ಲೇಖಕ: admin

ಮಡಿಕೇರಿ ಡಿ.19 NEWS DESK : ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್‍ಸೆಟ್) ಸಂಸ್ಥೆ,‌ ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ಮನೋವಿಜ್ಞಾನದಲ್ಲಿ ಎಂ.ಎ., ಪತ್ರಿಕೋದ್ಯಮದಲ್ಲಿ ಎಂ.ಎ., ಗ್ರಾಮೀಣಾಭಿವೃದ್ಧಿಯಲ್ಲಿ ಎಂ.ಎ., ಸಮಾಜಶಾಸ್ತ್ರದಲ್ಲಿ ಎಂ.ಎ., ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಎಂ.ಕಾಂ, ಬಿಎಸ್ಸಿ, ಎಂಎಸ್‍ಡಬ್ಲ್ಯು, ಬಿಬಿಎಂ, ಬಿಎ, ಬಿಎಸ್ಸಿ ಜೊತೆಗೆ ಬಿಇಡಿ ಅಥವಾ ಎಂಇಡಿ ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು. ಕಂಪ್ಯೂಟರ್‍ನಲ್ಲಿ ಎಂಎಸ್ ವರ್ಡ್, ಎಂಎಸ್ ಎಕ್ಸೆಲ್ ಹಾಗೂ ಎಂಎಸ್ ಪವರ್ ಪಾಯಿಂಟ್ ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.comಇಲ್ಲಿಗೆ ಡಿಸೆಂಬರ್, 28 ರೊಳಗೆ ಕಳುಹಿಸಬೇಕು. ತಿಂಗಳ ಸಂಬಳ ರೂ. 30 ಸಾವಿರ ಇದ್ದು, ಹೆಚ್ಚಿನ ಮಾಹಿತಿಗೆ…

Read More

ಕುಶಾಲನಗರ NEWS DESK ಡಿ.18 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ  ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ  ಡಿ.21 ಮತ್ತು 22 ರಂದು ( ಶನಿವಾರ ಮತ್ತು ಭಾನುವಾರದಂದು ) ಎರಡು ದಿನಗಳ ಕಾಲ ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ “*ರಾಷ್ಟ್ರೀಯ ಭಾವೈಕ್ಯತೆ ಬೆಸುಗೆ ಹಾಗೂ ಸ್ವಚ್ಛತೆಯೇ ಸೇವೆ*”ಎಂಬ ಧ್ಯೇಯ ವಾಕ್ಯದೊಂದಿಗೆ ಕೊಡಗು ಜಿಲ್ಲಾಮಟ್ಟದ‌ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ  ರ್‍ಯಾಲಿ ಏರ್ಪಡಿಸಲಾಗಿದೆ. ಕುಶಾಲನಗರ ಪತ್ರಕರ್ತರ ಸಂಘದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಕ್ಕಳ  ರ್‍ಯಾಲಿ ಕುರಿತು ಮಾಹಿತಿ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಡಿ.21 ರಂದು ಶನಿವಾರ ಮಧ್ಯಾಹ್ನ 2.00 ಗಂಟೆಗೆ  ನಡೆಯಲಿರುವ ಮಕ್ಕಳ ರ್‍ಯಾಲಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತರಾದ  ಪಿ.ಜಿ.ಆರ್.ಸಿಂಧ್ಯ ಸರ್…

Read More

ಮಡಿಕೇರಿ ಡಿ.18 NEWS DESK : ಅರಕಲಗೂಡು ನೋಡಲ್ ಕೇಂದ್ರ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ಯಸಳೂರು ಹಾಗೂ ಶನಿವಾರಸಂತೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲು ಉದ್ದೇಶಿಸಿದ್ದು, ಈ ದಿನದಂದು ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೋಗುವ 11 ಕೆವಿ ಗ್ರಾಮಾಂತರ ಮತ್ತು ಐಪಿ ಮಾರ್ಗಗಳಿಗೆ ಡಿಸೆಂಬರ್, 19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಶನಿವಾರಸಂತೆ, ಹಂಡ್ಲಿ, ಗೌಡಳ್ಳಿ, ಶುಂಠಿ, ಮಾದ್ರೆ, ಮಾದ್ರವಳ್ಳಿ, ಬಿಳಹ, ದುಂಡಳ್ಳಿ, ಬೆಸೂರು, ಕಟ್ಟೆಪುರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಪೊನ್ನಂಪೇಟೆ :: ಪೊನ್ನಂಪೇಟೆ 66/11 ಕೆವಿ ಹಾಗೂ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಡಿಸೆಂಬರ್, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಉಪ-ವಿಭಾಗ ವ್ಯಾಪ್ತಿಯ…

