಬುಧವಾರ ಚಾಲನೆ ದೊರೆಯಿತು. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಾಸ್‍ಪೋರ್ಟ್ ಮೇಳಕ್ಕೆ ಚಾಲನೆ ನೀಡಿದರು. ಕೊಡಗು ಜಿಲ್ಲೆಯ ಜನರು ಪಾಸ್‍ಪೋರ್ಟ್‍ಗಾಗಿ ದೂರದ ಊರಿಗೆ ಹೋಗುತ್ತಿದ್ದರು. ಆ ನಿಟ್ಟಿನಲ್ಲಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆ ಬೆಂಗಳೂರಿನ ಪ್ರಾದೇಶಿಕ ಪಾಸ್‍ಪೋರ್ಟ್ ಕಚೇರಿ ಅವರು ಮೂರು ದಿನಗಳ ಕಾಲ ಪಾಸ್‍ಪೋರ್ಟ್ ಮೇಳ ಹಮ್ಮಿಕೊಂಡಿದ್ದು, ಈಗಾಗಲೇ ನೋಂದಣಿ ಮಾಡಿರುವವರು ಇದರ ಪ್ರಯೋಜನವನ್ನು ಪಡೆಯುವಂತೆ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಸಭೆ ಸದಸ್ಯರು, ಪಾರ್ಸ್ ಪೋರ್ಟ್ ಮೇಳದ ಅಧಿಕಾರಿಗಳು ಇತರರು ಇದ್ದರು. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ ಕೊಡಗು ಜಿಲ್ಲೆಯಲ್ಲಿ…

Read More

ವಿರಾಜಪೇಟೆ ಏ.8 NEWS DESK : ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರೈಮರಿ ಮತ್ತು ಹೈ ಸ್ಕೂಲ್ ಹಾಗೂ ಪ್ರಗತಿ ಕ್ರಿಕೆಟ್ ಅಕಾಡೆಮಿಯ ವಿದ್ಯಾರ್ಥಿನಿಯರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ. ಅಂಡರ್-15 ವಿಭಾಗದಲ್ಲಿ ವಿನ್ಯಾ ಎನ್. ಎಸ್. ಪ್ರತೀಕ್ಷಾ ಕೆ ಎನ್ , ವರ್ಷಿಣಿ ಕೆ ಎಚ್ ಹಾಗೂ ಅಂಡರ್-19 ವಿಭಾಗದಲ್ಲಿ ಸಾನ್ವಿ ಎಸ್ ಭಟ್, ಧನ್ವಿ ಬಿ. ಆರ್.ಇವರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಪಂದ್ಯಗಳಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಂಗಳೂರು ತಂಡಗಳ ವಿರುದ್ಧ ಸ್ಪರ್ಧಿಸಲಿದ್ದು, ಈ ಸ್ಪರ್ಧೆಗಳು ಮಂಗಳೂರು ವಲಯ (Zonal) ತಂಡದ ಆಯ್ಕೆ ಟ್ರಯಲ್ಸ್ ಆಗಿಯೂ ನಡೆಯಲಿವೆ. ಅಂತಾರಾಷ್ಟ್ರೀಯ ರಗ್ಬಿ ಆಟಗಾರರು, ಪ್ರಗತಿ ಶಾಲೆಯ ಆಡಳಿತಾಧಿಕಾರಿ ಮಾದoಡ ತಿಮ್ಮಯ್ಯ ಅವರು ತಮ್ಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯ ಚಟುವಟಿಕೆಗಳೊಂದಿಗೆ, ಕ್ರೀಡಾ ಚಟುವಟಿಕೆಗಳಿಗೆ…

Read More

ಮಡಿಕೇರಿ NEWS DESK ಏ.8 : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಸಾಲು ಸಾಲು ಸಾವುಗಳಾಗುತ್ತಿದ್ದರೂ ರಾಜ್ಯ ಸರಕಾರ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಕ್ಷಿಣ ಕೊಡಗಿನ ಕಾಯಿಮಾನಿಯಲ್ಲಿ ಮೂಕಳಮಾಡ ರತ್ತು ಅವರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದು, ಇದು ಅರಣ್ಯ ಇಲಾಖೆಯ ನಿರ್ಲಕ್ಷö್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಅರಣ್ಯ ಸಚಿವರು ಸಂತಾಪ ಸೂಚಿಸಿ ಸುಮ್ಮನಾದರೆ ಸಾಲದು, ಕೊಡಗು ಜಿಲ್ಲೆಗೆ ಬಂದು ಇಲ್ಲಿ ನಡೆಯುತ್ತಿರುವ ವನ್ಯಜೀವಿ ಮತ್ತು ಮಾನವ ಸಂಘರ್ಷದ ಕುರಿತು ಅಧ್ಯಯನ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಮೂರೂವರೆ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಕಾಡಾನೆಯಿಂದ 6ಕ್ಕೂ ಹೆಚ್ಚು ಸಾವುಗಳಾಗಿದ್ದರೂ ಅರಣ್ಯ ಸಚಿವರು ಇತ್ತ ಮುಖ ಮಾಡಿಲ್ಲ, ನೊಂದವರ ಅಹವಾಲು ಸ್ವೀಕರಿಸಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಶಾಸಕರುಗಳು ಕಾಡಾನೆ ದಾಳಿಯ ಗಂಭೀರತೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮತ್ತು ಸಚಿವರನ್ನು ಕರೆ ತರುವಲ್ಲಿ ಸಂಪೂರ್ಣವಾಗಿ…

Read More

ಮಡಿಕೇರಿ ಏ.8 NEWS DESK : ನಗರದ ಅಂಬೇಡ್ಕರ್ ಭವನ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮುದಾಯದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ರೂ. 5 ಸಾವಿರ ನಗದು ಜೊತೆಗೆ ಪ್ರಶಸ್ತಿ ಪತ್ರದೊಂದಿಗೆ ಗೌರವಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಭಾವಚಿತ್ರ, ಜಾತಿದೃಢೀಕರಣ ಪತ್ರದೊಂದಿಗೆ ಸ್ವವಿವರವನ್ನು ಏಪ್ರಿಲ್ 12 ರೊಳಗಾಗಿ 9480870210 ಸಂಖ್ಯೆಗೆ ವಾಟ್ಸಾ್ಯಪ್ ಮೂಲಕ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ 9449634753 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಏ.14 ರಂದು ಅಂಬೇಡ್ಕರ್ ಭವನ ಸಮಿತಿ ಹಾಗೂ ಅಶೋಕಪುರ ಅನ್ನಪೂಣೇಶ್ವರಿ ಸಮುದಾಯ ಭವನ ಸಮಿತಿ ವತಿಯಿಂದ ನಡೆಯುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.

Read More