ಕುಶಾಲನಗರ, ಡಿ.1 NEWS DESK : ವಿದ್ಯಾರ್ಥಿಗಳು ತಮ್ಮನ್ನು ಕಲಿಕಾ ಹಂತದಲ್ಲೇ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡು ಅಧ್ಯಯನದೊಂದಿಗೆ ಬರವಣಿಗೆ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಭಾರದ್ವಾಜ ಕೆ.ಆನಂದತೀರ್ಥ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ( ಕ.ಸಾ.ಪ.) ಹಾಗೂ ಕ.ಸಾ.ಪ.ಹೆಬ್ಬಾಲೆ ಘಟಕದ ವತಿಯಿಂದ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಸಂಘದ ಸಹಯೋಗದೊಂದಿಗೆ 69 ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಸಂಪಾಜೆ ದಿ.ಸಣ್ಣಯ್ಯ ಪಟೇಲ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿ, ಭಾಷೆ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಹೇಳಿದರು. ವಿದ್ಯಾರ್ಥಿಗಳು ಹಿಂಜರಿಜೆ ಮನೋಭಾವ ಬಿಟ್ಟು ತಮ್ಮನ್ನು ಅಧ್ಯಯನ ಮತ್ತು ಬರವಣಿಗೆಯಲ್ಲಿ ತೊಡಗಿಕೊಂಡಲ್ಲಿ ಸಾಹಿತ್ಯದಲ್ಲಿ ಉತ್ತಮ ರೀತಿಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರದ್ವಾಜ್ ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕ.ಸಾ.ಪ.ಸಮಿತಿಯ ಸದಸ್ಯ ಎಂ.ಎನ್.ವೆಂಕಟನಾಯಕ್, ಇಂತಹ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಹೆಚ್ಚಿಸುವ ಅಗತ್ಯವಿದೆ ಎಂದರು. ಸಾಹಿತ್ಯ…
ಲೇಖಕ: admin
ಮಡಿಕೇರಿ ಡಿ.2 NEWS DESK : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯದಲ್ಲಿ ಡಿ.20 ರಂದು ನಡೆಯಲಿದೆ. ನಮ್ಮ ಜಿಲ್ಲೆಗೆ ಅತಿ ಹತ್ತಿರದ ಜಿಲ್ಲೆಯಲ್ಲಿ ಸಮ್ಮೇಳನ ನಡೆಯಲಿದ್ದು, ಸಾಹಿತ್ಯ ಪರಿಷತ್ ಸದಸ್ಯರು, ಅಧ್ಯಾಪಕರು, ಸರ್ಕಾರಿ ನೌಕರರು, ಕನ್ನಡ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನಕ್ಕೆ ಭೇಟಿ ನೀಡಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮನವಿ ಮಾಡಿದ್ದಾರೆ. ಈ ಸಮ್ಮೇಳನದಲ್ಲಿ ಕನ್ನಡ ನಾಡು ನುಡಿ, ಪ್ರಸ್ತುತ ಸಮಸ್ಯೆಗಳು ಕುರಿತು ಉಪನ್ಯಾಸಗಳು, ಕವಿಗೋಷ್ಠಿಗಳು, ಮತ್ತು ಪುಸ್ತಕ ಮೇಳವನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಕರ್ನಾಟಕ, ಇತರ ರಾಜ್ಯಗಳು ಮತ್ತು ವಿದೇಶಗಳಿಂದ ಬಹುಸಂಖ್ಯೆಯಲ್ಲಿ ಭಾಗವಹಿಸುವವರನ್ನು ಆಕರ್ಷಿಸುವ ನಿರೀಕ್ಷೆಯಿದೆ. ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ಭಾಷೆ, ಸಾಹಿತ್ಯ, ಕಲಾ, ಸಂಸ್ಕೃತಿ ಮತ್ತು ಸಂಗೀತವನ್ನು ಉಳಿಸುವ ಮತ್ತು ಅಭಿವೃದ್ಧಿ ಮಾಡುವ ಉದ್ದೇಶದಿಂದ ಲೇಖಕರು, ಕವಿಗಳು ಮತ್ತು ಕನ್ನಡಿಗರ ಸಮ್ಮೇಳನವಾಗಿದೆ. ಸಮ್ಮೇಳನಕ್ಕೆ ಹೋಗಲಿಚ್ಚಿಸುವವರು ಪ್ರತಿನಿಧಿಯಾಗಿ ನೋಂದಾಯಿಸಿಕೊಳ್ಳುವ ಮೂಲಕ ನಾಲ್ಕು ದಿನಗಳ ವಸತಿ ಊಟೋಪಚಾರ…
