ಲೇಖಕ: admin

ವಿರಾಜಪೇಟೆ, NEWS DESK ಮಾ.17: ಪಟ್ಟಣದ ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ ರುಪಾಯಿ ಮೌಲ್ಯದ ಬೃಹತ್ ಅನ್ನ ಶೇಖರಿಸುವ ಸ್ಟೀಲ್ ಪಾತ್ರೆಯನ್ನು ಉದಾರವಾಗಿ ನೀಡಲಾಯಿತು. ವರ್ಷಂಪ್ರತಿ ಜರುಗುವ ಶ್ರೀ ಮುತ್ತಪ್ಪ ತೆರೆ ಮಹೋತ್ಸವದಲ್ಳಿ ದಾಸೋಹದ ಸೇವೆಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಕೊಡುಗೆಯನ್ನು ದೇವಸ್ಥಾನಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷರಾದ ಪಿ. ಜಿ. ಸುಮೇಶ್ ರವರು ಪಾತ್ರೆಯನ್ನು ಶ್ರೀ ಮುತ್ತಪ್ಪ ದೇವಸ್ಥಾನದ ಅಧ್ಯಕ್ಷರಾದ ಟಿ.ಕೆ.ರಾಜನ್ ರವರಿಗೆ ಹಸ್ತಾಂತರಿಸಿ ಮಾತನಾಡಿ 82 ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವವನ್ನು ಈ ಭಾರಿ ಆಚರಿಸುತ್ತಿದ್ದು ಪೂಜಾ ಕಾರ್ಯಕ್ರಮದ ಬಳಿಕ ಎಂಟರಿಂದ ಹತ್ತು ಕ್ವಿಂಟಾಲ್ ಅಕ್ಕಿ ಯಲ್ಲಿ ತಯಾರಿಸಿದ ಅನ್ನ ಸಂತರ್ಪಣ ಸೇವೆಯು ನಡೆಯಲಿದ್ದು ಅದಕ್ಕೆ ಸಹಕಾರಿಯಾಗಲೆಂದು ನಮ್ಮ ಸಂಘದ ಸರ್ವ ಸದಸ್ಯರ ಸಹಕಾರದಿಂದ ಹಾಗೂ ನನ್ನ ಆತ್ಮೀಯರಾದ ಚಿರಿಯಪಂಡ ಸುರೇಶ್ ನಂಜಪ್ಪ, ಮಾಲೆಟಿರ…

Read More

ಮಡಿಕೇರಿ ಮಾ.17  NEWS DESK :  ಇದೇ ಮಾರ್ಚ್, 18 ರಿಂದ ಏ.2 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ಸಂಬಂಧ ಕಳೆದ ಬಾರಿಯಂತೆ ಈ ಬಾರಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ.  ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 6,183 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಇವರಲ್ಲಿ ಬಾಲಕರು 3,049, ಹಾಗೆಯೇ ಬಾಲಕಿಯರು 3,134 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ 399 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಅವರು ಮಾಹಿತಿ ನೀಡಿದ್ದಾರೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜಿಲ್ಲೆಯ 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು,  ಮಡಿಕೇರಿ 8, ವಿರಾಜಪೇಟೆ 8 ಹಾಗೂ ಸೋಮವಾರಪೇಟೆ 12 ಕೇಂದ್ರಗಳಲ್ಲಿ ಪರೀಕ್ಷೆ…