Read More

ಮಡಿಕೇರಿ ಡಿ.18 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೂರ್ನಾಡಿನ ಬಲಂಬೇರಿಯ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್‍ನಲ್ಲಿ 15ನೇ ವರ್ಷದ ಗನ್ ಕಾರ್ನಿವಲ್- ತೋಕ್ ನಮ್ಮೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಿ, ವಾಹನದಲ್ಲಿರಿಸಿ ದುಡಿಕೋಟ್ ಪಾಟ್‍ನೊಂದಿಗೆ ಮೆರವಣಿಗೆ ನಡೆಸಲಾಯಿತು. ನಂತರ ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಗಳು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕೊಡವತಿ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆರಂಭದಲ್ಲಿ ನಂದಿನೆರವಂಡ ನಿಶಾ ಅಚ್ಚಯ್ಯ ಅವರು ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ವಿರಚಿತ ತೋಕ್‍ಪಾಟ್ ಹಾಡಿದರು. ಎನ್.ಯು.ನಾಚಪ್ಪ ಅವರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಂದೂಕು/ತೋಕ್ ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆಯ ಹೆಗ್ಗುರುತಾಗಿದ್ದು, ಪೂರ್ವಕಾಲದ ಸಂಪ್ರದಾಯ, ಆಚರಣೆಗಳು ಮತ್ತು ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಹಾಗೂ ಸಂರಕ್ಷಿಸಲು ಸಿಎನ್‍ಸಿ ಪ್ರತಿವರ್ಷ ತೋಕ್ ನಮ್ಮೆಯನ್ನು ಸಾರ್ವಜನಿಕ ಗನ್…

Read More

ಮಡಿಕೇರಿ ಡಿ.18 NEWS DESK : ಕಾಡುಕೋಣ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನಯ್ಯಕೋಟೆ ಗ್ರಾಮದ ಆಬ್ಬೂರು ಎಂಬಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ರಾಜು.ಜೆ (52) ಹಾಗೂ ಬೋಜಿ ಜೆ.ಟಿ (48) ಗಾಯಗೊಂಡವರು. ಎಂದಿನಂತೆ ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಜಿ ಹಾಗೂ ರಾಜು ಮೇಲೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ. ಗಾಯಾಳುಗಳನ್ನು ಪಾಲಿಬೆಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಚೆನ್ನವೀರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಡಿ.18 NEWS DESK  : ನಗರದ ಪಿ.ಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ 112 ಸಹಾಯವಾಣಿಯ ಬಗ್ಗೆ ಅರಿವು ಕಾರ್ಯಕ್ರಮವು  ನಡೆಯಿತು. ಪೊಲೀಸ್ ಇಲಾಖೆಯ ಮಕ್ಕಳ ಕಲ್ಯಾಣಾಧಿಕಾರಿ ಸುಮತಿ ಅವರು ಮಕ್ಕಳ ಸಹಾಯವಣಿ 112 ರ ಬಗ್ಗೆ ಮಾಹಿತಿ ನೀಡಿದರು. ಯಾರೇ ಆದರೂ ಅಸಭ್ಯವಾಗಿ ನಡೆದುಕೊಂಡರೆ, ಮೊದಲಿಗೆ 112 ಅನ್ನು ಮೊಬೈಲ್‍ನಲ್ಲಿ ಡಯಲ್ ಮಾಡಿದ ನಂತರ 8ನೇ ನಂಬರ್ ಅಥವಾ ಸಂಖ್ಯೆಗೆ ಡಯಲ್ ಮಾಡಿ ಸಮಸ್ಯೆ ತಿಳಿಸಲು ಮನವರಿಕೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರು ಮಾತನಾಡಿ ಮಕ್ಕಳು ಅರಿತುಕೊಂಡಂತಹ ಮಾಹಿತಿಯನ್ನು ಹಾಗೂ ಶಾಲಾ ಉಪಹಾರ ಬಿಸಿಯೂಟ ಹಾಗೂ ಪಾಠಕ್ಕೆ ಸಂಬಂಧಿಸಿದಂತಹ ಸಮಸ್ಯೆಗಳ ವಿವರಗಳನ್ನು ಕೂಡ ನೀವು 112 ಸಹಾಯವಾಣಿಯ ಮೂಲಕ ತಿಳಿಸಬಹುದು ಎಂದರು. ಮಡಿಕೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮೋಹನ ಕುಮಾರಿ ಅವರು ಮಾತನಾಡಿ ಮಕ್ಕಳಿಗೆ ಅವಶ್ಯಕತೆ ಇದ್ದಲ್ಲಿ ಮಾತ್ರ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.…

