ಲೇಖಕ: admin

ಸುಂಟಿಕೊಪ್ಪ, NEWS DESK ಸೆ. 8: ಯೇಸುಕ್ರಿಸ್ತರ ತಾಯಿ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಮೊಂತಿಪೆಸ್ತ್ (ತೆನೆಹಬ್ಬ)ವನ್ನು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ಬೆಳಿಗ್ಗೆ 7.30ರಿಂದ ವಿಶೇಷ ಪ್ರಾರ್ಥನೆ ಹಾಗೂ ಅಡಂಬರ ದಿವ್ಯ ಬಲಿಪೂಜೆ ನೆರವೇರಿತು. ಮಡಿಕೇರಿ ಸಂತ ಮರಡಿಯೂರು ದೇವಾಲಯದ ಧರ್ಮಗುರು ರೇ. ಫಾ. ಜಾರ್ಜ್ ದೀಪಕ್, ಮೈಸೂರಿನ ಧರ್ಮಕೇಂದ್ರದ ಧರ್ಮಗುರು ರೇ. ಫಾ. ಸಿಲ್ವೆಮುತ್ತು ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರು ರೇ. ಫಾ. ವಿಜಯಕುಮಾರ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಇದಕ್ಕೂ ಮುನ್ನ ಒಂಬತ್ತು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಧರ್ಮಕೇಂದ್ರಗಳ ಧರ್ಮಗುರುಗಳ ನೇತೃತ್ವದಲ್ಲಿ ದಿವ್ಯಬಲಿಪೂಜೆ, ಪ್ರಭೋದನೆ, ನೊವೇನಾ ಪ್ರಾರ್ಥನೆ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮಗಳು ನಡೆದವು. ನೊವೇನಾ ಸಂದರ್ಭದಲ್ಲಿ ಕನ್ಯಾಮಾತೆ ಮರಿಯಮ್ಮನವರ ಸ್ವರೂಪಕ್ಕೆ ವಿವಿಧ ಬಗೆಯ ಸೀರೆಗಳನ್ನು ತೊಡಿಸಿ ವಿಶೇಷವಾಗಿ ಅಲಂಕರಿಸಲಾಯಿತು. ಹಬ್ಬದ ದಿನದಂದು ಮೊಂಬತ್ತಿ ಹಿಡಿದು ಮಾತೆ ಮರಿಯಮ್ಮನವರ ಸ್ವರೂಪದೊಂದಿಗೆ ಮೆರವಣಿಗೆ ನಡೆಸಿ,…

Read More

ಮಡಿಕೇರಿ NEWS DESK ಸೆ.8 : ಇತ್ತೀಚೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟ ವಿಶೇಷ ಸಭೆ ನಡೆಸಿ ಕೊಡವರ ಸಂವಿಧಾನಬದ್ಧ ಹಕ್ಕುಗಳ ವಿರುದ್ಧ ನಿರ್ಣಯ ಕೈಗೊಂಡಿರುವುದು ಖಂಡನೀಯ. ಕೊಡವರ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲವೆಂದು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅನಾದಿ ಕಾಲದಿಂದಲೂ ಕಾವೇರಿ ತಾಯಿಯ ಈ ಪುಣ್ಯಭೂಮಿಯಲ್ಲಿ ಕೊಡವರು ಶಾಂತಿಯುತವಾಗಿ ಜೀವನ ಸಾಗಿಸುತ್ತಾ ಬಂದಿದ್ದಾರೆ. ತಮ್ಮ ಹಕ್ಕುಗಳಿಗಾಗಿ ನ್ಯಾಯಯುತ ಹೋರಾಟ ನಡೆಸಿದ್ದಾರೆಯೇ ಹೊರತು ಇತರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಎಂದಿಗೂ ಮಾಡಿಲ್ಲ. ಸ್ವಾಭಿಮಾನಿ ಕೊಡವರ ತ್ಯಾಗಮಯ ಗುಣವನ್ನೇ ದೌರ್ಬಲ್ಯವೆಂದು ತಿಳಿದುಕೊಂಡಿರುವ ಕೆಲವರು ಕೊಡವರ ಹಕ್ಕುಗಳ ಮೇಲೆ ಸವಾರಿ ಮಾಡುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ. ಪುಟ್ಟ ಜಿಲ್ಲೆ ಕೊಡಗಿನಲ್ಲಿ ಕೊಡವರು ಮಾತ್ರವಲ್ಲದೆ ಎಲ್ಲಾ ಜಾತಿ ಜನಾಂಗದವರು ಸೌಹಾರ್ದತೆಯಿಂದ ಬದುಕು ಕಟ್ಟಿಕೊಂಡಿದ್ದಾರೆ. ಕೊಡವರು ಎಲ್ಲರೊಂದಿಗೂ ಅತ್ಯಂತ ಗೌರವ ಮತ್ತು ಅನ್ಯೋನ್ಯತೆಯಿಂದ ಇದ್ದು, ಯಾರೊಂದಿಗೂ…

Read More

ಮಡಿಕೇರಿ NEWS DESK ಸೆ.8 : ಕೊಡಗು ಜಿಲ್ಲೆಯಾದ್ಯಂತ ಮಾತೆ ಮರಿಯಮ್ಮನವರ ಜಯಂತಿಯನ್ನು ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಕಳೆದ 9 ದಿನಗಳಿಂದ ಹಬ್ಬದಾಚಾರಣೆಗೆ ನವೇನದ ಮೂಲಕ ವಿಶೇಷ ಸಿದ್ಧತೆ ಮಾಡಿಕೊಂಡಿದ್ದ ಕ್ರೈಸ್ತರು, ಮಂಗಳವಾರ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ನಗರದ ಸಂತ ಮೈಕಲರ ದೇವಾಲಯದಲ್ಲಿ ಬೆಳಿಗ್ಗೆ ಹಬ್ಬದ ಪ್ರಯುಕ್ತ ಆಡಂಬರದ ಗಾಯನ ಬಲಿಪೂಜೆ ನಡೆಯಿತು. ದೇವಾಲಯದ ಧರ್ಮಗುರು ಫಾ. ಪ್ಯಾಟ್ರಿಕ್ ಕ್ಷೇವಿಯರ್ ಬಲಿಪೂಜೆ ಅರ್ಪಿಸಿ, ಭಕ್ತರಿಗೆ ಹಬ್ಬದ ಸಂದೇಶ ನೀಡಿದರು. ಇದೇ ಸಂದರ್ಭ ಭತ್ತದ ಕದಿರುಗಳನ್ನು ಆಶೀರ್ವದಿಸಿ ಭಕ್ತರಿಗೆ ಹಂಚಲಾಯಿತು. ನಂತರ ಮಾತೆ ಮರಿಯಮ್ಮನವರ ಪಲ್ಲಕ್ಕಿಯೊಂದಿಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಹೆಜ್ಜೆಹಾಕಿದ ಭಕ್ತರು ತಾವು ತಂದಿದ್ದ ಹೂವುಗಳನ್ನು ಮಾತೆ ಮರಿಯಮ್ಮನವರಿಗೆ ಅರ್ಪಿಸಿದರು. ಮರಿಯಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ನಂತರ ಕೇಕ್ ಕತ್ತರಿಸಿ ಜನ್ಮದಿನದ ಶುಭಾಶಯ ಕೋರಲಾಯಿತು. ಭಕ್ತರಿಗೆ ಹೊಸ ಅಕ್ಕಿಯ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಧರ್ಮಗುರುಗಳಾದ ಫಾ. ಜಿತುನ್ ಜೋಸೆಫ್, ಫಾ. ಸಿಬಿ ಇತರರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಸೆ.8 : ಕೊಡವರ ನ್ಯಾಯಯುತ ಹಕ್ಕೊತ್ತಾಯಗಳನ್ನು ವಿರೋಧಿಸಿ ಅರೆಭಾಷೆ ಗೌಡ ಜನಾಂಗದ ವತಿಯಿಂದ ಮಡಿಕೇರಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಬೇಂಗ್ ನಾಡ್ ಕೊಡವ ಸಮಾಜ ತೀವ್ರವಾಗಿ ಖಂಡಿಸಲಿದೆ ಎಂದು ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಆಡಳಿತ ಮಂಡಳಿ ಹಾಗೂ ಸದಸ್ಯರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಜನಾಂಗದ ಜಮ್ಮಾ ಕೋವಿಯ ಹಕ್ಕು, ಪರಿಶಿಷ್ಟ ಪಂಗಡ ಮತ್ತು ರಾಜಕೀಯ ಸ್ಥಾನಮಾನಕ್ಕಾಗಿ ನಡೆಯುತ್ತಿರುವ ಹೋರಾಟಗಳಿಗೆ ವಿರೋಧ ವ್ಯಕ್ತಪಡಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಇತರ ಸಮುದಾಯಗಳ ಉಡುಗೆ, ತೊಡುಗೆ, ಆಭರಣ, ಸಂಸ್ಕೃತಿ ಹಾಗೂ ಹಬ್ಬಗಳನ್ನು ತಮ್ಮದೇ ಸಂಸ್ಕೃತಿಯೆoದು ಬಿಂಬಿಸುವ ಪ್ರಯತ್ನಗಳ ವಿರುದ್ಧವೂ ಬೇಂಗ್ ನಾಡ್ ಕೊಡವ ಸಮಾಜ ಧ್ವನಿ ಎತ್ತಲಿದೆ. ಕೊಡವ ಜನಾಂಗದ ಹಕ್ಕು, ಅಸ್ತಿತ್ವ ಹಾಗೂ ವಿಶಿಷ್ಟ ಸಂಸ್ಕೃತಿಯನ್ನು ಪ್ರಶ್ನಿಸುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಕ್ರಮವನ್ನು ತೀವ್ರವಾಗಿ ಖಂಡಿಸಲಾಗುವುದು. ಕೊಡವ ಜನಾಂಗದ ನ್ಯಾಯಯುತ ಹಕ್ಕುಗಳ ರಕ್ಷಣೆಗಾಗಿ, ಕೊಡವರ ಅಸ್ತಿತ್ವ ಮತ್ತು ಸಂಸ್ಕೃತಿಯ…

