ಲೇಖಕ: admin

ಮಡಿಕೇರಿ NEWS DESK ಮೇ 3 : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಜಂಬೂರು ಗ್ರಾಮದ ಎಫ್ಎಂಸಿ ಲೇ ಔಟ್ ನ  ಶ್ರೀ ಮುತ್ತಪ್ಪನ್ ಸೇವಾ ಸಮಿತಿ ವತಿಯಿಂದ  ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ) ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಸಂಜೆ ಮುತ್ತಪ್ಪ ದೇವರ ಮಲೆ ಇಳಿಸಲಾಯಿತು. ನಂತರ ಮುತ್ತಪ್ಪ ದೇವರ ವೆಳ್ಳಾಟಂ (ಕೋಲ) ಹಾಗೂ ರಾತ್ರಿ ಅನ್ನದಾನ ನಡೆಯಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸಮಿತಿಯ ಅಧ್ಯಕ್ಷ ಎನ್.ಸಿ.ಸುದರ್ಶನ್  ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಅಡಿಕೆ ಗಿಡಗಳನ್ನು ನಾಶ ಪಡಿಸಿರುವ ಘಟನೆ ನಡೆದಿದೆ.  ಗ್ರಾಮದ ಬೆಳೆಗಾರ ಚಂದ್ರಶೇಖರ್ ಎಂಬುವವರ ತೋಟಕ್ಕೆ ಶನಿವಾರ ರಾತ್ರಿ ಹತ್ತಕ್ಕೂ ಹೆಚ್ಚಿನ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿವೆ. 50 ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಾಶಪಡಿಸಿದ್ದು, ಅಪಾರ ನಷ್ಟ ಉಂಟಾಗಿದೆ. ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆಗಳು ನಿರಂತರವಾಗಿ ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ನಾಶ ಪಡಿಸುತ್ತಿವೆ. ಕಳೆದ ವರ್ಷವೂ ಕಾಡಾನೆ ದಾಳಿಯಿಂದ ಬೆಳೆ ನಷ್ಟವಾಗಿದ್ದು, ಪರಿಹಾರಕ್ಕೆ ಅರ್ಜಿ ಸಲ್ಲಿಸಿ ಇಲ್ಲಿಯವರೆಗೆ ಯಾವುದೇ ಪರಿಹಾರ ದೊರೆತ್ತಿಲ್ಲ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ.  ತಕ್ಷಣ ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಬೇಕು ಮತ್ತು ಬೆಳೆಹಾನಿ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

Read More

ಕುಶಾಲನಗರ ಮೇ 3 NEWS DESK : ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಶರಣ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಶ್ರೀಗಳು, ಜಿಲ್ಲೆಯಲ್ಲಿ ನಡೆಯುತ್ತಿರುವ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿದುದು ಶ್ರೀಮಠಕ್ಕೆ ದೊರೆತ ಗೌರವವಾಗಿದೆ. ಶೈಕ್ಷಣಿಕ ಹಾಗೂ ವಾಣಿಜ್ಯ ಕೇಂದ್ರವಾದ ಕುಶಾಲನಗರದಲ್ಲಿ ನಡೆಯುತ್ತಿರುವ ಸಮ್ಮೇಳನ ಸರ್ವರ ಸಹಭಾಗಿತ್ವದ ಕಾರ್ಯಕ್ರಮವಾಗಿ ರೂಪುಗೊಳ್ಳಬೇಕಿದೆ. ಜಿಲ್ಲೆಯೂ ಸೇರಿದಂತೆ ಕುಶಾಲನಗರದ ಗಡಿ ಪ್ರದೇಶಗಳ ಕಲಾಸಕ್ತರು, ಸಾಹಿತ್ಯಾಸಕ್ತರು, ಹಾಗೂ ಶರಣರ ತತ್ವಗಳ ಚಿಂತಕರಿಗೆ ಈ ಸಮ್ಮೇಳನದ ಪ್ರಯೋಜನಗಳು ದೊರಕುವಂತಾಗಬೇಕಿದೆ. ಹನ್ನೆರಡನೇ ಶತಮಾನದ ವಚನಕಾರರು ಸಮ ಸಮಾಜದ ಪರಿಕಲ್ಪನೆಯಿಂದ ಸಾರಿದ ಸಂದೇಶಗಳು ಜನಮಾನಸಕ್ಕೆ ತಲುಪುವಂತಾಗಬೇಕು. ಯಾವುದೇ ವಿವಾದಗಳಿಗೆ ಎಡೆಮಾಡಿಕೊಡದೇ ಸರ್ವರ ಸಹಭಾಗಿತ್ವದ ಸಮ್ಮೇಳನವಾಗಬೇಕೆಂದು ಶಾಂತಮಲ್ಲಿಕಾರ್ಜುನ ಶ್ರೀಗಳು ಆಶಿಸಿದರು. ಈ ಸಂದರ್ಭ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ…

