ಲೇಖಕ: admin

ಮಡಿಕೇರಿ NEWS DESK ಜು.19 : ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ, ಸೇವಾ ಮನೋಭಾವ ಮತ್ತು ರಾಷ್ಟ್ರಪ್ರೇಮ ಬೆಳೆಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಪ್ರತಿಯೊಂದು ಶಾಲೆ ಹಾಗೂ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳ ನೋಂದಣಿ ಕಡ್ಡಾಯವಾಗಿ ನಡೆಯಬೇಕು ಎಂದು ಜಿಲ್ಲಾ ಆಯುಕ್ತೆ ಬೇಬಿ ಮ್ಯಾಥ್ಯೂ ಹೇಳಿದರು. ಅವರು ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರ ಅಧ್ಯಕ್ಷತೆಯಲ್ಲಿ ನಡೆದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಮಹಾಸಭೆಯ ನಡವಳಿಕೆಯನ್ನು ಸಭೆಯ ಮುಂದಿಟ್ಟರು. ಬಳಿಕ ಉಪಾಧ್ಯಕ್ಷೆ ನೀಲಮ್ಮ ಅವರು 2025–26ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾದ ವಿವಿಧ ಶೈಕ್ಷಣಿಕ, ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳ ವರದಿಯನ್ನು ಮಂಡಿಸಿದರು. ನಂತರ ಖಜಾಂಚಿ ಶಾಂತಿ ಅವರು ವಾರ್ಷಿಕ ಆದಾಯ–ವೆಚ್ಚದ…

Read More

ಮಡಿಕೇರಿ NEWS DESK ಜು.19 : ದಕ್ಷಿಣ ಭಾರತದ ಜೀವನದಿ ಎಂದೇ ಖ್ಯಾತವಾಗಿರುವ  ಕಾವೇರಿಯ ಸನ್ನಿಧಿ ಭಾಗಮಂಡಲದ ಮೇಲ್ಸೇತುವೆ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೋರಿಕೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕೃಯೆ ಪೂರ್ಣಗೊಂಡು ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಹಿತಿ ಲಭ್ಯವಾಗಿದೆ. ಮೇಲ್ಸೇತುವೆ ಆವರಣದ ಸುಧಾರಣೆಗಳು, ನೀರು ಹರಿಯುವ ಪೈಪ್ ಗಳ ಸುಧಾರಣೆ, ಮೇಲ್ಸೇತುವೆ ಕೆಳಗೆ ಕಾಂಕ್ರೀಟ್ ಕಾಮಗಾರಿ, ಕನ್ನಿಕೆ ನದಿಗೆ ಪಾದಚಾರಿ ಸೇತುವೆ, ಕಾವೇರಿ ನದಿಗೆ ಪಾದಚಾರಿ ಸೇತುವೆ ಕಾಮಗಾರಿಗಳು ಉಲ್ಲೇಖಿತ ಅನುದಾನದಲ್ಲಿ ನಡೆಯಲಿದ್ದು ಬೆಂಗಳೂರಿನ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ರೋಹಿತ್ ರವರು ಗುತ್ತಿಗೆ ಪಡೆದಿದ್ದು 2026 ರ ಅಕ್ಟೋಬರ್ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡುವಂತೆ ನಿಗಮದ ಆದೇಶದಲ್ಲಿ ಸೂಚಿಸಲಾಗಿದೆ.

