ಮಡಿಕೇರಿ ಡಿ.18 NEWS DESK : ಕೊಡಗಿನ ಸಾಂಪ್ರದಾಯಿಕ ಸುಗ್ಗಿಹಬ್ಬ ಹುತ್ತರಿ ಹಬ್ಬವನ್ನು ಸುಂಟಿಕೊಪ್ಪ ಸಮೀಪದ ಪನ್ಯದ ಮಾಗುಲು ಐನ್ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮಾಗುಲು ವಸಂತ ಅವರ ಗದ್ದೆಯಲ್ಲಿ ಮಾಗುಲು ರವೀಂದ್ರ ಕದಿರನ್ನು ತೆಗೆದು ಅಯ್ಯಪ್ಪ ದೇವರ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ತಂದು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಧಾನ್ಯಲಕ್ಷ್ಮಿಯನ್ನು ಐನ್ ಮನೆಗೆ ತಂದು ವಿವಿಧ ಉಪಕರಣಗಳಿಗೆ ಕಟ್ಟಲಾಯಿತು. ಗದ್ದೆಯಿಂದ ತಂದ ಧಾನ್ಯಲಕ್ಷ್ಮಿಯ ಹೊಸ ಅಕ್ಕಿಯಿಂದ ಖಾದ್ಯ ತಯಾರಿಸಲಾಯಿತು. ಹಿರಿಯರು, ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಲೇಖಕ: admin
ಬೆಂಗಳೂರು ಡಿ.18 NEWS DESK : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಹಸ್ತಾಂತರಿಸಿದರು. ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು. ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ’ ಎಂದರು. ಈ ಸಂದರ್ಭ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ…
ವಿರಾಜಪೇಟೆ ಡಿ.18 NEWS DESK : ಕೊಡಗು ಬಲಿಜ ಸಮಾಜದ ವತಿಯಿಂದ 2023/24ನೇ ಶೈಕ್ಷಣಿಕ ಸಾಲಿನ ಎಸ್ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಸಾಧನೆ ಮಾಡಿರುವ ಬಲಿಜ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ. ಕೊಡಗು ಜಿಲ್ಲೆಯ ಬಲಿಜ ವಿದ್ಯಾರ್ಥಿಗಳು IAS/IPS ಪರೀಕ್ಷೆಗೆ ತರಬೇತಿ ಹೊಂದುತ್ತಿದ್ದಲ್ಲಿ ರೂ.50 ಸಾವಿರ ಶಿಷ್ಯ ವೇತನ ನೀಡಲು ಉದ್ದೇಶಿಸಿದ್ದು ಈಗಾಗಲೇ ಓರ್ವ ವಿದ್ಯಾರ್ಥಿನಿ ಇದರ ಲಾಭ ಹೊಂದಿಕೊಂಡಿದ್ದಾರೆ. ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.70ಕ್ಕಿಂತಲೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳು ಜ.20ಕ್ಕೂ ಮುನ್ನ ಅಂಕಪಟ್ಟಿ ಪ್ರತಿ, ವಿದ್ಯಾರ್ಥಿಯ ಆಧಾರ್ ಪ್ರತಿ ಹಾಗೂ ಅರ್ಜಿಯೊಂದಿಗೆ (ಭಾವಚಿತ್ರ ಸಹಿತ) ಟಿ.ಎಲ್.ಶ್ರೀನಿವಾಸ್, ಅಧ್ಯಕ್ಷರು, ಕೊಡಗು ಬಲಿಜ ಸಮಾಜ, 5ನೇ ವಿಭಾಗ ಗೋಣಿಕೊಪ್ಪಲು – 571213 ಇಲ್ಲಿಗೆ ಅಂಚೆ ಮೂಲಕ ಕಳಿಸಬಹುದು. ಹೆಚ್ಚಿನ ವಿವರಗಳಿಗೆ 9945454133 ಅಥವಾ 8050023422 ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಕೊಡಗು ಬಲಿಜ ಸಮಾಜದ ನಿಗಧಿತ ಅರ್ಜಿ ನಮೂನೆಯನ್ನು ಹೊಂದಿಕೊಂಡು, ಜಾತಿ ಪ್ರಮಾಣ ಪತ್ರದೊಂದಿಗೆ ಜ.20ಕ್ಕೂ ಮುನ್ನ…
