ಲೇಖಕ: admin

ಮಡಿಕೇರಿ  NEWS DESK ಫೆ.10:-ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣ ಜಿಲ್ಲಾ ಮಟ್ಟದ “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಸತೀಶ್ ಕುಮಾರ್ ಅವರು ಗಿಡಕ್ಕೆ ನೀರುರೆರೆಯುವ ಮೂಲಕ ಉದ್ಘಾಟಿಸಿದರು. ನಂತರ ಮಕ್ಕಳಿಗೆ ಜಂತು ಹುಳು ನಿವಾರಕ ಮಾತ್ರೆಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ”ವು 1-19 ವರ್ಷ ವಯಸ್ಸಿನ ಮಕ್ಕಳಿಗೆ ಜಂತುಹುಳು ನಿರ್ಮೂಲನೆ ಮಾಡಿ ಅವರನ್ನು ಹುಳು ಮುಕ್ತರನ್ನಾಗಿಸುವುದು, ಇದರಿಂದ ಮಕ್ಕಳಲ್ಲಿ ಬರಬಹುದಾದ ಅಪೌಷ್ಠಿಕತೆ, ರಕ್ತಹೀನತೆ, ಆಯಾಸ, ಹಸಿವಾಗದಿರುವುದು, ಕಲಿಕೆಯಲ್ಲಿ ನಿರಾಸಕ್ತಿ, ದೈಹಿಕ, ಮಾನಸಿಕ ಬೆಳವಣಿಗೆಯ ಕುಂಠಿತವನ್ನು ತಡೆಯುತ್ತದೆ ಎಂದು ತಿಳಿಸಿದರು. ಅಲ್ಲದೇ ದೇಶಾದ್ಯಂತ ಫೆಬ್ರವರಿ, 10 ರಂದು “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಈ ದಿನ ಮಾತ್ರೆ ತೆಗೆದುಕೊಳ್ಳಲಾಗದ ಮಕ್ಕಳಿಗೆ ಫೆಬ್ರವರಿ, 16 ರಂದು ಮಾಪ್‍ಅಪ್ ಡೇ ಕಾರ್ಯಕ್ರಮ ನಡೆಸುತ್ತಿದ್ದು, ಎಲ್ಲಾ…

Read More

ಮಡಿಕೇರಿ NEWS DESK ಫೆ.10 : ಮಡಿಕೇರಿ ತಾಲ್ಲೂಕಿನ ಅರೆಕಾಡ್ ಹೊಸ್ಕೇರಿಯಲ್ಲಿ ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ‘ಕೊಡವ ಭವನ’ದ ಉದ್ಘಾಟನಾ ಸಮಾರಂಭ ಫೆ.14 ರಂದು ನಡೆಯಲಿದೆ. ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ‘ಕೊಡವ ಭವನ’ವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ಹಾಗೂ ಮೈಸೂರು, ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ…

Read More

ಮಡಿಕೇರಿ NEWS DESK ಫೆ.10 : ಆರೋಗ್ಯ ರಕ್ಷಣೆೆ ಎನ್ನುವುದು ಕೇವಲ ಯೋಜನೆಯಾಗದೆ, ಪ್ರತಿಯೊಬ್ಬರ ಮೂಲಭೂತ ಹಕ್ಕಾಗಬೇಕು ಎನ್ನುವ ಪ್ರಮುಖ ವಿಷಯವನ್ನು ಮುಂದಿಟ್ಟುಕೊಂಡು ಬುಡಕಟ್ಟು ಕಾರ್ಮಿಕರ ಸಂಘ ಮತ್ತು ಚಿಂತಾಮಣಿಯ ಬೇರು ಬೆವರು ಸಾಂಸ್ಕೃತಿಕ ವೇದಿಕೆ ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”ವನ್ನು ನಡೆಸಿತು. ರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರಮುಖರು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇರು ಬೆವರು ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಸೌರಭ್ ಪಲ್ಲಿ ಚಂದ್ರಶೇಖರ್ ಆರೋಗ್ಯ ಹಕ್ಕಿನ ಜಾಥಾವನ್ನು ಇದೇ ಫೆ.2ರಂದು ಆರಂಭಿಸಲಾಗಿದ್ದು, ಈಗಾಗಲೆ 12 ಜಿಲ್ಲೆಗಳಲ್ಲಿ ಪೂರ್ಣಗೊಳಿಸಲಾಗಿದೆ. ಇಂದು ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘಟನೆಯೊಂದಿಗೆ ನಗರದಲ್ಲಿ ಜಾಥಾ ನಡೆಸಿದ್ದು, ಅಭಿಯಾನದ ಸಮಾರೋಪ ಫೆ.17 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದರು. ಸAವಿಧಾನದ ಮೂಲಭೂತ ಹಕ್ಕುಗಳಲ್ಲಿ ಎಲ್ಲರಿಗೂ ಜೀವಿಸುವ ಹಕ್ಕನ್ನು ಒದಗಿಸಲಾಗಿದೆ. ಜೀವಿಸುವುದು ಎಂದರೆ ಆರೋಗ್ಯಯುತವಾದ…