Read More

ಮಡಿಕೇರಿ NEWS DESK ಜು.18 : ಸಮಾಜದಲ್ಲಿ ಆದಿವಾಸಿಗಳು ಇತರರಂತೆ ಬದುಕು ಕಟ್ಟಿಕೊಳ್ಳುವತ್ತ ಮನಸ್ಸು ಮಾಡಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವತ್ತ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಕರೆ ನೀಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ತೆರಾಲು, ಬಿರುನಾಣಿ, ಮರೆನಾಡು ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಮಿಕರ ಹಕ್ಕುಗಳ ಸಂಬAಧ ಜಾಗೃತಿ ಮೂಡಿಸಿದ ಶುಭ ಅವರು ಮಕ್ಕಳನ್ನು ಕಡ್ಡಾಯವಾಗಿ ಹತ್ತಿರದ ಶಾಲೆಗಳಿಗೆ ಕಳುಹಿಸುವಂತಾಗಬೇಕು. ಜೊತೆಗೆ 5 ನೇ ಮತ್ತು 6ನೇ ತರಗತಿಯಿಂದ ವಿದ್ಯಾರ್ಥಿ ನಿಲಯ ಹಾಗೂ ವಸತಿ ನಿಲಯ ಸೌಲಭ್ಯವಿದ್ದು, ಇವುಗಳನ್ನು ಬಳಸಿಕೊಂಡು ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದರು. ಕಾರ್ಮಿಕರಿಗಾಗಿ ಸರ್ಕಾರದಿಂದ ಹಲವು ಕಾರ್ಯಕ್ರಮಗಳಿದ್ದು, ಪ್ರಮುಖವಾಗಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ದನ್ ಯೋಜನೆ, ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಯೋಜನೆ, ಅಸಂಘಟಿತ ವರ್ಗದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ…

Read More

ಮಡಿಕೇರಿ NEWS DESK ಜು.18 : ಕೇಂದ್ರ ಗೃಹ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ನಲ್ಲಿ  ಇನ್ಸ್ ಪೆಕ್ಟರ್ ಆಗಿ ಕೊಡಗಿನ ಕೆ.ದೇವಮ್ಮ ಬಡ್ತಿ ಹೊಂದಿದ್ದಾರೆ. ದೇವಮ್ಮ ಅವರು 1992ರಲ್ಲಿ ಆರ್‌ಎಎಫ್‌ಗೆ ಆಯ್ಕೆಯಾಗಿದ್ದು, ಇವರು ಹೈದರಾಬಾದ್‌ನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಭಾರತದ ಪಶ್ಚಿಮ ಗಡಿಯ ಮಣಿಪುರ ರಾಜ್ಯದ ಮೋರೆಯ ಮಯನ್ಮಾರ್ ಗಡಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಮಡಿಕೇರಿ ತಾಲ್ಲೂಕು ಕಾಟಕೇರಿ ಗ್ರಾಮದ ಪೈಕೇರ ಮೇದಪ್ಪ, ನಂಜಮ್ಮ ದಂಪತಿಯ ಪುತ್ರಿ ದೇವಮ್ಮ ಅವರು ಕುಟ್ಟಮಣಿಯನ ಮೋಹನ್ ಅವರ ಪತ್ನಿಯಾಗಿದ್ದಾರೆ.

Read More

ಬೆಂಗಳೂರು NEWS DESK ಜು.18 : ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ನಿಧನರಾದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿAದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದರು. ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮ ಅವರು 1954ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆರು ಮಕ್ಕಳನ್ನು ಹೊಂದಿದ್ದ ಚೆನ್ನಮ್ಮ ಅವರು ಹೆಚ್.ಡಿ.ದೇವೇಗೌಡರ ಯಶಸ್ಸಿನ ಮೂಲಶಕ್ತಿಯಾಗಿದ್ದರು, ದೈವ ಭಕ್ತಿಗೂ ಹೆಸರಾಗಿದ್ದರು.

