ADVT ::: ಆತ್ಮೀಯ ಗ್ರಾಹಕರೇ ::: ನಿಮ್ಮ ವಾಹನ ವಿಮೆಯನ್ನು ನವೀಕರಣಗೊಳಿಸಲು ನಾವು ನಿಮಗೆ ಸಹಾಯ ಮಾಡಲು ಬಯಸುತ್ತೇವೆ. ನಿಮ್ಮ ಎಲ್ಲಾ ವಾಹನಗಳ ನೋಂದಣಿ ಸಂಖ್ಯೆಗಳನ್ನು ನಮಗೆ ಈ ಮೂಲಕ ಕಳುಹಿಸಿ ಕೊಡಬೇಕಾಗಿ ವಿನಂತಿ. ನಾವು ಅವುಗಳ ರಿನೀವಲ್ ದಿನಾಂಕವನ್ನು ನಿಮಗೆ ಜ್ಞಾಪಿಸುತ್ತೇವೆ. ಎಲ್ಲಾ ಕಂಪೆನಿಗಳ ವಾಹನ ವಿಮೆಯನ್ನು ಗರಿಷ್ಠ ರಿಯಾಯಿತಿಯೊಂದಿಗೆ ಮತ್ತು ಕ್ಯಾಶ್ ಬ್ಯಾಕ್ ಜೊತೆಗೆ ರಿನಿವಲ್ ಮಾಡಿಕೊಡಲಾಗುವುದು. (ಸಂಪರ್ಕಿಸಿ : ಶ್ರೀ ಸಾಯಿ ಇನ್ಶುರೆನ್ಸ್ ಪಾಯಿಂಟ್, ಕೊಡವ ಸಮಾಜ ಕಾಂಪ್ಲೆಕ್ಸ್, ಮುಖ್ಯ ರಸ್ತೆ, ಮಡಿಕೇರಿ. 97429 16784, 97429 16784, 90367 80367)
ಲೇಖಕ: admin
ಮಡಿಕೇರಿ ಜೂ.13 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆಯ ಅಧಿಕಾರಿ ಅವರು ಡಿ.11 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟವು ಡಿ.6 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಡಿ.5 NEWS DESK : ಮಾಯಮುಡಿ ಗ್ರಾಮದ ನಿವಾಸಿ, ನಿವೃತ್ತ ಸೈನಿಕ ಆಪಟ್ಟೀರ ಬಿ.ಸುಬ್ಬಯ್ಯ (ಮಣಿ-86) ಅವರು ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮಾಯಮುಡಿ ಗ್ರಾ.ಪಂ ಅಧ್ಯಕ್ಷರಾದ ಎ.ಎಸ್.ಟಾಟು ಮೊಣ್ಣಪ್ಪ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು (05-12-2024) ಸಂಜೆ ಅವರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಡಿಕೇರಿ ಡಿ.4 NEWS DESK : ಭಾರತ ದೇಶ ವಿಶ್ವ ಮಟ್ಟದಲ್ಲಿ ಶಕ್ತಿಯುತವಾಗಿ ವಿಶೇಷ ಸ್ಥಾನಮಾನದಲ್ಲಿ ಗುರುತಿಸಿಕೊಂಡಿರುವುದಕ್ಕ್ಕೆ ಸಂವಿಧಾನವೇ ಮುಖ್ಯ ಕಾರಣವಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಜ್ಯಶಾಸ್ತ್ರ ವಿಭಾಗವು 75 ವರ್ಷವನ್ನು ಪೂರೈಸುತ್ತಿರುವ ಸವಿನೆನಪಿಗಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ರಾಜ್ಯಶಾಸ್ತ್ರ ಸಂಘ ಹಾಗೂ ಮಾನವ ಹಕ್ಕುಗಳ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆಧುನಿಕ ಸಮಾಜದಲ್ಲಿ ಸಾಂವಿಧಾನಿಕ ಮೌಲ್ಯಗಳ ಪ್ರಸ್ತುತತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಜರ್ ಪ್ರೊ.ಬಿ.ರಾಘವ ಅವರು, ಸಂವಿಧಾನ ಜಾರಿಯಾಗಿ 75 ವರ್ಷಗಳೇ ಕಳೆದರು, ಯಾವುದೇ ನ್ಯೂನತೆಗಳು ಬಾರದಂತೆ ಜನರ ಅಗತ್ಯತೆಗೆ ತಕ್ಕಂತೆ ತಿದ್ದುಪಡಿಗಳನ್ನು ಮಾಡಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ನೋಡಿಕೊಳ್ಳಲಾಗಿದೆ. ಸಂವಿಧಾನ ನಾಗರೀಕ ಸಮಾಜಕ್ಕೆ ಮೂಲಭೂತ ಹಕ್ಕುಗಳೊಂದಿಗೆ ರಕ್ಷಣೆಯನ್ನು ನೀಡುತ್ತಾ ಬಂದಿದೆ ಮತ್ತು ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡಿದೆ…
