ಸುಂಟಿಕೊಪ್ಪ ಜ.15 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಡ್ಡೆಹೊಸೂರು ವಲಯದ ಕೊಡಗರಹಳ್ಳಿ ಕಾರ್ಯಕ್ಷೇತ್ರದ ಸ್ವ ಸಹಾಯ ಸಂಘಗಳ ಸದಸ್ಯರು ಸ್ವಚ್ಛತಾ ಶ್ರಮದಾನ ನಡೆಸಿದರು. ಗುಡ್ಡೆಹೊಸೂರು ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗರಹಳ್ಳಿ ಕಾರ್ಯಕ್ಷೇತ್ರದ ವತಿಯಿಂದ ಶೃದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಡಂಡೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಬೆಳೆದಿದ್ದ ಗಿಡ ಗಂಟಿಗಳನ್ನು ಕಡಿದು ಇನ್ನಿತರರ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಿದರು. ದೇವಾಲಯ ಸಮಿತಿಯ ಕಾರ್ಯದರ್ಶಿ ಶಿವನ್, ವಲಯ ಮೇಲ್ವಿಚಾರಕ ಯತೀಶ್, ಒಕ್ಕೂಟದ ಅಧ್ಯಕ್ಷೆ ಸುಜಾತ, ಜೊತೆ ಕಾರ್ಯದರ್ಶಿ ಶೋಭಾ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗರಹಳ್ಳಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹೇಮಾವತಿ, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಇದ್ದರು.
ಲೇಖಕ: admin
ಚೆಟ್ಟಳ್ಳಿ NEWS DESK ಜ.14 :ರಾಜಸ್ಥಾನದ ಸುತ್ತಲಿನ ಮರಳಿನ ಗುಡ್ಡಾಗಾಡಿನ ಪ್ರದೇಶದಲ್ಲಿ ಅತೀ ವೇಗದ 4×4 ರ್ಯಾಲಿ ವಾಹನಗಳ ಸಾಹಸಮಯ ರ್ಯಾಲಿ ಕ್ರೀಡೆಯ ಸ್ಪೆಷಲ್ ಬಿಲ್ಡ್ ವೆಹಿಕಲ್ ಕ್ಯಾಟಗರಿಯಲ್ಲಿ ಕೊಡಗಿನ ಅಮ್ಮತ್ತಿಯ ಉದ್ದಪಂಡ ಚೇತನ್ ಚಂಗಪ್ಪ ಪ್ರಥಮ ಸ್ಥಾನದ ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಬಿಕಾನೆಲ್ ನಲ್ಲಿ ರಾಜ್ಯಸ್ಥಾನ ಮೋಟಾರ್ ಸ್ಪೋಟ್ಸ್ ಕಬ್ಲ್ ಮೂರು ದಿನಗಳ ಕಾಲ ಅಯೋಜಿಸಿದ ಡ್ಯೂನ್ ಕ್ರಾಸ್ 5.0 ರ್ಯಾಲಿಯಲ್ಲಿ C1 C2 C3 ಹಾಗು C4 ಕ್ಯಾಟಗರಿಯನ್ನು ಆಯೋಜಿಸಲಾಗಿತ್ತು. 2.0 ಲೀಟರ್ ನ ವಾಹನದಲ್ಲಿ ಅಮ್ಮತ್ತಿಯ ಉದ್ದಪಂಡ ಚೇತನ್ ಚಂಗಪ್ಪ ಹಾಗೂ ಅರುಣಾಚಲ್ ಪ್ರದೇಶದ ಉಜ್ವಲ್ ನಮ್ಯೂಮ್ ಸ್ಪೆಷಲ್ ಬಿಲ್ಡ್ ವೆಹಿಕಲ್ ಕ್ಯಾಟಗರಿಯಲ್ಲಿ ಭಾಗವಹಿಸಿದರು. ಹೆಚ್ಚಿನ ಚಳಿಗಾಳಿಯಲ್ಲಿ ಮರಳಿನ ಧೂಳಿನ ನಡುವೆ ಅತೀ ವೇಗದಲ್ಲಿ ಧೈರ್ಯ ಹಾಗೂ ಅತ್ಯುತ್ತಮ ಸಾಹಸ ಪ್ರದರ್ಶನದ ಮೂಲಕ 10 ಹಂತಗಳಲ್ಲಿ ಡ್ರೈವರ್ ಹಾಗೂ ಕೊ-ಡ್ರೈವರಾಗಿದ್ದ ಚೇತನ್ ಚಂಗಪ್ಪ ಜೋಡಿ ಅತೀ ಕಡಿಮೆ ಸಮಯದಲ್ಲಿ ಅಂತರವನ್ನು ಮುಗಿಸುವ ಮೂಲಕ ಪ್ರಥಮ ಸ್ಥಾನದ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.…
ಮಡಿಕೇರಿ NEWS DESK ಜ.14 : ಶೋಷಿತ ಸಮೂಹಕ್ಕೆ ಸೇರಿದ ವಿದ್ಯಾರ್ಥಿಗಳು ಸಮಾಜದ ವಿವಿಧ ಸ್ತರಗಳಲ್ಲಿ ಅಧಿಕಾರವನ್ನು ಪಡೆಯಲು ಮತ್ತು ಸರಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಲು ಆಸಕ್ತರಾಗಬೇಕು. ಅಂತಹ ಹುದ್ದೆಗಳ ಮೂಲಕ ನೂರಾರು ಮಂದಿಗೆ ನೆರವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆಸ್ಪತ್ರೆಯ ಉಪಮುಖ್ಯ ವೈದ್ಯಾಧಿಕಾರಿ ಡಾ.ಹೆಚ್.ವಿ.