Read More

ಮಡಿಕೇರಿ NEWS DESK  ಫೆ.10 : ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದಲ್ಲಿ ಇದೇ ಪ್ರಥಮ ಬಾರಿಗೆ ಏ.2ರಿಂದ 4ರವರೆಗೆ ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”ಯನ್ನು ಆಯೋಜಿಸಲಾಗಿದೆ ಎಂದು ನಮ್ಮೆಯ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಂಡಂಗಾಲ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ, ಕರ್ನಾಟಕ ಕಬಡ್ಡಿ ಫೆಡರೇಷನ್ ನಿಯಮಾವಳಿಯಂತೆ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಸುಮಾರು 50 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಕಂಡಂಗಾಲ ಶಾಲಾ ಮೈದಾನದಲ್ಲಿ ಅಳವಡಿಸುವ ಮೂರು ಮ್ಯಾಟ್‌ಗಳಲ್ಲಿ ನಾಕ್ ಔಟ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಪ್ರತಿನಿತ್ಯ ಸುಮಾರು 15ರಿಂದ 20 ಪಂದ್ಯಗಳು ನಡೆಯಲಿದ್ದು, ಪಂದ್ಯಾವಳಿಯ ತಾಂತ್ರಿಕ ಸಮಿತಿಯಲ್ಲಿ ಕಬಡ್ಡಿ ಫೆಡರೇಷನ್‌ನ ತೀರ್ಪುಗಾರರು ಇರುತ್ತಾರೆ. ಕಬಡ್ಡಿ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶದಿಂದ ಪಂದ್ಯಾವಳಿಗೆ ಹೆಸರು ನೋಂದಾಯಿಸಿಕೊಳ್ಳುವ ಮೊದಲ ಹತ್ತು ತಂಡಗಳಿಗೆ ವಿಶೇಷ ನೆನಪಿನ ಕಾಣಿಕೆಯನ್ನು ನೀಡಲಾಗುತ್ತದೆ. ಪಂದ್ಯಾವಳಿಗೆ ಬಾಳೆಲೆಯ ಮಾಚಂಗಡ ತಂಡ ಪ್ರಥಮ ತಂಡವಾಗಿ ಮತ್ತು ಬಲ್ಯಮಂಡೂರುವಿನ ದೇಯಂಡ…

Read More

ಮಡಿಕೇರಿ NEWS DESK ಫೆ.10 : ಕಳೆದ 6 ವರ್ಷಗಳಲ್ಲಿ ಕಳ್ಳತನವಾಗಿದ್ದ ಸುಮಾರು 104 ಮೊಬೈಲ್ ಫೋನ್ ಗಳನ್ನು ಅವುಗಳ ವಾರಸುದಾರರಿಗೆ ಕೊಡಗು ಜಿಲ್ಲಾ ಪೊಲೀಸ್ ಇಂದು ಹಸ್ತಾಂತರಿಸಿತು. ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಕಳ್ಳತನವಾಗಿದ್ದ 104 ಮೊಬೈಲ್ ಫೋನ್ ಗಳ ಮೌಲ್ಯ ಒಟ್ಟು 11 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. 2020ರಿಂದ 2025ರವರೆಗಿನ ಮೊಬೈಲ್ ಫೋನ್ ಕಳವು ಪ್ರಕರಣಗಳು ಇದಾಗಿದ್ದು, ಕೇರಳ ಮತ್ತು ತಮಿಳುನಾಡು ರಾಜ್ಯಗಳಿದಂಲೂ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು ಮತ್ತು ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಿಇಐಆರ್ ಪೋರ್ಟ್ ಮೂಲಕ ಮೊಬೈಲ್‌ಗಳ ಲೊಕೇಶನ್ ಆಧರಿಸಿ 2026ರ ಜನವರಿ ತಿಂಗಳಿನಲ್ಲಿ ಈ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೊಡಗು ಸೈಬರ್ ಕ್ರೆöÊಂ ಪೊಲೀಸರ ಕಾರ್ಯ ಶ್ಲಾಘನೀಯವೆಂದು ಎಸ್.ಪಿ. ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ಹಾಜರಾಗಲು ಸಾಧ್ಯವಾಗದವರು ದೂರು ದಾಖಲಾಗಿರುವ ಪೊಲೀಸ್ ಠಾಣೆಗಳ…

