ಲೇಖಕ: admin

ಸುಂಟಿಕೊಪ್ಪ ಜ.16 NEWS DESK : ಗರಗಂದೂರಿನ ಮಲ್ಲಿಕಾರ್ಜುನ ನಗರದ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಮಕರಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಸಂಜೆ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ನೆರವೇರಿತು. ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಮಕರ ಸಂಕ್ರಾತಿಯ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂಗಳಿಂದ ಸಿಂಗಾರಿಸಲಾಗಿತ್ತು.

Read More

ಸೋಮವಾರಪೇಟೆ NEWS DESK ಜ.15 : ಸೋಮವಾರಪೇಟೆಯ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು 13 ಮಂದಿ ಜಯಗಳಿಸಿದರು. ಸಾಮಾನ್ಯ ಕ್ಷೇತ್ರದಿಂದ ಲೋಕೇಶ್ವರಿ ಗೋಪಾಲ್, ಜಲಜಾ ಶೇಖರ್, ಕವಿತಾ ವಿರೂಪಾಕ್ಷ, ಬಿ.ಕೆ. ವಿದ್ಯಾ, ಉಮಾ, ಕೆ.ಎಸ್. ಚಂದ್ರಾವತಿ, ವರಲಕ್ಷ್ಮಿ ಸಿದ್ದೇಶ್ವರ್, ಕೆ.ಎ. ಮಂಜುಳಾ, ಜೀತಾಶ್ರೀ ಅವರುಗಳು ಗೆಲುವು ಸಾಧಿಸಿದರು. ಹಿಂದುಳಿದ ವರ್ಗ ಎ. ವಿಭಾಗದಿಂದ ಬೇಬಿ ಚಂದ್ರಹಾಸ್, ಹಿಂದುಳಿದ ವರ್ಗ ಬಿ. ವಿಭಾಗದಿಂದ ಎಸ್.ಬಿ. ಗೀತಾ, ಪರಿಶಿಷ್ಟ ಜಾತಿ ವಿಭಾಗದಿಂದ ಎಸ್.ಬಿ. ಮೀನಾಕ್ಷಿ, ಪರಿಶಿಷ್ಟ ಪಂಗಡ ವಿಭಾಗದಿಂದ ಎಚ್.ಎಂ. ರಂಜಿತ ಅವರುಗಳು ಆಯ್ಕೆಯಾದರು.

Read More

ಸೋಮವಾರಪೇಟೆ NEWS DESK ಜ.15 : ಸಂಕ್ರಾಂತಿ ಹಬ್ಬದಂದು ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಕೂತಿ ಗ್ರಾಮದ ಶ್ರೀ ಸಬ್ಬಮ್ಮ ದೇವರ ಚಾವಡಿ ಕಟ್ಟೆಯಲ್ಲಿ ಬುಧವಾರ ವಿಶೇಷ ಪೂಜೆ ನಡೆಯಿತು. ಅನಾದಿಕಾಲದಿಂದಲು ನಡೆದುಕೊಂಡು ಬಂದಂತೆ ದೇವರ ಕಟ್ಟೆಯಲ್ಲಿ ಗ್ರಾಮದ ಒಕ್ಕಲಿಗ ಮನೆತನದ ಹೇಣಿಗೆ ತಂದಿಟ್ಟು ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ಹೇಣಿಗೆ ಹೊತ್ತ ಮಹಿಳೆಯರು, ಗ್ರಾಮಸ್ತರು ದೇವರ ಕಟ್ಟೆಯ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಸಮೀಪದ ಶಾಂತಳ್ಳಿಯ ಕುಮಾರಲಿಂಗೇಶ್ವರ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು. ಈ ಸಂದರ್ಭ ಗ್ರಾಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಂ.ಜಯರಾಮ್, ಕಾರ್ಯದರ್ಶಿ ಯಾದವ್ ಕುಮಾರ್, ಉಪಾಧ್ಯಕ್ಷ ಕೆ. ಡಿ. ಗಿರೀಶ್, ಖಜಾಂಚಿ ಲಕ್ಷ್ಮಯ್ಯ, ಭಾನುಪ್ರಸಾದ್, ಭರತ್, ಜಿತೇಂದ್ರ, ಅರ್ಚಕ ಅನಂತರಾಮ್ ಹಾಗು ಗ್ರಾಮಸ್ಥರು ಇದ್ದರು.

