ಲೇಖಕ: admin

ನಾಪೋಕ್ಲು ಜ.7 NEWS DESK  : ಸಂಪಾಜೆಯ ಶ್ರೀ ಆಂಜನೇಯ ಫ್ರೆಂಡ್ಸ್ ನೇತೃತ್ವದಲ್ಲಿ ಹೊಸ ವರ್ಷದ ಪ್ರಯುಕ್ತ ಆಯೋಜಿಸಲಾಗಿದ್ದ ಹೊನಲು ಬೆಳಗಿನ ಪುರುಷರ ಲೆವೆಲ್ ಹಾಗೂ ಗ್ರಿಪ್ ಮಾದರಿಯ 525 ಕೆಜಿ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯ ಫುಲ್ ಗ್ರಿಪ್ ಪಂದ್ಯಾಟದಲ್ಲಿ ಮಣಿಕಂಠ ಉಜಿರೆ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಸ್ವಾಮಿ ಕೊರಗಜ್ಜ ಪಾಲಡ್ಕ ತಂಡ ದ್ವಿತೀಯ ಸ್ಥಾನ ಗಳಿಸಿದರೆ, ಮಣಿಕಂಠ ಉಜಿರೆ-ಬಿ ತಂಡ ತೃತೀಯ ಹಾಗೂ ಚತುರ್ಥ ಸ್ಥಾನವನ್ನು ಸಂಪಾಜೆಯ ವಿಷ್ಣು ಬಳಗ ತಂಡ ಪಡೆದು ಕೊಂಡಿತು. ಸಿಂಗಲ್ ಗ್ರಿಪ್ 525 ಕೆ.ಜಿ ವಿಭಾಗದಲ್ಲಿ ಬಂಟ್ವಾಳದ ಶ್ರೀ ದುರ್ಗಾ ಫ್ರೆಂಡ್ಸ್ ಕೊರಗಟ್ಟೆ ತಂಡ ಪ್ರಥಮ ಸ್ಥಾನ ಗಳಿಸಿತು. ಸ್ವಾಮಿ ಕೊರಗಜ್ಜ ಪಾಲಡ್ಕ ತಂಡ ದ್ವಿತೀಯ ಸ್ಥಾನಕ್ಕೆ ಭಾಜನವಾದರೆಶ್ರೀ ಸಾಯಿ ಫ್ರೆಂಡ್ಸ್ ಮೊಗರು ಬಂದರು ತೃತೀಯ ಸ್ಥಾನ ಪಡೆಯಿತು. ಬಂಟ್ವಾಳದ ಶ್ರೀ ದುರ್ಗಾ ಫ್ರೆಂಡ್ಸ್ ಕೊರಗಟ್ಟೆ ತಂಡ ಚತುರ್ಥ ಸ್ಥಾನ ಗಳಿಸಿತು.ಲೆವೆಲ್ ಮಾದರಿ 525 ಕೆ.ಜಿ ವಿಭಾಗದಲ್ಲಿ ಹೆಚ್ ಎಂಟಿಸಿ…