Read More

ಸೋಮವಾರಪೇಟೆ ಮಾ.17 NEWS DESK : ಶ್ರೀ ಆಂಜನೇಯಸ್ವಾಮಿ ದೇವಾಲಯ ಸಮಿತಿ ವತಿಯಿಂದ ಮಾ.27 ರಂದು ಅರ್ಥಪೂರ್ಣವಾಗಿ ಶ್ರೀ ರಾಮನವಮಿ ಉತ್ಸವ ಆಚರಿಸಲಾಗುವುದು ಎಂದು ಶ್ರೀ ಆಂಜನೇಯ ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ಗೋಪಾಲ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.19 ರಿಂದ 27 ರ ತನಕ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ 6 ಗಂಟೆಯಿಂದ 8 ಗಂಟೆ ತನಕ ವಿಶೇಷ ಪೂಜೆ ನಡೆಯಲಿದೆ. 19 ರಿಂದ ದಿನಕ್ಕೊಂದರಂತೆ ಶ್ರೀಗಂಧ, ವಿಳೈದೆಲೆ, ಬೆಣ್ಣೆ, ಕೇಸರಿ, ತುಳಸಿ, ಕುಂಕುಮ, ಹೂವಿನ ಮತ್ತು ಮುತ್ತಿನ ಆಲಂಕಾರರನ್ನು ಶ್ರೀರಾಮನ ಉತ್ಸವ ಮೂರ್ತಿಗೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. 27 ರ ಸಂಜೆ 6 ಗಂಟೆಯಿಂದ ಶ್ರೀ ರಾಮಾಂಜನೇಯೋತ್ಸವ ಮೆರವಣಿಗೆ ಪಟ್ಟಣದ ನಿಗದಿತ ರಸ್ತೆಯಲ್ಲಿ ನಡೆಯಲಿದೆ. ಕಳೆದ 60 ವರ್ಷಗಳಿಂದಲೂ ಆಂಜನೇಯ ದೇವಾಲಯದಲ್ಲಿ ರಾಮನವಮಿ ಆಚರಿಸಿ, ಮೆರವಣಿಗೆ ಮಾಡಲಾಗುತ್ತಿದೆ. 27ರಂದು ಪಾನಕ ವಿತರಣೆ, ಅನ್ನದಾನ ನಡೆಯಲಿದೆ ಎಂದು ಹೇಳಿದರು. ಅಂದಾಜು 4.50 ಕೋಟಿ ರೂ.ಗಳ ವೆಚ್ಚದಲ್ಲಿ…

Read More

ಮಡಿಕೇರಿ ಮಾ.17 NEWS DESK : ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಶ್ರೀ ಭಗವತಿ ದೇವಾಲಯದ ವಾರ್ಷಿಕ ಉತ್ಸವವು ಮಾ.22 ರಿಂದ 26 ರವರೆಗೆ ನಡೆಯಲಿದೆಯೆಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ. ಮಾ.22 ರಂದು ಬೆಳಿಗ್ಗೆ 9.30ಗಂಟೆಗೆ ಶ್ರೀ ಗಣಪತಿ ಹೋಮ, ಮಹಾಪೂಜೆ, ಸಂಜೆ 6.30ಕ್ಕೆ ಪ್ರಾರ್ಥನೆ, ಭಂಡಾರ ತರುವುದು, ಅಂದಿಬೆಳಕು, ಮಹಾಪೂಜೆ, ಪ್ರಸಾದ ವಿತರಣೆ, ಮಾ.23ರಂದು ಬೆಳಿಗ್ಗೆ 6 ಗಂಟೆಗೆ ಶ್ರೀ ಭಗವತಿ ದೇವರು ಬಲಿ ಬರುವುದು, ಮಹಾಪೂಜೆ, ಸಂಜೆ 6.30 ಗಂಟೆಗೆ ಬೆಳಕು, ದೇವರು ಬಲಿ ಬರುವುದು, ಅಂದಿಬೆಳಕು, ಮಹಾಪೂಜೆ, ಅನ್ನಸಂತರ್ಪಣೆ, ಶ್ರೀ ಪರದೇವರ ಕೊಟ್ಟದಲ್ಲಿ ಕೊಟ್ಟಿಪಾಡುವ ಕಾರ್ಯಕ್ರಮಗಳು ನಡೆಯಲಿವೆ. ಮಾ.24 ರಂದು ಬೆಳಿಗ್ಗೆ 6 ಗಂಟೆಗೆ ಶ್ರೀ ದೇವರು ಬಲಿ ಬರುವುದು, ಅಯ್ಯಪ್ಪ ದೇವರ ಪೂಜೆ, ಮಹಾಪೂಜೆ, ಸಂಜೆ ಬೆಳಕು, ಶ್ರೀ ದೇವರ ಬಲಿ, ಅಂದಿಬೆಳಕು ಮಹಾಪೂಜೆ ಪ್ರಸಾದ ವಿತರಣೆ, ಮಾ.25ರಂದು ಬೆಳಗ್ಗೆ 6 ಗಂಟೆಯಿಂದ ಶ್ರೀ ದೇವರ ನೃತ್ಯ ಬಲಿ, ಶ್ರೀ ಪರದೇವರ ಕೊಟ್ಟದಿಂದ…