ದೇವದಾಸ್ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಮೈತ್ರಿ ಭವನದಲ್ಲಿ ನಡೆದ 35ನೇ ವರ್ಷದ ಕಾರ್ಯಕ್ರಮ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಮತ್ತು ಸಂಸ್ಕಾರದ ಮೂಲಕ ಉತ್ತಮ ಬದುಕನ್ನು ರೂಪಿಸಿಕೊಂಡು ಈ ಸಮಾಜಕ್ಕೆ ತಮ್ಮಿಂದಾದ ಕೊಡುಗೆಯನ್ನು ನೀಡಲು ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು. ವಿದ್ಯಾರ್ಥಿಗಳು ಶಿಕ್ಷಣದ ಬಳಿಕ ಹುದ್ದೆಗಳನ್ನು ಪಡೆದುಕೊಂಡು ತಮ್ಮ ಗಳಿಕೆಯ ಒಂದಂಶವನ್ನು ಶಿಕ್ಷಣ ಪಡೆಯಲು ನೆರವು ಬಯಸುವವರಿಗೆ ನೀಡುವಂತಾಗಬೇಕು ಕರೆ ನೀಡಿದರು. ಕಳೆದ ಹಲವಾರು ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮಹತ್ತರ ಕಾರ್ಯ ಮಾಡುತ್ತಿದೆ.…
ಮಡಿಕೇರಿ NEWS DESK ಜ.14 : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಗ್ರಾಮದ ಕೂಪಾಡಿ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ. ಹಾಡಿಯ ನಿವಾಸಿ ಜೇನುಕುರುಬರ ತಮ್ಮು (64) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಅವಿವಾಹಿತರಾಗಿರುವ ಇವರು ಕುರಿ ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಭಾನುವಾರ ಎಂದಿನಂತೆ ಕುರಿ ಮೇಯಿಸಲೆಂದು ಹೋದವರು ಮರಳಿ ಹಾಡಿಗೆ ಬಂದಿರಲಿಲ್ಲ. ಸುತ್ತಮುತ್ತಲೆಲ್ಲ ಹುಡುಕಾಟ ನಡೆಸಿದರೂ ತಮ್ಮು ಅವರ ಸುಳಿವು ದೊರೆತ್ತಿರಲಿಲ್ಲ. ಇಂದು ಕೂಪಾಡಿ ಹಾಡಿಯಿಂದ ಸ್ವಲ್ಪ ದೂರದ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಕಾಡಾನೆ ದಾಳಿಯಿಂದ ಆದ ಸಾವು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಂಜೆ ಸ್ಥಳ ಪರಿಶೀಲನೆ ನಡೆಸಿ ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುಂಟಿಕೊಪ್ಪ ಜ.14 NEWS DESK : ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಪೊಂಗಲ್ (ಮಕರಸಂಕ್ರಾಂತಿ) ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಮುಂಜಾನೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು ಪೂರ್ಣಕುಂಭ ಕಳಸಕ್ಕೆ ವಿಶೇಷ ಪೂಜೆಯನ್ನು ನೇರವೇರಿಸಿದರು. ದೆವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ನಾದಸ್ವರದೊಂದಿಗೆ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆಯನ್ನು ಸಲ್ಲಿಸಿ ನಂತರ ಶ್ರೀ ಚಾಮುಂಡೇಶ್ವರಿ, ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರು ಪೊಂಗಲ್ಮಾಡಿ ಹಬ್ಬವನ್ನು ಸಂಭ್ರಮಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಪೊಂಗಲ್ ಆಚರಣೆಯಲ್ಲಿ ಸದಸ್ಯರಾದ ಎಸ್.ಸುರೇಶ್, ಎಸ್.ಸುಂದರೇಶ, ಎಂ.ರಾಜಾ, ಎಂ.ಗಣೇಶ, ರಾಜ, ಜಗದೀಶ, ವೆಂಕಟೇಶ, ಗಣೇಶ, ಸುಭ್ರಮಣಿ, ಮುರುಗೇಶ, ಗುಣಶೇಖರ, ಏಳುಮಲೈ ಹಾಗೂ ಶರವಣ ಇತರರು ಹಾಜರಿದ್ದರು.
