ಸೋಮವಾರಪೇಟೆ ಜ.7 NEWS DESK : ಪರ್ವತಾರೋಹಿ ಡಾ. ಬಿ.ಎಂ.ಲತಾ ಅವರನ್ನು ಅಕ್ಕನ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಅಕ್ಕನಬಳಗದ ಪದಾಧಿಕಾರಿಗಳು ಲತಾ ಅವರನ್ನು ಶಾಲುಹೂದಿಸಿ ಸನ್ಮಾನಿಸಿ, ಗೌರವಿಸಿದರು. ಮೂಲತಃ ಬಡುಬನ ಹಳ್ಳಿ ಗ್ರಾಮದವರಾದ ಲತಾ ಬೆಂಗಳೂರಿನಲ್ಲಿ ಸ್ತ್ರೀರೋಗ ತಜ್ಞರಾಗಿದ್ದಾರೆ. 57 ವರ್ಷದ ಪ್ರಾಯದ ಇವರು ಇತ್ತೀಚೆಗೆ ಎವರೆಸ್ಟ್ ಬೆಸ್ಕ್ಯಾಂಪ್ ಮೂಲಕ ಪರ್ವತವೇರಿ 18,514ಅಡಿ ಎತ್ತರದ ಕಾಲಾಪತ್ತರ್ ಎಂಬ ಸ್ಥಳ ಕ್ರಮಿಸಿ ಸಾಹಸಮೆರೆದಿದ್ದರು. ವೃತ್ತಿಯಲ್ಲಿ ವೈದ್ಯರಾದರೂ ಮೆರಥಾನ್ ಓಟ ಇನ್ನಿತರೆ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಇವರು, ಈಗಾಗಲೇ 86 ದೇಶಗಳಿಗೆ ಭೇಟಿ ಕೊಟ್ಟು ಅಲ್ಲಿನ ಜನಜೀವನ ಹಾಗೂ ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಸನ್ಮಾನ ಸಂದರ್ಭ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ವೀರಶೈವ ಲಿಂಗಾಯತ ಸಂಘಟನಾವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಮಹೇಶ್, ಅಕ್ಕನ ಬಳಗದ ಅಧ್ಯಕ್ಷೆ ಗೀತಾರಾಜು, ಕಾರ್ಯದರ್ಶಿ ಮಾಯಾ ಗಿರೀಶ್, ಉಪಾಧ್ಯಕ್ಷೆ ಸರಿತ ಮಲ್ಲಿಕಾರ್ಜುನ,…
ಲೇಖಕ: admin
ಮಡಿಕೇರಿ ಜ.7 NEWS DESK : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 34ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನಾಚರಣೆಯ ಅಂಗವಾಗಿ ಜ.23 ರಂದು ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್, ಜಿಲ್ಲಾ ಮಟ್ಟದ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಪುರುಷರ ಮಹಿಳೆಯರ ಮತ್ತು ಪೌಢಶಾಲಾ ಮಕ್ಕಳ ಮ್ಯಾರಾಥಾನ್ ನಡೆಯಲಿದೆ. ಮೈ ಭಾರತ್, ಯುವ ಸಮಬಲೀರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿ ಮತ್ತು ಮಹಿಳೆಯರ ಹಗ್ಗಜಗ್ಗಾಟದಲ್ಲಿ ಭಾಗವಹಿಸುವ ಕ್ರೀಡಾ ತಂಡಗಳು ಜ.20 ರ ಒಳಗಾಗಿ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ತಾಳತ್ತಮನೆ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9741771810, 8762066118, 9632007915 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.7 NEWS DESK : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಕೂಡಿಗೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಮತ್ತು ಜಾಗೃತಿ ಕಾರ್ಯ ನಡೆಯಿತು. ಈ ಸಂದರ್ಭ ಠಾಣೆಯ ಅಧಿಕಾರಿಗಳು ಅಂಜಲ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಕೂಡಿಗೆ ಸರ್ಕಲ್ ನಲ್ಲಿ ಸಭೆ ನಡೆಸಿ ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲಿಸುವ ಕುರಿತು, ರಸ್ತೆ ಅಪಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.
ಮಡಿಕೇರಿ ಜ.7 NEWS DESK : ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ಕಾರ್ಯಕ್ರಮ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಜ.8 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಸಂಜೆ 4.30 ಗಂಟೆಗೆ ಶ್ರೀಶ್ರೀಗಳ ಪುರಪ್ರವೇಶವಾಗಲಿದೆ. ನಂತರ ಪೂರ್ಣ ಕುಂಭ ಮೆರವಣಿಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಚೌಡೇಶ್ವರಿ ದೇವಾಲಯದವರೆಗೆ ಸಾಗಲಿದೆ. ನಂತರ ಶ್ರೀಗಳಿಗೆ ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಫುಲಪುಷ್ಪ ಸಮರ್ಪಣೆ, ಫಲ ಮಂತ್ರಾಕ್ಷತೆ ನೆರವೇರಲಿದೆ ಎಂದು ದೈವಜ್ಞ ಬ್ರಾಹ್ಮಣ ಸಮಾಜದ ಪ್ರಮುಖರು ಮಾಹಿತಿ ನೀಡಿದ್ದಾರೆ. ಸ್ವಾಮೀಜಿಗಳ ಭವ್ಯ ಸ್ವಾಗತಕ್ಕಾಗಿ ನಗರದ ಮಹದೇವಪೇಟೆ ಹಾಗೂ ಶ್ರೀಚೌಡೇಶ್ವರಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಆಕರ್ಷಣೀಯವಾಗಿ ಅಲಂಕಾರಗೊಳಿಸಲಾಗಿದೆ. ದೈವಜ್ಞ ಬ್ರಾಹ್ಮಣ ಸಮಾಜದ ಬಂಧುಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸುಂಟಿಕೊಪ್ಪ ಜ.7 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿಯ ಕೊಳಂಬೆ ಗ್ರಾಮದ ಕೃಷಿಕ ದಿವಂಗತ ಮಾದಪ್ಪ ಅವರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ದೇವಕ್ಕಿ (83) ಅವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು.