Read More

ಮಡಿಕೇರಿ ಜ.7 NEWS DESK : ಕೊಡಗಿನ ‘ಜಮ್ಮಾಬಾಣೆ’ ಸಮಸ್ಯೆಯನ್ನು ಬಗೆಹರಿಸಲು 2013ರಲ್ಲಿ ರಾಷ್ಟ್ರಪತಿಗಳ ಅಂಕಿತವಾಗಿ ಬಂದ ವಿಧೇಯಕ ಕಾನೂನಾಗಿ ಜಾರಿಗೆ ಬರುವ ಹಂತದಲ್ಲಿ ರಿಟ್ ಪಿಟೀಷನ್ ಸಲ್ಲಿಕೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ 2024 ರಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ಆದೇಶದಲ್ಲಿ ಜಮ್ಮಾಬಾಣೆ ಸಮಸ್ಯೆಗೆ ಪರಿಹಾರ ದೊರಕಿದೆ. ಹೀಗಿದ್ದೂ ರಾಜ್ಯದ ಕಾಂಗ್ರೆಸ್ ಸರಕಾರ ಇದನ್ನು ಜಾರಿಗೆ ತರಲು ಯಾಕೆ ಮುಂದಾಗಲಿಲ್ಲವೆಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮಾಬಾಣೆ ಸಮಸ್ಯೆಯ ಪರಿಹಾರಕ್ಕೆ ಬಿಜೆಪಿ ಸರಕಾರದ ಅವಧಿಯಲ್ಲಿ ಏನನ್ನೂ ಮಾಡಿಲ್ಲ. ಇದೀಗ ನಾವೇ ಎಲ್ಲವನ್ನೂ ಮಾಡುತ್ತಿರುವುದಾಗಿ ಕಾಂಗ್ರೆಸ್ಸಿಗರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯ ಉಚ್ಚ ನ್ಯಾಯಾಲಯ ತನ್ನ ಆದೇಶದ ಪಾಲನೆಗೆ ಒಂದು ತಿಂಗಳ ಅವಧಿಯನ್ನು ನೀಡಿತ್ತು. ಈ ಅವಧಿಯಲ್ಲಿ ಕಾಂಗ್ರೆಸ್ ಸರಕಾರ ಜಾರಿ ಮಾಡಿಲ್ಲವೆಂದು ಟೀಕಿಸಿದರು. ರಾಜ್ಯ ಉಚ್ಚ ನ್ಯಾಯಾಲಯದ ಆದೇಶದಲ್ಲಿ ಸೂಚಿಸಿರುವ ಕ್ರಮಗಳನನ್ನು ಅನುಷ್ಠಾನಕ್ಕೆ ತಂದರೆ ಜಮ್ಮಾಬಾಣೆ ಸಮಸ್ಯೆ ಇರುವುದಿಲ್ಲ. ಹೀಗಿದ್ದೂ ಸರಕಾರ ಕಂದಾಯ ತಿದ್ದುಪಡಿ ವಿಧೇಯಕವನ್ನು…

Read More

ಮಡಿಕೇರಿ ಜ.6 NEWS DESK : ಕೇರಳದ ಬೈತೂರಿನ ಉತ್ಸವಕ್ಕೆ ಕೊಡಗಿನ ಭಕ್ತ ಜನರನ್ನು ಆಹ್ವಾನಿಸಲು ಬೈತೂರು ದೇವಾಲಯದಿಂದ ಕೋಮರತಚ್ಚನ್ ಜ.9 ರವರೆಗೆ ಕೊಡಗಿನ ವಿವಿಧ ದೇವಾಲಯಗಳು ಹಾಗೂ ಐನ್ ಮನೆಗೆ ಭೇಟಿ ನೀಡಲಿದ್ದಾರೆ. ಜ.7 ರಂದು  ಬೆಳಿಗ್ಗೆ 10 ಗಂಟೆಯಿಂದ 10.30 ಗಂಟೆಯವರೆಗೆ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಕೋಟೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ಕೋರಿದೆ.

Read More

ಮಡಿಕೇರಿ ಜ.6 NEWS DESK : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರನ್ನು ಅಭಿನಂದಿಸಲಾಯಿತು.  ಜಿಲ್ಲಾಧಿಕಾರಿ ಕಚೇರಿ ಹಾಗೂ ಎಸ್ಪಿ ಕಚೇರಿಗೆ ಭೇಟಿ ನೀಡಿದ ಘಟಕದ ಪ್ರಮುಖರು ಹೂಗುಚ್ಚ ನೀಡಿ ಸ್ವಾಗತಿಸಿದರು. ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮತ್ತು ಜಿಲ್ಲಾ ಕೆಡಿಪಿ ಸದಸ್ಯೆ ಸುನೀತ ಮಂಜುನಾಥ್,  ಪುರಸಭೆ ಮಾಜಿ ನಾಮನಿರ್ದೇಶಿತ ಸದಸ್ಯೆ ಪದ್ಮಾವತಿ, ಲೇಖಕಿ ಎಂ.ಎ.ರುಬೀನಾ ಮತ್ತು  ಪಕ್ಷದ ಮುಖಂಡರು ಇದ್ದರು. ಇದೇ ಸಂದರ್ಭ ಲೇಖಕಿ ಎಂ.ಎ.ರುಬೀನಾ ಅವರು ತಮ್ಮ ಕೃತಿ ಕಣ್ಣಾ ಮುಚ್ಚಾಲೆ ಪುಸ್ತಕವನ್ನು ಹಸ್ತಾಂತರಿಸಿದರು.