Read More

ಸೋಮವಾರಪೇಟೆ NEWS DESK ಜ.15 : ವೈಕುಂಠ ಏಕಾದಶಿಯ ಪ್ರಯುಕ್ತ ಪಟ್ಟಣದ ಶ್ರೀರಾಮ ಮಂದಿರದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸೂರ್ಯಪಾದಜೀ ಸತ್ಸಂಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ದೇವರ ಸಂಕೀರ್ತನೆಯೊಂದಿಗೆ, ವೈಕುಂಠ ಏಕಾದಶಿಯ ಮಹತ್ವ, ನಾರಾಯಣ ನಾಮ ಸ್ಮರಣೆಯಿಂದ ಆಗುವ ಪ್ರಯೋಜನ, ಆಧ್ಯಾತ್ಮಿಕ ಮಾರ್ಗದಲ್ಲಿರುವ ಸುಖ ಶಾಂತಿಯ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನ ಗಾಯಕರಾದ ರಂಜನಿ ರಘು ಮತ್ತು ಅಪೆಕ್ಸ್ ಸದಸ್ಯರಾದ ರಮಾನಂದ, ಕೊಡಗು ಜಿಲ್ಲೆ ಆರ್ಟ್ ಆಫ್ ಲಿವಿಂಗ್ ಶಿಕ್ಷಕ ಸಂಯೋಜ ಕಾರ್ಯಪ್ಪ, ಮಡಿಕೇರಿಯ ಕೆ.ಡಬ್ಲೂ. ಬೋಪಯ್ಯ, ಕೃಷ್ಣ ಬೋಪಯ್ಯ, ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ ಇದ್ದರು.

Read More

ಮಡಿಕೇರಿ ಜ.15 NEWS DESK : ಮಡಿಕೇರಿಯ ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ನಡೆದ ಎಸ್.ಆರ್.ವಿ ಫುಟ್ಬಾಲ್ ಕಪ್  ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಭಗವತಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ , ಕೂರ್ಗ್ ಚಾರ್ಮಾರ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ತೃತೀಯ ಹಾಗೂ ನಾಲ್ಕನೇ ಸ್ಥಾನವನ್ನು ಫಿನಿಕ್ಸ್ ಎಫ್ ಸಿ ಮತ್ತು ಆರ್ ಆರ್ ಎಫ್ ಸಿ ತಂಡ ಪಡೆದು ಕೊಂಡಿತು.  ನಗರದ ಗಾಂಧಿ ಮೈದಾನದಲ್ಲಿ ನಡೆದ ಎಸ್.ಆರ್.ವಿ ಚಾಂಪಿಯನ್ ಲೀಗ್ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಒಟ್ಟು ಹನ್ನೆರಡು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಕೂರ್ಗ್ ಚಾರ್ಮಾರ್ಸ್ ತಂಡವು ಟೀಮ್ ಭಗವತಿ ವಿರುದ್ಧ ಪೆನಲ್ಟಿಯಲ್ಲಿ 3-1 ರ ಜಯ ಸಾದಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು. ಎಲಿಮಿನೇಟರ್ ಪಂದ್ಯವು ಫಿನಿಕ್ಸ್ ಎಫ್ ಸಿ ಹಾಗೂ ಆರ್ ಆರ್ ಎಫ್ ಸಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಫಿನಿಕ್ಸ್…