Read More

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಆರು ಬ್ಲಾಕ್ ಗಳ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಕೆ.ಜಿ.ನೈನಾ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾಗಿ ಆಶಾ ಪೂಣಚ್ಚ ಮೂಕಳೆರ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಇಂದುಮತಿ ಕೆ.ಎಸ್ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಜಾನಕಿ ವೆಂಕಟೇಶ್, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಸವಿತ ಕೆ.ಆರ್, ಹಾಗೂ ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಕೊಂಪುಳಿರ ಇಂದಿರಾ ರಾಮಚಂದ್ರ ನೇಮಕಗೊಂಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ಪುಷ್ಪಲತಾ ಜಿ.ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಮಾ.17 : ಮಡಿಕೇರಿಯ ಶ್ರೀ ರಾಮೋತ್ಸವ ಸಮಿತಿ ವತಿಯಿಂದ 132ನೇ ವರ್ಷದ ಪರಾಭವ ನಾಮ ಸಂವತ್ಸರದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ 28 ರವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 8.30 ರವರೆಗೆ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಮಾ.19 ರಂದು ಪುಂಜಾಲಕಟ್ಟೆ ಕೃಷ್ಣ ಗೋಪಾಲ್ ಹಾಗೂ ಬಳಗದಿಂದ ಕರ್ನಾಟಕ ಶಾಸ್ತ್ರೀಯ ವೇಣುವಾದನ, ಮಾ.20 ರಂದು ಶ್ರೀ ಮಹಾಲಿಂಗೇಶ್ವರ ಕೃಪಾಪೋಷಿತ ನಾಟಕ ಮಂಡಳಿ, ಮೈಸೂರು ಇವರಿಂದ ಪೌರಾಣಿಕ ನಾಟಕಗಳ ರಂಗಗೀತೆ ಗಾಯನ, ಮಾ.21 ರಂದು ಮಡಿಕೇರಿಯ ವಿದುಷಿ ಮೇಘಾ ಭಟ್ ಅವರಿಂದ ಶಾಸ್ತ್ರೀಯ ಸಂಗೀತ, ಮಾ.22 ರಂದು ಮಡಿಕೇರಿಯ ನಾಟ್ಯನಿಕೇತನ ಸಂಗೀತ ನೃತ್ಯ ಶಾಲೆಯ ಪೂರ್ಣಿಮಾ ವಿನಯ್ ಶಿಷ್ಯಯರಿಂದ ನೃತ್ಯ ಸಂಗೀತ, ಮಾ.23 ರಂದು ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನೆ, ಮಾ.24 ರಂದು ಮಡಿಕೇರಿಯ ಶ್ರುತಿ ಲಯ ತಂಡ, ವೀಣಾ ಹೊಳ್ಳರಿಂದ ಭಕ್ತಿ ಸಂಗೀತ, ಮಾ.25 ರಂದು ಬಾಳೆಲೆಯ ಕಾವೇರಿ ಕಲಾಸಮಿತಿ,…

Read More

ಮಡಿಕೇರಿ NEWS DESK ಮಾ.17 : ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಜಾನಪದ ಸಂಭ್ರಮ-2026 ‘ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ *ಸಮೀರ್ ಎಂ* ಮಡಿಕೇರಿ ಆಯ್ಕೆಯಾಗಿದ್ದಾರೆ. ರಕ್ತದ ವ್ಯವಸ್ಥೆ ಮಾಡುವುದು ಹಾಗೂ ಹಲವಾರು ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಸಮೀರ್ ಅವರಿಗೆ 22-3- 2026 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Read More

ಕುಶಾಲನಗರ NEWS DESK ಮಾ.17 : ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕಾರ್ಯವೈಖರಿಯನ್ನು ಮೆಚ್ಚಿ ಕುಶಾಲನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯು ಗೋಡೆ ಗಡಿಯಾರವನ್ನು ಕೊಡುಗೆಯಾಗಿ ನೀಡಿದೆ. ವ್ಯವಸ್ಥಾಪಕ ರಾಮರಾವ್ ಅವರು ಚೇಂಬರ್ ಕಚೇರಿಯಲ್ಲಿ ಚೇಂಬರ್ ಅಧ್ಯಕ್ಷ ಕೆ.ಎಸ್.ನಾಗೇಶ್ ಹಾಗೂ ಪದಾಧಿಕಾರಿಗಳಿಗೆ ಗಡಿಯಾರವನ್ನು ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಸದಾ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವರ್ತಕರ ಪರವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೇವೆಯನ್ನು ಮಾಡಲು ಒಳ್ಳೆಯ ಸಮಯ ಬರಲಿ ಎಂದು ಗಡಿಯಾರ ನೀಡಿದ್ದೇವೆ ಎಂದರು. ಗಡಿಯಾರ ಸ್ವೀಕರಿಸಿ ಮಾತನಾಡಿದ ಕೆ.ಎಸ್.ನಾಗೇಶ್, ಇಂತಹ ವಿಶಾಲ ಹೃದಯದ ದಾನಿಗಳಿಂದ ಸೇವೆ ಮಾಡುವ ಸ್ಫೂರ್ತಿ ಹೆಚ್ಚಾಗುತ್ತದೆ ಎಂದು ಕೃತಜ್ಞತೆ ಸಲ್ಲಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಕಾರ್ಯದರ್ಶಿ ಚಿತ್ರ ರಮೇಶ್, ಪದಾಧಿಕಾರಿಗಳಾದ ಎಸ್.ಕೆ.ಸತೀಶ್, ಪಿ.ಎಂ.ಮೋಹನ್, ವಿಮಲ್ ಜೈನ್, ಪೈಯಾಜ್ ಅಹಮದ್ ಮತ್ತಿತ್ತರು ಹಾಜರಿದ್ದರು.

