ನಾಪೋಕ್ಲು ಡಿ.17 NEWS DESK : ಮೂರ್ನಾಡಿನ ಆಪ್ತಮಿತ್ರ ಬಳಗದ ವತಿಯಿಂದ ಫೆ.8 ರಂದು ಮೂರ್ನಾಡಿನಲ್ಲಿ ನಡೆಯುವ ಎರಡನೇ ವರ್ಷದ ಯಕ್ಷೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಮೂರ್ನಾಡು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಯ ಕುರಿತು ಚರ್ಚಿಸಲಾಯಿತು. ಅಂದು ಸಂಜೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಹನುಮಗಿರಿ ಮೇಳದವರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಗ್ರಾಮಸ್ಥರ ಸಹಕಾರ ಕೋರಲಾಯಿತು. ಈ ಸಂದರ್ಭ ಆಪ್ತಮಿತ್ರ ಬಳಗದ ಸದಸ್ಯರುಗಳಾದ ಕುಶನ್ ರೈ, ವಿಶ್ವನಾಥ್, ಜಯಂತ್, ಪುರುಷೋತ್ತಮ್, ಗಿರೀಶ್ ರೈ, ಚಿನ್ನು, ಅಶ್ವತ್ ರೈ, ಚಂದನ್, ಪುರುಷೋತ್ತಮ್ ಕುಲಾಲ್, ಸಜೀವ, ಮೋಹನ್, ಜಿತಿನ್, ವಿನಯ್, ಚಂದ್ರಶೇಖರ್ ಹೊದ್ದೂರು, ಚಂದ್ರಶೇಖರ್ ಕುಲಾಲ್, ತನ್ಮಯ್, ಧ್ಯಾನಿಕ್, ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ನಾಪೋಕ್ಲು ಡಿ.17 NEWS DESK : ನರಿಯಂದಡ ಗ್ರಾಮದ ಎಡಪಾಲಕೇರಿ ಅಯ್ಯಪ್ಪ ದೇವಾಲಯದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ, ಮಹಾಪೂಜೆ, ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು. ಹಲವು ವ್ರತದಾರಿ ಅಯ್ಯಪ್ಪ ಭಕ್ತರು ದೇವರನ್ನು ಸ್ತುತಿಸಿ ಹಾಡಿ ತಮ್ಮ ಸೇವೆಯನ್ನು ನೆರವೇರಿಸಿದರು. ಭಕ್ತಾದಿಗಳು ವಿಶೇಷ ಹರಕೆ, ಸೇವೆಗಳನ್ನು ಸಮರ್ಪಿಸಿದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಅಯ್ಯಪ್ಪ ದೇವಾಲಯದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್, ಕಾರ್ಯದರ್ಶಿ ಪೊಕ್ಕುಳಂಡ್ರ ಅಭಿಲಾಷ್, ಉಪಾಧ್ಯಕ್ಷ ಪೊಕ್ಕುಳಂಡ್ರ ಸೂರಜ್, ಗೌರವ ಅಧ್ಯಕ್ಷ ತೋಟಂಬೈಲ್ ಅನಂತ್ ಕುಮಾರ್, ಆಡಳಿತ ಮಂಡಳಿ ಸದಸ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಹಬ್ಬದ ಪ್ರಯುಕ್ತ ದೇವಾಲಯದ ಆವರಣ ವಿಶೇಷ ಅಲಂಕಾರದಿಂದ ಕಂಗೊಳಿಸುತ್ತಿತ್ತು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಡಿ.17 NEWS DESK : ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಆಳ್ವಾರ್ ಶಿಕ್ಷಣ ಸಂಸ್ಥೆಯಲ್ಲಿ ಡಿ.10 ರಿಂದ 15 ರವರೆಗೆ 6 ದಿನಗಳ ಕಾಲ ನಡೆದ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಶಿಬಿರದಲ್ಲಿ ಕೊಡಗು ಜಿಲ್ಲೆಯಿಂದ ನಾಪೋಕ್ಲು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕಿ ಸುಸ್ಮಿತ ದಳ ನಾಯಕಿಯಾಗಿ ಭಾಗವಹಿಸಿದ್ದರು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಈ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆಯ ಪಿ.ಆರ್.ಒ.