Read More

ವಿರಾಜಪೇಟೆ ಜ.15 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್, ವಿರಾಜಪೇಟೆ ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ನಡೆಯಿತು. ಮೂರ್ನಾಡು ವಲಯದ ಪಾರಣೆ ಕಾರ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ.ನಂದಿನಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಸರ ನಾಶದಿಂದ ಪ್ರಾಣಿಗಳು ನಾಶವಾಗುತ್ತಿದೆ. ಮಣ್ಣಿನ ಸವಕಳಿ ಸಮಸ್ಯೆಯಾಗಿ ಮಳೆಯ ಸಂದರ್ಭದಲ್ಲಿ ಗುಡ್ಡ ಕುಸಿತ ಮುಂತಾದ ಪ್ರವಾಹಗಳಿಗೆ ಇದು ಎಡೆ ಮಾಡಿಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ಕಾಡು ಬೆಳೆಸಿ, ನಾಡು ಉಳಿಸುವಂತಾಗಬೇಕು ಎಂದು ಕರೆ ನೀಡಿದರು. ಪಾರಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ವೇದ ಪ್ರಸಾದ್ ಪರಿಸರವನ್ನು ಹೇಗೆ ಉಳಿಸಬೇಕು, ಗಿಡಗಳನ್ನು ಬೆಳೆಸುವುದರಿಂದ ನಮ್ಮ ಪರಿಸರವನ್ನು ಹೇಗೆ ಸಮೃದ್ಧಿಗೊಳಿಸಬಹುದು ಎಂಬ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಕಿಶೋರ್, ಪದಾಧಿಕಾರಿಗಳಾದ ವನಿತಾ, ಅನಿತಾ, ಕೃಷಿ ಮೇಲ್ವಿಚಾರಕರಾದ ವಸಂತ್, ಸೇವಾ ಪ್ರತಿನಿಧಿಗಳಾದ ಸಾವಿತ್ರಿ ಮತ್ತು ದಿವ್ಯ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಜ.15 NEWS DESK : ನಗರದ ಸಂತ ಮೈಕಲರ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಕಳೆದ 3 ದಿನಗಳಿಂದ ನವೇನ ಪ್ರಾರ್ಥನೆಗಳ ಮೂಲಕ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮಂಗಳವಾರ ಸಂಜೆ ದಿವ್ಯ ಬಲಿಪೂಜೆ ನಡೆಯಿತು. ಪ್ರಧಾನಯಾಜಕರಾದ ಫಾ.ಮೈಕಲ್ ಮರಿ ಹಬ್ಬದ ಬಲಿಪೂಜೆ ನೆರವೇರಿಸಿದರು. ಕುಶಾಲನಗರ, ಅಬ್ಬೂರುಕಟ್ಟೆ, ಸೋಮವಾರಪೇಟೆ, ಮಾದಾಪುರ, ಹಟ್ಟಿಹೊಳೆ, ತಾಳತ್‌ಮನೆ ಸೇರಿದಂತೆ ವಿವಿಧ ದೇವಾಲಯಗಳ ಧರ್ಮಗುರುಗಳು ಪಾಲ್ಗೊಂಡಿದ್ದರು. ನೂರಾರು ಭಕ್ತರು ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾತ್ರಿ ವಿದ್ಯುತ್ ಅಲಂಕೃತ ಮಂಟಪದಲ್ಲಿ ಸಂತ ಮೈಕಲರ ಪ್ರತಿಮೆಯ ಮೆರವಣಿಗೆ ನಡೆಯಿತು. ಭಕ್ತರು ಉರಿಯುತ್ತಿದ್ದ ಮೇಣದ ಬತ್ತಿ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ದೇವಾಲಯದಿಂದ ಹೊರಟ ಮೆರವಣಿಗೆ ಮಂಗೇರೀರ ಮುತ್ತಣ್ಣ ವೃತ್ತ, ಸ್ಕ್ವಾಡರ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಚೌಕಿವರೆಗೆ ಸಾಗಿ ಮತ್ತೆ ಅದೇ ರಸ್ತೆ ಮೂಲಕ ದೇವಾಲಯಕ್ಕೆ ಹಿಂತಿರುಗಿತು. ಬಳಿಕ ದೇವಾಲಯದಲ್ಲಿ ಆರಾಧನೆ ನಡೆಯಿತು. ನಂತರ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು.…