Read More

ಮಡಿಕೇರಿ NEWS DESK ಜು.17:-ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ದಾಖಲೆ ಪರಿಶೀಲನಾ ಕಾರ್ಯವು ಈಗಾಗಲೇ ಆರಂಭಗೊಂಡಿದೆ. ಸೆಸ್ಕ್ ವ್ಯಾಪ್ತಿಯ ನೌಕರರು ಗ್ರಾಹಕರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಗೃಹಜ್ಯೋತಿ ಯೋಜನೆಯ ಅರ್ಹತೆ ಮರುಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಗ್ರಾಹಕರ ಮೂಲ ದಾಖಲೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಳಿಕ ವಿಶೇಷ ಮೊಬೈಲ್ ಆಪ್ ಹಾಗೂ ಅಧಿಕೃತ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿ ಸಂಗ್ರಹಿಸಿ ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಸ್ಥಳದಲ್ಲಿಯೇ ಪೂರ್ಣಗೊಳಿಸುತ್ತಿದ್ದಾರೆ. ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲಿಯೇ ತಪಾಸಣೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಸಾರ್ವಜನಿಕರು ಸೆಸ್ಕ್ ಸಿಬ್ಬಂದಿಗೆ ಮಾಹಿತಿ ನೀಡುತ್ತಿದ್ದಾರೆ. ಮನೆ ಮನೆಗೆ ಭೇಟಿ ಸಂದರ್ಭದಲ್ಲಿ ಫಲಾನುಭವಿಗಳು ಆಧಾರ್ ಕಾರ್ಡ್ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ ಪಾನ್ ಕಾರ್ಡ್, ರೇಷನ್ ಕಾರ್ಡ್, ಪಡಿತರ ಚೀಟಿ ಮತ್ತಿತರ ದಾಖಲೆಗಳನ್ನು ನೀಡಿ…

Read More

ಮಡಿಕೇರಿ NEWS DESK ಜು.17 : ಸಂಪಾಜೆ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡು ಕೋಣ ಬೇಟೆಯಾಡಿ ಅದರ ಮಾಂಸ ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜೀಪಿನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗುಂಡು ಹಾರಿಸಿದ ಸಂದರ್ಭ ಜೀಪಿನಲ್ಲಿದ್ದ ಇಬ್ಬರು ಆರೋಪಿಗಳು ಗಾಯಗೊಂಡ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಯಾಕೂಬ್ ಹಾಗೂ ಜುಬೇರ್ ಗಾಯಗೊಂಡ ಆರೋಪಿಗಳಾಗಿದ್ದಾರೆ. ಜೀಪನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ಸಂದರ್ಭ 266 ಕೆ.ಜಿ ಕಾಡು ಕೋಣದ ಮಾಂಸ, ಕತ್ತಿ, 4 ಜೀವಂತ ಕಾಡತೂಸು ಮತ್ತು ಚಾಕುಗಳು ಪತ್ತೆಯಾಗಿವೆ. ಸಂಪಾಜೆ ವ್ಯಾಪ್ತಿಯಲ್ಲಿ ವನ್ಯಜೀವಿಯನ್ನು ಹತ್ಯೆ ಮಾಡಿ ಅದರ ಮಾಂಸವನ್ನು ವಾಹನದಲ್ಲಿ ಸಾಗಿಸುತ್ತಿರುವ ಬಗ್ಗೆ ಗುರುವಾರ ರಾತ್ರಿ ಮಡಿಕೇರಿ ವಲಯ ಅರಣ್ಯ ಇಲಾಖೆಗೆ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಡಿಕೇರಿ-ಬೆಟ್ಟತ್ತೂರು ರಸ್ತೆಯ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಾತ್ರಿ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾದು ಕುಳಿತಿದ್ದರು. ಈ ಸಂದರ್ಭ…