ಆದ ಸ್ಕೌಟ್ಸ್ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ.ಪ್ರೇಮಕುಮಾರ್ ಭಾಗವಹಿಸಿದ್ದರು. ಶಿಬಿರದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಗೈಡ್ಸ್ ಕ್ಯಾಪ್ಟನ್ ಸುಶ್ಮಿತ, ಸ್ಕೌಟ್ಸ್ ವಿಭಾಗದಿಂದ ಲಿತೇಶ್, ಮನ್ವಿತ್, ಪ್ರೀತೇಶ್, ಗೌತಮ್, ಕಾರ್ತಿಕ್ ಹಾಗೂ ಗೈಡ್ಸ್ ವಿಭಾಗದಿಂದ ತೀರ್ಥ, ಅದಿತಿ, ಪ್ರಿಯನ್ಸಿ, ಅನುಶ್ರೇಯ,…
ಪುತ್ತೂರು ಡಿ.17 NEWS DESK : ಕಲಿಕೆಯ ಜತೆಯಲ್ಲಿ ಉದ್ಯೋಗಕ್ಕೋ, ಉದ್ಯಮಕ್ಕೋ ಪೂರಕವಾದ ಕೌಶಲ್ಯವನ್ನು ಹೊಂದಿದ್ದರೆ ಮಾತ್ರ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ಅಸ್ತಿತ್ವವನ್ನು ತೋರಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಬಂಟ್ವಾಳ ತಾಲೂಕಿನ ಪೇರಮೊಗರುವಿನಲ್ಲಿರುವ ಜಿಕೆ ಇಂಡಸ್ಟ್ರೀಸ್ನ ಮಾಲೀಕ ಅಜಯ್ ಕೃಷ್ಣ.ಕೆ ಸಲಹೆ ನೀಡಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತಾಡಿದರು. ಮೊದಲಿಗೆ ಗುರಿಯನ್ನು ನಿರ್ಧರಿಸಿ ಅದಕ್ಕೆ ಬೇಕಾದ ತಾಂತ್ರಿಕತೆ, ಸಂವಹನ, ಸಮಯ ನಿರ್ವಹನೆ, ಸೃಜನಶಿಲತೆಯನ್ನು ಬೆಳೆಸಿಕೊಂಡು ಅದನ್ನು ಬೇಕಾದ ಕಡೆ ಪ್ರದರ್ಶಿಸುವ ಸಾಮರ್ಥ್ಯವನ್ನು ಗಳಿಸಿಕೊಂಡರೆ ಉನ್ನತ ಸ್ಥಾನಕ್ಕೆ ಏರುವುದು ಕಷ್ಟವೇನಲ್ಲ ಎಂದು ನುಡಿದರು. ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್.ಬಿ ಮಾತನಾಡಿ ವಿಸಿಇಟಿ ಯಲ್ಲಿ ಕಲಿಕೆಗಾಗಿ ಸೇರಿದ್ದೀರಿ ಅದರ ವಿಸ್ತೃತ ರೂಪ ವಿಶನ್, ಕರೇಜ್, ಎಜುಕೇಶನ್…
ವಿರಾಜಪೇಟೆ ಡಿ.17 NEWS DESK : ತ್ರಿವೇಣಿ ಶಾಲೆಯಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಎರಡನೇ ತರಗತಿಯ ಶ್ರೀನಿತ್ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ, ಮೂರನೇ ತರಗತಿಯ ಶಿಖಾ ಮುತ್ತಮ್ಮ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ಎರಡನೇ ತರಗತಿಯ ವಿ.ಆದ್ಯ ಭಕ್ತಿಗೀತೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ರವೀಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಡಿ.17 NEWS DESK : ಕೃಷಿ ಮಾಡುತ್ತಿರುವ ಸಿ ಆ್ಯಂಡ್ ಡಿ ಜಾಗಕ್ಕೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಡಿ.20ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಿರುವ ರೈತರ ಅಹೋರಾತ್ರಿ ಪ್ರತಿಭಟನೆಗೆ ಪೂರ್ವಭಾವಿ ಸಭೆ ಒಕ್ಕಲಿಗರ ಸಮುದಾಯಭವನದಲ್ಲಿ ನಡೆಯಿತು. ತಾಲ್ಲೂಕಿನ ಗ್ರಾಮಗಳಿಂದ 65 ಬಸ್ಗಳಲ್ಲಿ ರೈತರು ಪ್ರತಿಭಟನೆಗೆ ತೆರಳಲಿದ್ದಾರೆ. ಬೆಳಿಗ್ಗೆ 8.30ಕ್ಕೆ ಕಕ್ಕೆಹೊಳೆ ಜಂಕ್ಷನ್ನಿಂದ ಎಲ್ಲಾ ಬಸ್ಗಳು ಹೊರಡಲಿದ್ದು, ಕುಶಾಲನಗರ , ಸುಂಠಿಕೊಪ್ಪ ಮಾರ್ಗವಾಗಿ 10.30ಕ್ಕೆ ಸುದರ್ಶನ ಸರ್ಕಲ್ ತಲುಪಲಿವೆ. ಅಲ್ಲಿಂದ ಮೆರವಣಿಗೆ ನಡೆಯಲಿದ್ದು ಗಾಂಧಿ ಮೈದಾನದಲ್ಲಿ ಧರಣಿ ನಡೆಯಲಿದೆ ಎಂದು ರೈತಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು. ಹಾಲಿ, ಮಾಜಿ ಶಾಸಕರುಗಳು, ಸಂಸದರಿಗೆ ಆಹ್ವಾನ ನೀಡಲಾಗಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗು ಸಿ.