Read More

ಮಡಿಕೇರಿ ಜ.15 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ, ಎಫ್3 ಗದ್ದಿಗೆ ಫೀಡರ್‍ನಲ್ಲಿ ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿಯನ್ನು ಜ.16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಬಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ನವದೆಹಲಿ NEWS DESK ಜ.15 : ಮೈಸೂರಿನ ಬನ್ನಿಮಂಟಪ ಸಮೀಪದ ಎಲ್ಐಸಿ ಸರ್ಕಲ್  ಬಳಿ  “ಅರ್ಜುನ” ಸ್ಮಾರಕ ನಿರ್ಮಾಣಕ್ಕೆ ಮನವಿ* *ಮೈಸೂರು ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ಮ್ಯೂಸಿಯಂ ಮಾಡಲು ಒತ್ತಾಯ* *ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಅವರಿಗೆ ಸಂಸದ ಯದುವೀರ್ ಪತ್ರ* ಮೈಸೂರಿನ ಪಾರಂಪರಿಕತೆಗೆ, ಐತಿಹಾಸಿಕತೆಗೆ, ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಆಗ್ರಹ* ಪಾರಂಪರಿಕ ಹಾಗೂ ಐತಿಹಾಸಿಕ ಹಾಗೂ ಸಾಂಸ್ಕೃತಿಕ ರಾಜಧಾನಿ ಎಂದೇ ವಿಶ್ವಮಟ್ಟದಲ್ಲಿ ಖ್ಯಾತಿ ಹೊಂದಿರುವ ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಯೋಜನೆಗಳಿಗೆ ನೆರವು ಒದಗಿಸಬೇಕೆಂದು ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ *ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮನವಿ ಮಾಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್ ಅವರು ಮನವಿ ಸಲ್ಲಿಸಿ, ಮೈಸೂರಿನ ಪಾರಂಪರಿಕತೆಗೆ ತಕ್ಕಂತೆ ಎಲ್ಐಸಿ ಸರ್ಕಲ್ ಬಳಿ “ಅರ್ಜುನ ಸ್ಮಾರಕ” ಮತ್ತು ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ಮ್ಯೂಸಿಯಂ ಆಗಿ ಪರಿವರ್ತಿಸಲು ಕ್ರಮ ಕೈಗೊಳ್ಳಬೇಕೆಂದು…

Read More

ಮಡಿಕೇರಿ ಜ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಲಿದೆ.  ಜ.20 ರಂದು ಸೋಮವಾರಪೇಟೆ ತಾಲ್ಲೂಕಿನವರಿಗೆ ಸೋಮವಾರಪೇಟೆ ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ, ಜ.21 ರಂದು ಕುಶಾಲನಗರ ತಾಲ್ಲೂಕಿನವರಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಜನವರಿ, 22 ರಂದು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆ ಉಪ ಆರೋಗ್ಯ ಕೇಂದ್ರದಲ್ಲಿ, ಜನವರಿ, 23 ರಂದು ವಿರಾಜಪೇಟೆ ತಾಲ್ಲೂಕಿನವರಿಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಹಾಗೂ ಜನವರಿ, 24 ರಂದು ಮಡಿಕೇರಿ ತಾಲ್ಲೂಕಿನವರಿಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದ ಪ್ರಯೋಜನವನ್ನು ಜಿಲ್ಲೆಯ ಹಿರಿಯ ನಾಗರಿಕರು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಹಿರಿಯ ನಾಗರಿಕರು ತಪಾಸಣಾ ಶಿಬಿರಕ್ಕೆ ಹಾಜರಾಗಲು ಬೇಕಾದ…

Read More