ಮಡಿಕೇರಿ ಡಿ.4 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿ ನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ತೃತೀಯ ಬಿ.ಎ ವಿದ್ಯಾರ್ಥಿ ಎನ್.ವಿ.ಮಹೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾನೆ. ಕಾಲೇಜು ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ತರಗತಿ ಪ್ರತಿನಿಧಿಗಳು ಮತದಾನ ಮಾಡಿ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಉಪಾಧ್ಯಕ್ಷರಾಗಿ ಟಿ.ಎಸ್.ಆಲಿನ್ ಜೇಶ್ಮ (ತೃತೀಯ ಬಿ.ಎ ಎಚ್ ಆರ್ ಡಿ), ಕಾರ್ಯದರ್ಶಿಯಾಗಿ ಎಂ.ಪಿ.ಮೊನಿಶ್ (ತೃತೀಯ ಬಿ.ಬಿ.ಎ), ಜಂಟಿ ಕಾರ್ಯದರ್ಶಿಯಾಗಿ ರಾಹುಲ್ ರಾಜನ್ (ದ್ವಿತೀಯ ಬಿ.ಎಸ್.ಸಿ) ಮತ್ತು ಕೆ.ಟಿ.ವರ್ಷ (ದ್ವಿತೀಯ ಬಿ.ಎಸ್.ಸಿ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೆ.ಫರ್ದೀನ್ (ತೃತೀಯ ಬಿ.ಎ) ಮತ್ತು ಜಿ.ಹೆಚ್.ಐಶ್ವರ್ಯ (ತೃತೀಯ ಬಿ.ಎ) ಆಯ್ಕೆಯಾದರು. ಚುನಾವಣೆ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇಜರ್ ಬಿ.ರಾಘವ, ಉಪನ್ಯಾಸಕರುಗಳಾದ ಡಾ.ನಯನ ಕಶ್ಯಪ್, ಡಾ.ರೇಣುಶ್ರೀ, ನಾಗೇಂದ್ರ, ಡಾ.ಶ್ರೀಧರ್ ಹೆಗಡೆ, ತಳವಾರ್, ಪೂಣಚ್ಚ, ಡಾ.ಮಹದೇವಯ್ಯ, ಖುರ್ಷಿದ ಬಾನು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಡಿ.4 NEWS DESK : ಸಿದ್ದಾಪುರದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಎಸ್.ಕೆ.ಎಸ್.ಎಸ್.ಎಫ್ ಇಸ್ಲಾಮಿಕ್ ಕಲಾ ಸಾಹಿತ್ಯ ಸ್ಪರ್ಧೆ ಕಲೋತ್ಸವದಲ್ಲಿ ಸಿದ್ದಾಪುರ ವಲಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಮೂರು ವಲಯಗಳ ನಡುವೆ ನಡೆದ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಸಿದ್ದಾಪುರ ವಲಯ 337 ಅಂಕಗಳೊಂದಿಗೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆದರು. ಕುಶಾಲನಗರ ವಲಯ 292 ಅಂಕಗಳನ್ನು ಪಡೆದು ದ್ವಿತೀಯ ಮತ್ತು 266 ಅಂಕಗಳನ್ನು ಪಡೆದು ವಿರಾಜಪೇಟೆ ತೃತೀಯ ಸ್ಥಾನ ಪಡೆಯಿತು. ಸಿದ್ದಾಪುರ ವಲಯ ಸೀನಿಯರ್ ವಿಭಾಗದಲ್ಲಿ 104 ಮತ್ತು ಸೂಪರ್ ಸೀನಿಯರ್ ವಿಭಾಗದಲ್ಲಿ 94 ಅಂಕಗಳನ್ನು ಪಡೆದು ಎರಡು ವಿಭಾಗದಲ್ಲಿ ಕೂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು. ವಿರಾಜಪೇಟೆ ವಲಯ 78 ಅಂಕಗಳನ್ನು ಪಡೆದು ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯಿತು. ಕುಶಾಲನಗರ ವಲಯವು ಜನರಲ್ ಗ್ರೂಪ್ ವಿಭಾಗದಲ್ಲಿ 66 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದುಕೊಂಡರು. ಫೆಸ್ಟ್ ಐಕಾನ್ ಪ್ರಶಸ್ತಿ: ಈ ಬಾರಿಯ ಎಸ್.ಕೆ.ಎಸ್.ಎಸ್.ಎಫ್ ಕಲೋತ್ಸವದಲ್ಲಿ ಪ್ರತೀ ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳಿಸುವ ಪ್ರತಿಭೆಯನ್ನು…
ಸುಂಟಿಕೊಪ್ಪ ಡಿ.4 NEWS DESK : ಕರ್ನಾಟಕ ಏಡ್ಸ್ ಪ್ರಿವೇನ್ಸ್ ಸೊಸೈಟಿ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಶೋದಯದ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದಲ್ಲಿ ಹೆಚ್ಐವಿ ಸೋಂಕಿನ ಕುರಿತು ಸಾರ್ವಜನಿಕರಿಗೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು. ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ಮಂಡ್ಯದ ಚಿಂತನ ಸಾಂಸ್ಕøತಿಕ ಕಲಾ ತಂಡದವರು ಹೆಚ್ಐವಿ ಕುರಿತು ಸಾರ್ವಜನಿಕರಿಗೆ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಹೆಚ್ಐವಿ ಸೋಂಕಿತರು ಹೆದರುವ ಅವಶ್ಯಕತೆ ಇಲ್ಲ. ಸೂಕ್ತ ಸಮಯದಲ್ಲಿ ಸರಕಾರಿ ಆಸ್ಪತ್ರೆಗಳಿಗೆ ತೆರಳಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡು ವೈದ್ಯರ ಸಲಹೆ ಪಡೆದು ಚಿಕಿತ್ಸೆ ಪಡೆಯುವುದರೊಂದಿಗೆ ಈ ರೋಗವನ್ನು ತಡೆಗಟ್ಟಬಹುದು ಎಂದು ಮನವರಿಗೆ ಮಾಡಿದರು. ಆಶೋದಯ ಕಾರ್ಯಕರ್ತರು ಮತ್ತು ಇಲಾಖೆ ಸಿಬ್ಬಂದಿಗಳು ಸೋಂಕಿತರ ಭೇಟಿ ನೀಡಿದಾಗ ಅವರೊಂದಿಗೆ ಸಹಕರಿಸುವುದರ ಜೊತೆಗೆ ಅವರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸದ್ದಲ್ಲಿ ಈ ರೋಗವನ್ನು ಯಾವುದೇ ಭಯವಿಲ್ಲದೆ ತಡೆಗಟ್ಟಲು ಸಾಧ್ಯವೆಂದು ಜಾಗೃತಿ ಮೂಡಿಸಿದರು. ಈ ಸಂದರ್ಭ ಜಿಲ್ಲಾ ಆಶೋದಯ…
ಮಡಿಕೇರಿ ಡಿ.4 NEWS DESK : ಪ್ರಸಕ್ತ (2024-25) ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡ-03 ಘಟಕಗಳಿಗೆ (10+01) ಕುರಿ, ಮೇಕೆ ಘಟಕಗಳ ಶೇಕಡ 90 ರೂ.59,400 ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಬೆಂಗಳೂರು ಈ ಕಚೇರಿಯಲ್ಲಿ ನೋಂದಾಯಿಸಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಹಾಗೂ ಈ ಹಿಂದಿನ ವರ್ಷಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವ ಪರಿಶಿಷ್ಟ ಪಂಗಡ ವರ್ಗದ ಆಸಕ್ತ ಸದಸ್ಯರುಗಳು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು…
ಮಡಿಕೇರಿ ಡಿ.4 NEWS DESK : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ರಾಷ್ಟ್ರೀಯ ಫೆಲೋಶಿಪ್ ಮತ್ತು ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ವಿದ್ಯಾರ್ಥಿಗಳ ಕೋರ್ಸ್, ಸ್ಟೈಫಂಡ್ ಮತ್ತು ಲ್ಯಾಪ್ಟಾಪ್ ಪೂರ್ಣ ಶುಲ್ಕ ಒದಗಿಸಲಾಗುತ್ತಿದ್ದು, ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ https://fellowship.tribal.gov.in ನ್ನು ಸಂಪರ್ಕಿಸಲು ಕೋರಿದೆ. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ- 9901482763. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 9482894676 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 7259552655 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.
ಮಡಿಕೇರಿ ಡಿ.4 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಯಲ್ಲಿ ಯುವಕ/ ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿ ನೀಡಲಾಗುವುದು, ಈ ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯು 15 ದಿವಸಗಳ ವಸತಿ ಸಹಿತ ತರಬೇತಿಯಾಗಿದ್ದು 10 ದಿವಸ ಕ್ಲಾಸ್ ರೂಮ್ ಮತ್ತು 5 ದಿವಸ ಪ್ರಾಯೋಗಿಕ (Practical) ತರಬೇತಿ ಇರುತ್ತದೆ. ವಿದ್ಯಾರ್ಹತೆ ತರಬೇತಿಗೆ ಅಗತ್ಯವಿರುವಂತೆ ವಾಸದ ವ್ಯವಸ್ಥೆ, ಊಟ, ಉಪಹಾರ ಇತ್ಯಾದಿಗಳನ್ನು ತರಬೇತಿಯಲ್ಲಿ ನೀಡಲಾಗುವುದು. ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ವಯೋಮಿತಿ 18-45 ವರ್ಷ ಆಗಿರುತ್ತದೆ. ನಿಗಮದ ವೆಬ್ಸೈಟ್: https://kmdconline.karnataka.gov.in/ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಆನ್ಲೈನ್…
ಮಡಿಕೇರಿ ಡಿ.4 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25 ಸಾವಿರದಂತೆ ಶಿಷ್ಯವೇತನ ನೀಡಲಾಗುವುದು ಎಂದು ಘೋಷಿಸಲಾಗಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಚಿಸುವವರು ಡಿ.14 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ- 9901482763. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 9482894676 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 7259552655 ಇಲ್ಲಿಂದ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಡಿ.3 : ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮತ್ತು ದುಬಾರೆ ರಿವರ್ ರಾಪ್ಟಿಂಗ್ ಅಸೋಸಿಯೇಷನ್, ಕೊಡಗು ಜಿಲ್ಲೆ ಇವರ ಸಹಯೋಗದೊಂದಿಗೆ ದುಬಾರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹೈಟೆಕ್ ಶೌಚಾಲಯವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ಉದ್ಘಾಟಿಸಿದರು. ದುಬಾರೆ ಪ್ರವಾಸಿತಾಣಕ್ಕೆ ವರ್ಷಕ್ಕೆ 4 ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಹೈಟೆಕ್ ಶೌಚಾಲಯವನ್ನು ಪ್ರವಾಸೋದ್ಯಮ ಇಲಾಖೆ ರಿವರ್ ರಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿಯ ಅನುದಾನದಡಿ ನಿರ್ಮಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ತಿಳಿಸಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ದುಬಾರೆ ರಿವರ್ ರಾಪ್ಟಿಂಗ್ ಅಸೋಸಿಯೇಷನ್, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚೆಟ್ಟಳ್ಳಿ NEWS DESK ಡಿ.3 : ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸಂಪರ್ಕ ರಸ್ತೆ ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಗ್ರಾಮಸ್ಥರ ಮನವಿಗೆ ಆಡಳಿತ ವ್ಯವಸ್ಥೆ ಸ್ಪಂದಿಸದ ಕಾರಣ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದಾಗಿ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ರಸ್ತೆಗೆ ಡಾಂಬರು ಹಾಕಲಾಗಿತ್ತು, ಅಲ್ಲದೆ ಕಾಂಕ್ರಿಟೀಕರಣ ಮಾಡಲಾಗಿತ್ತು. ಆದರೆ ಇದೀಗ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ನಡೆದಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕಾಂಗ್ರೆಸ್ ಆಡಳಿತ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲವೆಂದು ಅವರು ಆರೋಪಿಸಿದರು. ಕೂಡ್ಲೂರು ಸಂಪರ್ಕ ರಸ್ತೆಯ ಗುಂಡಿ ಮುಚ್ಚುವುದು ಮತ್ತು ಕಿರಿದಾದ ರಸ್ತೆ ಬದಿಗೆ ಮಣ್ಣು ಹಾಕುವ ಕಾರ್ಯಕ್ಕೆ ಚೆಟ್ಟಳ್ಳಿ ಸಹಕಾರ ಸಂಘ ಮುಂದಾಗಿದೆ ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದರು. ರಸ್ತೆ ಪರಿಶೀಲನೆ ಸಂದರ್ಭ ಸಹಕಾರ ಸಂಘದ ನಿರ್ದೇಶಕ ಬಟ್ಟೀರ ವೇಣು ಗೋಪಾಲ್…
ಮಡಿಕೇರಿ NEWS DESK ಡಿ.3 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಅವರ ನೇತೃತ್ವದಲ್ಲಿ ಜಿಲ್ಲೆಯ ಲಾರಿ, ಟ್ಯಾಕ್ಸಿ, ಸರಕು ವಾಹನದ ಮಾಲೀಕ, ಚಾಲಕರ ಸಭೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಿತು. ಯಾವುದೇ ರೀತಿಯ ಅಪಘಾತಗಳಿಗೆ ಅವಕಾಶ ನೀಡಬಾರದು, ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು, ಸಾರಿಗೆ ನಿಯಮ ಪಾಲಿಸಬೇಕು ಮತ್ತು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಪೊಲೀಸ್ ಅಧಿಕಾರಿಗಳು ಮಾಲೀಕ ಹಾಗೂ ಚಾಲಕರಲ್ಲಿ ಮನವಿ ಮಾಡಿದರು. ನಂತರ ಎಲ್ಲಾ ಸಂಚಾರಿ ನಿಯಮ ಪಾಲನೆ ಮಾಡುವ ಕುರಿತು ಸೂಕ್ತ ಸೂಚನೆಗಳನ್ನು ನೀಡಲಾಯಿತು. ಲಾರಿ ಮತ್ತು ಪಿಕ್ ಅಪ್ಗಳಲ್ಲಿ ಮರಳು, ಜಲ್ಲಿ-ಕಲ್ಲು ಅನ್ನು ತೆಗೆದುಕೊಂಡು ಹೋಗುವಾಗ ಕಡ್ಡಯವಾಗಿ ಟಾರ್ಪಲನ್ನು ಮುಚ್ಚಿರಬೇಕು. ಟಾರ್ಪಲನ್ನು ಮುಚ್ಚದೇ ತೆಗೆದುಕೊಂಡು ಹೋಗುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕರು ಭಾವಚಿತ್ರವನ್ನು ಕಳುಹಿಸಿ ದೂರು ನೀಡಿದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಟಿಂಬರ್ ಸಾಗಾಟ ಮಾಡುವ ವಾಹನಗಳಲ್ಲಿ ನಿಗಧಿಪಡಿಸಿದ ಭಾರಕ್ಕಿಂತ ಹೆಚ್ಚಿನ…