ಸಿ.ಎಫ್ ಅವರುಗಳು ಧರಣಿ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಬೇಕು ಎಂದು ಹೇಳಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ರೈತ ಮುಖಂಡರಾದ ಕೆ.ಎಂ.ದಿನೇಶ್, ಕೆ.ಎಂ.ಲೋಕೇಶ್, ಎಸ್.ಬಿ.ಭರತ್ ಕುಮಾರ್, ಬಗ್ಗನ ಅನಿಲ್, ನಂದಕುಮಾರ್, ಮಿಥುನ್ ಹಾನಗಲ್, ವಿ.ಎಂ.ವಿಜಯ,…
ಮಡಿಕೇರಿ NEWS DESK ಡಿ.16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಡಿ.18ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. 15ನೇ ವಾರ್ಷಿಕ ಸಾರ್ವಜನಿಕ ಗನ್ ಕಾರ್ನಿವಲ್-ತೋಕ್ ನಮ್ಮೆಯನ್ನು ಮೂರ್ನಾಡ್ ನ ಬಲಂಬೇರಿ ರಸ್ತೆಯ ಬಳಿ ಕಡಿಯತ್ನಾಡ್ ಗಡಿರೇಖೆಯ ಸಮೀಪ ಚೇನಂಡ ಪೃಥ್ವಿ ಅವರ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್ ನಲ್ಲಿ ಜಾನಪದ ಸಂಭ್ರಮ ಮತ್ತು ಉತ್ಸಾಹದೊಂದಿಗೆ ಆಚರಿಸಲಾಗುತ್ತಿದೆ. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ, ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಗಳು ನಡೆಯುತ್ತವೆ. ಹೆಚ್ಚಿನ ಸಂಖ್ಯೆಯಲ್ಲಿ ಕೊಡವ, ಕೊಡವತಿ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಬಂದೂಕು ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆ, ಹಳೆಯ ಸಂಪ್ರದಾಯದ ಆಚರಣೆಗಳು ಮತ್ತು ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಮತ್ತು ಸಂರಕ್ಷಿಸಲು, ಸಿಎನ್ಸಿ ವಾರ್ಷಿಕವಾಗಿ ತೋಕ್ ನಮ್ಮೆ ಸಾರ್ವಜನಿಕ ಗನ್ ಕಾರ್ನಿವಲ್ ಅನ್ನು ಆಯೋಜಿಸುತ್ತದೆ. ಆದಿಮ ಸಂಜಾತ ಕೊಡವ…
ಸೋಮವಾರಪೇಟೆ ಡಿ.17 NEWS DESK : ಸಿ ಆ್ಯಂಡ್ ಡಿ ಕೃಷಿ ಭೂಮಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ, ಡಿ.20ರಂದು ಮಡಿಕೇರಿಯಲ್ಲಿ ನಡೆಯುವ ರೈತರ ಸಮಾವೇಶಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಪ್ರತಿನಿಧಿ ಹರಪಳ್ಳಿ ರವೀಂದ್ರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ರೈತನಾಗಿ ಸಿ ಆ್ಯಂಡ್ ಡಿ ಭೂಮಿಯ ಹೋರಾಟದಲ್ಲಿ ಭಾಗಿಯಾಗಿದ್ದೇನೆ. ಬೆಂಗಳೂರಿನಲ್ಲಿ ಅರಣ್ಯ, ಕಂದಾಯ ಮಂತ್ರಿಗಳನ್ನು ರೈತರ ನಿಯೋಗದೊಂದಿಗೆ ಭೇಟಿಯಾಗಿ ರೈತರ ಸಂಕಷ್ಟಗಳನ್ನು ಹೇಳಿದ್ದೇವೆ. ರೈತರ ಪರವಾಗಿ ರಾಜ್ಯ ಸರ್ಕಾರ ನಿಲ್ಲಬೇಕೆಂದು