ಮಡಿಕೇರಿ ಡಿ.7 NEWS DESK : ಉಡೋತ್ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ನಾಲ್ಕನೇ ವರ್ಷದ ನೇಮೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಮತ್ತು ಪ್ರಸಾದ ವಿತರಣೆ ನಡೆಯಿತು. ಸಂಜೆ ದೈವದ ಭಂಡಾರ ಇಳಿಯುವುದು, ರಾತ್ರಿಯಿಂದ ಮರುದಿನ ವರೆಗೆ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮ ನಡೆಯಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಎ.ಎಸ್.ಪೊನ್ನಣ್ಣ ಭೇಟೆ :: ನೆಮೋತ್ಸವದ ಪ್ರಯುಕ್ತ ರಾತ್ರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕ್ಷೇತ್ರದ ಅಭಿವೃದ್ಧಿಗೆ ಬೇಕಾದಂತ ಸಲಹೆ ಸೂಚನೆಗಳನ್ನು ಸ್ಥಳೀಯರೊಂದಿಗೆ ಚರ್ಚಿಸಿ, ಅಜ್ಜನ ಸನ್ನಿಧಿಗೆ ಕಾಣಿಕೆ ಒಪ್ಪಿಸಿದರು.
ಲೇಖಕ: admin
ಸೋಮವಾರಪೇಟೆ ಡಿ.7 NEWS DESK : ಮಧ್ಯಪ್ರದೇಶದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿ ಎಂ.ಎಂ.ತಾನಿಯಾ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದಾಳೆ. ಕೆಪಿಎಸ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಎಂ.ಎಂ.ತಾನಿಯಾ, ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಮಹಮ್ಮದ್ ಅಸ್ಲಾಂ ಹಾಗೂ ಅಸ್ಮಾ ಭಾನು ದಂಪತಿದ ಪುತ್ರಿ. ಇವಳಿಗೆ ಕುಪ್ಪಂಡ ಸುಬ್ಬಯ್ಯ, ಮೂಕಳಮಾಡ ಗಣಪತಿ ತರಬೇತಿ ನೀಡಿದ್ದು, ಡ್ಯಾನಿ ಈರಪ್ಪ ಅವರು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ.
ಗೋಣಿಕೊಪ್ಪ ಡಿ.7 NEWS DESK : ಸಾಮರಸ್ಯವನ್ನು ವೃದ್ಧಿಸುವ ಮೂಲಕ ಉತ್ತಮ ವಾತಾವರಣವನ್ನು ಕಲ್ಪಿಸುವ ಶಕ್ತಿ ಕ್ರೀಡೆಯಿಂದ ಮಾತ್ರ ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪ ಜಿ.ಪಿ.ಎಲ್ ಕ್ರಿಕೆಟ್ ಪ್ರೀಮಿಯ ಲೀಗ್ ಎಂಟನೇ ಆವೃತ್ತಿಯ ಎರಡನೇ ದಿನದ ಪ್ರಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಸಮಾಜ ನಿರ್ಮಿಸಲು ತಾರತಮ್ಯಗಳನ್ನು ತೊಡೆದು ಹಾಕಲು ಕ್ರೀಡೆಗಳಿಂದ ಸಾಧ್ಯವಾಗುತ್ತದೆ ಎಂದರು. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟಿನಿಂದ ಬದುಕು ನಡೆಸಲು ಮತ್ತು ದೇಶ ಕಟ್ಟುವ ಗುರಿಯನ್ನು ಹೊಂದಬೇಕು ಎಂದು ಸಲಹೆ ನೀಡಿದರು. ಕೊಡಗು ಜಿಲ್ಲೆ ಕ್ರೀಡೆಯ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದೆ. ಹೀಗಾಗಿ ಕ್ರೀಡೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಹೆಚ್ಚಿನ ಆರೋಗ್ಯವನ್ನು ಗಳಿಸಿಕೊಳ್ಳಬಹುದು ಎಂದು ಹೇಳಿದರು. ಕ್ರೀಡೆ ಗ್ರಾಮೀಣ ಮಕ್ಕಳ ಅವಕಾಶಗಳಾಗಿ ಪರಿವರ್ತನೆಗೊಂಡು ರಾಜ್ಯ ಮತ್ತು ದೇಶವನ್ನು ಪ್ರತಿನಿಧಿಸುವಂತಹ ಪ್ರತಿಭೆಗಳನ್ನು ಸೃಷ್ಟಿಸಬೇಕಾಗಿದೆ ಎಂದರು. ಈ ನಿಟ್ಟಿನಲ್ಲಿ ಜಿಪಿಎಲ್ ಸಂಸ್ಥೆ ಎಂಟು…