Read More

ಬೆಂಗಳೂರು ಫೆ.10 NEWS DESK :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ…

Read More

ಮಡಿಕೇರಿ ಫೆ.10 NEWS DESK :  ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ (ಬೆಸ್ತರ್)ಬುಂಡ್, ಬೈಲಪತ್ತರ್, ಬೈರಾಗಿ(ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ-ಜೋಶಿ-ಗೋಂದಳಿ, ಚಾರ, ಚಿತ್ರಕಶಿ-ಜೋಶಿ, ದರ್ ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ ಮುರ್ಗ (ಬುರ್ ಬುರುಚ), ಗರಡಿ, ಘಿಸಡಿ, ಗೊಲ್ಲ, ಗೊಂದಳಿ, ಗೋಪಲ್, ಹೆಳವ, ಹಾವ್ ಗಾರ(ಹಾವಾಡಿಗರ್), ಜೋಗಿ, ಜೋಶಿ ಸಾದಾ ಜೋಶಿ, ಕಾಶಿಕಪಾಡಿ, ಕಟಬು, ಕೆಲ್‍ಕಾರಿ, ಕಿಳ್ಳೆಕ್ಯಾತಸ್, ಕೊಲಾತಿ, ಮಸನಿಯ ಯೋಗಿ,…

Read More

ಮಡಿಕೇರಿ NEWS DESK  ಫೆ.10 : ಕಾರುಗುಂದದ ಚೇರಂಬಾಣೆ ಗೌಡ ಸಮಾಜ ಹಾಗೂ ಚೇರಂಬಾಣೆ ಗೌಡ ಯುವ ವೇದಿಕೆಯ ವತಿಯಿಂದ ಫೆ.15 ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ ನಡೆಯಲಿದೆ. ಇದೇ ಏಪ್ರಿಲ್ ತಿಂಗಳಿನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಕೂಡ ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಂಬಾಣೆ ಗೌಡ ಯುವ ವೇದಿಕೆಯ ಅಧ್ಯಕ್ಷ ಪಾರೆಮಜಲು ಪ್ರದೀಪ್ ಹಾಗೂ ಕಾರ್ಯದರ್ಶಿ ಯಶವಂತ್ ಕೇಟೋಳಿ ಕ್ಯಾರಂಬೋರ್ಡ್ ಕ್ರೀಡಾಕೂಟ ಗೌಡ ಜನಾಂಗಗಳಿಗೆ ಸೀಮಿತವಾಗಿದ್ದು, ಡಬಲ್ಸ್ ಮತ್ತು ಸಿಂಗಲ್ಸ್ ವಿಭಾಗದಲ್ಲಿ ನಡೆಯಲಿದೆ. 15 ವರ್ಷದೊಳಗಿನ ಮಕ್ಕಳು ಹಾಗೂ 15 ವರ್ಷ ಮೇಲ್ಪಟ್ಟವರಿಗಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಡಬಲ್ಸ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ 10 ಸಾವಿರ ರೂ ಮತ್ತು ದ್ವಿತೀಯ 5 ಸಾವಿರ ರೂ. ನೀಡಲಾಗುತ್ತದೆ. ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ 5 ಸಾವಿರ ರೂ. ಮತ್ತು ದ್ವಿತೀಯ 2,500 ರೂ. ನೀಡಲಾಗುವುದು ಎಂದರು. ಕಾರುಗುಂದ ಗೌಡ ಸಮಾಜದಲ್ಲಿ ನಡೆಯುವ ಕ್ರೀಡಾಕೂಟವನ್ನು ಬೆಳಿಗ್ಗೆ 9…

Read More

ಮಡಿಕೇರಿ ಫೆ.10 NEWS DESK : ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎ ನಲ್ಲಿ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಒಕ್ಕಲಿಗ…

Read More

ಮಡಿಕೇರಿ ಫೆ.10 NEWS DESK : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 205-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಅರ್ಜಿ ಸ್ವೀಕೃತಿ; ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನವನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ,…

Read More