ಮಡಿಕೇರಿ ಜ.14 NEWS DESK : ಕೊಡವರ ಹಕ್ಕುಗಳ ಪರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಎಲ್ಲೂ ಶಾಂತಿಭಂಗವಾಗುವ ವರ್ತನೆಯನ್ನು ತೋರಿಲ್ಲ. ಆದ್ದರಿಂದ ವಿನಾಕಾರಣ ಹೂಡಲಾಗಿರುವ ಪ್ರಕರಣವನ್ನು ತಕ್ಷಣ ರದ್ದು ಮಾಡಬೇಕೆಂದು ಬೇಂಗ್ ನಾಡ್ ಕೊಡವ ಸಮಾಜ ಮತ್ತು ಬೇಂಗ್ನಾಡ್ ಸ್ಪೋರ್ಟ್ಸ್ ಐಂಡ್ ರಿಕ್ರಿಯೇಷನ್ ಕ್ಲಬ್ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಂಗ್ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ಬಿ.ಗಣಪತಿ ಪ್ರಕರಣ ದಾಖಲಿಸಿರುವುದು ಖಂಡನೀಯ, ಒಂದು ವೇಳೆ ನಾಚಪ್ಪ ಅವರನ್ನು ಬಂಧಿಸಿದರೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಅತ್ಯಂತ ಸೂಕ್ಷ್ಮ ಕೊಡವ ಜನಾಂಗ, ಕೊಡವರ ಭೂಮಿ, ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಮಂದ್, ಮಾನಿ, ದೇವನೆಲೆಯ ರಕ್ಷಣೆಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾನೂನಿನ ಚೌಕಟ್ಟಿನಡಿ ಎನ್.ಯು.ನಾಚಪ್ಪ ಅವರು ಶಾಂತಿಯುತವಾಗಿ ಹೋರಾಟವನ್ನು ನಡೆಸುತ್ತಾ ಬಂದಿದ್ದಾರೆ. ಕೊಡವರ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದಾರೆಯೇ ಹೊರತು ಬೇರೆ ಯಾವುದೇ ಜನಾಂಗವನ್ನು ವಿರೋಧಿಸಿಲ್ಲ, ನಿಂದಿಸಿಲ್ಲ ಮತ್ತು ಇತರರ ಆಚಾರ…
ಮಡಿಕೇರಿ ಜ.14 NEWS DESK : ಅತ್ಯಂತ ಸಂಪದ್ಭರಿತವಾದ ‘ಅರೆಭಾಷೆ’ ಮತ್ತು ಸಂಸ್ಕೃತಿಯ ಸಂರಕ್ಷಣೆಯೊಂದಿಗೆ, ಅದನ್ನು ಮತ್ತಷ್ಟು ಸುಪುಷ್ಟವಾಗಿ ಬೆಳೆಸುವ ನಿಟ್ಟಿನ ಕಾರ್ಯಗಳಿಗೆ ಸಮುದಾಯ ಬಾಂಧವರು ಹೆಚ್ಚಿನ ಸಹಕಾರ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕರೆ ನೀಡಿದರು. ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ‘ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಅರೆ ಭಾಷೆ’ ಸಂಸ್ಕೃತಿಯ ಬೆಳವಣಿಗೆಯ ನೆಲೆಯಲ್ಲಿ ಅರೆಭಾಷೆ ಅಕಾಡೆಮಿ ಕಾರ್ಯನಿರ್ವಹಿಸುವಂತದ್ದು. ಹೀಗಿದ್ದೂ ಅರೆಭಾಷೆಯನ್ನಾಡುವ ಹೆಚ್ಚ್ಚಿನವರು ಗೌಡ ಸಮೂಹಕ್ಕೆ ಸೇರಿದವರಾಗಿದ್ದಾರೆ. ಈ ನೆಲೆಯಲ್ಲಿ ಅಕಾಡೆಮಿಯು ಕೊಡಗು ಗೌಡ ಸಂಘದ ಅರೆಭಾಷಾ ಚಟುವಟಿಕೆಗಳಿಗೆ ತನ್ನ ಸಹಕಾರವನ್ನು ನೀಡುತ್ತಿದೆಯೆಂದು ತಿಳಿಸಿದರು. ಅರೆಭಾಷಾ ಅಭಿವೃದ್ಧಿಗೆ ಅಕಾಡೆಮಿ ರಚನೆಯಾಗುವುದಕ್ಕೆ ಎಷ್ಟೋ ವರ್ಷಗಳ ಹಿಂದೆಯೇ ಕೊಡಗು ಗೌಡ ವಿದ್ಯಾ ಸಂಘ ಸ್ಥಾಪನೆಯಾಗಿರುವುದಲ್ಲದೆ, ಮಕ್ಕಳ ಶಿಕ್ಷಣ…