Read More

ವಿರಾಜಪೇಟೆ ಜ.6 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಮಾಯಮುಡಿ ವಲಯದ ಪೊನ್ನಪ್ಪಸಂತೆ ಕಾರ್ಯಕ್ಷೇತ್ರದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿಯಲ್ಲಿ ನೆಲ, ಜಲ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ನಡೆಯಿತು. ಶ್ರೀ ಶಕ್ತಿ ಸಮುದಾಯ ಭವನ ಪೊನ್ನಪ್ಪ ಸಂತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಪ್ರೌಢಶಾಲಾ ಶಿಕ್ಷಕ ಸುಬ್ಬಮ್ಮ ಟಿ.ಆರ್ ಮಾತನಾಡಿ ನೆಲ ಜಲ ಸಂರಕ್ಷಣೆ ಎಂದರೆ ಭೂಮಿಯೊಳಗಿನ ನೀರಿನ ಸಂಪನ್ಮೂಲಗಳನ್ನು ರಕ್ಷಿಸುವುದು ಮತ್ತು ಸುಸ್ಥಿರವಾಗಿ ಬಳಸುವುದು ಇದು ನೀರಿನ ಮೂಲಗಳನ್ನು ಪುನ ಭರ್ತಿ ನೀರಿನ ಮಾಲಿನ್ಯವನ್ನು ತಡೆಗಟ್ಟಲು ಮತ್ತು ನೀರಿನ ಬಳಕೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ಒಳಗೊಂಡಿರಬೇಕು. ನೆಲ ಜಲ ಸಂರಕ್ಷಣೆಯ ಮಾರ್ಗಗಳನ್ನು ಹೊಂದಿರಬೇಕು ಮಳೆ ನೀರು ಸಂಗ್ರಹಣೆ ನೀರಿನ ಬಳಕೆ ಕಡಿಮೆ ಮಾಡುವುದು ನೀರಿನ ಮಾಲಿನ್ಯವನ್ನು ತಡೆಗಟ್ಟಬೇಕು ಎಂದು ಮಾಹಿತಿ ನೀಡಿದರು. ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಸಖಿ ಪ್ರಿಯ ಅವರು ಮಾತನಾಡಿ, ಪಂಚಾಯತ್ ವ್ಯಾಪ್ತಿಯ ಕೃಷಿಕರಿಗೆ ಜಾಬ್…

Read More

ಸುಂಟಿಕೊಪ್ಪ ಜ.6 NEWS DESK : ಸ್ವಸ್ಥ ವಿಶೇಷ ಚೇತನ ಶಾಲೆಯಲ್ಲಿ ಗರಗಂದೂರಿನ ರಾಯಲ್ ಫಾರ್ಮರ್ ಕ್ಲಬ್ ವತಿಯಿಂದ ಸ್ವಸ್ಥ ವಿಶೇಷ ಚೇತನ ಶಾಲೆಗೆ ಬಟ್ಟೆ ಬೀರನ್ನು ಕೊಡುಗೆಯಾಗಿ ನೀಡಿದರು. ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕಳೆದ 3 ತಿಂಗಳ ಹಿಂದೆ ಗರಗಂದೂರು ಎ ಯುವಕರ ತಂಡವು ರಾಯಲ್ ಫಾರ್ಮರ್ ಕ್ಲಬ್ ರಚಿಸಿಕೊಂಡು ಸಂಸ್ಥೆಯ ವತಿಯಿಂದ ಪ್ರಥಮ ಕಾರ್ಯಕ್ರಮವಾಗಿ ಸ್ವಸ್ಥ ಭೇಟಿ ನೀಡಿ ಶಾಲೆಗೆ ಬೀರು ನೀಡಿದರು. ನಂತರ ವಿಶೇಷ ಚೇತನ ಮಕ್ಕಳಿಗೆ ಭೋಜನವನ್ನು ನೀಡಿದರು. ಸಂಸ್ಥೆಯ ಅಧ್ಯಕ್ಷ ವಿ.ಸಂತೋಷ್, ಉಪಾಧ್ಯಕ್ಷ ಸುಧಾಕರ್, ಕಾರ್ಯದರ್ಶಿ, ಸಂತೋಷ್ ಸೇರಿದಂತೆ ಸಂಸ್ಥೆಯ ನಿರ್ದೇಶಕರುಗಳು ಇದ್ದರು.

