ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಸೇರಿದ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ QR code ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅನಾವರಣಗೊಳಿಸಿ ಮಾತನಾಡಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಪ್ರಮೋದ್ ಗಣಪತಿ , ಉಪಾಧ್ಯಕ್ಷರಾದ ಮಂಜುಳ, ಶಾಲಾ ಸಿಬ್ಬಂದಿಗಳು , ಮಕ್ಕಳು ಹಾಗೂ ಇತರೆ ಮುಖಂಡರುಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ನ.30 NEWS DESK : ಗೋಣಿಕೊಪ್ಪ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳ , ಅಗ್ನಿ ಶಾಮಕ ಅಧಿಕಾರಿಗಳು ,ಇತರೆ ಸಿಬ್ಬಂದಿಗಳು ಹಾಗೂ ಮುಖಂಡರುಗಳು ಹಾಜರಿದ್ದರು.
ಸೋಮವಾರಪೇಟೆ ನ.30 NEWS DESK : ಸಿ ಆ್ಯಂಡ್ ಡಿ(ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ)ಮತ್ತು ಸರ್ಕಾರಿ ಒತ್ತುವರಿ ಭೂಮಿಗೆ ರೈತರಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಡಿ.20 ರಂದು ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹಾರಂಗಿ ಅಣೆಕಟ್ಟು ಮುಳುಗಡೆಯಿಂದ 3700 ಎಕರೆ, ಹೇಮಾವತಿ ಅಣೆಕಟ್ಟೆಯಿಂದ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ 11ಸಾವಿರ ಎಕರೆ ಭೂಮಿಯನ್ನು ಕಳೆದುಕೊಂಡಿದ್ದೇವೆ. ಈಗ ಕೃಷಿ ಮಾಡಿಕೊಂಡಿರುವ 25 ಸಾವಿರ ಎಕರೆ ಭೂಮಿಯನ್ನು ಸಿ ಆ್ಯಂಡ್ ಡಿ ನೆಪದಲ್ಲಿ ಅರಣ್ಯ ಇಲಾಖೆಗೆ ನೀಡಲು ತಯಾರಿ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಕೃಷಿ ಮಾಡುತ್ತಿರುವ ರೈತರ ಭೂಮಿ ಅಭಯಾರಣ್ಯವಾದರೆ ನೂರಾರು ವರ್ಷಗಳಿಂದ ಬದುಕುತ್ತಿರುವ ರೈತರು ಬೀದಿ ಪಾಲಾಗಬೇಕಾಗುತ್ತದೆ ಎಂದು ನೋವು ತೋಡಿಕೊಂಡರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟವಲ್ಲ. ಆದರೆ ರೈತರಿಗೆ ಅನ್ಯಾಯ ಮಾಡುವ ಯಾವುದೇ ಸರ್ಕಾರಗಳು ಉಳಿಯಲು ಸಾಧ್ಯವಿಲ್ಲ. ಕೂಡಲೆ…
ಮಡಿಕೇರಿ ನ.30 NEWS DESK : ರಾಷ್ಟ್ರದ ಗಡಿಗಳ ಮತ್ತು ಆಂತರಿಕ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಯೋಧರ ಹಾಗೂ ಅವರ ಕುಟುಂಬದ ಮೂಲಭೂತ ಸಮಸ್ಯೆಗಳಿಗೆ ಅಗತ್ಯ ಸ್ಪಂದನ ದೊರಕಬೇಕೆನ್ನುವ ಆಶಯ ಕೊಡಗು ಜಿಲ್ಲಾ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ಮಹಾಸಭೆಯಲ್ಲಿ ವ್ಯಕ್ತವಾಯಿತು. ನಗರದ ಪೊಲೀಸ್ ಸಮುದಾಯ ಭವನ ಮೈತ್ರಿಯಲ್ಲಿ ನಡೆದ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ಮಹಾಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಪಲಿಯಂಡ ಚಂಗಪ್ಪ ಅವರು ಮಾತನಾಡಿ, ಬಿಎಸ್ಎಫ್, ಸಿಆರ್ಪಿಎಫ್, ಸಿಐಎಸ್ಎಫ್ ಮತ್ತು ಎಸ್ಎಸ್ಬಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರು ಸಾಕಷ್ಟು ಸಮಸ್ಯೆಗಳನ್ನು ಹೊಂದಿದ್ದಾರೆ. ಇವುಗಳ ನಿವಾರಣೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಯಬೇಕಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಶೀಲರಾಗಿರುವುದಾಗಿ ತಿಳಿಸಿದರು. ಹಾಸನದಲ್ಲಿ ರಾಜ್ಯದ ಏಕೈಕ ಸ್ವಂತ ಕಟ್ಟಡ :: ಕೊಡಗು ಜಿಲ್ಲೆಯಲ್ಲಿ ಅರೆಸೇನಾಪಡೆಗಳ ಒಕ್ಕೂಟ ಕಳೆದ ಒಂದು ದಶಕಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿದ್ದರು, ಅಗತ್ಯ ಆರ್ಥಿಕ ಶಕ್ತಿಯನ್ನು ಹೊಂದಿಲ್ಲವೆಂದು ತಿಳಿಸಿ, ಪ್ರಸ್ತುತ ಇಡೀ ರಾಜ್ಯದಲ್ಲೆ ಹಾಸನದಲ್ಲಿ ಅರೆಸೇನಾಪಡೆಗಳ ಸಂಘಟನೆ…
ಮಡಿಕೇರಿ ನ.30 NEWS DESK : ಮೂರ್ನಾಡು ವೃತ್ತಕ್ಕೆ ಒಳಪಡುವ ಹೂಕಾಡು ಅಂಗನವಾಡಿ ಕೇಂದ್ರದಲ್ಲಿ ಸಮುದಾಯದ ಸಹಕಾರದಿಂದ ಬಾಲಮೇಳ ಕಾರ್ಯಕ್ರಮ ನಡೆಯಿತು. ಕೇಂದ್ರದ ಪುಟಾಣಿ ಚಾತ್ವಿಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಛದ್ಮವೇಷ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಬಗೆಬಗೆಯ ವೇಷ ಧರಿಸಿ ಪಾಲ್ಗೊಂಡ ಪುಟಾಣಿಗಳು ಗಮನ ಸೆಳೆದರು. ಕಾಳು ಹೆಕ್ಕುವ ಸ್ಪರ್ಧೆ, ಕಪ್ಪೆ ಜಿಗಿತ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಪ್ಪೆ ಜಿಗಿತದಲ್ಲಿ ದಕ್ಷಿಕ ಎಂ.ವೈ. ಪ್ರಥಮ, ದೇಶಿಕ ಕೆ.ಎಸ್. ದ್ವಿತೀಯ, ಲಿಯಾನ ಪಿ.ಎಲ್. ತೃತೀಯ, ಮತ್ತು ಕಾಳು ಹೆಕ್ಕುವ ಸ್ಪರ್ಧೆಯಲ್ಲಿ ಚಾತ್ವಿಕ್ ಪ್ರಥಮ , ತ್ರಿಶೂಲ್ ದ್ವಿತೀಯ, ದಕ್ಷಿಕಾ ತೃತೀಯ ಬಹುಮಾನ ಪಡೆದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾರ್ಗದರ್ಶನದಂತೆ ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಸಹಾಯಕಿ ಲೀಲಾ ಅವರ ಪರಿಶ್ರಮದಿಂದ ಎಲ್ಲಾ ಮಕ್ಕಳ ಹೆಸರಿನಲ್ಲಿ ಪೋಷಕರಿಂದ ತರಕಾರಿ ಕುಂಡಗಳನ್ನು ಕೇಂದ್ರಕ್ಕೆ ಪಡೆಯಲಾಯಿತು. ಪೋಷಕರಾದ ಸತೀಶ್ ಸಿಹಿ ವಿತರಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಯಶೋಧ, ಬಾಲವಿಕಾಸ ಸಮಿತಿಯ…