Read More

ವಿರಾಜಪೇಟೆ ಮೇ 3 NEWS DESK : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ವಿಭಾಗದ ಪ್ರಾದ್ಯಾಪಕರಾದ ಬೆನೆಡಿಕ್ಟ್ ಆರ್ ಸಲ್ಡಾನ ಅವರು ಸೇವೆಯಿಂದ ವಯೋ ನಿವೃತ್ತರಾಗಿದ್ದು, ಅವರನ್ನು ಕಾವೇರಿ ಕಾಲೇಜು ವಿರಾಜಪೇಟೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ವಿರಾಜಪೇಟೆ ಕಾವೇರಿ ಕಾಲೇಜುಗಳಲ್ಲಿ ಅರ್ಥಶಾಸ್ತ್ರ ಪ್ರಾದ್ಯಾಪಕರಾಗಿ ಹಾಗೂ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾಗಿಯು ಸೇವೆಯನ್ನು ಸಲ್ಲಿಸಿದ್ದಾರೆ. ಸುದೀರ್ಘವಾದ 30 ವರ್ಷಗಳ ಪ್ರಾದ್ಯಾಪಕ ಸೇವೆಯ ಜೊತೆಯಲ್ಲಿ ಮಂಗಳೂರು ಹಾಗೂ ಕೊಡಗು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಬಿ.ಓ.ಇ ಆಗಿಯು ಸೇವೆಯನ್ನು ಸಲ್ಲಿಸಿರುತ್ತಾರೆ. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಕೆ.ಜಿ.ವೀಣಾ ನಿವೃತ್ತರಾದ ಬೆನೆಡಿಕ್ಟ್ ಆರ್ ಸಲ್ಡಾನ ರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷರಾದ ಕೆ.ಎಂ.ಬೆಳ್ಳಿಯಪ್ಪ ಕಾವೇರಿ ಪಿ ಯು ಕಾಲೇಜಿನ ಪ್ರಾಂಶುಪಾಲೆ ಎಂ.ಕೆ.ಪದ್ಮ, ಐ ಕ್ಯೂ ಎ ಸಿ ಸಂಯೋಜಕ…

Read More

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲೆಯಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ವಹಿಸಿಕೊಂಡರು. ಬೆನೆಡಿಕ್ಟ್ ಆರ್ ಸಲ್ಡಾನರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ಆಡಳಿತ ಮಂಡಳಿ ಆದೇಶದ ಮೇರೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ವೀಣಾ ಅವರು ಈ ಹಿಂದೆ ಆಂಗ್ಲ ವಿಭಾಗದ ಉಪನ್ಯಾಸಕರಾಗಿ ಮುಖ್ಯಸ್ಥರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಓ.ಎಸ್ ಹಾಗೂ ಕೊಡಗು ವಿಶ್ವವಿದ್ಯಾಲಯದ ಬಿ.ಓ.ಇ ಆಗಿ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕಾವೇರಿ ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕರಾಗಿ ಐದು ವರ್ಷ ಸೇವೆ ಸಲ್ಲಿಸಿದ್ದಾರೆ. ಕೊಡವ ಭಾಷೆಯ ಕವಿತೆಗಳನ್ನು ಆಂಗ್ಲ ಭಾಷೆಗೆ ಭಾಷಾಂತರವನ್ನು ಮಾಡಿದ್ದಾರೆ. ಇವರು ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದ ವಕೀಲರಾದ ಕುಪ್ಪಂಡ ರವೀಂದ್ರ ಅವರ ಪತ್ನಿ.

