ಲೇಖಕ: admin

ಡಿ.2 ರಿಂದ 8ರ ವರೆಗಿನ ಹನ್ನೆರಡು ರಾಶಿಗಳ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು  81056 34429) ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ, ದೂರ ಪ್ರಯಾಣ ಯೋಗವಿದೆ. :: ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ದೂರದ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ನೆಗಡಿ,…

Read More

ಮಡಿಕೇರಿ ನ.30 NEWS DESK : ಸುಂಟ್ಟಿಕೊಪ್ಪದಲ್ಲಿ ನಡೆದ ಕುಶಾಲನಗರ ವಲಯ ಮಟ್ಟದ ಎಸ್.ಕೆ.ಎಸ್.ಎಸ್‌.ಎಫ್ ಇಸ್ಲಾಮಿಕ್ ಕಲೋತ್ಸವದಲ್ಲಿ ಕೊಡ್ಲಿಪೇಟೆ ಯೂನಿಟ್ (286) ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. 284 ಅಂಕಗಳೊಂದಿಗೆ ಕುಶಾಲನಗರ ದ್ವಿತೀಯ ಹಾಗೂ 251 ಅಂಕಗಳನ್ನುಗಳಿಸಿ ಮಡಿಕೇರಿ ಯೂನಿಟ್ ತೃತೀಯ ಸ್ಥಾನ ಪಡೆದುಕೊಂಡಿತ್ತು. ಸಬ್ ಜೂನಿಯರ್ ಮತ್ತು ಸೂಪರ್ ಸೀನಿಯರ್ ವಿಭಾಗದಲ್ಲಿ ಕೊಡ್ಲಿಪೇಟೆ, ಜೂನಿಯರ್,ಜನರಲ್ ಗ್ರೂಪ್,ಮತ್ತು ಸೀನಿಯರ್ ವಿಭಾಗದಲ್ಲಿ ಕುಶಾಲನಗರ ಯೂನಿಟ್ ಪ್ರಥಮ ಸ್ಥಾನ ಪಡೆಯಿತು. ಸಬ್ ಜೂನಿಯರ್ ವಿಭಾಗದ ಫೆಸ್ಟ್ ಐಕಾನ್ ಆಗಿ ಮೊಹಮ್ಮದ್ ಆಶಿಮ್ ಕೊಡ್ಲಿಪೇಟೆ, ಜೂನಿಯರ್ ವಿಭಾಗದಲ್ಲಿ ತಬೀಶ್ ಶನಿವಾರಸಂತೆ,ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ಸಿನಾನ್ ಕುಶಾಲನಗರ, ಹಾಗೂ ಸೂಪರ್ ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ರಾಜಿಕ್ ಕುಶಾಲನಗರ ಫೆಸ್ಟ್ ಐಕಾನ್ ಪ್ರಶಸ್ತಿ ಪಡೆದುಕೊಂಡರು. ಏಳು ಯೂನಿಟ್ ಭಾಗವಹಿಸಿದ್ದ ಕುಶಾಲನಗರ ವಲಯ ಎಸ್.ಕೆ.ಎಸ್.ಎಸ್‌.ಎಫ್. ಇಸ್ಲಾಮಿಕ್ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಸಮದ್ ಬಾಖವಿ ಚಿಕ್ಕಮಗಳೂರು, ಅಬ್ಬಾಸ್ ಅಝ್ಹರಿ ಸಕಲೇಶಪುರ, ರಝಾಕ್ ಫೈಝಿ ಸಕಲೇಶಪುರ, ಕಮರುದ್ದೀನ್ ಫೈಝಿ ಕುಂಜಿಲ,ಮನಾಫ್ ಅಝ್ಹರಿ ಸುಂಟ್ಟಿಕೊಪ್ಪ, ಹಾಗೂ…

Read More

ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ ಮತ್ತು 2023-24ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ನಗರದ ಲಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ಉದ್ಘಾಟಿಸಿದರು. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾದಾಪುರದ ಚನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯು.ಅದವಿಯ ಗೆ…

Read More

ಪುತ್ತೂರು ನ.30 NEWS DESK : ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತಿವೆ. ಈ ಕ್ಷಿಪ್ರ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಪಠ್ಯಕ್ರಮದ ಜತೆಯಲ್ಲಿ ಅನೇಕ ಪೂರಕ ವಿಷಯಗಳನ್ನು ಕಲಿತುಕೊಳ್ಳುವುದು ತುಂಬಾ ಅವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕಿ ವಿದ್ಯಾ.ಆರ್.ಗೌರಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಡಾಟಾ ಸೈನ್ಸ್ ವಿಭಾಗದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ತಾಂತ್ರಿಕ ಉತ್ಸವ ಔರ-2ಕೆ24 (AURA 2K24) ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ಸಮಾಜದ ಆವಶ್ಯಕತೆಗಳನ್ನು ಅರಿತುಕೊಂಡು ಕಟ್ಟ ಕಡೆಯ ವ್ಯಕ್ತಿಗೂ ಉಪಕಾರವಾಗುವ ರೀತಿಯಲ್ಲಿ ವಿದ್ಯಾರ್ಥಿಗಳು ಹೊಸತನ್ನು ಸಾಧಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಆವಶ್ಯಕತೆಗೆ ಅನುಗುಣವಾಗಿ ಕಾಲೇಜು ಇಂತಹ ಅನೇಕ ಚಟುವಟಿಕೆಗಳನ್ನು ಸಂಘಟಿಸುತ್ತದೆ ಇದರಲ್ಲಿ ಭಾಗಿಗಳಾಗಿ ಪ್ರಯೋಜನವನ್ನು ಪಡೆಯುವುದು ಪ್ರತಿಯೊಬ್ಬರ ಕರ್ತ್ಯವಾಗಬೇಕು ಎಂದರು. ಮೂರು ದಿನಗಳ…

Read More

ಮಡಿಕೇರಿ ನ.30 NEWS DESK : ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ ನಡೆಯಲಿದೆ. ಸಮಾರಂಭದಲ್ಲಿ ನಿವೃತ್ತ ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು ಭೀಮಯ್ಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ನಾಪೋಕ್ಲು ನ.30 NEWS DESK : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಎಂ.ಪಿ ಸುಜಾ ಕುಶಾಲಪ್ಪ ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಮತ್ತು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಕಲೆ, ಸಾಹಿತ್ಯದಲ್ಲಿ ಭಾಗವಹಿಸುವುದರ ಮೂಲಕ ಪ್ರತಿಭೆಯನ್ನು ಹೊರ ಹಾಕಬೇಕು. ಮಕ್ಕಳ ಪ್ರತಿಭೆಗೆ ಪೋಷಕರು ಸಹಕಾರ ನೀಡಬೇಕು. ಯಾವುದರಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗುರುತಿಸಿ ಶಿಕ್ಷಕರು ಅದಕ್ಕೆ ಪ್ರೋತ್ಸಾಹ ನೀಡಿ ವಿದ್ಯಾರ್ಥಿಗಳ ಬೆಳವಣಿಗೆಗೆ ಮಾರ್ಗದರ್ಶಕರಾಗಬೇಕು ಎಂದರು. ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ…