Read More

ಸುಂಟಿಕೊಪ್ಪ NEWS DESK ಸೆ.8 : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಸುಂಟಿಕೊಪ್ಪ ವೇವ್ ಸಂಘಟನೆಯ ಸದಸ್ಯರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸತೀಶ್ ಅವರನ್ನು ಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಸಂಸ್ಥೆಯ ಸಂಚಾಲಕ ಕೆ.ಎ. ಲತೀಫ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸುಂಟಿಕೊಪ್ಪ ಪಟ್ಟಣದ ನಡುವೆ ರಾಷ್ಟ್ರೀಯ ಹೆದ್ದಾರಿ 275 ಹಾದುಹೋಗಿದ್ದು, ವಾರಾಂತ್ಯದ ರಜಾ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. 7ನೇ ಹೊಸಕೋಟೆಯಿಂದ ಜಿಲ್ಲಾ ಕೇಂದ್ರದವರೆಗೆ ರಸ್ತೆ ತಿರುವುಗಳಿಂದ ಕೂಡಿದ್ದು, ಈ ಹೆದ್ದಾರಿಯಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲು ವೈದ್ಯರು ಲಭ್ಯವಿಲ್ಲದ ಕಾರಣ ಅನೇಕ ಜೀವಗಳು ಮಾರ್ಗಮಧ್ಯೆ ಕಳೆದುಕೊಳ್ಳುವಂತಾಗಿದೆ ಎಂದು ಸಂಘಟನೆ ಆರೋಪಿಸಿದೆ. ಮಧ್ಯರಾತ್ರಿ ವೇಳೆ ಗ್ರಾಮಸ್ಥರಿಗೆ ಸಣ್ಣ ಪ್ರಮಾಣದಲ್ಲಿಯೂ ಆರೋಗ್ಯ ಸಮಸ್ಯೆ ಉಂಟಾದರೆ ದೂರದ ಮಡಿಕೇರಿ ಅಥವಾ ಕುಶಾಲನಗರದ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ…

Read More

ಕುಶಾಲನಗರ ಸೆ.7 NEWS DESK : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಡಾ. ಸುರೇಶ್ ಎಂ. ಅವರು ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಬೋಧಕ ವೃಂದದವರು, ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಸ್ಮರಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಡಾ. ಜಮೀರ್ ಅಹಮದ್ ಅವರು ನಿರೂಪಿಸಿದರು.

