ಮಡಿಕೇರಿ ಜೂ.9 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕುಡಿಯುವ ನೀರನ್ನು ಆಗಾಗ ಪರೀಕ್ಷೆ ಮಾಡಿ, ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನ ಹರಿಸಬೇಕು ಎಂದು ಶಾಸಕರಾದ ಡಾ. ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ನಗರದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ‘ಕಾರ್ಯಪಡೆ ಸಮಿತಿ ಸಭೆ’ ನಡೆಸಿ ಅವರು ಮಾತನಾಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರವಹಿಸಬೇಕು. ತೆಂಗಿನ ಚಿಪ್ಪು, ಟೈರು ಮತ್ತಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತಾಗಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಆಗಬೇಕು. ರಸ್ತೆ ಬದಿ ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವಂತಾಗಲು ಶುಚಿಗೊಳಿಸುವ ಕಾರ್ಯ ಆಗಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್ಗಳಿಗೆ…
ಲೇಖಕ: admin
ಮಡಿಕೇರಿ ಜೂ.9 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ) ವತಿಯಿಂದ ಜೂ.13 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಕರ್ತರ ಮಕ್ಕಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಕಲ್ಲಡ್ಕದ ನಿವೃತ್ತ ಉಪನ್ಯಾಸಕರಾದ ನಾರಾಯಣ ಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಕೋಶಾಧಿಕಾರಿ ಕೆ. ತಿಮ್ಮಪ್ಪ, ಟ್ರಸ್ಟಿಗಳಾದ ಟಿ.ಪಿ.ರಮೇಶ್, ಜಿ.ಚಿದ್ವಿಲಾಸ್, ಜೀವನ್ ಚಿಣ್ಣಪ್ಪ, ಅನಿಲ್ ಎಚ್.ಟಿ., ವಿ.ಪಿ.ಸುರೇಶ್, ಶ್ರೀಧರ್ ಹೂವಲ್ಲಿ, ಮಧೋಶ್ ಪೂವಯ್ಯ ಅವರುಗಳ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿ NEWS DESK ಜೂ.9 : ಮುಂಬೈನ ಎನ್ಎಫ್ಡಿಸಿ-ಎಫ್ಡಿ ಕ್ಯಾಂಪಸ್ನಲ್ಲಿ ಜೂ.15 ರಿಂದ ಜೂ.21 ರವರೆಗೆ ನಡೆಯುವ 19ನೇ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯಚಿತ್ರ ಆಯ್ಕೆಯಾಗಿದೆ. ದಕ್ಷಿಣ ಏಷ್ಯಾದ ಸಾಕ್ಷ್ಯಚಿತ್ರಗಳು, ಕಿರುಚಿತ್ರಗಳು ಮತ್ತು ಅನಿಮೇಷನ್ ಚಿತ್ರಗಳಿಗಾಗಿ ಮೀಸಲಾದ ಅತ್ಯಂತ ದೊಡ್ಡ ಚಲನಚಿತ್ರೋತ್ಸವ ಇದಾಗಿದೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ದಂಪತಿಗೆ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳುತ್ತಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ. ಕೊಡವ ಚಿತ್ರರಂಗದ ಖ್ಯಾತಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಹೆಗ್ಗಳಿಕೆಯ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ಸ್ವಸ್ತಿಕ್ ಎಂಟರ್ಟೈನ್ಮೆoಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರದ ಮೇಲೆ ಬೆಳಕು ಚೆಲ್ಲಿದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ‘ಯೂ’ ಅರ್ಹತಾಪತ್ರ ಪಡೆದಿರುವ ‘ಉಮ್ಮತ್ತಾಟ್’…
ಮಡಿಕೇರಿ NEWS DESK ಜೂ.9 : ಮಡಿಕೇರಿ ನಗರದ ಮಹದೇವಪೇಟೆಯ ಎಸ್.ಎಸ್ ಆಸ್ಪತ್ರೆಯ 5ನೇ ವಾರ್ಷಿಕೋತ್ಸವವನ್ನು ಸಂಭ್ರಮದಿoದ ನಡೆಯಿತು. ಆಸ್ಪತ್ರೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರು, ಇಬ್ಬರು ವಿಶೇಷ ಚೇತನ ಮಕ್ಕಳ ಪೋಷಕರಿಗೆ ಆರ್ಥಿಕ ನೆರವು ನೀಡುವ ಮೂಲಕ ಎಸ್.ಎಸ್ ಆಸ್ಪತ್ರೆಯ ಆಡಳಿತ ಮಂಡಳಿ 5ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವುದು ಶ್ಲಾಘನೀಯ. ಈ ಕಾರ್ಯ ಇತರರಿಗೂ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಗರಸಭೆಯ ಉಪಾಧ್ಯಕ್ಷ ಮಹೇಶ್ ಜೈನಿ ಅವರು ಮಾತನಾಡಿ, ಎಸ್.ಎಸ್ ಆಸ್ಪತ್ರೆ ಪ್ರತಿವರ್ಷ ಸಮಾಜಮುಖಿ ಕಾರ್ಯದೊಂದಿಗೆ ವಾರ್ಷಿಕೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿದೆ. ವೈದ್ಯಕೀಯ ಸೇವೆಯೊಂದಿಗೆ ಸಮಾಜಕ್ಕೆ ಮಾದರಿಯಾದ ಕಾರ್ಯವನ್ನು ಮಾಡಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡಿ ಕೊಡಗಿನ ಜನತೆಗೆ ಹೆಚ್ಚಿನ ವೈದ್ಯಕೀಯ ಸೇವೆಯನ್ನು ನೀಡುವಂತಾಗಲಿ ಎಂದು ಶುಭ ಹಾರೈಸಿದರು. ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಎಂ.ನoದಕುಮಾರ್ ಅವರು ಮಾತನಾಡಿ ಎಸ್.ಎಸ್ ಆಸ್ಪತ್ರೆ ಸೇವಾ ಮನೋಭಾವನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದು,…