ವಿರಾಜಪೇಟೆ ಡಿ.18 NEWS DESK : ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ ವಿದ್ಯಾರ್ಥಿಗಳ ಪದವಿ ಪೂರ್ವ ಕಾಲೇಜು ಶಿಕ್ಷಣಕ್ಕೆ ಸಂಸ್ಥೆಯ ವತಿಯಿಂದ ಸಹಕಾರ ನೀಡುವುದಾಗಿ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ತಿಳಿಸಿದರು. ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮೇಳದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಹೆಚ್ಚುಹೆಚ್ಚಾಗಿ ಮೊಬೈಲ್ ಲೋಕದಲ್ಲಿ ಕಳೆದು ಹೋಗುವ ಮೂಲಕ ಕಲೆ ಸೇರಿದಂತೆ ದೈಹಿಕ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಬೆನ್ನಿ ಜೋಸೆಫ್ ಮಾತನಾಡಿ, ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.95 ರಷ್ಟು ಅಂಕ ಪಡೆಯುವ ಯಾವುದೇ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ಘೋಷಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜಿನ…
ಸೋಮವಾರಪೇಟೆ ಡಿ.18 NEWS DESK : ಕೂತಿ ಗ್ರಾಮದಲ್ಲಿ ಸ್ಥಳೀಯರೇ ಶ್ರಮದಾನ ಮಾಡುವ ಮೂಲಕ ರಸ್ತೆ ಸರಿ ಪಡಿಸಿದರು. ಮುಖ್ಯ ರಸ್ತೆಯಿಂದ 11 ಮನೆಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನಗಳು ಸಂಚಾರಿಸಲು ಯೋಗ್ಯವಲ್ಲದಂತಾಗಿತ್ತು. ಈ ಹಿನ್ನೆಲೆ ಸ್ಥಳೀಯರೇ ತಮ್ಮ ಸ್ವಂತ ಖರ್ಚಿನಿಂದ ಸುಮಾರು 1ಕಿ.ಮೀ ರಸ್ತೆಗೆ ವೆಟ್ ಮಿಕ್ಸ್ ಹಾಕುವ ಮೂಲಕ ರಸ್ತೆ ಸರಿಪಡಿಸಿದರು. ಹಲವು ವರ್ಷಗಳಿಂದ ಪಂಚಾಯಿತಿ ಅಧಿಕಾರಿಗಳಿಗೆ, ಸಂಬಂಧ ಪಟ್ಟ ಕೂತಿ ವಾರ್ಡ್ ಸದಸ್ಯರಿಗೆ ರಸ್ತೆ ಸರಿಪಡಿಸುವಂತೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ, ಆದ್ದರಿಂದ ಗ್ರಾಮಸ್ಥರೇ ಶ್ರಮದಾನದ ಮೂಲಕ ರಸ್ತೆ ಸರಿಪಡಿಸಿಕೊಳ್ಳುತ್ತಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದರು. ಈ ಸಂದರ್ಭ ಸ್ಥಳೀಯರಾದ ಜಿತೇಂದ್ರ, ಬೋಪಯ್ಯ, ಅಶ್ವಥ್, ಅಶೋಕ್ ಸೇರಿದಂತೆ ಇತರರಿದ್ದರು.