ಮಡಿಕೇರಿ ಡಿ.7 NEWS DESK : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಈ ಬಾರಿಯೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿ ಯವರ ನೇತೃತ್ವದಲ್ಲಿ ಸಂಪ್ರೋಕ್ಷಣೆ ಪೂಜೆಯೂ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಗಣಹೋಮ, ಸಂಪ್ರೋಕ್ಷಣೆ”, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ದೇವರಿಗೆ ಮುಂಜಾನೆಯಿಂದಲೇ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನೆರವೇರಿತು. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ , ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭೂತ ಬಲಿ, ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ…
ಮಡಿಕೇರಿ ಡಿ.7 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಪತ್ರಕರ್ತರಿಗಾಗಿ ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ವೈಭವ ಪಂದ್ಯಾವಳಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಡಿ.೮ರಂದು ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ನ ಪ್ರದಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಪತ್ರಕರ್ತರಿಗಾಗಿ ಫುಟ್ಬಾಲ್, ಷೆಟಲ್ ಬ್ಯಾಡ್ಮೆಂಟನ್, ಕೇರಂ, ಟಿಟಿ, ಚೆಸ್, ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಇದೇ ಪ್ರಥಮ ಬಾರಿಗೆ ಆಯೋಜಿಸಿರುವ ವಾಲಿಬಾಲ್ ವೈಭವಕ್ಕೆ ೪೨ ಪತ್ರಕರ್ತರರು ಪಾಲ್ಗೊಳ್ಳಲಿದ್ದಾರೆ. ೫ ತಂಡಗಳ ನಡುವೆ ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ. ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಈಗಾಗಲೇ ನಡೆಸಲಾಗಿದ್ದು, ಕ್ರೀಡಾಕೂಟದ ತಂಡದ ನಾಯಕತ್ವವನ್ನು ಶಿವು ಕಾಂತ್ರಾಜ್, ಲೋಕೇಶ್ ಕಾಟಕೇರಿ, ಇಸ್ಮಾಯಿಲ್ ಕಂಡಕೆರೆ, ಪ್ರೇಮ್ ಕುಮಾರ್, ಆದರ್ಶ್ ಅದ್ಕಲೇಗಾರ್ ವಹಿಸಿದ್ದಾರೆ. ಕ್ರೀಡಾಕೂಟದ…
ಮಡಿಕೇರಿ ಡಿ.7 NEWS DESK : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಈ ಬಾರಿಯೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿ ಯವರ ನೇತೃತ್ವದಲ್ಲಿ ಸಂಪ್ರೋಕ್ಷಣೆ ಪೂಜೆಯೂ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಗಣಹೋಮ, ಸಂಪ್ರೋಕ್ಷಣೆ”, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ದೇವರಿಗೆ ಮುಂಜಾನೆಯಿಂದಲೇ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನೆರವೇರಿತು. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ , ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭೂತ ಬಲಿ, ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ…
ಮಡಿಕೇರಿ ಡಿ.6 NEWS DESK : ಸಾಮಾಜಿಕ ಜಾಲತಾಣದಲ್ಲಿ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲೆಯ ಮಾಜಿ ಸೈನಿಕರು, ಕೊಡವ ಸಮಾಜಗಳ ಪ್ರತಿನಿಧಿಗಳು ಹಾಗೂ ಸದಸ್ಯರು ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಸಮಾವೇಶಗೊಂಡು, ವೀರ ಸೇನಾನಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರದ ಪ್ರಥಮ ಮಹಾ ದಂಡ ನಾಯಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಸೈನಿಕರ ಸೇನಾನಿ ಎಂದೇ ಖ್ಯಾತರಾದ ಜ.ತಿಮ್ಮಯ್ಯ ಭಾರತದ ಹೆಮ್ಮೆಯ ಶ್ರೇಷ್ಠ ಪುತ್ರರು. ಅವರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಅವಹೇಳನ ಭಾರತೀಯರಿಗೆಲ್ಲರಿಗು ಮಾಡಿರುವ ಅವಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವೀರಸೇನಾನಿಗಳನ್ನು ಅವಮಾನಿಸಿರುವ ಪ್ರಕರಣದಡಿ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು…