Read More

ನಾಪೋಕ್ಲು ನ.30 NEWS DESK : ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ನೈತಿಕ ಹಾಗೂ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ ಕೊಡುಗೆ ನೀಡಬೇಕೆಂದು ಮೈಸೂರು ಚಾಮರಾಜ ಜೋಡಿ ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪಟ್ಟಡ ಶಿವಕುಮಾರ್ ಕರೆ ನೀಡಿದರು. ಮದೆನಾಡಿನ ಬಿ.ಜಿ.ಎಸ್ ವಿದ್ಯಾಸಂಸ್ಥೆಯಲ್ಲಿ ನಡೆದ ನುಡಿಹಬ್ಬ ಹಾಗೂ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ  ಪೋಷಕರು, ಶಿಕ್ಷಕರು, ಹಿರಿಯರನ್ನು ಗೌರವಿಸುವ ಜೊತೆಗೆ ತಮ್ಮ ಭಾಷೆ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕಡೆಗೆ ಗಮನ ಹರಿಸಬೇಕು. ಸಮಾಜಕ್ಕೆ ನಾವು ಕೊಡುಗೆ ನೀಡಿದರೆ ಸಮಾಜ ನಮ್ಮನ್ನು ಸದಾ ಸ್ಮರಿಸುತ್ತದೆ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮದೆಮಹೇಶ್ವರ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ರಾಜೇಂದ್ರ ಮಾತನಾಡಿ, ಮಕ್ಕಳು ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗುಡಿಸಿಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಯ ಮೇಲ್ವಿಚಾರಕ ಸಚಿನ್, ಮುಖ್ಯಪಾಧ್ಯಾಯಿನಿ ಮುದ್ಯನ ಪುನೀತ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು…

Read More

ಮಡಿಕೇರಿ ನ.30 NEWS DESK  : ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಸೇರಿದ  ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ QR code  ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅನಾವರಣಗೊಳಿಸಿ ಮಾತನಾಡಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ  ಪ್ರಮೋದ್ ಗಣಪತಿ , ಉಪಾಧ್ಯಕ್ಷರಾದ ಮಂಜುಳ, ಶಾಲಾ ಸಿಬ್ಬಂದಿಗಳು , ಮಕ್ಕಳು ಹಾಗೂ ಇತರೆ ಮುಖಂಡರುಗಳು ಹಾಜರಿದ್ದರು.

Read More

ಮಡಿಕೇರಿ ನ.30 NEWS DESK : ಗೋಣಿಕೊಪ್ಪ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳ , ಅಗ್ನಿ ಶಾಮಕ ಅಧಿಕಾರಿಗಳು ,ಇತರೆ ಸಿಬ್ಬಂದಿಗಳು ಹಾಗೂ ಮುಖಂಡರುಗಳು ಹಾಜರಿದ್ದರು.

Read More

ಸೋಮವಾರಪೇಟೆ ನ.30 NEWS DESK : ಸಿ ಆ್ಯಂಡ್ ಡಿ(ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ)ಮತ್ತು ಸರ್ಕಾರಿ ಒತ್ತುವರಿ ಭೂಮಿಗೆ ರೈತರಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಡಿ.20 ರಂದು ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹಾರಂಗಿ ಅಣೆಕಟ್ಟು ಮುಳುಗಡೆಯಿಂದ 3700 ಎಕರೆ, ಹೇಮಾವತಿ ಅಣೆಕಟ್ಟೆಯಿಂದ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ 11ಸಾವಿರ ಎಕರೆ ಭೂಮಿಯನ್ನು ಕಳೆದುಕೊಂಡಿದ್ದೇವೆ. ಈಗ ಕೃಷಿ ಮಾಡಿಕೊಂಡಿರುವ 25 ಸಾವಿರ ಎಕರೆ ಭೂಮಿಯನ್ನು ಸಿ ಆ್ಯಂಡ್ ಡಿ ನೆಪದಲ್ಲಿ ಅರಣ್ಯ ಇಲಾಖೆಗೆ ನೀಡಲು ತಯಾರಿ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಕೃಷಿ ಮಾಡುತ್ತಿರುವ ರೈತರ ಭೂಮಿ ಅಭಯಾರಣ್ಯವಾದರೆ ನೂರಾರು ವರ್ಷಗಳಿಂದ ಬದುಕುತ್ತಿರುವ ರೈತರು ಬೀದಿ ಪಾಲಾಗಬೇಕಾಗುತ್ತದೆ ಎಂದು ನೋವು ತೋಡಿಕೊಂಡರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟವಲ್ಲ. ಆದರೆ ರೈತರಿಗೆ ಅನ್ಯಾಯ ಮಾಡುವ ಯಾವುದೇ ಸರ್ಕಾರಗಳು ಉಳಿಯಲು ಸಾಧ್ಯವಿಲ್ಲ. ಕೂಡಲೆ…

Read More