ಕುಶಾಲನಗರ ಡಿ.18 NEWS DESK : ಸೈನಿಕ ಶಾಲೆ ಕೊಡಗಿನಲ್ಲಿ ಡಿ.13 ಮತ್ತು 14ರಂದು 2024-25ನೇ ಸಾಲಿನ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾ ಸ್ಪೂರ್ತಿ, ಸಹಿಷ್ಣುತೆಯೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಂಡು, ಗೆಲುವು ಮತ್ತು ಸೋಲಿನ ಆಚೆಗೆ ಕ್ರೀಡೆಗಳು ನೀಡುವ ಅಮೂಲ್ಯವಾದ ಪಾಠಗಳ ಮಹತ್ವವನ್ನು ಎಲ್ಲಾ ವಿದ್ಯಾರ್ಥಿಗಳು ಕಲಿಯಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಮನಃಪೂರ್ವಕವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮತ್ತು ಸೌಹಾರ್ದ ಕ್ರೀಡೆಯ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು. ಕ್ರೀಡಾ ಜ್ಯೋತಿ ರಿಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಕೆಡೆಟ್ ಸಾಹಿಲ್ ರಾಜ್, ಕೆಡೆಟ್ ಶಿವರಾಜ್, ಕೆಡೆಟ್ ವಿಠ್ಠಲ್ , ಕೆಡೆಟ್ ಅಫ್ತಾಬ್, ಕೆಡೆಟ್ ಸಾನಿಕಾ ಉದಯ್ ಮತ್ತು ಕೆಡೆಟ್ ಪ್ರಜ್ವಲ್ ಪಾಲ್ಗೊಂಡಿದ್ದರು. ಶಾಲೆಯ ಕ್ರೀಡಾ ನಾಯಕ ಕೆಡೆಟ್ ಸಾಹಿಲ್ ರಾಜ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಈ ಸಂದರ್ಭ ಕೆಡೆಟ್ ಸಾಹಿಲ್ ರಾಜ್ ಸ್ಪರ್ಧಾಳುಗಳಿಗೆ ಪ್ರಮಾಣ ವಚನ…
ವಿರಾಜಪೇಟೆ ಡಿ.18 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಪುತ್ತರಿ ಹಬ್ಬದವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಭಾಂಗಣದಲ್ಲಿ ಪ್ರಾರ್ಥನಾ ಗೀತೆ, ನುಡಿಮುತ್ತು ಹಾಗೂ ಸುದ್ದಿ ಸಮಾಚಾರ ಒಳಗೊಂಡ ಸಂಪೂರ್ಣ ಕಾರ್ಯಕ್ರಮವನ್ನು ಕೊಡವ ಭಾಷೆಯಲ್ಲಿ ಹಮ್ಮಿಕೊಳ್ಳಲಾಯಿತು. ಕೊಡವ ಭಾಷೆಯ ಪ್ರಾರ್ಥನಾ ಗೀತೆಯನ್ನು 10ನೇ ತರಗತಿ ವಿದ್ಯಾರ್ಥಿಗಳಾದ ಆಶ್ರಯ ಅಕ್ಕಮ್ಮ, ಮಾನ್ವಿ ಮುತ್ತಮ್ಮ, ಜಿ.ಎ.ದೇಚಮ್ಮ ಹಾಗೂ 9ನೇ ತರಗತಿಯ ವಿದ್ಯಾರ್ಥಿಯಾದ ಎಂ.ಜೆ.ಪೂರ್ವಿಕ ಹಾಡಿದರು. 8ನೇ ತರಗತಿಯ ಭೂಮಿಕ ಭೋಜಮ್ಮ ಕೊಡವ ನುಡಿಮುತ್ತು ಹಾಗೂ 9ನೇ ತರಗತಿಯ ವಿದ್ಯಾರ್ಥಿಯಾದ ಪಿ.ಸಿ.ಕಾಜಲ್ ಸುದ್ದಿ ಸಮಾಚಾರ ಓದಿದರು. ಸಹ ಶಿಕ್ಷಕಿ ವೀಣಾ ಪುತ್ತರಿ ಹಬ್ಬದ ವಿಶೇಷತೆಯನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು. ನಂತರ ಕೊಡಗಿನ ಜನಪದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಉಡುಗೆಯಲ್ಲಿ ತಾಳಕ್ಕೆ ತಕ್ಕಂತೆ ಉಮ್ಮತಾಟ್ ನೃತ್ಯವನ್ನು 8ನೇ ತರಗತಿಯ ವಿದ್ಯಾರ್ಥಿಗಳಾದ ಎನ್.ಎನ್.ನ್ನಮ್ಮ, ಜಿ.ಟಿ.ಮುತ್ತಮ್ಮ, ಎ.ಎಂ.ರಿಷಿಕಾ, 7ನೇ ತರಗತಿಯ ವಿದ್ಯಾರ್ಥಿಗಳಾದ ಸ್ಪೂರ್ತಿ, ಪಿ.ಬಿ.ದೇಚಮ್ಮ, ಕೆ.ಎಂ.ದೇಚಮ್ಮ, ನಿ.ಶಿಯಾನ, ಕೆ.ಬಿ.ಪ್ರಿಶ, ಎ.ಪಿ.ರಿಷ, ಸಿ.ಎ.ದಿತಿ, ಟಿ.ಎಂ.ಡಿಯಾನ, ಪಿ.ಎಸ್.ಪ್ರಾಧಿನ್ಯ ಪ್ರದರ್ಶಿಸಿದರು. 10ನೇ ತರಗತಿಯ…
ನಾಪೋಕ್ಲು ಡಿ.18 NEWS DESK : ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ಜರುಗಿತು. ಕೇರಳದ ಪ್ರಖ್ಯಾತ ಮಡೆಯನ್ ಅವರಿಂದ ದೇವರನ್ನು ಮಲೆ ಇಳಿಸಲಾಯಿತು. ನಂತರ ಶ್ರೀ ಪೊನ್ನು ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಬಳಿಕ ಗುಳಿಗ, ಕುಟ್ಟಿಚಾತ ದೇವರ ವೆಳ್ಳಾಟಂ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭ ವಿವಿಧ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಪೊನ್ನುಮುತ್ತಪ್ಪ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಎ.ಕೆ.ಚಂದ್ರನ್, ಕಾರ್ಯದರ್ಶಿ ರಾಜೀವ, ಸಮಿತಿ ಸದಸ್ಯ ಶ್ರೀಧರ್, ವಿಜಯ್, ದೇವಾಲಯದ ಪೂಜಾರಿ ಹರಿದಾಸ್, ಸಮಿತಿ ಸದಸ್ಯರು ಹಾಗೂ ಗ್ರಾಮದ ಪ್ರಮುಖರು, ಸುತ್ತಮುತ್ತಲಿನ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.18 NEWS DESK : ಇಗ್ಗುತ್ತಪ್ಪ ದೇವಡ ಪುತ್ತರಿ ನಮ್ಮೆ ನಾಪೋಕ್ಲುವಿನ ಬಿದ್ದಾಟಂಡ ವಾಡೆಯ ನೂರಂಬಾಡ ನಾಡ್ಮಂದ್ ನಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ನಾಪೋಕ್ಲು, ಬೇತು ಮತ್ತು ಕೋಕೇರಿ ಗ್ರಾಮಗಳನ್ನು ಒಳಗೊಂಡಂತೆ ನಡೆಯುವ ಐತಿಹಾಸಿಕ ನೂರಂಬಾಡ ಕೋಲ್ ಮಂದ್ನಲ್ಲಿ ಪುತ್ತರಿ ಕೋಲಾಟಕ್ಕೂ ಮುನ್ನ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಸಂಪ್ರದಾಯದಂತೆ ತಕ್ಕ ಮುಖ್ಯಸ್ಥರು ದೇವರ ತಿರುವಾಭರಣದೊಂದಿಗೆ ಕಾಪಾಳ ಕಳಿ ವೇಷಧಾರಿಗಳು ಮತ್ತು ಕೊಂಬು ಕೊಟ್ಟ್ ವಾಲಗದೊಂದಿಗೆ ಮೆರವಣಿಗೆಯ ಮೂಲಕ ನೂರಂಬಾಡ ಮಂದ್ನತ್ತ ಹೆಜ್ಜೆ ಹಾಕಿದರು. ಗ್ರಾಮದ ತಕ್ಕಮುಖ್ಯಸ್ಥರನ್ನು ಬಿದ್ದಾಟಂಡ ಕುಟುಂಬದ ತಕ್ಕಮುಖ್ಯಸ್ಥರು ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ವಾಗತಿಸಿದರು. ನಂತರ ಮಂದಿನಲ್ಲಿರುವ ಮರದ ಕೆಳಗೆ ದೇವರ ತಿರುವಾಭರಣ ಇಟ್ಟು ಪ್ರಾರ್ಥನೆ ಸಲ್ಲಿಸಿಲಾಯಿತು. ಬಳಿಕ ನಾಪೋಕ್ಲು ಗ್ರಾಮದವರು, ಕೊಳಕೇರಿಯ ಗ್ರಾಮಸ್ಥರನ್ನು ಬಿದ್ದಾಟಂಡ ವಾಡೆ ನಾಡ್ ಮಂದಿಗೆ ಬರಮಾಡಿ ಕೊಳ್ಳಲಾಯಿತು. ಈ ಸಂದರ್ಭ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ನೀಡಿ ಬಿದ್ದಾಟಂಡ ವಾಡೆ ನಾಡ್ ಮಂದಿನಲ್ಲಿ ಮೂರು ಗ್ರಾಮದ…
ನಾಪೋಕ್ಲು ಡಿ.18 NEWS DESK : ಧಾನ್ಯಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ಪುತ್ತರಿ ಹಬ್ಬವನ್ನು ನಾಲ್ಕುನಾಡು ವ್ಯಾಪ್ತಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಾಂಪ್ರದಾಯಿಕ ಆಚರಣೆಗಳೊಂದಿಗೆ ವಿವಿಧ ದೇವಾಲಯ, ಐನ್ ಮನೆ, ಕೊಡವ ಸಮಾಜಗಳಲ್ಲಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ನಾಡಿನಲ್ಲೆಡೆ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಅಮ್ಮಂಗೇರಿಯ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿಬೊಳಕ್ ಹಿಡಿದು ದೇವಾಲಯಕ್ಕೆ ಪ್ರದಕ್ಷಣೆ ಮಾಡಿ ಆಗಮಿಸಿದರು. ನಂತರ ದುಡಿಕೊಟ್ ಪಾಟ್ನ್ನು ಕುಡಿಯರ ಮುತ್ತಪ್ಪ, ಜೀವನ್ ದೇವಯ್ಯ ಮತ್ತು ಬಳಗ ನೆರವೇರಿಸಿದರು. ದೇವರ ಸನ್ನಿಧಿಯಲ್ಲಿ ಪೊಗೇರ ಉಲ್ಲಾಸ್ ನಾಡಿನ ಮಳೆ, ಬೆಲೆ, ಸುಭಿಕ್ಷಗಾಗಿ ಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅಮ್ಮಂಗೇರಿಯ ಜ್ಯೋತಿಷ್ಯರು ಈ ಹಿಂದೆ ನಿರ್ಧರಿಸಿದಂತೆ ಅಂಬಲವಾಸಿ ಸುಬ್ರಮಣಿ ಅವರು ಬೆಳ್ಳಿಯ ಬಿಂದಿಗೆಯೊಂದಿಗೆ ಗದ್ದೆ ಕಡೆ ಸಾಗಿ ಪೊಗೇರ ಅಪ್ಪಣ್ಣ ಅವರ ಗದ್ದೆಯಲ್ಲಿ ಕದಿರಿಗೆ ಪೂಜೆ ನೆರವೇರಿಸಿ ಕದಿರನ್ನು…