Read More

ಮಡಿಕೇರಿ ಡಿ.18 NEWS DESK : ಅರಣ್ಯ ಹಾಗೂ ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದ ಮೂಲ ಜೇನುಕುರುಬ ಸಮುದಾಯಕ್ಕೆ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯುತ್ ಸಂಪರ್ಕ ಕಲ್ಪಿಸುವುದು ಮತ್ತಿತರ ಮೂಲ ಸೌಲಭ್ಯ ಕಲ್ಪಿಸುವ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ವೀಡಿಯೊ ಸಂವಾದ ನಡೆಯಿತು. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಮೂಲನಿವಾಸಿ ಜೇನುಕುರುಬ ಸಮುದಾಯದವರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕಿದ್ದು, ಮೂಲ ಸೌಲಭ್ಯ ಕಲ್ಪಿಸಲು ಬಾಕಿ ಇರುವ ಕುಟುಂಬಗಳಿಗೆ ತುರ್ತು ಕ್ರಮಕೈಗೊಳ್ಳುವಂತೆ ಆರ್.ಐಶ್ವರ್ಯ ಅವರು ಸೂಚಿಸಿದರು. ಈ ಬಗ್ಗೆ ಮಾತನಾಡಿದ ಸಮಗ್ರ ಗಿರಿಜನ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ ಅವರು ಜಿಲ್ಲೆಯಲ್ಲಿ 9 ಸಾವಿರಕ್ಕೂ ಹೆಚ್ಚು ಜೇನುಕುರುಬ ಸಮಾಜದವರು ಇದ್ದು, 3 ಸಾವಿರಕ್ಕೂ ಹೆಚ್ಚು ಜೇನುಕುರುಬ ಕುಟುಂಬಗಳು ಇವೆ. ಈಗಾಗಲೇ 8,710 ಜನರಿಗೆ ಆಧಾರ್ ಕಾಡ್‍ಣ್ನೀಡಲಾಗಿದೆ. ಉಳಿದಂತೆ 500…

Read More

ಮಡಿಕೇರಿ ಡಿ.18 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರರು, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ನೀರು ಘಂಟಿಗರು, ಜವಾನ, ಸ್ವಚ್ಛತಾ ಕೆಲಸಗಾರರನ್ನು ಏಕ ಕಾಲದಲ್ಲಿ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಟ ವೇತನವನ್ನು 31 ಸಾವಿರ ರೂ.ಗಳಿಗೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. ಕೊಡಗು ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಕೆಲಸ ಕಾರ್ಯಗಳಾಗದೆ ಜನ ಸಾಮಾನ್ಯರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಹುದ್ದೆ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ಗ್ರಾ.ಪಂ.ಗಳಲ್ಲಿ ಕೆಲಸ ಮಾಡಿ ನಿವೃತ್ತರಾದ ನೌಕರರ ಕುಟುಂಬಕ್ಕೆ ಪ್ರತಿ ತಿಂಗಳು 6 ಸಾವಿರ ರೂ. ಪಿಂಚಣಿ ನೀಡುವುದು, ನೀರು ಘಂಟಿಗಳನ್ನು ಮಲ್ಟಿ ಪರ್ಪಸ್ ಎಂದಿರುವುದನ್ನು ಕೈ ಬಿಟ್ಟು ನಿರ್ಧಿಷ್ಟಾವಧಿ ಕೆಲಸ ಎಂದು…