Read More

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ತಾಳತ್ತಮನೆಯ ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ಮಾ.21 ಮತ್ತು 22 ರಂದು 9ನೇ ವರ್ಷದ ಕ್ರೀಡಾಕೂಟ ಹಾಗೂ ಎಂಪಿಎಲ್ ಸೀಸನ್ 2 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.21 ರಂದು ಬೆಳಿಗ್ಗೆ 8 ಗಂಟೆಗೆ ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡಾಕೂಟವನ್ನು ಕಟ್ಟಡ ಸಮಿತಿ ಕಾರ್ಯದರ್ಶಿ ಯೋಗೇಂದ್ರ ಎಂ.ಎಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ, ಅತಿಥಿಗಳಾಗಿ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ದೇವಕಿ ಜಿ.ಆರ್ ನಾಯ್ಕ, ಮಹಿಳಾ ವೇದಿಕೆಯ ಅಧ್ಯಕ್ಷೆ ರತ್ನಮಂಜರಿ ನರಸಿಂಹ ಮತ್ತಿತರರು ಉಪಸ್ಥಿತರಿರುವರು. ಮಾ.22 ರಂದು ಮಧ್ಯಾಹ್ನ 3.30 ಗಂಟೆಗೆ ನಡೆಯುವ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಚೆಸ್ಕಾಂ…

Read More

ಮಡಿಕೇರಿ NEWS DESK ಮಾ.17 : ಪಂಜಾಬ್ ನ ಬಟಿಂಡದ ಗುರುಕಾಶಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಇದೇ ಮಾರ್ಚ್ 14 ರಿಂದ 16ವರೆಗೆ ನಡೆದ 45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡಿದ್ದಾರೆ.ಬಿಟ್ಟಂಗಾಲ ನಾಂಗಾಲ ಮೂಲದ ಚೇಮಿರ ಸೀತಮ್ಮ (ಪ್ರೇಮ) ಇವರು ಬಾರದ ಗುಂಡು ಎಸೆತದಲ್ಲಿ ಪ್ರಥಮ. ತಟ್ಟೆ ಎಸತದಲ್ಲಿ ದ್ವಿತೀಯ. ಸರಪಳಿ ಗುಂಡು ಎಸೆತದಲ್ಲಿ ತೃತೀಯ ಬಹುಮಾನ ಪಡೆದುಕೊಂಡರೆ. ಮೋರಿರ ಶಾಂತಿ ಇವರು ಬಾರದ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಅರಮಣಮಾಡ ಮಮತಾ ಬಾರದ ಗುಂಡು ಎಸೆತ ಪ್ರಥಮ. ಭರ್ಜೀ ಎಸೆತ ಪ್ರಥಮ. ಸರಪಳಿ ಗುಂಡು ಎಸೆತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಮುಡಿಯಂಡ ಶೈಲಾ ಇವರು 200ಮೀ ಅಡೆ ತಡೆ ಓಟದಲ್ಲಿ ಪ್ರಥಮ ಸ್ಥಾನವನ್ನು, 100ಮೀ ಅಡೆ ತಡೆ ಓಟದ ಓಟದಲ್ಲಿ ಪ್ರಥಮ ಹಾಗೂ 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೀಮತಿ ಆಶಾ ಅನಂತ್ ಕುಮಾರ್ ಇವರು ಬಾರದ…

Read More