ಮಡಿಕೇರಿ ನ.30 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ಡಿಸೆಂಬರ್, 03 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ…
ಮಡಿಕೇರಿ ನ.30 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಡಿ.2 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಮಡಿಕೇರಿ ನ.30 NEWS DESK : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2024-25 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ನ.30 NEWS DESK : ಅಂಚೆ ಅದಾಲತ್ನ ಮುಂದಿನ ಸಭೆಯು ಡಿ.23 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆಯ ಅಶೋಕ್ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 20 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿಸೆಂಬರ್, 23 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಗೋಣಿಕೊಪ್ಪ ನ.29 NEWS DESK : ಅತ್ತೂರು ಪಾಲ್ಮ್ ವ್ಯಾಲಿ ರೆಸಾರ್ಟ್ನಲ್ಲಿ ಆಯೋಜಿಸಿದ್ದ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ರಿಕೆಟ್ ಕಲರವಕ್ಕೆ 4 ತಂಡಗಳಿಗೆ 60 ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಮಚ್ಚಮಾಡ ಅನೀಶ್ ಮಾದಪ್ಪ ಮಾಲೀಕತ್ವದ, ಸಂಚಾಲಕ ಸಣ್ಣುವಂಡ ಕಿಶೋರ್ ನಾಚಪ್ಪ, ಮುಸ್ತಪಾ ನಾಯಕತ್ವದ ತಾಳೇರಿ ಮೂಂದ್ನಾಡ್ ಮೀಡಿಯಾ, ಚಿಮ್ಮಣಮಾಡ ದರ್ಶನ್ ದೇವಯ್ಯ, ಸಂಚಾಲಕ ಎನ್. ಎನ್. ದಿನೇಶ್, ಹಾಗೂ ಆದರ್ಶ್ ನಾಯಕತ್ವದ ಕುತ್ತ್ನಾಡ್ ಮೀಡಿಯಾ ವಾರಿಯರ್ಸ್, ಪುತ್ತಂ ಪ್ರದೀಪ್ ನಾಯಕತ್ವದ, ಸಂಚಾಲಕ ಸಿಂಗಿ ಸತೀಶ್, ಮಂಡೇಡ ಅಶೋಕ್ ನಾಯಕತ್ವದ ಮರೆನಾಡ್ ಪ್ರೆಸ್ ಟೀಂ, ಆನಂದ್ಕುಮಾರ್ ಮಾಲೀಕತ್ವದ, ವಿ.ವಿ.ಅರುಣ್ ಕುಮಾರ್, ಜಯಪ್ರಕಾಶ್ ನಾಯಕತ್ವದ ಅಂಜಿಗೇರಿನಾಡ್ ಮೀಡಿಯಾ ಕಿಂಗ್ಸ್ ತಂಡಗಳಿಗೆ ಆಯ್ಕೆ ನಡೆಯಿತು. 60 ಆಟಗಾರರು ಬಿಡ್ಡೀಂಗ್ನಲ್ಲಿ ಭಾಗವಹಿಸಿದ್ದರು. ಜನವರಿ 5 ರಂದು ಹಾತೂರು ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಟೂರ್ನಿ ನಡೆಯುವ ಬಗ್ಗೆ ಘೋಷಿಸಲಾಯಿತು. ಪಾಲ್ಮ್ ವ್ಯಾಲಿ ರೆಸಾರ್ಟ್ ಉದ್ಯಮಿ ವಿಖ್ಯಾತ್ ಮಾಚಯ್ಯ ಆಟಗಾರರ ಪಟ್ಟಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ,…