ಸಿದ್ದಾಪುರ ಡಿ.2 NEWS DESK : ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಕೃಷಿ ಫಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳಗಾರರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ 9 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಸಿದ್ದಾಪುರದ ಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳು ಕೃಷಿ ಪಸಲುಗಳನ್ನು ತಿಂದು ತುಳಿದು ನಾಶ ಮಾಡುವುದರ ಮೂಲಕ ಗ್ರಾಮ ವ್ಯಾಪ್ತಿಯಲ್ಲಿ ಹಾಡಗಲಿನಲ್ಲೂ ರಾಜಾರೋಷವಾಗಿ ತಿರಗಾಡುತ್ತಿತ್ತು. ಕಾರ್ಮಿಕರು ಕೆಲಸಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಶಾಲಾ ವಿದ್ಯಾರ್ಥಿಗಳು ಕಾಡು ಪ್ರಾಣಿಗಳ ಭಯದಿಂದ ಶಾಲೆಗೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿತ್ತು. ಆನೆಗಳನ್ನು ಕಾಡಿಗಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಮೂರು ಮರಿಯೊಂದಿಗೆ ಒಂಬತ್ತು ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾಡಿಗಟ್ಟವ ಕಾರ್ಯಚರಣೆ ಮುಂದುವರಿಸಿ ಮಾರ್ಗೊಳ್ಳಿ ಘಟ್ಟತಳ ಮಾರ್ಗವಾಗಿ ದುಬಾರೆ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಇವರ…
ಮಡಿಕೇರಿ NEWS DESK ಡಿ.1 : ಕೊಡಗು ಜಿಲ್ಲೆಯಾದ್ಯಂತ ಮಳೆಯ ವಾತಾವರಣವಿದೆ. ಡಿ.2ರ ಸಂಜೆ 5:30 ಗಂಟೆ ವರೆಗೆ ಹವಾಮಾನ ಇಲಾಖೆ ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಮಡಿಕೇರಿ NEWS DESK ಡಿ.1 : ಮಡಿಕೇರಿ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕನ್ನಡ ಸಾಹಿತ್ಯ ಪರಿಷತ್ ಭವನದ ಯೋಜನೆಗೆ ಅನುದಾನ ದೊರಕಿಸಿಕೊಡುವುದರೊಂದಿಗೆ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಎಸ್.ಭೋಸರಾಜು ಭರವಸೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ನೇತೃತ್ವದ ನಿಯೋಗ ನಗರದಲ್ಲಿ ಸಚಿವರನ್ನು ಭೇಟಿಯಾಗಿ ಸುದರ್ಶನ ಅತಿಥಿ ಗೃಹದ ಬಳಿ ಇರುವ ಪರಿಷತ್ ನ ನಿವೇಶನದಲ್ಲಿ ಭವನ ನಿರ್ಮಿಸುವ ಯೋಜನೆ ಇದ್ದು, ಭವನ ನಿರ್ಮಾಣ ಸಮಿತಿಯ ಮಹಾಪೋಷಕರಾಗುವಂತೆ ಕೋರಿಕೊಂಡಿತು. ಈ ಸಂದರ್ಭ ಮಾತನಾಡಿದ ಸಚಿವ ಎಂ.ಎಸ್.ಭೋಸರಾಜು ಅವರು ಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸರಕಾರದ ಮಟ್ಟದಲ್ಲಿ ವ್ಯವಹರಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅನುದಾನ ದೊರಕಿಸಿಕೊಡಲಾಗುವುದು, ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಪೂರ್ವಭಾವಿ ಸಭೆ ನಡೆಸಿ ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು. ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿಗಳಾದ…