ಕೇಳಿಕೊಂಡಿದ್ದೇವೆ. ಸಚಿವರುಗಳು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಕೃಷಿ ಭೂಮಿಯನ್ನೇ ಸಿ ಆ್ಯಂಡ್ ಡಿ (ಕೃಷಿ ಯೋಗ್ಯವಲ್ಲದ ಭೂಮಿ) ಎಂದು ಗುರುತಿಸಲಾಗಿದೆ. ಹಿಂದೆ ಕಂದಾಯ ಇಲಾಖೆಯ ಕೆಲ ಅಧಿಕಾರಿಗಳು ಮಾಡಿದ ತಪ್ಪಿಗೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುತೇಕ ಮಂದಿ ನಾಲ್ಕೈದು ದಶಕಗಳಿಂದ ಮುರ್ನಾಲ್ಕು ಎಕರೆ ಜಾಗದಲ್ಲಿ ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಈಗ ಆ ಭೂಮಿಯನ್ನು ತೆರವುಗೊಳಿಸಿ ಅರಣ್ಯ…
ಮಡಿಕೇರಿ NEWS DESK ಡಿ.16 : ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಯುವ ಸಪ್ತಾಹದ ಅಂಗವಾಗಿ ಕೊಡಗು ಜಿಲ್ಲೆಯ ಯುವ ಜನರಿಗಾಗಿ “ಯುವ ಶಕ್ತಿ ಮತ್ತು ಭಾರತ” ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಲೇಖನ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು 15ವರ್ಷ ಮೇಲ್ಪಟ್ಟು 30 ವರ್ಷದೊಳಗಿನವರಾಗಿರಬೇಕು, ಲೇಖನದೊಂದಿಗೆ ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಿರಬೇಕು. ಟೈಪ್ ಮಾಡಿದ ಲೇಖನ “ಎ4” ಕಾಗದದ ಒಂದೇ ಭಾಗದಲ್ಲಿರಬೇಕು ಮತ್ತು ನಾಲ್ಕು ಪುಟಗಳನ್ನು ಮೀರಬಾರದು. ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಆಕರ್ಷಕ ಟ್ರೋಫಿ, ನಗದು ಬಹುಮಾನ ಹಾಗೂ ದೃಢೀಕರಣ ಪತ್ರವನ್ನು ನೀಡಲಾಗುವುದು. ಚಿತ್ರಕಲೆ ಸ್ಪರ್ಧೆ :: 15 ವರ್ಷದೊಳಗಿನ ಮಕ್ಕಳಿಗೆ “ಸ್ವಾಮಿ…
ಮಡಿಕೇರಿ ಡಿ.16 NEWS DESK : ಅರೆಭಾಷಿಕರ ಭಾಷೆ, ಸಂಸ್ಕೃತಿ, ಸಂಪ್ರದಾಯದಲ್ಲಿ ಕೊಡಗಿನ ಐನ್ಮನೆಗಳ ಪಾತ್ರ ಅತ್ಯಂತ ಮಹತ್ವದಾಗಿದ್ದು, ಮನುಷ್ಯನ ಜೀವನ ಶೈಲಿಯ ಆರಂಭ ಮತ್ತು ಅಂತ್ಯದಲ್ಲಿ ಐನ್ಮನೆಯ ಪಾತ್ರ ಅತ್ಯಂತ ವಿಶಿಷ್ಠವಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಸೂದನ ಎನ್.ಈರಪ್ಪ ಹೇಳಿದರು. ಐಗೂರಿನ ಯಡವಾರೆ ಅರೆಭಾಷೆ ಗೌಡ ಸಮಾಜ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ 14 ನೇ ಅರೆಭಾಷೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಐನ್ಮನೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಅರೆಭಾಷಿಕರನ್ನು ಒಟ್ಟುಗೂಡಿಸಿ ಭಾಷೆ-ಸಂಸ್ಕೃತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರಯತ್ನಿಸುವಂತಾಗಬೇಕು ಎಂದು ಹೇಳಿದರು. ಇಂದಿನ ಯುವ ಸಮೂಹ ಸಂಸ್ಕೃತಿ-ಭಾಷೆಯ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದು, ಅಕಾಡೆಮಿ ಈ ಯುವ ಸಮೂಹಕ್ಕೆ ವಿಶೇಷ ಉತ್ತೇಜನ ನೀಡುವ ಕಾರ್ಯಕ್ರಮ ರೂಪಿಸಲಿದೆ ಎಂದು ಸೂದನ ಈರಪ್ಪ ಅವರು ನುಡಿದರು. ಕಾಫಿ ಬೆಳೆಗಾರ ಮೂಲೆಮಜಲು ಮುತ್ತಪ್ಪ ಮಾತನಾಡಿ, ಅರೆಭಾಷಿಗರು ತಮ್ಮ ಭಾಷೆ ಮತ್ತು ಸಂಸ್ಕೃತಿ…