Read More

ಮಡಿಕೇರಿ ಜ.6 NEWS DESK : ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿ ಕರೆಯಲಾಗಿದ್ದು, ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ದಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.  ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖವನ್ನು ಬರೆದು ಜನವರಿ, 23 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಕಳುಹಿಸಿಕೊಡಲು ಕೋರಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು. ಫೆಲೋಶಿಪ್‍ಗಾಗಿ ಸಾಮಾನ್ಯ-1, ಪರಿಶಿಷ್ಟ ಜಾತಿ-5 ಮತ್ತು ಪರಿಶಿಷ್ಟ ಪಂಗಡ-9 ಮಂದಿಗಳು ಸೇರಿದಂತೆ 15 ಮಂದಿಗಾಗಿ ಅಭ್ಯರ್ಥಿಗಳಿಂದ ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ https://janapada.karnataka.gov.in ನಿಂದ ಮಾಹಿತಿ ಪಡೆಯಬಹುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್…

Read More

ಮಡಿಕೇರಿ ಜ.6 NEWS DESK : ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕೆಆರ್‍ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೊನ್ನಣ್ಣ ಅವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ. ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ ಆಶಯದೊಂದಿಗೆ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಸಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರಿಂದ ಮತ್ತಷ್ಟು ಕೋರಿಕೆಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಪ್ರಮುಖರಾದ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಕೊಡಗನ ತೀರ್ಥ ಪ್ರಸಾದ್, ಹನೀಫ್, ಬೆಟ್ಟಗೇರಿ…

Read More

ಮಡಿಕೇರಿ ಜ.6 NEWS DESK : ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 2026ರ ಜ.5 ರಿಂದ ಜಾರಿಗೆ ಬರುವಂತೆ ಕ.ರಾ.ರ.ಸಾ.ನಿಗಮ ಪುತ್ತೂರು ವಿಭಾಗದ ವತಿಯಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆಯಿಂದ ಬೆಂಗಳೂರು ಹಾಗೂ ಮೈಸೂರಿಗೆ ಕಾರ್ಯಾಚರಿಸುವ ರಾಜಹಂಸ ಹಾಗೂ ನಾನ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರವನ್ನು ಕಡಿಮೆ ಮಾಡಲಾಗಿದೆ ಎಂದು ಕರಾರಸಾನಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ.ಶ್ರೀಹರಿಬಾಬು ಅವರು ತಿಳಿಸಿದ್ದಾರೆ. ಕುಶಾಲನಗರ-ಬೆಂಗಳೂರು ನಾನ್ ಎಸಿ ಸ್ಲೀಪರ್ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.780, ಪ್ರಸ್ತುತ ನಿಗದಿಪಡಿಸಿದ ಪ್ರಯಾಣ ದರ ರೂ.700, ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣ ದರ ರೂ.680, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಕುಶಾಲನಗರ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣ ದರ ರೂ.620, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.500, ವಿರಾಜಪೇಟೆ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.620, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಗೋಣಿಕೊಪ್ಪ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ…

Read More

ಮಡಿಕೇರಿ ಜ.6 NEWS DESK :  ಪೊನ್ನಂಪೇಟೆ ಹಾಗೂ ಗೋಣಿಕೊಪ್ಪ ಠಾಣೆಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ  ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಿದರು. ಇದೇ ಸಂದರ್ಭ ಸಿಬ್ಬಂದಿ ವಸತಿ ಗೃಹ ಸಮುಚ್ಚಯಕ್ಕೆ ಭೇಟಿ ನೀಡಿ ಸಿಬ್ಬಂದಿಗಳ ಕುಂದು ಕೊರತೆ, ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Read More