ಮಡಿಕೇರಿ NEWS DESK ಡಿ.1 : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್ ಬಳಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಅಲಿಂ ಮೊಹಮ್ಮದ್ (41) ಎಂಬಾತನನ್ನು ಬಂಧಿಸಿ 1 ಕೆಜಿ 88 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು. ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ NEWS DESK ಡಿ.1 : ಪರಿಶುದ್ಧ ಗಾಳಿ, ಉತ್ತಮ ವಾತಾವರಣ ಸೂಚ್ಯಂಕದಲ್ಲಿ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನದಲ್ಲಿದೆ. ಈ ಹೆಗ್ಗಳಿಕೆಯ ಹಿಂದಿರುವ ಪೌರ ಕಾರ್ಮಿಕರ ಪರಿಶ್ರಮವನ್ನು ಹ್ಯುಮಾನಿಟಿ ಫಸ್ಟ್ ಇಂಡಿಯಾ ಮಡಿಕೇರಿ ಅಹಮದಿಯ ಮುಸ್ಲಿಂ ಜಮಾತಿನ (ಲಜ್ನಾಯಿಮಾ ಇಲ್ಲಹ್) ಮಹಿಳಾ ವಿಭಾಗ ಗುರುತಿಸಿ, ಅವರಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಮಾಡಿ ತನ್ನ ಗೌರವವನ್ನು ಸೂಚಿಸಿತು. ಈ ಸಂದರ್ಭ ಹ್ಯುಮಾನಿಟಿ ಫಸ್ಟ್ ಇಂಡಿಯಾದ ಸೌತ್ ಕರ್ನಾಟಕದ ಮುಖ್ಯಸ್ಥರಾದ ಮೊಹಮ್ಮದ್ ಶರೀಫ್ ಮಾತನಾಡಿ, ಪೌರಕಾರ್ಮಿಕರು ಮಡಿಕೇರಿಯ ಸ್ವಚ್ಛತೆಗಾಗಿ ಮಾಡುತ್ತಿರುವ ಕೆಲಸ ಶಾಘನೀಯ. ಪೌರಕಾರ್ಮಿಕರ ಅಹರ್ನಿಶಿ ದುಡಿಮೆ, ಪರಿಶ್ರಮದಿಂದ ಮಡಿಕೇರಿ ನಗರ ಸ್ವಚ್ಛವಾಗಿದೆ ಎಂದು ಮನದುಂಬಿ ನುಡಿದರು. ಮಡಿಕೇರಿ ನಗರ ಶುದ್ಧ ಗಾಳಿ, ಪರಿಸರವನ್ನು ಹೊಂದಲು ಪೌರಕಾರ್ಮಿಕರ ಪರಿಶ್ರಮ ಕಾರಣ.ಅದಕ್ಕಾಗಿ ಅವರಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭ ಪೌರಾಯುಕ್ತರಾದ ರಮೇಶ್ ಮಾತನಾಡಿ, ಹ್ಯುಮಾನಿಟಿ ಫಸ್ಟ್ ಇಂಡಿಯಾದ ಕಾರ್ಯ ಮೆಚ್ಚತಕ್ಕಂತದ್ದು. ಪೌರಕಾರ್ಮಿಕರನ್ನು ಈ ರೀತಿ ನೆನೆಸಿಕೊಂಡಿರುವುದು ಅಪರೂಪದ್ದೆಂದು ನುಡಿದರು.…
ಮಡಿಕೇರಿ NEWS DESK ಡಿ.1 : ಶ್ರೀರಾಮಾಂಜನೇಯ ಭಜನಾ ಮಂಡಳಿಯ 34ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ‘ಅಖಂಡ ಏಕಾಹ ಭಜನಾ’ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಅಖಂಡ ಏಕಾಹ ಭಜನಾ ಕಾರ್ಯಕ್ರಮ ಇಂದು ಬೆಳಗ್ಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರವಾಗಿ ನಡೆದು, ಸಂಜೆ 7.30ಕ್ಕೆ ಹನಮಾನ್ ಚಾಲೀಸ್, ಮಂಗಳಾಚರಣೆ, ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ಸಮಾಪನಗೊಂಡಿತು. ಅಖಂಡ ಏಕಾಹ ಭಜನಾ ಕಾರ್ಯಕ್ರಮದಲ್ಲಿ ಶ್ರೀ ರಾಮಾಂಜನೇಯ ಮಹಿಳಾ ಭಜನಾ ಮಂಡಳಿ, ಶ್ರೀ ಸತ್ಯಸಾಯಿ ಭಜನಾ ಮಂಡಳಿ, ಮೋದೂರಿನ ಶ್ರೀಮತಿ ಮೇಘಾ ಭಟ್ ಮತ್ತು ತಂಡ, ಶ್ರೀ ಕನ್ನಿಕಾ ಪರಮೇಶ್ವರಿ ಭಜನಾ ಮಂಡಳಿ, ಶ್ರೀ ವಿಜಯ ವಿನಾಯಕ ಭಜನಾ ಮಂಡಳಿ, ಕಗ್ಗೋಡ್ಲುವಿನ ಶ್ರೀ ಸನಾತನ ಭಜನಾ ಮಂಡಳಿ, ಜೋಡುಪಾಲದ ಶ್ರೀ ದೇವಿ ಭಜನಾ ಮಂಡಳಿ, 2ನೇ ಮೊಣ್ಣಂಗೇರಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ, ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್, ಭೂತನಕಾಡುವಿನ ಶ್ರೀ ಓಂಶಕ್ತಿ ಭಜನಾ ಮಂಡಳಿ, ತೊಂಬತ್ತುಮನೆಯ ಶ್ರೀ ವಿನಾಯಕ ಸೇವಾ…