ಬೆಂಗಳೂರು ಡಿ.5 NEWS DESK : ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು, ಆಗ ನಮ್ಮ ಸರ್ಕಾರದ ಆಶಯ ಈಡೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೌರಿಂಗ್ ಆಸ್ಪತ್ರೆ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ 500 ಬೆಡ್ಗಳ ನೂತನ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬೌರಿಂಗ್ ಆಸ್ಪತ್ರೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಆಸ್ಪತ್ರೆ. ಸಾವಿರಾರು ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಿದೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಮತ್ತೊಂದು ವೈದ್ಯಕೀಯ ಕಾಲೇಜಿನ ಅಗತ್ಯವನ್ನು ಮನಗಂಡು ಮತ್ತೊಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಮತ್ತೊಂದು ವೈದ್ಯಕೀಯ ಕಾಲೇಜು ಆದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಆಗಿ, ಸಾಮಾನ್ಯ ಜನರಿಗೆ, ಬಡವರಿಗೆ, ದಲಿತರಿಗೆ ಬಹಳಷ್ಟು ಉಪಯೋಗವಾಗುತ್ತದೆ ಎಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ. ಈಗ ಸುಸಜ್ಜಿತವಾದ…
ಮಡಿಕೇರಿ ಡಿ.5 NEWS DESK : ನೆರೆಯ ಬಾಂಗ್ಲಾ ದೇಶದಲ್ಲಿರುವ ಮತಾಂಧ ಸರ್ಕಾರ, ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದು ಹಿತರಕ್ಷಣಾ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಹಿಂದು ಕಾರ್ಯಕರ್ತರು ನೆರೆಯ ಬಾಂಗ್ಲಾದಲ್ಲಿನ ಹಿಂದು ಸಮುದಾಯದ ಮೇಲಿನ ದೌರ್ಜನ್ಯಗಳ ತಡೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ವಿಶ್ವ ಸಂಸ್ಥೆ ಸಮಸ್ಯೆಯನ್ನು ಬಗೆಹರಿಸಲು ಪ್ರಮುಖ ಪಾತ್ರ ವಹಿಸಬೇಕೆಂದು ಆಗ್ರಹಿಸಿದರು. ಹಿಂದು ಹಿತರಕ್ಷಣಾ ಸಮಿತಿಯ ಸಂಚಾಲಕ ಸುರೇಶ್ ಮುತ್ತಪ್ಪ, ಸಮಿತಿಯ ಪ್ರಮುಖ ಕುಕ್ಕೇರ ಅಜಿತ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಮುಖರಾದ ರವಿ ಕುಶಾಲಪ್ಪ, ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಸಂಪತ್ ಕುಮಾರ್, ಅರುಣ್ ಶೆಟ್ಟಿ, ಮನು ಮಂಜುನಾಥ್ ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಡಿ.5 NEWS DESK : ಕಾಫಿ ಕೃಷಿರಂಗದ ಮೇಲೆ ಪರಿಣಾಮ ಬೀರುವ ಸಫೇ೯ಸಿ ಕಾಯಿದೆ ಸಂಬಂಧಿತ ಲೋಕಸಭೆಯಲ್ಲಿ ಗಮನ ಸೆಳೆದು ಕಾಫಿ ಕೃಷಿಯು ಸಫೇ೯ಸಿ ಕಾಯಿದೆಯಡಿ ಬರುವುದಿಲ್ಲ ಎಂಬ ನಿರ್ಣಾಯಕ ಉತ್ತರಕ್ಕೆ ಕಾರಣರಾದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಮತ್ತು ಕನಾ೯ಟಕ ಬೆಳೆಗಾರರ ಒಕ್ಕೂಟ ಕೃತಜ್ಞತೆ ಸಲ್ಲಿಸಿದೆ. ಈಗಾಗಲೇ ತೀವ್ರ ನೈಸರ್ಗಿಕ ವಿಕೋಪಗಳು, ನಿರಂತರ ಬೆಳೆ ವೈಫಲ್ಯಗಳು ಮತ್ತು ಕಡಿಮೆ ಸರಕು ಬೆಲೆ ಸಂಕಷ್ಟ ಎದುರಿಸುತ್ತಿರುವ ಕಾಫಿ ಕೃಷಿಕರ ಮೇಲೆ ಸಫೇ೯ಸಿ ಕಾಯಿದೆಯು ಮತ್ತೊಂದು ಮಾನಸಿಕ, ಆಥಿ೯ಕ ಹೊಡೆತದಂತಿತ್ತು, ಕಾಫಿ ಕೖಷಿಕರು ಬ್ಯಾಂಕ್ ನಲ್ಲಿ ಮಾಡಿರುವ ಸಾಲದ ವಸೂಲಾತಿಗೆ ಸಫೇ೯ಸಿ ಕಾಯಿದೆ ಬಳಸಿಕೊಂಡು ಸಾಲಗಾರ ಕೖಷಿಕನ ಕಾಫಿ ತೋಟವನ್ನು ಬ್ಯಾಂಕ್ ಗಳು ಜಪ್ತಿ ಮಾಡುವ ಮೂಲಕ ಕೖಷಿಕರ ಆತಂಕಕ್ಕೆ ಕಾರಣವಾಗಿತ್ತು, ಕಾಯಿದೆಯನ್ನನ ಬ್ಯಾಂಕಿಂಗ್ ವಲಯವು ಜಾರಿಗೊಳಿಸುತ್ತಿದ್ದ ಹಿನ್ನಲೆಯಲ್ಲಿ ಅನೇಕ ಕಾಫಿ ಬೆಳೆಗಾರರು ತಮ್ಮ ಅಮೂಲ್ಯ ಕಾಫಿ ತೋಟಗಳನ್ನು ಕಳೆದುಕೊಳ್ಳುವಂಥ ಪರಿಸ್ಥಿತಿ ಎದುರಾಗಿತ್ತು, ಸಂಸತ್ತಿನ ಅಧಿವೇಶನದಲ್ಲಿ ಸಂಸದ…
ನಾಪೋಕ್ಲು ಡಿ.5 NEWS DESK : ಕಕ್ಕುಂದಕಾಡು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಡಿ.7 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ಜನರುಗಲಿದೆ. ಮಧ್ಯಾಹ್ನ 12.30 ಗಂಟೆಗೆ ವಿಶೇಷ ಮಹಾಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಸೇವೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ವರದಿ : ದುಗ್ಗಳ ಸದಾನಂದ.
ಮಡಿಕೇರಿ, ಡಿ.5 NEWS DESK : ಜಿಲ್ಲಾ ಫೆಡರೇಷನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಷನ್ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪೈಕೇರ ಮನೋಹರ್ ಮಾದಪ್ಪ, ಕಾರ್ಯದರ್ಶಿಯಾಗಿ ಅಪ್ಪಾರಂಡ ವೇಣು ಪೊನ್ನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಸರ್ವಾನುಮತದಿಂದ ಆಯ್ಕೆಮಾಡಲಾಯಿತು. ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಗುಮ್ಮಟಿರ ಕಿಲನ್ ಗಣಪತಿ ಮಾತನಾಡಿ, ರಾಜ್ಯದಲ್ಲಿ ಸಂಘಟನೆ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಮದ್ಯ ಮಾರಾಟಗಾರರು ಹಲವು ಸಮಸ್ಯೆಗಳ ನಡುವೆ ವ್ಯಾಪಾರ ಮಾಡಬೇಕಾದ ಸಂದಿಗ್ಧತೆ ಇದೆ. ರಾಜ್ಯಕ್ಕೆ ಅತೀ ಹೆಚ್ಚು ಆದಾಯ ಅಬಕಾರಿ ವಲಯ ಮೂಲಕ ಬರುತ್ತಿದ್ದರೂ ನಮ್ಮ ಬೇಡಿಕೆಗಳಿಗೆ ಸ್ಪಂದನ, ಸಮಸ್ಯೆಗಳು ಪರಿಹಾರವಾಗದಿರುವುದು ವಿಪರ್ಯಾಸ ಎಂದು ವಿಷಾದಿಸಿದರು. ಸನ್ನದುದಾರರ ಬೇಡಿಕೆ ಈಡೇರಿಕೆಗೆ ನಿರಂತರ ಹೋರಾಟ ನಡೆಯುತ್ತಿದ್ದು, ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಬಲವರ್ಧನೆಗೊಳಿಸಲಾಗುತ್ತಿದೆ. ಈಗಾಗಲೇ ವಿರಾಜಪೇಟೆ ತಾಲೂಕಿನಲ್ಲಿ ಸಮಿತಿ ರಚನೆ ಮಾಡಲಾಗಿದೆ. ಅಬಕಾರಿ ವ್ಯಾಪ್ತಿಯ ಮೂರು ವಿಭಾಗದಲ್ಲಿ ಸಮಿತಿ ರಚನೆ ಮಾಡಲಾಗುವುದು. ಒಗ್ಗಟ್ಟಿನಿಂದ ಮುಂದುವರೆದರೆ ಸಮಸ್ಯೆಗಳ ಪರಿಹಾರ ಸಾಧ್ಯ. ಭ್ರಷ್ಟಾಚಾರ…