Read More

ಮಡಿಕೇರಿ ಮೇ 3 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಆ ದಿಸೆಯಲ್ಲಿ ಗ್ರಾ.ಪಂ ಗಳಿಗೆ ಸರ್ಕಾರ ಹೆಚ್ಚಿನ‌ ಅಧಿಕಾರ ನೀಡಿದ್ದು, ಅದನ್ನು ನಿಯಮಾನುಸಾರ ಬಳಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ ಅವರು ತಿಳಿಸಿದ್ದಾರೆ. ತಾಲ್ಲೂಕಿನ ಹೊದ್ದೂರು ಗ್ರಾ.ಪಂ ಸಭಾಂಗಣದಲ್ಲಿ 2026-27 ನೇ ಸಾಲಿನ‌ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಗ್ರಾ.ಪಂ ಅಭಿವೃದ್ಧಿಗೆ ಕಾನೂನಿನ ಅಧಿಕಾರ ಚಲಾಯಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು ಎಂದು ಅವರು ನುಡಿದರು. ಪಂಚಾಯತ್ ರಾಜ್ ವ್ಯವಸ್ಥೆ ಬಲಿಷ್ಠವಾಗಿರಬೇಕು. ಆ ಮೂಲಕ ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂದು ಡಿ.ಆರ್.ಪಾಟೀಲ ಅವರು ಹೇಳಿದರು. ಜನರ ಪ್ರತಿನಿಧಿಗಳು ಜನರೇ ಆಗಿದ್ದಾರೆ. ಆದ್ದರಿಂದ ಸ್ಥಳೀಯವಾಗಿಯೇ ಶಾಲೆ, ಆಸ್ಪತ್ರೆ, ಅಂಗನವಾಡಿ ಮತ್ತಿತರ ಅಗತ್ಯ ಹುದ್ದೆಗಳ ನೇಮಕವೂ ಆಗಬೇಕು ಎಂದು ಸಲಹೆ ಮಾಡಿದರು. ಕಾನೂನಿನ‌ ಅಧಿಕಾರ ಹಸ್ತಾಂತರ ಆಗಬೇಕು. ಗ್ರಾಮ ಸಭೆಯ ನಿರ್ಣಯವೇ ಅಂತಿಮ‌ ಆಗಬೇಕು.…

Read More

ಮಡಿಕೇರಿ ಮೇ 3 NEWS DESK :  ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮೇ 5 ರಂದು  ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.  17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ನಡೆಯಲಿದೆ. ಆ ಸಮ್ಮೇಳನದ ಲಾಂಛನವನ್ನು ಕೂಡ ಈ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಸಂಸ್ಥಾಪನಾ ದಿನದ ಕುರಿತು ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಬಿ ಬಿ ಶಿವಪ್ಪ ಉಪನ್ಯಾಸ ನೀಡಲಿದ್ದಾರೆ ಸಮ್ಮೇಳನದ ಲಾಂಛನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಿಡುಗಡೆಗೊಳಿಸಲಿದ್ದಾರೆ. ಸಂಸ್ಥಾಪನಾ ದಿನದ ಅಂಗವಾಗಿ ಕನ್ನಡ ನಾಡು ನುಡಿ ಗಾಗಿ ಸೇವೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಅಧ್ಯಕ್ಷರಾದ…

Read More

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ನೇತೃತ್ವದಲ್ಲಿ ಕ್ರೀಡೋತ್ಸವ ಪ್ರಯುಕ್ತ ಸಮ್ಮಿಲನ-2026 ಕಾರ್ಯಕ್ರಮ ಮೇ 16 ಮತ್ತು 17 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಕೆ.ದಾಮೋದರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ರೀಡೋತ್ಸವದಲ್ಲಿ ಜಿಲ್ಲಾ ವ್ಯಾಪ್ತಿಯ 5ಸಾವಿರಕ್ಕೂ ಹೆಚ್ಚಿನ ಕುಲಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ. ಇದು ಕೇವಲ ಒಂದು ಕ್ರೋಡೋತ್ಸವದ ಸಮ್ಮಿಲನ ಮಾತ್ರವಲ್ಲ. ಬದಲಿಗೆ ನಮ್ಮ ಸಮಾಜದ ಸ್ವಾಭಿಮಾನದ ಸಂಕೇತ. ನಮ್ಮ ಸಂಘಟನೆಯ ಈ ಹೆಜ್ಜೆಯು ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಲಿದೆ ಎಂದು ಹೇಳಿದರು. ಕ್ರೀಡಾಧ್ಯಕ್ಷ ಶಾಂತಕುಮಾರ್ ಮಾತನಾಡಿ, ಮೇ 16 ರಂದು ಬೆಳಿಗ್ಗೆ 7ಗಂಟೆಗೆ ಓಂಕಾರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿ ತಂದು ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಗುವುದು. ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತ ತಂಡಕ್ಕೆ 20ಸಾವಿರ ರೂ., ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ನಗದು ಹಾಗೂ…