Read More

ಮಡಿಕೇರಿ ಡಿ.18 NEWS DESK : ಸಂಪೂರ್ಣವಾಗಿ ಹದಗೆಟ್ಟಿರುವ ಮತ್ತು ಸಂಚಾರಕ್ಕೆ ಯೋಗ್ಯವಲ್ಲದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು-ಕಾಲೂರು ಗ್ರಾಮಗಳ ನಡುವಿನ ಮುಖ್ಯ ರಸ್ತೆಯನ್ನು ತಕ್ಷಣ ಡಾಂಬರೀಕರಣಗೊಳಿಸುವಂತೆ ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಗಾಳಿಬೀಡು ರಸ್ತೆಯ 3ನೇ ಮೈಲ್ ಬಳಿ ಪ್ರತಿಭಟನೆ ನಡೆಸಿದರು. ಗಾಳಿಬೀಡು, ಕೋಳಿಗೂಡು, ವಣಚಲು, ಕಾಲೂರು, ಕೂಟುಹೊಳೆ, ಕೆ.ನಿಡುಗಣೆ ಮತ್ತು ಹೆಬ್ಬೆಟ್ಟಗೇರಿ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟನೆ ನಡೆಸಿ ಸರಕಾರ, ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಹಲವು ವರ್ಷಗಳಿಂದ ಗುಂಡಿ ಬಿದ್ದಿರುವ ರಸ್ತೆಯನ್ನು ದುರಸ್ತಿ ಪಡಿಸಿಲ್ಲ. ಸರಕಾರ, ಜಿಲ್ಲಾಡಳಿತ, ಶಾಸಕರು, ಸಂಬಂಧಿಸಿದ ಇಲಾಖೆಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಸೂಕ್ತ ಸ್ಪಂದನ ದೊರೆತ್ತಿಲ್ಲ, ಇದೀಗ ತೇಪೆ ಹಚ್ಚುವ ಕೆಲಸ ಮಾಡಲಾಗುತ್ತಿದ್ದು, ಇದಕ್ಕೆ ಗ್ರಾಮಸ್ಥರ ಒಪ್ಪಿಗೆ ಇಲ್ಲ. ಗ್ರಾಮೀಣ ರಸ್ತೆಯನ್ನು ಸಂಪೂರ್ಣ ಡಾಂಬರೀಕರಣಗೊಳಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ::: ಇಂಜಿನಿಯರ್ ತರಾಟೆಗೆ ::: ಪ್ರತಿಭಟನೆಯ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಲೋಕೋಪಯೋಗಿ ಇಲಾಖಾ ಸಹಾಯಕ ಕಾರ್ಯಪಾಲಕ ಅಭಿಯಂತರ…

Read More

ಸುಂಟಿಕೊಪ್ಪ,ಡಿ.18 NEWS DESK : ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಕಾವೇರಿ ನದಿ ಸ್ವಚ್ಚತೆಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಹಾಗೂ ವಿಜ್ಞಾನ ಸಮಾವೇಶದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಎ.ಶ್ರೀಶಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಕನ್ನಡ ನಾಡಿನ ಜೀವನದಿ ಮತ್ತು ತಮಿಳುನಾಡಿನ ಭಾಗ್ಯಲಕ್ಷ್ಮಿ ಎಂದು ಕರೆಸಿಕೊಂಡಿರುವ ಪವಿತ್ರ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವುದು ತೀರಾ ಗಂಭೀರ ವಿಚಾರವಾಗಿದೆ. ಕೃಷಿ ಮತ್ತು ಜೀವನಕ್ಕೆ ಆಧಾರವಾಗಿರುವ ನದಿಯನ್ನು ಕಲುಷಿತಗೊಳ್ಳದಂತೆ ನಾವೆಲ್ಲಾರೂ ಜಾಗೃತಿ ವಹಿಸುವುದು ಅತ್ಯವಶ್ಯವಾಗಿದೆ. ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಕಾವೇರಿ ನದಿ ಕಲುಷಿತವಾಗುತ್ತಿರುವ ಬಗ್ಗೆ ಗಮನಸೆಳೆದ ಶ್ರೀಶಾ ಅವರ ಪ್ರಯತ್ನ ಅಭಿನಂದನಾರ್ಹ ಎಂದು ವಿ.ಜಿ.ಲೋಕೇಶ್ ಹೇಳಿದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ಮಾತನಾಡಿ, ಎನ್.ಎ.ಶ್ರೀಶಾಳ…

Read More