Read More

ಸೋಮವಾರಪೇಟೆ, ಸೆ.7 NEWS DESK : ಮಾದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಪಾಲಾಕ್ಷ ಅವರಿಗೆ ಶಾಲೆಯಲ್ಲಿ  ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಮುಖ್ಯ ಶಿಕ್ಷಕ ಪಾಲಾಕ್ಷ ದಂಪತಿಯನ್ನು ಶಾಲೆಯ ವತಿಯಿಂದ ಹಾಗೂ ಗ್ರಾಮಸ್ಥರ ವತಿಯಿಂದ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಪಾಲಾಕ್ಷ ಅವರು ಮುಖ್ಯ ಶಿಕ್ಷಕರಾಗಿ ಮಾದಾಪುರ ಶಾಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ, ಶಿಸ್ತು ಮತ್ತು ವಿದ್ಯಾರ್ಥಿಗಳ ಮೇಲಿನ ಅವರ ಮಮತೆಯನ್ನು ಕಾರ್ಯಕ್ರಮದಲ್ಲಿ ನೆನೆಸಿಕೊಳ್ಳಲಾಯಿತು. ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪಿಯೂ ಕಾಲೇಜಿನ ಪ್ರಾಂಶುಪಾಲ ಸಿ.ಜಿ. ಮಂದಪ್ಪ ಮಾತನಾಡಿ, ಮುಖ್ಯ ಶಿಕ್ಷಕ ಪಾಲಾಕ್ಷ ಅವರು ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ. ಶಿಕ್ಷಕರು ಉತ್ತಮವಾಗಿ ಅನನ್ಯ ಸೇವೆ ಸಲ್ಲಿಸಿದಾಗ ಸಮಾಜ ಗೌರವಿಸುತ್ತದೆ ಎಂದರು. ಶುಭ ಹಾರೈಕೆ: ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸೋಮಯ್ಯ ಮಾತನಾಡಿ, ಅವರ ನಿವೃತ್ತ ಜೀವನವು ಸುಖ, ಶಾಂತಿ, ನೆಮ್ಮದಿ ಮತ್ತು…

Read More

ಮಡಿಕೇರಿ ಸೆ.7 NEWS DESK : ಮಡಿಕೇರಿ ಪ್ರಧಾನ ಅಂಚೆ ಕಚೇರಿಯಲ್ಲಿ ಸೆ.9 ರಿಂದ ಸೆ.11ರವರೆಗೆ ಮೂರು ದಿನಗಳ ಕಾಲ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡು, ತಮ್ಮ ಆಧಾರ್ ನೋಂದಣಿ ಹಾಗೂ ಆಧಾರ್ ವಿವರಗಳ ತಿದ್ದುಪಡಿಯನ್ನು ಮಾಡಿಸಿಕೊಳ್ಳುವಂತೆ ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.7 NEWS DESK : ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಹಬ್ಬಗಳು ಮತ್ತು ಆಚರಣೆಗಳು ಬರಲಿದ್ದು, ಈ ಸಂದರ್ಭದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಗೌರಿ ಗಣೇಶ ಹಬ್ಬ ಸಂಬಂಧ ಜಿಲ್ಲೆಯ ಹಲವು ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತಿದ್ದು, ವಿಸರ್ಜನೆ ಸಂದರ್ಭದಲ್ಲಿ ಸರ್ಕಾರದ ನಿಯಮ ಪಾಲಿಸುವಲ್ಲಿ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯವರು ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದ್ದಾರೆ. ಈಗಾಗಲೇ ಏಕಗವಾಕ್ಷಿ ಸಮಿತಿ ರಚಿಸಲಾಗಿದ್ದು, ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಸೆಪ್ಟೆಂಬರ್ 13 ರೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಏಕಗವಾಕ್ಷಿ ಸಮಿತಿಯಲ್ಲಿ ಆಯಾಯ ತಾಲ್ಲೂಕಿನ ತಹಶೀಲ್ದಾರರು ಅಧ್ಯಕ್ಷರಾಗಿ, ಪರಿಸರ ಅಧಿಕಾರಿ…

Read More

ಮಡಿಕೇರಿ, ಸೆ.7 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಹಯೋಗದಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ರೋಹಿಣಿ, ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಡಾ. ಸನತ್ ಕುಮಾರ್, ಆರ್‌ಎಂಒ ಡಾ. ಅಭಿನಂದನ್ ಬಿ., ನೇತ್ರ ವಿಭಾಗದ ಮುಖ್ಯಸ್ಥೆ ಡಾ. ಕೃಪಾಲಿನಿ ಅಯ್ಯಪ್ಪ, ಸೋಟ್ಟೋ ನೋಡಲ್ ಅಧಿಕಾರಿ ಡಾ. ನಿಶೀದ್ ಜೋಸೆಫ್, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ರವಿಕಿರಣ್ ಕಿಸಾನ್, ಇಎನ್‌ಟಿ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಹಾಗೂ ಸಹ ಪ್ರಾಧ್ಯಾಪಕ ಡಾ. ಸತ್ಯಕಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್ ಅವರು ನೇತ್ರದಾನದ ಮಹತ್ವ ಹಾಗೂ ಇಂತಹ ಜಾಗೃತಿ ಕಾರ್ಯಕ್ರಮಗಳ ಅಗತ್ಯತೆಯ ಕುರಿತು ತಿಳಿಸಿದರು. ಮುಖ್ಯ ಆಡಳಿತಾಧಿಕಾರಿ…

Read More