Read More

ಮಡಿಕೇರಿ NEWS DESK ಜು.17 : ಪ್ರಸ್ತುತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲಾ ಕಾರ್ಯಗಳು ಜನಪ್ರತಿನಿಧಿಗಳಿಂದಲೇ ಆಗುತ್ತದೆ ಎನ್ನುವ ಭ್ರಮೆಯಿಂದ ಜನರು ಹೊರ ಬಂದು ಗ್ರಾಹಕರ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಸ್ಥಾಪಕ ಮುಖ್ಯ ಪೋಷಕ ಸೋಮಶೇಖರ್ ವಿ.ಕೆ ಅವರು ಕರೆ ನೀಡಿದ್ದಾರೆ. ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ವತಿಯಿಂದ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ಹಾಗೂ ಕೊಡಗು ಜಿಲ್ಲಾ ಗ್ರಾಹಕರ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಸರಕಾರಿ ಪಿಯು ಕಾಲೇಜು ಸಭಾಂಗಣದಲ್ಲಿ ‘ಟೆಲಿಕಾಂ ಮತ್ತು ಬ್ರಾಡ್‌ಕಾಸ್ಟಿಂಗ್ ನಲ್ಲಿ ಶುಲ್ಕ ಹಾಗೂ ಬಿಲ್ಲಿಂಗ್’ ವಿಷಯದ ಕುರಿತು ಗ್ರಾಹಕ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೋಮಶೇಖರ್ ವಿ.ಕೆ ಗ್ರಾಹಕರು ಎಂಬುವುದು ಜಾತಿ, ಮತ, ಧರ್ಮ, ಬಣ್ಣ, ಪಕ್ಷ ಭೇದವಿಲ್ಲದ ಒಂದು ಒಗ್ಗಟ್ಟಿನ ವರ್ಗವಾಗಿದೆ. ಗ್ರಾಹಕರ ಹಕ್ಕುಗಳಿಗಾಗಿ ಗ್ರಾಹಕ ಚಳುವಳಿ ನಿರಂತರವಾಗಿರಬೇಕು ಎಂದರು. ಇoದಿನ ಪ್ರಜಾಪ್ರಭುತ್ವ…

Read More

ಮಡಿಕೇರಿ NEWS DESK ಜು.17 : ಆದಾಯ ತೆರಿಗೆ ಇಲಾಖೆಯ ನಿವೃತ್ತ ಸಿಬ್ಬಂದಿ, ಮಡಿಕೇರಿ ನಗರದ ಕುಂಬಳಕೇರಿ ಉಕ್ಕುಡದ ನಿವಾಸಿ ಹೆಚ್.ಬಿ.ಕೃಷ್ಣಪ್ಪ (74) ಅವರು ಇಂದು (ಜು.17) ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜು.18 ರಂದು ಕುಂಬಳಕೇರಿ ಉಕ್ಕುಡದಲ್ಲಿ ನಡೆಯಲಿದೆ.

Read More

ಮಡಿಕೇರಿ NEWS DESK ಜು.17 : ಮಡಿಕೇರಿಯ ಮಾರ್ನಿಂಗ್ ಗುಡ್‌ಮಿಂಟನ್ ತಂಡದ ವತಿಯಿಂದ ತಂಡದ ಸ್ಥಾಪಕಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರ ನೇತೃತ್ವದಲ್ಲಿ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ 14 ಡಬಲ್ಸ್ ತಂಡಗಳು ಭಾಗವಹಿಸಿ ಕ್ರೀಡಾಸ್ಫೂರ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವದೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದವು. ರೋಚಕ ಅಂತಿಮ ಪಂದ್ಯದಲ್ಲಿ ಡಾ.ಕರುಣಾಕರ್ ಹಾಗೂ ಹುಸೇನ್ ಜೋಡಿ ಚಾಂಪಿಯನ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಚೇತನ್ ಹಾಗೂ ಅಯ್ಯನ್ ಗೌಡ ಜೋಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿತು. ವಿಜೇತರಿಗೆ ಟ್ರೋಫಿ ಹಾಗೂ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು. ಪಂದ್ಯಾವಳಿಗೆ ಕ್ರೀಡಾಭಿಮಾನಿಗಳಿಂದ ಉತ್ತಮ ಸ್ಪಂದನೆ ದೊರೆಯಿತು. ಅಂತಿಮ ಪಂದ್ಯವನ್ನು ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ ಹಾಗೂ ಕುಕ್ಕೇರ ಜಯ ಚಿಣ್ಣಪ್ಪ ಅವರು ಉದ್ಘಾಟಿಸಿದರು. ವಿ.ಟಿ.ವಿಸ್ಮಯಿ ಅವರು ಮಾತನಾಡಿ ಕ್ರೀಡೆಯು ದೈಹಿಕ…

Read More