ಮಡಿಕೇರಿ ಜ.7 NEWS DESK : ಬೆಳಗಾವಿಯ ಹಾರೋಗೇರಿ ಆಜೂರ ಪ್ರತಿಷ್ಠಾನ ನೀಡುವ ರಾಜ್ಯ ಮಟ್ಟದ ಆಜೂರ ಪ್ರಶಸ್ತಿಗೆ ಮಡಿಕೇರಿಯ ಬರಹಗಾರ್ತಿ ಕೆ.ಜಯಲಕ್ಷ್ಮಿ ಅವರು ರಚಿಸಿರುವ ‘ಮತ್ತೆ ವಸಂತ’ ಕಥಾ ಸಂಕಲನ ಆಯ್ಕೆಯಾಗಿದೆ. ಜ.15 ರಂದು ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. ‘ಮತ್ತೆ ವಸಂತ’ ಕಥಾ ಸಂಕಲನ 2024 ರಲ್ಲಿ ಪ್ರಕಟಗೊಂಡಿತ್ತು. ಜಯಲಕ್ಷ್ಮಿ ಅವರು ಮಡಿಕೇರಿಯ ಸಂತ ಜೋಸೆಫರ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮಡಿಕೇರಿಯ ಜೀವ ವಿಮಾ ನಿಗಮದ ಉದ್ಯೋಗಿ ವಿ.ಹೆಚ್.ಜಯಕುಮಾರ್ ಅವರ ಪತ್ನಿ.
ನಾಪೋಕ್ಲು ಜ.7 NEWS DESK : ನಾಪೋಕ್ಲು ಪೊಲೀಸ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಪಟ್ಟಣದ ಮುಖ್ಯ ಬೀದಿಯಲ್ಲಿ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಸ್ ನಿಲ್ದಾಣದಲ್ಲಿ ಠಾಣೆಯ ಅಧಿಕಾರಿ ರಾಘವೇಂದ್ರ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ರಸ್ತೆ ಸುರಕ್ಷತೆ, ಸಂಚಾರ ಕಾನೂನು, ರಸ್ತೆ ಅಫಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು. ಇಲ್ಲಿಯ ಸಂತ ಮೈದಾನದಿಂದ ಪ್ರಾರಂಭಗೊಂಡು ಜಾಥಾದಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಬೆಂಗಳೂರು ಜ.7 NEWS DESK : ರಾಜ್ಯದ ಇತಿಹಾಸದಲ್ಲಿ ಸುದೀರ್ಘ ಅವಧಿ ಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರ ಪೂರೈಸಿದ್ದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು.
ಮಡಿಕೇರಿ ಜ.7 NEWS DESK : ವಿರಾಜಪೇಟೆ ಗ್ರಾಮಾಂತರ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಠಾಣೆಯ ಅಧಿಕಾರಿಗಳು ವಿವಿಧ ಶಾಲಾ ವಿದ್ಯಾರ್ಥಿಗಳ ಸಭೆ ನಡೆಸಿ ರಸ್ತೆ ಸುರಕ್ಷತೆ, ಸಂಚಾರ ಕಾನೂನು, ರಸ್ತೆ ಅಪಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.
ನಾಪೋಕ್ಲು ಜ.7 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 26ನೇ ನೂತನ ಶಾಖೆ ಕಕ್ಕಬ್ಬೆಯಲ್ಲಿ ಜನ ಸೇವೆಗೆ ಲೋಕಾರ್ಪಣೆಗೊಂಡಿದ್ದು, ಕಕ್ಕಬೆ ವ್ಯಾಪ್ತಿಯ ಗ್ರಾಹಕರು ನೂತನ ಶಾಖೆಯ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಗ್ರಾಹಕರ ಸಹಕಾರದಿಂದ ಕಕ್ಕಬೆ ಶಾಖೆಯು ಕೊಡಗು ಡಿಸಿಸಿ ಬ್ಯಾಂಕಿನ ಅತ್ಯುತ್ತಮ ಶಾಖೆಗಳಲ್ಲಿ ಒಂದಾಗಬೇಕಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಹೇಳಿದರು. ಕಕ್ಕಬ್ಬೆಯಲ್ಲಿ ಆಯೋಜಿಸಲಾಗಿದ್ದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಬ್ಯಾಂಕಿನ 26ನೇ ನೂತನ ಶಾಖೆಯ ಕಟ್ಟಡವನ್ನು ಲೋಕಾರ್ಪಣೆ ಮಾಡಿದ ಬಳಿಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಫೆ.25 ರ ಮಹಾಶಿವರಾತ್ರಿಯ ಶುಭದಿನದಂದು ಬ್ಯಾಂಕಿನ ಕುಶಾಲನಗರ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಉದ್ಘಾಟಿಸಲಾಗುವುದು. ಮುಂದಿನ 6 ತಿಂಗಳ ಒಳಗೆ 27ನೇ ಶಾಖೆಯನ್ನು ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರುವಿನಲ್ಲಿ ಪ್ರಾರಂಭಿಸಲಾಗುವುದು. ನಂತರ ಪೊನ್ನಂಪೇಟೆ ತಾಲ್ಲೂಕಿನ ಕಾನೂರು, ಕುಶಾಲನಗರ ತಾಲ್ಲೂಕಿನ…