ಮಡಿಕೇರಿ NEWS DESK ಜೂ.9 : ಮಡಿಕೇರಿ ನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಸ್.ಪ್ರಶಾಂತ್ ಕುಮಾರ್ ಆಯ್ಕೆಯಾಗಿದ್ದಾರೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಶಿಫಾರಸ್ಸಿನ ಮೇರೆಗೆ ಪ್ರಶಾಂತ್ ಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.8 NEWS DESK : ತುಮಕೂರಿನಲ್ಲಿ ನಡೆದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ರಾಜ್ಯ ಮಟ್ಟದ ಸಮ್ಮೇಳನದಲ್ಲಿ “ಶಕ್ತಿ ಪತ್ರಿಕೆಯ ಸೇವೆಯನ್ನು ಪ್ರಶಂಸಿಸಿ ಸನ್ಮಾನಿಸಲಾಯಿತು. ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆದ ರಾಜ್ಯ ಸಮ್ಮೇಳನ ಹಾಗೂ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿ ಮಹೋತ್ಸವ ಆಚರಣೆ ಸಂದರ್ಭ ಶಾಸಕ ಜ್ಯೋತಿ ಗಣೇಶ್ ಅವರು ಸಾಧಕರಿಗೆ ಗೌರವ ಸಲ್ಲಿಸಿದರು. “ಶಕ್ತಿ”ಯ ಪರವಾಗಿ ಸಂಪಾದಕ ಜಿ ಚಿದ್ವಿಲಾಸ್ ಸಮ್ಮೇಳನದಲ್ಲಿ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭ ಎಫ್.ಕೆ.ಸಿ.ಸಿ.ಐ. ನ ಅಧ್ಯಕ್ಷೆ ಉಮಾರೆಡ್ಡಿ, ಹಿರಿಯ ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್,ಉಪಾಧ್ಯಕ್ಷ ಶಶಿಧರ್, ಮಾಜಿ ಅಧ್ಯಕ್ಷ ಶಿವಕುಮಾರ್, ತುಮಕೂರು ಚೇಂಬರ್ ಅಧ್ಯಕ್ಷ ಪಾಂಡುರಂಗ, ತುಮಕೂರು ಚೇಂಬರ್ ಪದಾಧಿಕಾರಿ ಹಾಗೂ ಎಫ್.ಕೆ.ಸಿ.ಸಿ.ಐ. ನ ಜಿಲ್ಲಾ ಸಮನ್ವಯ ಸಮಿತಿಯ ಅಧ್ಯಕ್ಷ ಸುಬ್ನನ್ ಹಿರೇಮಠ್ ಹಾಗೂ ಇತರರು ವೇದಿಕೆಯಲ್ಲಿದ್ದರು. ಇದೇ ಸಂದರ್ಭ ಎಲ್ಲಾ ಜಿಲ್ಲಾ ಚೇಂಬರ್ ಅಧ್ಯಕ್ಷರನ್ನು ಗೌರವಿಸಲಾಯಿತು. ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ…
ಮಡಿಕೇರಿ ಜೂ.8 NEWS DESK : ಸಮಾಜದ ಕಣ್ಣು ಹಾಗೂ ಕಿವಿಯಾಗಿರುವ ಪತ್ರಕರ್ತರು, ಸತ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜ ಸೇವಕ ಹಾಗೂ ಉದ್ಯಮಿ, ಲೀಡಿಂಗ್ ಎಡ್ಜ್ ಅಡ್ವಟೈಸಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಎಡಿಕೇರಿ ಪ್ರಸನ್ನ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಕೊಡಗು ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದಿನವಿಡೀ ಸುದ್ದಿಯ ಹಿಂದಿರುವ ಪತ್ರಕರ್ತರು ವರ್ಷಕ್ಕೊಮ್ಮೆ ಸಂಭ್ರಮದಿಂದ ಕಳೆಯುವುದು ಶ್ಲಾಘನೀಯ ಎಂದ ಅವರು, ಸಮಾಜದ ಕಣ್ಣು ಹಾಗೂ ಕಿವಿಯಾಗಿರುವ ಪತ್ರಕರ್ತರು, ಸತ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಾರೆ. ಜತೆಗೆ ಮಾಧ್ಯಮ ಸ್ಪಂದನದ ಮೂಲಕ ಸಮಾಜದ ಕಣ್ಣೀರು ಒರೆಸುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದು ಪ್ರಸನ್ನ ಹೇಳಿದರು. ನಾವು ಮಾಡುವ ಸಮಾಜ ಸೇವೆಯನ್ನು ಯಾವುದೇ ಫಲಾಪೇಕ್ಷೆಯಿಲ್ಲದೆ ನಿರಂತರ ಮಾಡುತ್ತಲೇ ಇರಬೇಕು ಎಂದ ಅವರು, ನಾವು ಮಾಡುವ ಸೇವೆಯನ್ನು ದೇವರು ಗಮನಿಸುತ್ತಲೇ ಇರುತ್ತಾನೆ. ಒಂದಲ್ಲ ಒಂದು ದಿನ ನಮ್ಮ ಸೇವೆಗೆ ಪ್ರತಿಫಲ ಸಿಕ್ಕೇ…
ಮಡಿಕೇರಿ ಜೂ.8 NEWS DESK : ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆ ಬೆಳೆಸಿಕೊಂಡು ಸಾಹಿತ್ಯಾಸಕ್ತರಾಗಬೇಕು ಎಂದು ಭಾರತ ಸರ್ಕಾರದ ದಕ್ಷಿಣ ವಲಯ ಸಾಂಸ್ಕೃತಿಕ ನಿರ್ದೇಶಕರಾದ ಕೆ.ಕೆ.ಗೋಪಾಲಕೃಷ್ಣ ಅವರು ಕರೆ ನೀಡಿದರು. ಕೇಂದ್ರ ಸಂಸ್ಕೃತಿ ಸಚಿವಾಲಯ, ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರ, ತಂಜಾವೂರು ಹಾಗೂ ಕುಶಾಲನಗರ ದಕ್ಷಿಣ ಸಿರಿ ಸ್ನೇಹ ಬಳಗದ ವತಿಯಿಂದ ಕೊಡ್ಲಿಪೇಟೆಯ ಎಸ್ಜಿಎಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ‘ಮಾನ್ಸೂನ್ ಸಾಂಸ್ಕøತಿಕ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿ ಸನಾತನ ಸಂಸ್ಕೃತಿ ಹೊಂದಿದ್ದು, ಸಮಾನತೆ, ಭಾತೃತ್ವ, ಏಕತೆ ಹೊಂದಿದೆ. ವಿಶ್ವದಲ್ಲಿಯೇ ಭಾರತೀಯ ಸಂಸ್ಕøತಿಗೆ ಹೆಚ್ಚಿನ ಸ್ಥಾನಮಾನ ಇದೆ ಎಂದರು. ಭಾರತ ಸರ್ಕಾರದ ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರ ತಂಜಾವೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ದಕ್ಷಿಣ ರಾಜ್ಯಗಳಲ್ಲಿ ಆಯಾಯ ಜಿಲ್ಲೆ, ರಾಜ್ಯಕ್ಕೆ ಸಂಬಂಧಿಸಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು. ಅದೇ ರೀತಿ ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆಯ ಕಲಾವಿದರುಗಳಿಗೆ ಹಾಗೂ ಅಕ್ಕಪಕ್ಕದ ಜಿಲ್ಲೆಯ ಕಲಾವಿದರು…