Read More

ಮಡಿಕೇರಿ ಮೇ 3 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಕುಟುಂಬಗಳಿಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತವಾಗಿರುವ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಗೆ ಇಂದು ವಿಧ್ಯುಕ್ತ ಚಾಲನೆ ನೀಡಲಾಯಿತು. ಹಾಸನದ ಅಬಕಾರಿ ಇಲಾಖೆ ಉಪ ಆಯುಕ್ತರಾದ ನಂಗಾರು ಸುಮಿತ್ರ ನಿಂಗರಾಜು ಅವರು ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಪಂದ್ಯಾವಳಿಗೆ ಉತ್ತಮ ಸ್ಪಂದನೆ ದೊರಕಿರುವುದು ಸಂತೋಷದ ವಿಚಾರ. ಎಲ್ಲ ಕುಟುಂಬಗಳನ್ನು ಬೆಸೆಯಲು ಈ ಕ್ರೀಡಾಕೂಟ ಸಹಕಾರಿಯಾಗಲಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಹಿರಿಯರು ಕಿರಿಯರು ಎನ್ನುವ ಭೇದ ಭಾವವಿಲ್ಲದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು, ಪಂದ್ಯಾವಳಿ ಯಶಸ್ಸನ್ನು ಕಾಣಲೆಂದು ಹಾರೈಸಿದರು. ಇದೇ ಸಂದರ್ಭ ಕೊಡಗು ಗೌಡ ಯುವ ವೇದಿಕೆ ಆಡಳಿತ ಮಂಡಳಿ ಹಾಗೂ ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ನಡುವೆ ಉದ್ಘಾಟನಾ ಪಂದ್ಯ ನಡೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕಾರ್ಯನಿರತ ಪತ್ರಕರ್ತರ ಸಂಘ ಐದು ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕೆ…

Read More

ಮಡಿಕೇರಿ ಮೇ 3 NEWS DESK : ಸುಸಂಸ್ಕೃತ ಸಮಾಜ ನಿರ್ಮಾಣದಕ್ಕೆ ಬಂಟ ಸಮಾಜದ ಕೊಡುಗೆ ದೊಡ್ಡದಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಗುರುದೇವಾನಂದ ಸ್ವಾಮೀಜಿ ಬಣ್ಣಿಸಿದರು. ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್‌ ಹಾಗೂ ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಜರುಗಿದ ಬಂಟರ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಇಂದಿನ ಸಮಾಜಕ್ಕೆ ಸುಸಂಸ್ಕೃತ ಪ್ರಜೆಗಳ ಅಗತ್ಯವಿದೆ. ಮಕ್ಕಳಿಗೆ ಸಂಸ್ಕಾರ ಕಲಿಸುವ ಕಾರ್ಯವನ್ನು ಮನೆಯಿಂದಲೇ ಆರಂಭಿಸಬೇಕು. ಈ ವಿಚಾರದಲ್ಲಿ ಮಾತೆಯರಿಗೆ ಮಹತ್ತರ ಜವಾಬ್ದಾರಿ ಇದೆ ಎಂದರು. ನಾಡಿನ ವಿವಿಧೆಡೆ ಬಂಟರ ಭವನ ಇದೆ. ಆದರೆ ಕೊಡಗು ಜಿಲ್ಲೆಯಲ್ಲಿ ಸುಸಜ್ಜಿತವಾದ ಭವನ ಈವರೆಗೆ ಇರಲಿಲ್ಲ. ಉದ್ದೇಶಿತ ಯೋಜನೆ ಶೀಘ್ರವಾಗಿ ಈಡೇರಲು ಸಮುದಾಯ ಬಾಂಧವರೆಲ್ಲರು ಸಹೃದಯದಿಂದ ಸಂಘಟನೆ ಜೊತೆ ನಿಲ್ಲಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.‌ ಪೊನ್ನಣ್ಣ ಮಾತನಾಡಿ, ನಾಡಿನಲ್ಲಿರುವ ಪ್ರಬಲ ಮತ್ತು ಪ್ರಭಾವಿ ಸಮುದಾಯಗಳಲ್ಲಿ ಬಂಟ ಸಮುದಾಯ…

Read More