ಮಡಿಕೇರಿ NEWS DESK ಡಿ.1 : ಮಾನಸಿಕವಾಗಿ ಹೆಚ್ಚುತ್ತಿರುವ ಒತ್ತಡದಿಂದಾಗಿ ಹಲವರಲ್ಲಿ ಕಂಡು ಬರುತ್ತಿರುವ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಮಾನಸಿಕ ಚಿಕಿತ್ಸೆ ಸಂಬಂಧಿತ ಯೋಜನೆ ರೂಪಿಸಿದೆ ಎಂದು ರೋಟರಿ ಜಿಲ್ಲೆ 3181 ನ ಗವರ್ನರ್ ವಿಕ್ರಂದತ್ತ ಹೇಳಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಆಯೋಜಿತ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಕ್ರಂದತ್ತ, ರೋಟರಿಯು ಈ ಸಾಲಿನಲ್ಲಿ ಅನೇಕ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ, ಮಹಿಳೆಯರನ್ನು ಕಾಡುತ್ತಿರುವ ಗರ್ಭಕಂಠ ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಲಸಿಕೆ ನೀಡಲಾಗುತ್ತಿದೆ, ಮಾನಸಿಕ ಒತ್ತಡದಿಂದಾಗಿ ಕಂಡುಬರುತ್ತಿರುವ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೂ ಶಿಬಿರಗಳ ಮೂಲಕ ತಜ್ಞರಿಂದ ಚಿಕಿತ್ಸೆ ನೀಡಲಾಗುತ್ತಿದೆ, ಸಂಧ್ಯಾಸುರಕ್ಷಾ ಯೋಜನೆ ಮೂಲಕ ಹಿರಿಯ ನಾಗರಿಕರಿಗೆ ಅಗತ್ಯ ಸೌಲಭ್ಯವನ್ನೂ ಕಲ್ಪಿಸಲಾಗುತ್ತಿದೆ ಎಂದರು. ಹೆಚ್ಚುತ್ತಿರುವ ಶಿಶುಮರಣ ತಪ್ಪಿಸುವ ನಿಟ್ಟಿನಲ್ಲಿ ಮಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ರೋಟರಿ ಸಹಭಾಗಿತ್ವದಲ್ಲಿ ಶಿಶುಸಂರಕ್ಷಣಾ ಯೋಜನೆಗೆ ಆಸ್ಪತ್ರೆಗಳು ಕಾರ್ಯಕ್ರಮ ರೂಪಿಸುತ್ತಿದೆ ಎಂದು…
ಮಡಿಕೇರಿ NEWS DESK ಡಿ.1: ಬುಡಕಟ್ಟು ಸಮುದಾಯದ ಮಕ್ಕಳಲ್ಲಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ರಕ್ಷಣೆಯೊಂದಿಗೆ ಅವರಲ್ಲಿ ಸುಪ್ತವಾಗಿ ಅಡಗಿರುವ ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಅವರನ್ನು ಶೈಕ್ಷಣಿಕವಾಗಿ ಉತ್ತೇಜಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕದ ವತಿಯಿಂದ ಡಿಸೆಂಬರ್ ಅಂತ್ಯದ ವೇಳೆಗೆ ಕೊಡಗು ಜಿಲ್ಲೆಯಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಡಿಕೇರಿಯಲ್ಲಿ ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಸಂಸ್ಥೆಯ ಮಡಿಕೇರಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಕುರಿತು ಪದಾಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದ ನಂತರ ಮಾತನಾಡಿದ ಅವರು ಸಂಸ್ಥೆಯ ವಜ್ರಮಹೋತ್ಸವದ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಶಾಲಾ ಮಕ್ಕಳಿಂದ ಕುಶಾಲನಗರದಲ್ಲಿ ಜಿಲ್ಲಾಮಟ್ಟದ Rally ನಡೆಸುವ ಮೂಲಕ ಸ್ಕೌಟ್ಸ್, ಗೈಡ್ಸ್…