ಮಡಿಕೇರಿ ಜೂ.8 NEWS DESK : ಎಚ್ಪಿವಿ ವೈರಸ್ ಅಂದರೆ ಹ್ಯೂಮನ್ ಪ್ಯಾಪಿಲೋಮ ವೈರಸ್ ಪ್ಯಾಪಿಲೋಮವಿರಿಡೆ ಎಂಬ ವೈರಸ್ ಜಾತಿಗೆ ಸೇರಿದ್ದು, ಇದರಲ್ಲಿ ಒಟ್ಟು 200 ಕ್ಕೂ ಹೆಚ್ಚು ಪ್ರಕಾರಗಳು ಇರುತ್ತದೆ. ಎಚ್ಪಿವಿ 16 ಮತ್ತು ಎಚ್ಪಿವಿ 18 ವೈರಸ್ ಇದು ಗರ್ಭಕಂಠದ ಕ್ಯಾನ್ಸರ್ಗೆ ಮೂಲ ಕಾರಣವಾಗಿರುತ್ತದೆ. ಇದನ್ನು 2030 ಒಳಗೆ ನಿರ್ಮೂಲನೆ ಮಾಡಲು ಜಾಗತಿಕ ಕಾರ್ಯಕ್ರಮ ರೂಪಿಸಲಾಗಿದೆ. ಇದು ಸುಮಾರು 35 ವರ್ಷದಿಂದ 45 ವರ್ಷದ ಒಳಗಿನವರಲ್ಲಿ ಹೆಚ್ಚು ಕಂಡು ಬರುತ್ತದೆ. ಭಾರತದಲ್ಲಿ ಮಹಿಳೆಯರಲ್ಲಿ ಸಂಭವಿಸುವ ಕ್ಯಾನ್ಸರ್ ಪ್ರಕರಣಗಳಲ್ಲಿ ಗರ್ಭಕಂಠ ಕ್ಯಾನ್ಸರ್ ಎರಡನೇ ಪ್ರಮುಖ ಕ್ಯಾನ್ಸರ್ ಆಗಿರುತ್ತದೆ. ವಯಸ್ಸಿನ ಪ್ರಮಾಣೀಕೃತ ಅಂದಾಜುಗಳು ಗರ್ಭಕಂಠದ ಕ್ಯಾನ್ಸರ್(2022) ಇವುಗಳು: ಘಟನೆ 1 ಲಕ್ಷ ಮಹಿಳೆಯರಿಗೆ ವರ್ಷಕ್ಕೆ 11.6. ಮರಣ ಪ್ರಮಾಣ 1 ಲಕ್ಷ ಮಹಿಳೆಯರಿಗೆ ವರ್ಷಕ್ಕೆ 5.1. ಬಾರತ ದೇಶದಲ್ಲಿ 2022 ರಲ್ಲಿ, ಒಟ್ಟು 79,103 ಹೊಸ ಪ್ರಕರಣಗಳು ಮತ್ತು 34,805 ಸಾವುಗಳು ಗರ್ಭಕಂಠದ ಕ್ಯಾನ್ಸರ್ ನಿಂದ ಸಂಭವಿಸಿವೆ ಎಂದು ವರದಿಯಾಗಿದೆ. ಎಚ್ಪಿವಿ…
ವಿರಾಜಪೇಟೆ ಜೂ.8 NEWS DESK : ಅಮೇರಿಕಾದ ಟೆಕ್ಸಾಸ್ ಫ್ರಿಸ್ಕೊ ಹಾಕಿ ಅಸೋಸಿಯೇಷನ್ನ ಸ್ಪರ್ಧಾತ್ಮಕ ತಂಡಗಳಿಗೆ ಕೊಡಗಿನ ಇಬ್ಬರು ಸಹೋದರರು ಆಯ್ಕೆಯಾಗುವ ಮೂಲಕ ಅಮೇರಿಕನ್ ಐಸ್ ಹಾಕಿಯಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಮೇಯನ್ ಮಾಚಯ್ಯ ಮೇರಿಯಂಡ(15) ಅವರನ್ನು ವರ್ಸಿಟಿ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಅವರ ಕಿರಿಯ ಸಹೋದರ ಕ್ರಿಶ್ ಕಾರಿಯಪ್ಪ ಮೇರಿಯಂಡ (13). 2026ರ ಬೇಸಿಗೆ ಋತುವಿಗಾಗಿ ಜೂನಿಯರ್ ವಾರ್ಸಿಟಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಯು ಕರ್ನಾಟಕದ ಕುಟುಂಬಸ್ಥರು, ಸ್ನೇಹಿತರು ಮತ್ತು ಹಿತೈಷಿಗಳಲ್ಲಿ ಹೆಮ್ಮೆ ತಂದಿದೆ. ಐಸ್ ಹಾಕಿ ಒಂದು ಅಸಮಾನ್ಯ ಕ್ರೀಡೆಯಾಗಿದ್ದು, ಕೊಡಗಿನ ಈ ಸಹೋದರರು ತಮ್ಮ ಪರಿಶ್ರಮ ಹಾಗೂ ತರಬೇತಿಯಿಂದಾಗಿ ಉತ್ತರ ಅಮೇರಿಕಾದಲ್ಲಿ ಬಹು ಬೇಡಿಕೆ ಇರುವ ತಂಡಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಫ್ರಿಸ್ಕೊದ ಇಂಡಿಪೆಂಡೆನ್ಸ್ ಸ್ಕೂಲ್ನಲ್ಲಿ 10ನೇ ತರಗತಿಯ ವಿದ್ಯಾರ್ಥಿಯಾಗಿರುವ ಮೇಯನ್ ಅಮೇರಿಕನ್ ಐಸ್ ಹಾಕಿಯಲ್ಲಿ ಉತ್ತಮ ಪ್ರದರ್ಶನದ ನಂತರ ವಾರ್ಸಿಟಿ ತಂಡಕ್ಕೆ ಬಡ್ತಿ ಪಡೆದಿದ್ದಾರೆ. ಇತ್ತೀಚೆಗೆ ನೆಲ್ಸನ್ ಮಿಡಲ್ ಸ್ಕೂಲ್ನಲ್ಲಿ…