ವಿರಾಜಪೇಟೆ ಡಿ.6 NEWS DESK : ಹೆಗ್ಗಳ ಗ್ರಾಮದಲ್ಲಿರುವ ಪಾಲ್ಟ್ ಮಕ್ಕಿ ನಾಗ ಬನದಲ್ಲಿ ಸ್ಕಂದ ಪಂಚಮಿಯ ಪ್ರಯುಕ್ತ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ನಾಗನಿಗೆ ಹಾಲಿನ ಅಭಿಷೇಕ, ಸೀಯಾಳ ಅಭಿಷೇಕ, ಲಂಕಾರ ಪೂಜೆ, ಕುಂಕುಮಾರ್ಚನೆ, ನಾಗತಂಬಿಲ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಬಳಿಕ ಮಹಾ ಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಭಕ್ತರು ಹರಕೆಯ ವಸ್ತುಗಳನ್ನು ದೇವಸ್ಥಾನಕ್ಕೆ ಅರ್ಪಿಸಿದರು. ಪೂಜಾ ಕಾರ್ಯಕ್ರಮಗಳನ್ನು ಅರ್ಚಕರಾದ ವೇಣುಗೋಪಾಲ್ ಭಟ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಕ್ತಾದಿಗಳು, ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಮಡಿಕೇರಿ ಡಿ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ನಗರದ ಗಾಂಧಿ ಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ಸಂವಿಧಾನ ರಚಿಸುವ ಮೂಲಕ ರಾಷ್ಟ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ರಾಷ್ಟ್ರದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸುವ ಮೂಲಕ ಪ್ರತಿಯೊಬ್ಬರೂ ಕರ್ತವ್ಯವನ್ನು ಪಾಲಿಸುವುದು ಅತಿ ಮುಖ್ಯವಾಗಿದೆ ಎಂದರು. ನಾಪೋಕ್ಲು ವಸತಿ ಶಾಲೆಯ ಸಹ ಶಿಕ್ಷಕರಾದ ರೂಪಾ ಮಾತನಾಡಿ ಸಾಮಾಜಿಕ ನ್ಯಾಯ, ಭ್ರಾತೃತ್ವ, ಸಮಾನತೆ ಮತ್ತು ಸಹೋದರತ್ವ ಇದ್ದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅಂಬೇಡ್ಕರ್ ಸಾರಿದ್ದಾರೆ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳನ್ನು ಹೊರತಂದಿದ್ದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮೂಲಕ ಪ್ರತಿಯೊಬ್ಬರಲ್ಲಿ…
ಕುಶಾಲನಗರ ಡಿ.6 NEWS DESK : ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಹಾಗೂ ಶ್ರೀ ಆಂಜನೇಯ ಸೇವಾ ಸಮಿತಿ ಆಶ್ರಯದಲ್ಲಿ ಡಿ.12 ಮತ್ತು 13 ರಂದು 39ನೇ ವರ್ಷದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಉಪಾಧ್ಯಕ್ಷ ನವನೀತ್ ಪೊನ್ನೇಟಿ ಹಾಗೂ ಕಾರ್ಯದರ್ಶಿ ಕೆ.ವಿ.ಅನುದೀಪ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಡಿ.12 ರಂದು ರಥಬೀದಿಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಪವನಾಮ ಹೋಮ ನಡೆಯಲಿದೆ. 13 ರಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಪ್ರಸಾದ ಸಂತರ್ಪಣೆ ನೆರವೇರಿಸಲಾಗುವುದು. ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಬೈಚನಹಳ್ಳಿ ಮಾರಮ್ಮ ದೇವಾಲಯದವರೆಗೆ ನಡೆಯಲಿದೆ. ಮಧ್ಯಾಹ್ನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗುವುದು. ಸಂಜೆ ಕೊಡಗಿನ ವಿವಿಧೆಡೆಗಳಿಂದ ಸೇರಿದಂತೆ ನೆರೆಯ ಮೈಸೂರು, ಹಾಸನ ಜಿಲ್ಲೆಗಳಿಂದ ಸುಮಾರು 20 ರಿಂದ 25…