ಕುಶಾಲನಗರ ಜ.14 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ, ಕುಶಾಲನಗರ ಪುರಸಭೆ, ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಟ್ರಸ್ಟ್, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಉದ್ಘಾಟಿಸಿ ಶುಭ ಕೋರಿದರು. 9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರ ಡಿ ವೈ.ಎಸ್.ಪಿ.ಆರ್.ವಿ ಗಂಗಾಧರಪ್ಪ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಗಂಗಾಧರಪ್ಪ, ಸ್ವಚ್ಛತೆ ಪ್ರತಿಯೊಬ್ಬರ ಮನಸ್ಸು ಹಾಗೂ ಮನೆಮನೆಗಳಿಂದ ಆರಂಭವಾಗಬೇಕು ಪ್ರತಿಯೊಬ್ಬರಿಗೂ ಸ್ವಚ್ಛತೆಯ ಅರಿವು ಇರಬೇಕು. ಆ ಮೂಲಕ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.…
ಮಡಿಕೇರಿ ಜ.14 NEWS DESK : ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಗ್ರಾಮೀಣ ಕ್ರೀಡೆಗಳಿಗೆ ಸಂಬಂಧಿಸಿದ ಇಲಾಖೆ ವತಿಯಿಂದ ಅನುದಾನ ಮತ್ತು ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೆಗೋಟೆಯ ಶ್ರೀ ಬಸವೇಶ್ವರ ಯುವಕರ ಬಳಗದ ವತಿಯಿಂದ ಹಳೆಗೋಟೆ ಗ್ರಾಮದಲ್ಲಿ ನಡೆದ ಪ್ರಥಮ ವರ್ಷದ ರಾಜ್ಯ ಮಟ್ಟದ ಕರುಗಳ ಚಕ್ಕಡಿಯ ಚಕ್ರದ ಪಾಯಿಂಟ್ ಗಾಡಿ ಓಟದ ಸ್ಪರ್ಧೆಯನ್ನು ಉದ್ಘಾಟಿಸಿ ಮಾತಾನಾಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತಾನಾಡಿ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಹೆಬ್ಬಾಲೆ, ತೊರೆನೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಹೈನುಗಾರಿಕೆಗೆ ಒತ್ತು ನೀಡುವುದರ ಜೊತೆಯಲ್ಲಿ ಇಂತಹ ಗ್ರಾಮೀಣ ಪ್ರದೇಶದ ಪ್ರಮುಖ ಕ್ರೀಡೆಯಾದ ಗಾಡಿ ಓಟದ ಸ್ಪರ್ಧೆ ಗ್ರಾಮೀಣ ಯುವಕರಿಗೆ ಕ್ರೀಡಾ ಪ್ರೋತ್ಸಾಹ ನೀಡಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ…
ಮಡಿಕೇರಿ ಜ.14 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 35ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಜ.13ರ ಮುಂಜಾನೆಯಿಂದಲೇ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಶೇಕ ಇತ್ಯಾದಿ ಸೇವೆ ನಡೆಯಿತು. ಇಂದು ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಉಷಾಪೂಜೆ, ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರ ಪೂಜೆ, ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ಜರುಗಿತು. ನಂತರ ಶ್ರೀ ಕುಟ್ಟಿಚಾತನ್ ವೆಳ್ಳಾಟಂ, ಮುತ್ತಪ್ಪ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಹಾಗೂ ಶ್ರೀ ಅಯ್ಯಪ್ಪ ದೇವರ ಅಲಂಕಾರ ಪೂಜೆ, ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಸಂಜೆ 6ರಿಂದ ಭಜನೆ, 7ರಿಂದ ಅಲಂಕಾರ ಪೂಜೆ ಮತ್ತು…






